06/07/2025
ಆನೇಕಲ್ ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿಯ ಐ.ಎಸ್.ಬಿ.ಆರ್ ಕಾಲೇಜಿನಲ್ಲಿ ಪಿಜಿಡಿಎಂ ತರಗತಿಗಳ ಉದ್ಘಾಟನೆ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.
ಅತಿಥಿಗಳನ್ನು ಸೀರೆಯುಟ್ಟ ರೋಬೊಟ್ ಗುಲಾಬಿ ಹೂ ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು. ಪಿಜಿಡಿಎಂ ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಟಾಟಾ ಹಿಟಾಚಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ಸಿಂಗ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ಕೃತಕ ಬುದ್ಧಿಮತ್ತೆ ಸೇರಿದಂತೆ ವೈಜ್ಞಾನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು. ಶೈಕ್ಷಣಿಕ ಜೀವನದಲ್ಲಿ ಉನ್ನತ ಸಾಧನೆ ಮಾಡಲು ವಿಜ್ಞಾನ ಮತ್ತು ತಂತ್ರಜ್ಞಾನ ಹೆಚ್ಚಿನ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಗ್ಲೋಬಲ್ ಇಂಕ್ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಹಾಸ್ ಗೋಪಿನಾಥ್ ಮಾತನಾಡಿ ಪಿಜಿ ಡಿ ಎಂ ಪದವಿ ಹಂತದ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಕಿರು ಉದ್ಯಮಗಳನ್ನು ಸ್ಥಾಪಿಸುವತ್ತ ಗುರಿ ಹೊಂದಬೇಕು. ಇದರಿಂದಾಗಿ ಹಾರ್ದಿಕವಾಗಿ ಲಾಭವಾಗುವುದರ ಜೊತೆಗೆ ಉತ್ತಮ ಸಂಪರ್ಕ ಬೆಳೆಯುತ್ತದೆ ಎಂದರು.
ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ನ ನಿರ್ದೇಶಕ ಡಾ.ಸಂಜಯ್ ತ್ಯಾಗಿ, ಐ.ಎಸ್.ಬಿ.ಆರ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಮನಿಷ್ ಕೊತಾರಿ, ನೀನ್ಲಿಪ್ ಕಂಪನಿಯ ನಿರ್ದೇಶಕಿ ವೃಷ ರಘು, ಕಾಲೇಜಿನ ಆಡಳಿತ ಮಂಡಳಿಯ ಆನಂದ್ ರಾಮ್, ಮನೋಹರ್, ಚಂದ್ರ ನಿರಂಜನ್, ನೀಲಾ, ಕವಿತಾ ಮಧುಸೂದನ್, ಲಕ್ಷ್ಮೀನಾರಾಯಣ್, ನರಸಯ್ಯ ಇದ್ದರು.