Baraguru Tv

Baraguru Tv Contact information, map and directions, contact form, opening hours, services, ratings, photos, videos and announcements from Baraguru Tv, News & Media Website, Bangalore.
(2)

ಈ ನೆಲ ಜಲದ ಬಗ್ಗೆ ನಮ್ಮ ಹೋರಾಟ ನಿರಂತರವಾಗಿರುತ್ತೆ. ನಿಮ್ಮ ಊರಿನ ಯಾವುದೇ ಸಮಸ್ಯೆ ಇದ್ದರು. ನಮ್ಮ ಮಾದ್ಯಮ ಮುಂದೆ ಇರುತ್ತೆ . ಯಾವುದೇ ಸುದ್ದಿಯಾದರೂ ಬಿತ್ತರಿಸಲು ನಾವ್ ರೆಡಿ. ಸದಾ ನಿಮ್ಮೊಂದಿಗೆ ಬರಗೂರು Tv DIGITAL MEDIA NEWS CHANNEL

27/05/2026

DK Shivakumar ಮುಖ್ಯಮಂತ್ರಿ ಆಗ್ತಾರೆ.?

27/05/2026

ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ..??

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ – ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿLast updated: May 25, 2026 Credit ByPublic TVನ...
27/05/2026

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ – ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ

Last updated: May 25, 2026
Credit ByPublic TV

ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ (Dharmendra) ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು (Padma Awards 2026) ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ (Droupadi Murmu) ನಟಿ ಹೇಮಾ ಮಾಲಿನಿ (Hema Malini) ಪತಿಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರ ನೀಡಿದ ಆರು ದಶಕಗಳ ಕೊಡುಗೆಯನ್ನು ಗೌರವಿಸಿ ಈ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಹೇಮಾ ಮಾಲಿನಿ ಗುಲಾಬಿ ಬಣ್ಣದ ಸೀರೆಯಲ್ಲಿ ಗಮನ ಸೆಳೆದರು. ಇದೇ ವೇಳೆ ಪುತ್ರಿ ಅಹಾನಾ ಡಿಯೋಲ್ ಭಾವುಕರಾಗಿ ಕಣ್ಣೀರಿಟ್ಟ ದೃಶ್ಯ ಎಲ್ಲರ ಗಮನ ಸೆಳೆಯಿತು. ಇದನ್ನೂ ಓದಿ: Padma Awards: 66 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಮಾರಂಭಕ್ಕೂ ಮುನ್ನ ಮಾತನಾಡಿದ ಹೇಮಾ ಮಾಲಿನಿ, ಧರ್ಮೇಂದ್ರ ಅವರಿಗೆ ಈ ಗೌರವ ಬಹಳ ಹಿಂದೆಯೇ ಸಿಗಬೇಕಿತ್ತು. ಆದರೂ ಈಗ ಸಿಕ್ಕಿರುವುದು ಸಂತೋಷದ ವಿಚಾರ. ಧರ್ಮೇಂದ್ರ ಕೇವಲ ನಟರಲ್ಲ, ಅವರು ಭಾರತೀಯ ಸಿನಿಮಾದ ಒಂದು ಸಂಸ್ಥೆ. ಅವರ ಸರಳತೆ, ಅಭಿನಯ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳು ಜನರ ಮನಸ್ಸು ತಲುಪಿವೆ ಎಂದು ಭಾವುಕರಾಗಿ ಹೇಳಿದರು.

ಚಿತ್ರರಂಗದ ಹೊರತಾಗಿಯೂ ಧರ್ಮೇಂದ್ರ ದೇಶದ ಭಾವನೆ, ಸಂಸ್ಕೃತಿ ಮತ್ತು ಮಾನವೀಯತೆಯ ಪ್ರತೀಕವಾಗಿದ್ದರು ಎಂದು ಅವರು ಹೇಳಿದರು. ಅವರ ಜೊತೆ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶ ನನಗೆ ಸಿಕ್ಕಿತ್ತು. ನಂತರ ನಾನು ಅವರ ಜೀವನ ಸಂಗಾತಿಯಾಗಿದ್ದೇ ನನ್ನ ಭಾಗ್ಯ ಎಂದರು.

ಧಮೇಂದ್ರ ಮತ್ತು ಹೇಮಾ ಮಾಲಿನಿ 1980ರ ಮೇ 2ರಂದು ವಿವಾಹವಾಗಿದ್ದರು. ಧರ್ಮೇಂದ್ರ ಅವರು 2025ರ ನವೆಂಬರ್ 24ರಂದು ಮುಂಬೈನ ನಿವಾಸದಲ್ಲಿ ನಿಧನರಾದರು.

ಕಾಕ್ರೋಚ್ ಪಕ್ಷದ ನೋಂದಣಿಗೆ ವಕೀಲನಿಂದ... ಕಾಕ್ರೋಚ್ ಪಕ್ಷದ ನೋಂದಣಿಗೆ ವಕೀಲನಿಂದ ಚುನಾವಣಾ ಆಯೋಗಕ್ಕೆ ಅರ್ಜಿ
27/05/2026

ಕಾಕ್ರೋಚ್ ಪಕ್ಷದ ನೋಂದಣಿಗೆ ವಕೀಲನಿಂದ... ಕಾಕ್ರೋಚ್ ಪಕ್ಷದ ನೋಂದಣಿಗೆ ವಕೀಲನಿಂದ ಚುನಾವಣಾ ಆಯೋಗಕ್ಕೆ ಅರ್ಜಿ

ಬಿಡದಿ ಟೌನ್‌ಶಿಪ್ ಯೋಜನೆ: ಅಭಿವೃದ್ಧಿ ನೆಪದಲ್ಲಿ ರೈತರ ಫಲವತ್ತಾದ ಭೂಮಿಗೆ ಕನ್ನಅಡಿಕೆ, ತೆಂಗು ಸಹಿತ ವಿವಿಧ 10ಲಕ್ಷಕ್ಕೂ ಅಧಿಕ ಮರಗಳ ನಾಶ ಭೀತಿ...
27/05/2026

ಬಿಡದಿ ಟೌನ್‌ಶಿಪ್ ಯೋಜನೆ: ಅಭಿವೃದ್ಧಿ ನೆಪದಲ್ಲಿ ರೈತರ ಫಲವತ್ತಾದ ಭೂಮಿಗೆ ಕನ್ನ

ಅಡಿಕೆ, ತೆಂಗು ಸಹಿತ ವಿವಿಧ 10ಲಕ್ಷಕ್ಕೂ ಅಧಿಕ ಮರಗಳ ನಾಶ ಭೀತಿ ► 9,640 ಎಕರೆ ಕೃಷಿ ಭೂಮಿ ವಶ, ಬೀದಿಗಿಳಿದ 26ಗ್ರಾಮಗಳ ರೈತರು.

26/05/2026

ಯಾದಗಿರಿ ಅವಾಚ್ಯ ಶಬ್ದಗಳಿಂದ ಬೈದು, ಅಟ್ರಾಸಿಟಿ ಕೇಸ್ ಮಾಡ್ತೀನಿ ಎಂದು ಹೆದರಿಸುತ್ತಿರುವ ಉಪ ತಹಶೀಲ್ದಾರ್

ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌! ಪ್ರಕ್ರಿಯೆ ಹೇಗೆ?ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ...
26/05/2026

ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌! ಪ್ರಕ್ರಿಯೆ ಹೇಗೆ?
ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಯಲು ಸರ್ಕಾರ 'ಒನ್-ಟೈಮ್ ಬಯೋಮೆಟ್ರಿಕ್' ಕಡ್ಡಾಯಗೊಳಿಸಿದೆ. ಫಲಾನುಭವಿಗಳು ಬೆಂಗಳೂರು/ಕರ್ನಾಟಕ ಒನ್ ಕೇಂದ್ರಗಳಲ್ಲಿ ಮೊಬೈಲ್ ಸಂಖ್ಯೆ ಹಾಗೂ ಬಯೋಮೆಟ್ರಿಕ್ ನೀಡಿ ಖಾತೆ ನವೀಕರಿಸಬೇಕು. ಆದಾಯ ತೆರಿಗೆ ಪಾವತಿದಾರರು ಮತ್ತು ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆಯುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ನವೀಕರಿಸದಿದ್ದರೆ ಹಣ ಜಮೆಯಾಗುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Updated: 26 May 2026,
Credit Vijaya Karnataka

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಯೊಂದನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆ ದುರ್ಬಳಕೆ ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ತಡೆಗಟ್ಟಲು ಇನ್ಮುಂದೆ 'ಒನ್‌-ಟೈಮ್‌ ಬಯೋಮೆಟ್ರಿಕ್‌' ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲ ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್‌ ಹಾಗೂ ಮೊಬೈಲ್‌ ಸಂಖ್ಯೆಯೊಂದಿಗೆ ಮರು ನೋಂದಣಿ (ನವೀಕರಣ) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ನವೀಕರಿಸದಿದ್ದರೆ ಬ್ಯಾಂಕ್‌ ಖಾತೆಗೆ ಹಣ ಜಮೆಯಾಗುವುದಿಲ್ಲ. ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ.

ಗೃಹಲಕ್ಷ್ಮಿ ಯೋಜನೆಯ ಲಕ್ಷಾಂತರ ಮಂದಿ ಫಲಾನುಭವಿಗಳು ನಿಧನರಾಗಿದ್ದಾರೆ. ಎರಡು ಲಕ್ಷ ಮಂದಿ ಮೃತಪಟ್ಟಿದ್ದರೂ ಫಲಾನುಭವಿಗಳಾಗಿದ್ದಾರೆ. 50 ಸಾವಿರಕ್ಕೂ ಹೆಚ್ಚು ಆದಾಯ ತೆರಿಗೆ ಪಾವತಿದಾರರು ಯೋಜನೆಯ ಲಾಭ ಪಡೆಯುತ್ತಿದ್ದರು. ಕೆಲ ಫಲಾನುಭವಿಗಳ ಖಾತೆಗೆ ಸಂದಾಯವಾದ ಗೃಹಲಕ್ಷ್ಮಿ ಹಣ ಈ ಮೊದಲು ಮಾಡಿರುವ ಸಾಲಕ್ಕೆ ಜಮೆಯಾಗುತ್ತಿದೆ. ಕೆಲವರ ಮೊಬೈಲ್‌ ಸಂಖ್ಯೆ ಕೂಡ ಬದಲಾಗಿದೆ. ಹೀಗಾಗಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ಸಿಗಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯ ಖಾತೆಗಳನ್ನು ಮತ್ತೊಮ್ಮೆ ನವೀಕರಣ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು. (ಗೃಹಲಕ್ಷ್ಮಿ ಸಂಘ ಸ್ಥಾಪನೆ)

ನಿಧನರಾದವರೂ ಸದ್ದಿಲ್ಲದೆ ಹಣ ಪಡೆಯುತ್ತಿದ್ದರು. ಹೀಗಾಗಿ, ಗೃಹಲಕ್ಷಿ ಫಲಾನುಭವಿಗಳು ಬದುಕಿರುವ ಬಗ್ಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತೀವ್ರವಾದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿಅದಕ್ಕೆ ಪರ್ಯಾಯವಾಗಿ ಬಯೋಮೆಟ್ರಿಕ್‌ ವ್ಯವಸ್ಥೆ ಜಾರಿ ಮಾಡಲಾಗಿದೆ.

ನವೀಕರಣ ಹೇಗೆ?
ಫಲಾನುಭವಿಗಳು ತಮ್ಮ ಹತ್ತಿರದ ಬೆಂಗಳೂರು ಒನ್‌ ಅಥವಾ ಕರ್ನಾಟಕ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಚಾಲ್ತಿಯಲ್ಲಿರುವ ಮೊಬೈಲ್‌ ಸಂಖ್ಯೆ ಹಾಗೂ ಬಯೋಮೆಟ್ರಿಕ್‌ ನೀಡುವ ಮೂಲಕ ತಮ್ಮ ಖಾತೆಯನ್ನು ಮರು-ನೋಂದಣಿ ಮಾಡಿಸಿಕೊಳ್ಳಬಹುದು.

ಇಂಥವರಿಗೆ ಗೃಹಲಕ್ಷ್ಮಿ ಕಟ್‌
ಫಲಾನುಭವಿಗಳು ಎಪಿಎಲ್‌ ಕಾರ್ಡ್‌ ಅಥವಾ ಬಿಪಿಎಲ್‌ ಕಾರ್ಡ್‌ ಹೊಂದಿರಬಹುದು. ಆದರೆ, ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇಲಾಖೆ ಈಗಾಗಲೇ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದೆ. ಇವರಲ್ಲಿಬಹುತೇಕರು ಆದಾಯ ತೆರಿಗೆ ಪಾವತಿಸುತ್ತಿದ್ದುದರಿಂದ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇವರಿಗೆ ಗೃಹಲಕ್ಷ್ಮಿ ಯೋಜನೆ ರದ್ದಾಗಲಿದೆ.

ನವೀಕರಣ ಮಾಡದಿದ್ದರೆ ರದ್ದು
ಸದ್ಯಕ್ಕೆ ನಾವು ಯಾವುದೇ ಫಲಾನುಭವಿಯ ಹೆಸರನ್ನು ನೇರವಾಗಿ ಡಿಲೀಟ್‌ ಮಾಡುತ್ತಿಲ್ಲ. ಇದು ಕೇವಲ 'ಒನ್‌ ಟೈಮ್‌ ಬಯೋಮೆಟ್ರಿಕ್‌' ಪದ್ಧತಿ. ಮಹಿಳೆಯರು ಕೇವಲ ಒಂದು ಬಾರಿ ಬಯೋಮೆಟ್ರಿಕ್‌ ನೀಡಿದರೆ ಸಾಕು, ಹಣ ಎಂದಿನಂತೆ ಖಾತೆಗೆ ಜಮೆಯಾಗುತ್ತದೆ. ನವೀಕರಣ ಮಾಡದ ಖಾತೆಗಳು ಮಾತ್ರ ಸ್ವಯಂಚಾಲಿತವಾಗಿ ರದ್ದಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಕುಣಿಗಲ್ | ಗರ್ಭಗುಡಿಗೆ ಸ್ವಾಮೀಜಿ ಪ್ರವೇಶ : ದೇಗುಲ ಸ್ವಚ್ಛಗೊಳಿಸಿದ ಆಡಳಿತ ಮಂಡಳಿಈ ದಿನ ಡೆಸ್ಕ್‌Credit ಈ ದಿನ ಡೆಸ್ಕ್‌Date:26 May 2026,...
26/05/2026

ಕುಣಿಗಲ್ | ಗರ್ಭಗುಡಿಗೆ ಸ್ವಾಮೀಜಿ ಪ್ರವೇಶ : ದೇಗುಲ ಸ್ವಚ್ಛಗೊಳಿಸಿದ ಆಡಳಿತ ಮಂಡಳಿ
ಈ ದಿನ ಡೆಸ್ಕ್‌

Credit ಈ ದಿನ ಡೆಸ್ಕ್‌
Date:26 May 2026,

ಕುಣಿಗಲ್
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ದೇವಾಲಯದ ಗದ್ದುಗೆ ಭಾಗದ ಗರ್ಭಗುಡಿ ಪ್ರದೇಶಕ್ಕೆ ಸ್ವಾಮೀಜಿಯೊಬ್ಬರು ಪ್ರವೇಶ ಮಾಡಿದ ಕಾರಣ ಸೋಮವಾರ ಸಂಜೆ ದೇವಾಲಯವನ್ನು ಸ್ವಚ್ಛಗೊಳಿಸಲಾಗಿದೆ.

ಸೋಮವಾರ ಗದಗ ಕಡೆಯಿಂದ ಬಂದಿದ್ದ ಸ್ವಾಮೀಜಿಯೊಬ್ಬರು ಗರ್ಭಗುಡಿ ಪ್ರವೇಶಿಸಿದ್ದರು. ಇದಕ್ಕೆ ಭಕ್ತರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ದೇವಾಲಯದ ಆಡಳಿತಾಧಿಕಾರಿಗಳು ಹೋಮ ನಡೆಸಿದರು. ಹಾಗೂ ಎಡೆ ಸಮರ್ಪಣೆ ಮತ್ತು ಪೂಜಾ ವಿಧಿಗಳು ನಡೆದವು. ದೇವಾಲಯದ ಸಿದ್ದಲಿಂಗೇಶ್ವರ ಸ್ವಾಮಿ ಗದ್ದುಗೆಗೆ ಪೂಜೆ ಮಾಡಲು ಸರದಿ ಅರ್ಚಕರಿಗೆ ಮಾತ್ರ ಅವಕಾಶವಿದೆ.

ಸರದಿ ಅರ್ಚಕರು ಮತ್ತು ಆಗಮಿಕರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಭಕ್ತರ ಭಾವನೆಗೆ ಧಕ್ಕೆಯಾಗಿದೆ. ಸಂಬಂಧಪಟ್ಟ ಅರ್ಚಕರು ಮತ್ತು ಆಗಮಿಕರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಪ್ರತಿಕ್ರಿಯಿಸಿದ್ದಾರೆ.

Python Rescue: ಮಂಡ್ಯದಲ್ಲಿ ಬೆಚ್ಚಿಬೀಳಿಸಿದ ದೈತ್ಯ ಹೆಬ್ಬಾವು, ಜಿಂಕೆ ನುಂಗಿ ಒದ್ದಾಡಿದ 10 ಅಡಿ ಉದ್ದದ ಉರಗ!Last Updated:May 26, 2026 ...
26/05/2026

Python Rescue: ಮಂಡ್ಯದಲ್ಲಿ ಬೆಚ್ಚಿಬೀಳಿಸಿದ ದೈತ್ಯ ಹೆಬ್ಬಾವು, ಜಿಂಕೆ ನುಂಗಿ ಒದ್ದಾಡಿದ 10 ಅಡಿ ಉದ್ದದ ಉರಗ!

Last Updated:May 26, 2026
Credit news 18 kannada

ಮಂಡ್ಯ ಮಳವಳ್ಳಿ ನೆಟ್ಕಲ್ ಗ್ರಾಮದಲ್ಲಿ 10 ಅಡಿ ಉದ್ದದ ಹೆಬ್ಬಾವು ಜಿಂಕೆಯನ್ನು ನುಂಗಿ ಸಿಕ್ಕಿಬಿದ್ದಿತು, ಅರಣ್ಯ ಇಲಾಖೆ ಹಿಡಿದು ಕಾಡಿಗೆ ಬಿಡಿತು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಮಂಡ್ಯ: ಹೆಬ್ಬಾವುಗಳು (Python) ದೈತ್ಯ ಪ್ರಾಣಿಗಳನ್ನು (Animals) ನುಂಗುತ್ತವೆ ಎಂಬ ಮಾತು ಕೇಳಿರುತ್ತೀರಿ, ಆದರೆ ಅದನ್ನು ಕಣ್ಣಾರೆ ಕಂಡರೆ ಎಂತಹವರೂ ಬೆಚ್ಚಿಬೀಳುತ್ತಾರೆ. ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ಇದೀಗ ಅಂತಹದ್ದೇ ಒಂದು ರೋಚಕ ಹಾಗೂ ಆತಂಕಕಾರಿ ಘಟನೆ ನಡೆದಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕದ ಬೃಹತ್ ಹೆಬ್ಬಾವೊಂದು ಜಿಂಕೆಯನ್ನು (Deer) ಸಂಪೂರ್ಣವಾಗಿ ನುಂಗಿ, ಚಲಿಸಲಾಗದೇ ನರಳಾಡುತ್ತಾ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ

ತಮಿಳುನಾಡು ಸಿಎಂ ವಿಜಯ್ ದೇಶMekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿಸಹ-ಜಲಾನಯನ ರಾಜ್ಯಗಳ...
26/05/2026

ತಮಿಳುನಾಡು ಸಿಎಂ ವಿಜಯ್
ದೇಶ
Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ
ಸಹ-ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸದಂತೆ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದೂ ಅವರು ಹೇಳಿದ್ದಾರೆ.

Updated:26th May, 2026
Credit kannada prabha web

ಚೆನ್ನೈ: ತಮಿಳುನಾಡಿನ ಮನವಿಯನ್ನು ಪರಿಗಣಿಸದೆ, ಮೇಕೆದಾಟು ಯೋಜನೆಗಾಗಿ ಕರ್ನಾಟಕದ ಪ್ರಸ್ತಾವನೆಯನ್ನು ಜಲಶಕ್ತಿ ಸಚಿವಾಲಯ ಮತ್ತು ಸಿಡಬ್ಲ್ಯುಸಿ ಪರಿಗಣಿಸಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮಂಗಳವಾರ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸಿದ್ಧಪಡಿಸಿದ ಡಿಪಿಆರ್ ಅನ್ನು ತಿರಸ್ಕರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ವಿನಂತಿಸಿದ್ದಾರೆ. ಏಕೆಂದರೆ, ಇದು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿದೆ ಎಂದಿದ್ದಾರೆ.

ಅಲ್ಲದೆ, ಸಹ-ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸದಂತೆ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದೂ ಅವರು ಹೇಳಿದ್ದಾರೆ.

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯ ನಿರ್ಮಾಣದ 'ಭೂಮಿ ಪೂಜೆ' ಘೋಷಣೆ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗಳು ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನು ಅವಲಂಬಿಸಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಕಳವಳವನ್ನುಂಟುಮಾಡಿದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ವಿಜಯ್ ಹೇಳಿದ್ದಾರೆ.

'ಸುಮಾರು ಮೂರು ದಶಕಗಳ ಕಾಲ ನಡೆದ ಸುದೀರ್ಘ ಕಾನೂನು ಹೋರಾಟದ ನಂತರ ಸೂಕ್ಷ್ಮ ಕಾವೇರಿ ನೀರಿನ ವಿವಾದಕ್ಕೆ ಪರಿಹಾರ ಸಿಕ್ಕಿದ್ದು, 2018ರ ಫೆಬ್ರುವರಿ 16ರಂದು ನೀಡಿದ ತೀರ್ಪು ಜಾರಿಯಲ್ಲಿದೆ ಎಂಬುದು ನಿಮಗೂ ಚೆನ್ನಾಗಿ ತಿಳಿದಿರಬಹುದು' ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

#ಟಿವಿಕೆ

Address

Bangalore

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm

Telephone

+919844525820

Website

Alerts

Be the first to know and let us send you an email when Baraguru Tv posts news and promotions. Your email address will not be used for any other purpose, and you can unsubscribe at any time.

Share