ejagathu

ejagathu Contact information, map and directions, contact form, opening hours, services, ratings, photos, videos and announcements from ejagathu, News & Media Website, 176, 25th division, maruthi nagar, doddaballapur, Bangalore.

30/11/2025

ಸೂರತ್ ನಿಂದ ಬಂದ ಹತ್ತಾರು ಸಾವಿರ ಸೀರೆಗಳನ್ನ ಹಿಡಿದ ನೇಕಾರರು : ಬದುಕಿ, ಬದುಕಲು ಬಿಡಿ

ದೊಡ್ಡಬಳ್ಳಾಪುರ : ನಗರದಲ್ಲಿ ಸುಮಾರು 25 ಸಾವಿರ ಮಗ್ಗಗಳಿದ್ದು, ಸುಮಾರು ಒಂದು ಲಕ್ಷ ಜನರು ಇದನ್ನೆ ನಂಬಿ ಬದುಕು ಕಟ್ಟಿಕೊಂಡಿದ್ದಾರೆ.

ಆದರೆ, ಆಧುನೀಕ ತಂತ್ರಜ್ಞಾನ ಬೆಳೆದಂತೆ ಕೈ ಮಗ್ಗಕ್ಕೆ ಬದಲಾಗಿ ವಿದ್ಯುತ್ ಮಗ್ಗ, ವಿದ್ಯುತ್ ಮಗ್ಗಗಳಿಗೆ ಬದಲಾಗಿ ಆಧುನೀಕ ತಂತ್ರಜ್ಞಾನದ ಏರ್ ಜೆಟ್ ಮಗ್ಗಗಳು ಬಂದಿವೆ. ತಂತ್ರಜ್ಞಾನ ಬೆಳೆದಂತೆಲ್ಲಾ ಮಾನವನ ಬೆವರಿಗೆ ಬೆಲೆ ಇಲ್ಲದಂತಾಗಿದೆ.

ಲಕ್ಷಾಂತರ ಜನರ ಬದುಕನ್ನು ಕಸಿದುಕೊಳಲು ಬಂದಿದ್ದೆ ಏರ್‌ಜೆಟ್ ಲೂಮ್ಸ್. ಇದು ಮಾನವನ ಬದುಕನ್ನೆ ಕಸಿದುಕೊಳ್ಳುವ ಆಧುನೀಕ ತಂತ್ರಜ್ಞಾನ. ಸದ್ಯಕ್ಕೆ ದೊಡ್ಡಬಳ್ಳಾಪುರದಲ್ಲಿ ಈ ಆಧುನಿಕ ತಂತ್ರಜ್ಞಾನದ ಏರ್‌ಜೆಟ್ ಲೂಮ್ಸ್ ಇಲ್ಲ.

ಆದರೆ, ಈ ತಂತ್ರಜ್ಞಾನದ ( ರೆಪೀಯರ್ ಮಗ್ಗದಲ್ಲಿ) ಮೂಲಕ ಅತೀ ಕಡಿಮೆ ವೆಚ್ಚದಲ್ಲಿ, ಗುಜರಾತ್ ನ ಸೂರತ್ ನಲ್ಲಿ ತಯಾರಾದ ಸೀರೆಗಳನ್ನು ತರಿಸಿ ದೊಡ್ಡಬಳ್ಳಾಪುರದಲ್ಲಿ ತಯಾರಿಸಿದ ಸೀರೆಗಳು ಎಂಬಂತೆ ಪಕ್ಕದ ಧರ್ಮಾವರಂ ನಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಇದಕ್ಕೆ ಸಾಕ್ಷಿ ಎಂಬಂತೆ ಇಂದು ಸುಮಾರು ಮೂರು ಕಂಟೈನರ್‌ಗಳಲ್ಲಿ ಬಂದ ಸೀರೆಗಳನ್ನು ಹಿಡಿದ ನೇಕಾರರು, ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ವಿವರಣೆ ನೀಡಿದ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಪಿ.ಎ.ವೆಂಕಟೇಶ್ ಅವರು, ನೀವು ಬದುಕಿ, ಬದುಕಲು ಬಿಡಿ ಎಂದಿದ್ದಾರೆ.

30/11/2025

ಶ್ರೀಲಂಕಾ ದಿತ್ವಾ ಚಂಡಮಾರುತ : 159 ಜನರ ಸಾವು, 203 ಮಂದಿ ಕಣ್ಮರೆ

ಕೊಲಂಬೊ: ದಿತ್ವಾ ಚಂಡಮಾರುತದಿಂದ ಉಂಟಾದ ಧಾರಾಕಾರ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ಶ್ರೀಲಂಕಾದಾದ್ಯಂತ ಇದುವರೆಗೆ 159 ಜನರು ಸಾವನ್ನಪ್ಪಿದ್ದು, 203 ಮಂದಿ ಕಾಣೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಶನಿವಾರ ತಿಳಿಸಿದೆ.

ಒಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ಅನೇಕ ಮನೆಗಳು ಹಾಳಾಗಿದ್ದು, 43,995 ಜನರನ್ನು ಸರ್ಕಾರಿ ಕಲ್ಯಾಣ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಹಾನಿರ್ದೇಶಕ ಸಂಪತ್ ಕೊಟುವೆಗೋಡ ತಿಳಿಸಿದ್ದಾರೆ.

ಹವಾಮಾನ ವ್ಯವಸ್ಥೆಯು ದ್ವೀಪದಿಂದ ನೆರೆಯ ಭಾರತದತ್ತ ಚಲಿಸುತ್ತಿದೆ. ಆದರೆ ಅದು ಈಗಾಗಲೇ ದೇಶದಲ್ಲಿ ಭಾರಿ ವಿನಾಶವನ್ನು ಉಂಟುಮಾಡಿದೆ ಎಂದು ಡಿಎಂಸಿ ತಿಳಿಸಿದೆ. ಸಶಸ್ತ್ರ ಪಡೆಗಳ ನೆರವಿನಿಂದ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೊಲಂಬೊದಲ್ಲಿ ಸುದ್ದಿಗಾರರಿಗೆ ಕೊಟ್ಟುವೆಗೊಡ ತಿಳಿಸಿದ್ದಾರೆ.

ಚಂಡಮಾರುತವು ಬುಧವಾರ ಭೂಕುಸಿತವನ್ನು ಉಂಟುಮಾಡಿದ್ದರೂ, ಹವಾಮಾನ ವ್ಯವಸ್ಥೆಯ ಪರಿಣಾಮಗಳು ಸೋಮವಾರದಿಂದ ಅನುಭವಕ್ಕೆ ಬಂದಿವೆ, ಇದು ದ್ವೀಪದಾದ್ಯಂತ ದಾಖಲೆಯ ಮಳೆ ಸುರಿಸಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಿಣಾಮ ಶನಿವಾರ ಕೊಲಂಬೊದಿಂದ ಹಿಂದೂ ಮಹಾಸಾಗರಕ್ಕೆ ಹರಿಯುವ ಕೆಲಾನಿ ನದಿಯ ದಡದಲ್ಲಿ ವಾಸಿಸುವವರಿಗೆ ಸ್ಥಳಾಂತರಿಸುವಂತೆ ಆದೇಶ ಹೊರಡಿಸಲಾಗಿದೆ.

ಕೆಲಾನಿ ಶುಕ್ರವಾರ ಸಂಜೆ ಕೆಲಾನಿ ನದಿ ತನ್ನ ಕಟ್ಟೆಗಳನ್ನು ಒಡೆದಿದ್ದು, ನೂರಾರು ಜನರು ತಾತ್ಕಾಲಿಕ ಆಶ್ರಯಗಳಿಗೆ ಸ್ಥಳಾಂತರಗೊಳ್ಳಬೇಕಾಯಿತು ಎಂದು ಡಿಎಂಸಿ ತಿಳಿಸಿದೆ.

ನೇಣಿಗೆ ಶರಣಾದ ಬಿ ಫಾರ್ಮ್ ವಿದ್ಯಾರ್ಥಿನಿಬೆಂಗಳೂರು :  ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ...
30/11/2025

ನೇಣಿಗೆ ಶರಣಾದ ಬಿ ಫಾರ್ಮ್ ವಿದ್ಯಾರ್ಥಿನಿ

ಬೆಂಗಳೂರು : ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ವಿದ್ಯಾರ್ಥಿನಿಯನ್ನು ಹಾಸನ ಮೂಲದ ವತ್ಸಲ(19) ಎಂದು ಗುರುತಿಸಲಾಗಿದೆ.

ಹೆಸರುಘಟ್ಟ ರಸ್ತೆಯ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ವತ್ಸಲ ಪೆಟಲ್ಸ್ ಗರ್ಲ್ಸ್ ಪಿಜಿಯಲ್ಲಿ ವಾಸವಿದ್ದಳು.

ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಡಿವೈಎಸ್ಪಿ !ದಾವಣಗೆರೆ : ನಿವೃತ್ತ ಡಿವೈಎಸ್‌ಪಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ...
30/11/2025

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಡಿವೈಎಸ್ಪಿ !

ದಾವಣಗೆರೆ : ನಿವೃತ್ತ ಡಿವೈಎಸ್‌ಪಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ನಗರದ ನಿಟುವಳ್ಳಿಯ ಖಾದಿ ಕೇಂದ್ರದ ಬಳಿಯ ನಿವಾಸಿ, ನಿವೃತ್ತ ಪೊಲೀಸ್ ಉಪಾಧೀಕ್ಷಕ ಎಚ್.ವೈ.ತುರಾಯಿ(70) ಆತ್ಮಹತ್ಯೆ ಮಾಡಿಕೊಂಡವರು.

ಮನೆಯಲ್ಲಿವಯಾರೂ ಇಲ್ಲದಾಗ ತಮ್ಮದೇ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿರುವ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, 2014ರಲ್ಲಿ ವಯೋ ನಿವೃತ್ತಿ ಹೊಂದಿದ್ದ ಎಚ್.ವೈ.ತುರಾಯಿ ನಗರದ ನಿಟುವಳ್ಳಿಯ ಖಾದಿ ಗ್ರಾಮೋದ್ಯೋಗ ಕೇಂದ್ರದ ಬಳಿ ವಾಸವಾಗಿದ್ದರು.

ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್ ಬೆಂಗಳೂರಿನ ನಗರ ಜಿಲ್ಲೆ, :-  ಆನೇಕಲ್ ತಾಲ್ಲೂಕಿನ, ಅಭಿಲೇಖಾಲಯ (ರೆಕಾರ್ಡ್ ...
30/11/2025

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್

ಬೆಂಗಳೂರಿನ ನಗರ ಜಿಲ್ಲೆ, :- ಆನೇಕಲ್ ತಾಲ್ಲೂಕಿನ, ಅಭಿಲೇಖಾಲಯ (ರೆಕಾರ್ಡ್ ರೂಮ್ಸ್) ಕಾರ್ಯಾಲಯದ ಕೆಲವು ಸಿಬ್ಬಂದಿಗಳು ಭೂಗಳ್ಳರ ಜೊತೆ ಶಾಮೀಲಾಗಿ ನಕಲಿ ದಾಖಲಾತಿಗಳನ್ನು ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆಗೆ ಸಹಕರಿಸಿರುವುದು ಕಂಡುಬಂದಿದ್ದು, ಒಟ್ಟು 16 ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ತಿಳಿಸಿದ್ದಾರೆ.

ಉಪ ತಹಸಿಲ್ದಾರರಾದ ಚಂದ್ರಶೇಖರ್ ಬಿ.ಕೆ, ಶಿರಸ್ತೇದಾರರಾದ ಮಾರುತಿ ಪ್ರಸಾದ್, ದಿನಕರನ್ ಜಿ, ಲೋಕೇಶ್ ಎಸ್, ಪ್ರಥಮ ದರ್ಜೆ ಸಹಾಯಕರಾದ ಮಹೇಶ್, ಮಂಗಳ, ನಾರಾಯಣ, ದ್ವಿತೀಯ ದರ್ಜೆ ಸಹಾಯಕರಾದ ಕೆ ರಾಘವೇಂದ್ರ, ಮಂಜುನಾಥ್ ಎಂ ವಿ, ಡಿ ದರ್ಜೆ ನೌಕರರಾದ ಕಲ್ಪನಾ ಪಿ, ಮಂಜುನಾಥ್, ಶೋಭಾ ಎನ್, ಪ್ರವೀಣ್, ಮುನಿರಾಜು, ಮಂಜುಳಮ್ಮ ಮತ್ತು ಮೀನಾಕ್ಷಿ ಅವರುಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಈ ಪ್ರದೇಶದ ಸರ್ಕಾರಿ ಜಮೀನುಗಳ ಮೂಲ ಮಂಜೂರಾತಿ ಕಡತಗಳು, ದರಖಾಸ್ತು ವಹಿ, ಸಾಗುವಳಿ ಚೀಟಿಗಳು, ಸಾಗುವಳಿ ಚೀಟಿ ವಿತರಣಾ ವಹಿ, ಮಂಜೂರಿ ನಡವಳಿ ವಹಿ, ಇನಾಂ ಡಿಸಿ ಆದೇಶದ ಕಡತಗಳು, ಭೂ ಸುಧಾರಣೆ (LRF) ಮೂಲ ಕಡತಗಳು, ಐ.ಎಲ್. ಆರ್.ಆರ್ ವಹಿಗಳು, ಖೇತುವಾರು, ಸೂಡು ಪಹಣಿಗಳು, ಕೈಬರಹ ಪಹಣಿಗಳು ಹಾಗೂ ಇತರೆ ದಾಖಲೆಗಳಲ್ಲಿ ತೊಟ್ಟಿ (ನಕಲಿ) ದಾಖಲಾತಿಗಳನ್ನು ಸೇರಿಸಿ ಭೂಗಳ್ಳರಿಗೆ ಸರ್ಕಾರಿ ಜಮೀನನ್ನು ಕಬಳಿಸಲು ಸಹಕಾರ ಮಾಡಿರುವುದು ಭೂಸುರಕ್ಷಾ ಯೋಜನೆಯಡಿಯಲ್ಲಿ ದಾಖಲಾತಿಗಳನ್ನು ಸ್ಕ್ಯಾನ್ ಮಾಡುವ ಸಂದರ್ಭದಲ್ಲಿ ಕಂಡುಬಂದಿರುತ್ತದೆ ಎಂದು ತಹಶೀಲ್ದಾರ್, ಆನೇಕಲ್ ರವರು ವರದಿ ಮಾಡಿದ್ದರು.

ಈ ಕುರಿತು ಮರು ಪರಿಶೀಲಿಸಲಾಗಿ, ತೊಟ್ಟಿ (ನಕಲಿ) ದಾಖಲಾತಿಗಳೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಕಳೆದ 5 ವರ್ಷ ಹಿಂದಿನಿಂದ ಅಭಿಲೇಖಾಲಯದಲ್ಲಿ ಕೆಲಸ ನಿರ್ವಹಿಸಿದಂತಹ ಒಟ್ಟು 16 ಸರ್ಕಾರಿ ನೌಕರರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಈ ತೊಟ್ಟಿ ದಾಖಲಾತಿಗಳನ್ನು ಸೃಷ್ಟಿ ಮಾಡುವಲ್ಲಿ ಖಾಸಗಿ ವ್ಯಕ್ತಿಗಳು ಸಹಕಾರ ಮಾಡುತ್ತಿರುವ ಬಗ್ಗೆ ಹಾಗೂ ತೊಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡುವಂತಹ ವ್ಯವಸ್ಥಿತ ಗುಂಪುಗಳ ಮೇಲೆಯೂ ಸಹ ವಿಚಾರಣೆ ಕೈಗೊಂಡು ಅವರ ಮೇಲೆಯೂ ಸಹ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ತಹಶೀಲ್ದಾರ್ ಆನೇಕಲ್ ರವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಅಲ್ಲದೇ, ಸರ್ಕಾರಿ ಜಮೀನುಗಳ ಬಗ್ಗೆ ಕಂದಾಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ರೀತಿಯ ಆದೇಶಗಳನ್ನು, ಖಾತೆ ಮಾಡುವ ಸಮಯದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ಖಾತೆ ಮಾಡಲು ಜಿಲ್ಲೆಯ ಎಲ್ಲ ವಿಶೇಷ ತಹಶೀಲ್ದಾರ್ ರವರಿಗೆ ಈಗಾಗಲೇ ಸೂಚಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆನೇಕಲ್ ತಾಲ್ಲೂಕಿನಲ್ಲಿರುವ ಸರ್ಕಾರಿ ಜಮೀನುಗಳಿಗೆ ಸಂಬಂಧಿಸಿದಂತೆ ಖಾತೆ ಬದಲಾವಣೆ/ಮ್ಯೂಟೇಷನ್‌ಗಳಾಗಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಲು ಅನೇಕಲ್ ತಹಶೀಲ್ದಾರರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

30/11/2025

ಆಪತ್ಕಾಲದಲ್ಲಿ ಕ್ರೂರ ಮೃಗಕ್ಕೆ ಆಸರೆಯಾದ ಆನೆ

ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತ, ರುದ್ರ ನರ್ತನ ನಡೆಸುತ್ತಿದೆ.

ಚಂಡಮಾರುತದಿಂದ ದೇಶದ ಅನೇಕ ಭಾಗಗಳು ಜಲಾವೃತವಾಗಿದ್ದು,

ಈ ಪ್ರಳಯದಲ್ಲಿ ಜನ ಜಾನುವಾರುಗಳು ಅನುಭವಿಸುತ್ತಿರುವ ನೋವು ಇನ್ನೂ ಹೃದಯವಿದ್ರಾವಕವಾಗಿದೆ.

ಜಲ ಪ್ರಳಯದಲ್ಲಿ ಅನೇಕರು ತಮ್ಮ ಸೂರು ಕಳೆದುಕೊಂಡಿದ್ದರೆ, ಪಶು–ಪಕ್ಷಿಗಳು ಕೊಚ್ಚಿಹೋಗಿದ್ದು, ಕೆಲ ಕಾಡುಪ್ರಾಣಿಗಳು ವಾಸಸ್ಥಾನ ಕಳೆದುಕೊಂಡಿವೆ. ಜೀವಿಸಲು ಆಹಾರ–ನೀರು ಲಭ್ಯವಿಲ್ಲದ ಸ್ಥಿತಿಯಲ್ಲಿ ಅವು ದೊಡ್ಡ ವಿಪತ್ತನ್ನು ಎದುರಿಸುತ್ತಿವೆ.

ಈ ದೃಶ್ಯದಲ್ಲಿ ಚಿರತೆಯೊಂದು ಪ್ರಾಣಾಪಾಯದಿಂದ ಪಾರಾಗಲು ಆನೆಯ ಮೇಲೆ ರಕ್ಷಣೆ ಪಡೆದಿದೆ.

ಭಾಷೆಯು ಸಾಂಸ್ಕೃತಿಕ ಪರಂಪರೆ, ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು  ಸಹಕಾರಿಯಾಗುತ್ತದೆ ಎಂದು ದೊ...
29/11/2025

ಭಾಷೆಯು ಸಾಂಸ್ಕೃತಿಕ ಪರಂಪರೆ, ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಸಮಾರೋಪ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಸಮಾರೋಪ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮತ್ತು ಬೆಳವಣಿಗೆ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ. ಭವ್ಯ ಪರಂಪರೆಯುಳ್ಳ ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬ ಕನ್ನಡಿಗರು ಪ್ರೀತಿ ಬೆಳೆಸಿಕೊಳ್ಳಬೇಕಾಗಿರುವುದು ಅತ್ಯಗತ್ಯ. ಕನ್ನಡ ಭಾಷೆಯೂ ಕನ್ನಡಿಗರ ಸಂಸ್ಕೃತಿ ಮತ್ತು ಸ್ವಾಭಿಮಾನದ ಪ್ರತೀಕವಾಗಿದೆ ಎಂದರು.

ಕನ್ನಡ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮ ಕುರಿತು ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ದೊಡ್ಡಬಳ್ಳಾಪುರ ವಿವಿಧ ಶಾಲಾ ಕಾಲೇಜುಗಳಲ್ಲಿ ಮೂವತ್ತು ವರ್ಷಗಳಿಂದ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ ಕಾರ್ಯಕ್ರಮಗಳು ನಡೆಯುತ್ತಾ ಬರುತ್ತಿದೆ. ಈ ವರ್ಷ ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ಆಗಿರುವುದರಿಂದ ಶತಮಾನದ ಸಂಭ್ರಮವನ್ನು ದೊಡ್ಡಬಳ್ಳಾಪುರದಲ್ಲಿ ಆಚರಿಸಲಾಯಿತು. ಇದರ ಜೊತೆಗೆ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ‌ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಹ ನಡೆಸಲಾಯಿತು. ಈ ಸ್ಪರ್ಧಾ ಪರೀಕ್ಷೆಯಲ್ಲಿ 523 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.

ಜವಾಹರ ನವೋದಯ ವಿದ್ಯಾಲಯ ಪ್ರಾಂಶುಪಾಲ ಟಿ.ಪಳನಿ ವೇಲು ಮಾತನಾಡಿ, ದೊಡ್ಡಬಳ್ಳಾಪುರ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಕನ್ನಡ ಸಪ್ತಾಹ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ. ದೊಡ್ಡಬಳ್ಳಾಪುರ ನವೋದಯ ವಿದ್ಯಾಲಯದ‌ ಆವರಣದಲ್ಲಿ ಕನ್ನಡ ಜ್ಞಾನಪೀಠ ಪುರಸ್ಕೃತರ ಪುತ್ಥಳಿಗಳನ್ನು ಅನಾವರಣ ಮಾಡುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗೆಗಿನ ಪ್ರೀತಿ ಮತ್ತು ಗೌರವ ಹೊಂದಿದೆ. ‌ ಕಳೆದ ವರ್ಷ 50 ಮಂದಿ ಕನ್ನಡ ನಾಡಿನ ಸಾಧಕರ ಮಾಹಿತಿಯನ್ನು ವಿದ್ಯಾರ್ಥಿಗಳು ಸಿದ್ದಪಡಿಸಿ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆ ಪಡೆದಿದ್ದರೂ ಎಂದರು.

ಸಮಾರಂಭದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್ ಮಂಗಟ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಆರ್.ವೀರಣ್ಣಗೌಡ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಹೋಬಳಿ ಘಟಕಗಳ ಪದಾಧಿಕಾರಿಗಳಾದ ಜಿ.ಸುರೇಶ್, ಅಂಜನಮೂರ್ತಿ, ಗಿರೀಶ್ ಬರಗೂರು, ಪ್ರತಿನಿಧಿಗಳಾದ ಅಣ್ಣಯ್ಯ, ವೆಂಕಟೇಶ್, ಶಿವಪ್ರಸಾದ್, ರಂಗಸ್ವಾಮಯ್ಯ, ಸಫೀರ್, ಜವಾಹರ ನವೋದಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕನ್ನಡ ಸಪ್ತಾಹ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ದೊಡ್ಡಬಳ್ಳಾಪುರ ಜವಾಹರ ವಿದ್ಯಾಲಯ ವಿದ್ಯಾರ್ಥಿಗಳೊಂದಿಗೆ ಮಧ್ಯಪ್ರದೇಶ ಅಲೀರಾಜ್ ಜವಾಹರ ನವೋದಯದ ವಿದ್ಯಾರ್ಥಿಗಳು ನಡೆಸಿಕೊಟ್ಟ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ‌

ಡಾ.ರಾಜ್ ಕುಮಾರ್ ಅವರ ಕನ್ನಡ ಭಾಷೆಯ ಉಚ್ಚಾರಣೆ ಮಧುರ‌ ಮತ್ತು ಸ್ಪಷ್ಟತೆಯಿಂದ ಕೂಡಿತ್ತು. ಉತ್ತಮ ಕನ್ನಡ ಹೇಗಿರಬೇಕೆಂದರೆ‌ ಡಾ.ರಾಜ್ ಕುಮಾರ್ ಅಂತೆ ಇರಬೇಕೆಂದು ಕನ್ನಡಿಗರು ಅಭಿಮಾನದಿಂದ ಹೇಳುತ್ತಿದ್ದರು. ಅವರು ತಮ್ಮ ಯಶಸ್ಸಿನ ಉತ್ತುಂಗದಲ್ಲೂ ತಮ್ಮ ಸರಳತೆಯನ್ನು ಕಾಯ್ದುಕೊಂಡು, ಅಭಿಮಾನಿಗಳಿಗೆ ಆದರ್ಶಪ್ರಾಯರಾದರು. ಡಾ.ರಾಜ್ ಕುಮಾರ್ ಅವರ ಸಿನಿಮಾ ಪಾತ್ರಗಳು ಮತ್ತು ಜೀವನಶೈಲಿ ಕನ್ನಡಿಗರ ಸಂಸ್ಕೃತಿ ಪ್ರತಿನಿಧಿಸುತ್ತದೆ ಎಂದರು.

ಡಾ.ರಾಜ್ ಕುಮಾರ್ ಅವರು ಕನ್ನಡಿಗರಲ್ಲಿ ‌ ಕನ್ನಡ ನಾಡು-ನುಡಿಯ ಪ್ರಜ್ಞೆಯನ್ನು ಜಾಗೃತಗೊಳಿಸಿದರು. ಗೋಕಾಕ್ ಚಳುವಳಿ'ಯಂತಹ ಕನ್ನಡ ಭಾಷಾ ಚಳುವಳಿಗಳಿಗೆ ಬೆಂಬಲ ನೀಡಿದರು. ‌ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಡಾ.ರಾಜ್ ಕುಮಾರ್ ಅವರಿಗಿದ್ದ ಬದ್ಧತೆ ಅವರನ್ನು ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನ ಪಡೆಯುಂತೆ ಮಾಡಿತು. ಜನಸಾಮಾನ್ಯರ ಆಶೋತ್ತರಗಳು ಮತ್ತು ಸಾಮಾಜಿಕ ಕಳಕಳಿ‌ ರಾಜ್‌ಕುಮಾರ್ ಚಲನಚಿತ್ರಗಳ ಪ್ರಮುಖ ಕಥಾ ವಸ್ತುಗಳು ಆಗಿರುವ ಕಾರಣದಿಂದ ಅವರು ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಕರ್ನಾಟಕದ ಜನರಿಗೆ ಮಾದರಿ ಮತ್ತು ಆದರ್ಶ ವ್ಯಕ್ತಿ ಡಾ.ರಾಜ್ ಕುಮಾರ್ ಆಗಿದ್ದಾರೆ ಎಂದರು.

ಸಾವಯವ ಕೃಷಿ ಮತ್ತು ಸಮಗ್ರ ಕೃಷಿ ಎಂಬ ವಿಷಯ ಕುರಿತು ಮಾತನಾಡಿದ ಕೃಷಿ ತಜ್ಞರಾದ ಲಯನ್ ಕೆ.ವಿ.ಪ್ರಭುಸ್ವಾಮಿ, ನಾಗರಿಕತೆಯೊಂದಿಗೆ ಕೃಷಿಯು ಬೆಳೆದು ಬಂದಿದೆ. ಒಂದು ದೇಶ ಕೃಷಿಯಿಂದ ಶ್ರೀಮಂತವಾಗಿದ್ದರೆ ಮಾತ್ರ ಅಂತಹ ದೇಶಕ್ಕೆ ಉಜ್ವಲ ಭವಿಷ್ಯ ಇರುತ್ತದೆ. ಪ್ರಾರಂಭದಲ್ಲಿ ಸಾವಯವ ಕೃಷಿಯಿತ್ತು. ಎರಡನೆಯ ಮಹಾಯುದ್ಧದ ನಂತರ ಕೃಷಿಯಲ್ಲಿ ರಾಸಾಯನಿಕ ಬಳಕೆ ಪ್ರಾರಂಭವಾಯಿತು. ಕೃಷಿಕರು ಎಲ್ಲಾ ಬೆಳೆಗಳನ್ನು ಬೆಳೆದು ಗುಣಮಟ್ಟ ಮತ್ತು ಉತ್ಪಾದನೆಯನ್ನು ಹೆಚ್ಚಿಸುವುದು ಸಮಗ್ರ ಕೃಷಿಯಾಗಿದೆ. ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವುದರ ಕಡೆಗೆ ನಾವಿಂದು ಗಮನ ನೀಡಬೇಕಾಗಿದೆ.‌ ಕೃಷಿಯ ಬಗ್ಗೆ ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕಾಗಿದೆ. ಕೃಷಿಯಲ್ಲಿ ಮೊದಲಿನಿಂದಲೂ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ.ಎನ್.ಯೋಗನರಸಿಂಹಮೂರ್ತಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ಅರುಣ್ ಕುಮಾರ್, ಮುಖ್ಯಶಿಕ್ಷಕ ವಿರೂಪಾಕ್ಷ, ಶಿಕ್ಷಕ ಚಂದ್ರಶೇಖರ್, ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಸೆಲ್ವಂ ಮುಂತಾದವರು ಭಾಗವಹಿಸಿದ್ದರು.

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸಬೇಕು:ಡಿಸಿ ಎಬಿ ಬಸವರಾಜು:ಬೆಂಗಳೂರು : ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ...
29/11/2025

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸಬೇಕು:ಡಿಸಿ ಎಬಿ ಬಸವರಾಜು:

ಬೆಂಗಳೂರು : ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿ ಆಗಿದ್ದು, ಯುವ ಸಮೂಹಕ್ಕೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಟೌನ್ ನ ಬೊಮ್ಮವಾರ ಗ್ರಾಮದಲ್ಲಿರುವ ಗಾಂಧೀ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ನಿಯಂತ್ರಣ ಕುರಿತು ಅರಿವು, ಮಾಸ್ಟರ್ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರನ್ನು ಉದ್ದೇಶಿಸಿ ಅವರು ಮಾತನಾಡಿದರು,

ಮಾದಕ ವ್ಯಸನವು ಸಮಾಜದ ಒಂದು ಪಿಡುಗಾಗಿ ಪರಿಣಮಿಸಿದೆ. ಪೋಷಕರು ತಮ್ಮ ಮಕ್ಕಳ ಚಲನವಲನ ಬಗ್ಗೆ ನಿತ್ಯ ಮತ್ತು ಗಮನಹರಿಸಬೇಕು, ಶಿಕ್ಷಕರು ಕೂಡ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಬೇಕು. ಸಾಕಷ್ಟು ಯುವಕ ಯುವತಿಯರು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಾರೆ. ಹಾಗಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವ್ಯಸನಗಳಿಂದಾಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಮೂಡಿಸುವುದು, ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ನೀವು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕೆಲಸ ಮಾಡಿ, ಮಾದಕ ವ್ಯಸನ ಮುಕ್ತ ಸಮಾಜಕ್ಕೆ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕು ಎಂದರು.

ಎಸ್ಪಿ ಸಿಕೆ ಬಾಬಾ ಅವರು ಮಾತನಾಡಿ ತರಬೇತಿಗೆ ಶಿಕ್ಷಕರನ್ನು ಆಯ್ಕೆ ಮಾಡಿರುವ ಉದ್ದೇಶ ಶಿಕ್ಷಕರು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು. ಯುವ ಸಮೂಹವನ್ನು ಮಾದಕ ವ್ಯಸನದಿಂದ ದೂರ ಇಡಬೇಕು. ಮಾದಕ ವಸ್ತುಗಳ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಇದು ಒಂದು ಯುದ್ಧ, ಪ್ರತಿಯೊಬ್ಬ ವಿದ್ಯಾರ್ಥಿಗೆ ಅರಿವು ತಲುಪಬೇಕು. ಡ್ರಗ್ಸ್ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಉಪನ್ಯಾಸಕರಿಂದ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಟ, ಬಳಕೆ ಕುರಿತು ಶಾಲಾ ಕಾಲೇಜಿನ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲಾಗಿದೆ. ಈ ಸೂಪರ್ವೈಸರ್ ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಿದ್ದು ಮಾದಕ ವಸ್ತುಗಳ ನಿಯಂತ್ರಣಕ್ಕೆ ಸಹಕಾರಿ ಆಗಲಿದೆ.

ಕಾರ್ಯಾಗಾರದಲ್ಲಿ ಅಬಕಾರಿ ಇಲಾಖೆ ಜಿಲ್ಲಾಧಿಕಾರಿ ರವೀಂದ್ರ, ಪೊಲೀಸ್ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಸೈಯದ್ ತಬ್ಸಿವುಲ್ಲಾ, ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಎಸ್ಐ ನವೀನ್ ಕುಮಾರ್, ಎನ್ಸಿಬಿ ಸೂಪರಿಂಟೆಂಡೆಂಟ್ ರತನ್, ಆರೋಗ್ಯ ಇಲಾಖೆಯ ಮನೋವೈದ್ಯರಾದ ಡಾ.ಗರೀಶ್ ಕುಮಾರ್, ಇಶಾ ವಾಲೆಂಟಿರಿ ಮನು, ಡಾ ಪ್ರಮೋದ್, ಸೇರಿದಂತೆ ಶಿಕ್ಷಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ : ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸ್ಫಷ್ಟನೆhttps://www.ejagathu.com/ne...
29/11/2025

ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ : ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸ್ಫಷ್ಟನೆ
https://www.ejagathu.com/news/We-will-as-per-the-decisions-and-instructions-of-the-party-leaders-CM-DCM-5366.html
ಕ್ಷಣ, ಕ್ಷಣದ ಮಾಹಿತಿಗಾಗಿ *ಈಜಗತ್ತು ನ್ಯೂಸ್* ವಾಟ್ಸಾಫ್ ಗುಂಪಿಗೆ ಸೇರಿರಿ
https://chat.whatsapp.com/IF6C06n0YCPEJFHMSBIHbx

ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ : ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸ್ಫಷ್ಟನೆ

ರೈತರ ಬೆಳೆ ನಷ್ಟ ಪರಿಹಾರ ಧನ ಬಿಡುಗಡೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ : ಶಾಸಕ ಎಸ್‌.ಆರ್.ವಿಶ್ವನಾಥ್https://www.ejagathu.com/n...
29/11/2025

ರೈತರ ಬೆಳೆ ನಷ್ಟ ಪರಿಹಾರ ಧನ ಬಿಡುಗಡೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ : ಶಾಸಕ ಎಸ್‌.ಆರ್.ವಿಶ್ವನಾಥ್
https://www.ejagathu.com/news/Protests-across-the-state-demanding-release-of-crop-loss-compensation-money-for-farmers-MLA-S-R-Vishwanath-5364.html ಕ್ಷಣ ಕ್ಷಣದ ಮಾಹಿತಿಗಾಗಿ *ಈಜಗತ್ತು ನ್ಯೂಸ್* ವಾಟ್ಸಾಫ್ ಗುಂಪಿಗೆ ಸೇರಿರಿ
https://chat.whatsapp.com/DfrbOcepJUE6cvo1gv8qja

ರೈತರ ಬೆಳೆ ನಷ್ಟ ಪರಿಹಾರ ಧನ ಬಿಡುಗಡೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ : ಶಾಸಕ ಎಸ್‌.ಆರ್.ವಿಶ್ವನಾಥ್

ಭೀಕರ ರಸ್ತೆ ಅಪಘಾತ : ಇಬ್ಬರು ಮಕ್ಕಳು ಸೇರಿ ಐದು ಮಂದಿ ಸಾವುಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಐವ...
29/11/2025

ಭೀಕರ ರಸ್ತೆ ಅಪಘಾತ : ಇಬ್ಬರು ಮಕ್ಕಳು ಸೇರಿ ಐದು ಮಂದಿ ಸಾವು

ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿಕ್ಕಹೊಸಹಳ್ಳಿ ನಿವಾಸಿಗಳಾದ ಸತೀಶ್, ಮೀನಾಕ್ಷಿ ಕುಟುಂಬದವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಕೋಲಾರದ ಚಿಕ್ಕಹೊಸಹಳ್ಳಿಯಿಂದ ಮಂತ್ರಾಲಯಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇಂದು ಬೆಳಗಿನಜಾವ 5 ಗಂಟೆಗೆ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಂತ್ರಾಲಯಕ್ಕೆ ಹೊರಟಿದ್ದ ಇಬ್ಬರು ಮಕ್ಕಳು ಸೇರಿ ಐದು ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಂದು ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

29/11/2025

ತಾಯಿಯನ್ನ ಚಪ್ಪಲಿಯಲ್ಲಿ ಹೊಡೆಯುತ್ತಿರುವ ಹೆಣ್ಣು ಮಗಳು

ಹೆತ್ತ ತಾಯಿಯನ್ನ ಅಮಾನವೀಯವಾಗಿ ತಳ್ಳಿ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಾಮಂಜೂರಿನ ಮೂಡುಶೆಡ್ಡೆ ಎಂಬಲ್ಲಿ ಘಟನೆ ನಡೆದಿದೆ.

ದೃಶ್ಯದಲ್ಲಿ ಯುವತಿಯೊಬ್ಬಳು ವಯೋ ವೃದ್ದೆಯನ್ನು ಕರುಣೆ ಇಲ್ಲದೆ ಹೊಡೆಯುತ್ತಿರುವ ದೃಶ್ಯವನ್ನು ನೋಡುತ್ತಿರುವ ಕೆಲವರು ಮೂಕ ಪ್ರೇಕ್ಷಕರಾಗಿದ್ದು, ಮತ್ತೊಬ್ಬರು ಈ ದೃಶ್ಯವನ್ನು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೃದ್ದೆಯನ್ನು ಹೊಡೆಯುತ್ತಿರುವ ಯುವತಿ ಮತ್ತು ಮೂಕ ಪ್ರೇಕ್ಷರಾಗಿ ವಿಡಿಯೋ ಮಾಡುತ್ತಿರುವವರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.

ಘಟನೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

Address

176, 25th Division, Maruthi Nagar, Doddaballapur
Bangalore
561203

Alerts

Be the first to know and let us send you an email when ejagathu posts news and promotions. Your email address will not be used for any other purpose, and you can unsubscribe at any time.

Contact The Business

Send a message to ejagathu:

Share