Cini Lahari

Cini Lahari It is an innovative website portal for news and article about the film industry. A dedicated web
(5)

09/08/2025

ವಿಷ್ಣುವರ್ಧನ್ ಅವರ ಸಮಾಧಿ ದುರಂತ ಕುರಿತು ಸುದೀಪ್ ಹೇಳಿದ್ದಿಷ್ಟು

*ಚೌಕಿದಾರ್  ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್ರಥಾವರ ಸಿನಿಮಾ ಖ್ಯಾತಿಯ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಈಗ 'ಚ...
09/08/2025

*ಚೌಕಿದಾರ್ ಜಾಲಿ ಸಾಂಗ್ ರಿಲೀಸ್..
ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

ರಥಾವರ ಸಿನಿಮಾ ಖ್ಯಾತಿಯ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಈಗ 'ಚೌಕಿದಾರ್' ಚಿತ್ರದ ಜೊತೆ ಮತ್ತೆ ಬರುತ್ತಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರೇಕ್ಷಕರ ವಲಯದಲ್ಲಿ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗುವಂತೆ ಮಾಡಿದೆ. ಇದೀಗ ಚೌಕಿದಾರ್ ಅಂಗಳದಿಂದ ಮತ್ತೊಂದು ಗೀತೆ ಬಿಡುಗಡೆಯಾಗಿದೆ.

ಚೌಕಿದಾರ್ ಸಿನಿಮಾದ ಜಾಲಿ ಹಾಡು ರಿಲೀಸ್ ಆಗಿದೆ. ನಾಯಕ ಓ ಮೈ ಬ್ರೋ ಎಂದು ಕುಣಿಯುವ ಹಾಡು ಇದಾಗಿದೆ. ಇದೇ ಸಮಯದಲ್ಲಿ ಅವನಿಗೆ ಅವನ ತಂದೆ ಸಾಥ್‌ ಕೊಟ್ಟಿದ್ದಾರೆ. ತಂದೆ ಪಾತ್ರ ನಿರ್ವಹಿಸಿರುವ ಸಾಯಿ ಕುಮಾರ್ ಭರ್ಜರಿಯಾಗಿ ಹೆಜ್ಜೆ ಹಾಕಿರುವುದು ವಿಶೇಷ. ಮುರುಳಿ‌ ಮಾಸ್ಟರ್ ಹಾಡನ್ನು ಕೋರಿಯೋಗ್ರಫಿ ಮಾಡಿದ್ದಾರೆ. ನಾಯಕ ಪೃಥ್ವಿ ಅಂಬಾರ್ ಹಾಗೂ ಸಾಯಿಕುಮಾರ್ ಡ್ಯಾನ್ಸ್ ಜುಗಲ್ ಬಂದಿ ಹವಾ ಕ್ರಿಯೇಟ್ ಮಾಡುತ್ತಿದೆ.

ಚಿತ್ರರಂಗದಲ್ಲಿ ಐವತ್ತು ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ಚೌಕಿದಾರ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಹಾಡಿನಲ್ಲಿ ಅವರ ಮುಗ್ದತೆ ಪ್ರೇಕ್ಷಕರನ್ನು ಸೆಳೆಯುತ್ತಿದೆ.

ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಓ ಮೈ ಬ್ರೋ ಪ್ಯಾಥೋ ಗೀತೆಗೆ ಖ್ಯಾತ ಗಾಯಕ ಕೈಲಾಸ್ ಖೇರ್ ಕಂಠ ಕುಣಿಸಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಹಾಡಿನ ಕಿಕ್ ಹೆಚ್ಚಿಸಿದೆ.

ಚಿತ್ರದಲ್ಲಿ ದೊಡ್ಮನೆಯ ಮೊಮ್ಮಗಳು ಧನ್ಯಾ ರಾಮ್‌ಕುಮಾರ್ ನಾಯಕ ನಟಿಯಾಗಿ ಅಭಿನಯಿಸಿದ್ದಾರೆ. ದಿಯಾ ಚಿತ್ರ ಖ್ಯಾತಿಯ ನಟ ಪೃಥ್ವಿ ಅಂಬಾರ್ ಇಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ರಗಡ್ ರೋಲ್ ಮೂಲಕ ಪ್ರೇಕ್ಷಕರಿಗೆ ಎಂಟರ್ಟೈನ್ಮೆಂಟ್ ಕೊಡಲು ಸಜ್ಜಾಗಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಡೈಲಾಗ್ ಕಿಂಗ್ ಸಾಯಿ ಕುಮಾರ್ ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸುಧಾರಾಣಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸಿದ್ದಾರೆ.

ಚೌಕಿದಾರ್ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸಚಿನ್‌ ಬಸ್ರೂರು ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಪೂರೈಸಿದ್ದಾರೆ. 'ಚೌಕಿದಾರ್' ಬಹು ಭಾಷೆಗಳಲ್ಲಿ ಮೂಡಿ ಬರುತ್ತಿದೆ.

ವಿಷ್ಣುವರ್ಧನ್ ಅವರ ಸಮಾಧಿ ಕುರಿತು ಕಿಚ್ಚ ಸುದೀಪ್ ಹೇಳಿಕೆ...ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ...
09/08/2025

ವಿಷ್ಣುವರ್ಧನ್ ಅವರ ಸಮಾಧಿ ಕುರಿತು ಕಿಚ್ಚ ಸುದೀಪ್ ಹೇಳಿಕೆ...

ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು.

ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ.

ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ.

ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು.

ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ. ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ?

ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ.

ನಿಮ್ಮ ಪ್ರೀತಿಯ ಕಿಚ್ಚ






"ಆಸ್ಟಿನ್ ನ ಮಹನ್ಮೌನ" ಸಿನಿಮಾ‌ಸಾಂಗ್ ರಿಲೀಸ್ ಭಾವನಾತ್ಮಕ ಕಥಾ ಹಂದರದ ಚಿತ್ರ:  ಸೆ. 5 ಕ್ಕೆ ಬಿಡುಹಡೆಬೆಳ್ಳಿ ಪರದೆ ಮೇಲೆ ಮತ್ತೊಂದು ಯುವ ಪಡೆಗ...
08/08/2025

"ಆಸ್ಟಿನ್ ನ ಮಹನ್ಮೌನ" ಸಿನಿಮಾ‌ಸಾಂಗ್ ರಿಲೀಸ್

ಭಾವನಾತ್ಮಕ ಕಥಾ ಹಂದರದ ಚಿತ್ರ: ಸೆ. 5 ಕ್ಕೆ ಬಿಡುಹಡೆ

ಬೆಳ್ಳಿ ಪರದೆ ಮೇಲೆ ಮತ್ತೊಂದು ಯುವ ಪಡೆಗಳ ತಂಡ ವಿಭಿನ್ನ ಶೀಷಿಕೆಯ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ಸಿದ್ಧವಾಗಿದೆ.
ಯುವ ಪ್ರತಿಭೆ ವಿನಯ್ ಕುಮಾರ್ ವೈದ್ಯನಾಥನ್ ನಟಿಸಿ , ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿರುವಂತಹ " ಆಸ್ಟಿನ್ ನ ಮಹನ್ಮೌನ " ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ.

ನಾಯಕ , ನಿರ್ದೇಶಕ ಕಮ್ ನಿರ್ಮಾಪಕ ವಿನಯ್ ಕುಮಾರ್ ವೈದ್ಯನಾಥನ್ ಮಾತನಾಡಿ ನಾನು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮುಗಿಸಿದ ನಂತರ ಚಿತ್ರರಂಗದ ಬಗೆ ಆಸಕ್ತಿ ಇದ್ದಿದ್ರಿಂದ , ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವವಿದೆ, ಹಾಗೆಯೇ ಪುನೀತ್ ರಾಜಕುಮಾರ್ ಚಿತ್ರದಲ್ಲೂ ಕೆಲಸ ಮಾಡಿದ್ದೆ. ನಂತರ ಕಿರು ಚಿತ್ರಗಳನ್ನ ನಿರ್ದೇಶನ ಮಾಡುತ್ತಾ ತಾಂತ್ರಿಕ ವಿಭಾಗದಲ್ಲಿ ಹೆಚ್ಚು ಅನುಭವವನ್ನು ಪಡೆದು ಕೊಂಡಿದ್ದೇನೆ.

ಸುಮಾರು 13 ವರ್ಷಗಳ ನಂತರ ನನ್ನ ಕನಸು ಈಗ ನನಸಾಗುತ್ತಿದೆ. ಈ ಚಿತ್ರದಲ್ಲಿ ನಾನೇ ನಟಿಸಿ , ನಿರ್ದೇಶನದ ಜೊತೆ ನಿರ್ಮಾಣ ಕೂಡ ಮಾಡಿದ್ದೇನೆ. ಈ ಚಿತ್ರದ ಟೈಟಲ್ ಕಥೆಗೆ ಸೂಕ್ತವಾಗಿದ್ದು , ಹಾಗಾಗಿ ಅದನ್ನೇ ಇಟ್ಟಿದ್ದೇನೆ. ಇಲ್ಲಿ ಯಾವುದೇ ಜಾತಿ , ಧರ್ಮದ ಕಥೆ ಒಳಗೊಂಡಿಲ್ಲ , ಇದೊಂದು ಪ್ಯೂರ್ ಎಮೋಷನಲ್ , ಲವ್ , ಥ್ರಿಲ್ಲಿಂಗ್ ಕಥೆಯನ್ನು ಒಳಗೊಂಡಿದೆ. ಆಸ್ಟಿನ್ ಎನ್ನುವುದು ನಾಯಕನ ಪಾತ್ರದ ಹೆಸರು,

ಈ ಚಿತ್ರದಲ್ಲಿ ನನ್ನದು ಎರಡು ಶೇಡ್ ಗಳಲ್ಲಿ ಬರುವಂತಹ ಪಾತ್ರ. ಅದು ಯಾಕೆ ಏನು ಎಂಬುದನ್ನು ನೀವು ತಿಳಿಯ ಮೇಲೆ ನೋಡಬೇಕು. ಈ ಚಿತ್ರದಲ್ಲಿ ಇರುವ ಎಲ್ಲಾ ಪಾತ್ರಗಳು ಕ್ರಿಶ್ಚಿಯನ್ ಧರ್ಮದಾಗಿದ್ದು , 90ರ ಕಾಲಘಟ್ಟದಲ್ಲಿ ನಡೆಯುವ ಕಡಲ ಭಾಗದ ಒಂದು ಕುಟುಂಬದ ಕಥಾನಕವನ್ನು ಒಳಗೊಂಡಿದೆ.
2023 ರಲ್ಲಿ ಆರಂಭಗೊಂಡ ಈ ಚಿತ್ರ ಮೈಸೂರು , ಹೊನ್ನಾವರ ಹಾಗೂ ಚಿಕ್ಕಮಗಳೂರು ಸೇರಿದಂತೆ ಸುಮಾರು 23 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ.

ಸದ್ಯದಲ್ಲೇ ಚಿತ್ರದ ಟ್ರೈಲರ್ ಬಿಡುಗಡೆ ಮಾಡದಿದ್ದೇವೆ. ನಮ್ಮ ಚಿತ್ರ ಸೆಪ್ಟಂಬರ್ 5ರಂದು ರಾಜ್ಯದ್ಯಂತ ಕೆ .ಆರ್. ಜೆ ಫಿಲ್ಮ್ಸ್ ಮೂಲಕ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆಯುತ್ತಿದೆ. ನನ್ನ ಬಹುದಿನದ ಶ್ರಮದ ಚಿತ್ರ ಇದಾಗಿದ್ದು , ನಿಮ್ಮೆಲ್ಲರ ಪ್ರೀತಿ , ಸಹಕಾರ ನಮ್ಮ ಚಿತ್ರದ ಮೇಲೆ ಇರಲಿ ಎಂದು ಕೇಳಿಕೊಂಡರು.

ನಾಯಕಿ ರಿಷಾ ಗೌಡ ಮಾತನಾಡಿ, ನಾನು ಮೂಲತಃ ಮೈಸೂರಿನವಳು , ಕಲಾ ರಂಗಭೂಮಿಯಲ್ಲಿ ನಾಟಕಗಳನ್ನು ಮಾಡಿಕೊಂಡು ಬಂದಿದ್ದೇನೆ. ಇದು ನನ್ನ ಮೂರನೇ ಚಿತ್ರ. ಹೀರೋಯಿನ್ ಗಳನ್ನು ಗ್ಲಾಮರಸ್ ಪಾತ್ರಗಳಿಗೆ ಹೆಚ್ಚು ಬಳಸಿಕೊಳ್ಳುತ್ತಾರೆ, ಆದರೆ ಈ ಚಿತ್ರದಲ್ಲಿ ನಿರ್ದೇಶಕರು ನನಗೆ ಒಂದು ಉತ್ತಮ ಪಾತ್ರ ನೀಡಿದ್ದು , ಹೋಮ್ಲಿ ಹುಡುಗಿಯಾಗಿ ಅಭಿನಯಿಸಿದ್ದೇನೆ. ಚಿತ್ರದ ಕಂಟೆಂಟ್ ನೋಡಿ ಒಪ್ಪಿಕೊಂಡಿದ್ದೆ. ಚಿತ್ರ ಸೊಗಸಾಗಿ ಬಂದಿದೆ , ನಮ್ಮನ್ನ ಹರಸಿ , ಬೆಳೆಸಿ ಎಂದರು.

ಪ್ರಕೃತಿ ಪ್ರಸಾದ್ ಮಾತನಾಡಿ, ನಾನು ಸೀರಿಯಲ್ ಗಳಲ್ಲಿ ಅಭಿನಯಿಸಿದ್ದೇನೆ. ಇದು ನನ್ನ ಮೊದಲ ಚಿತ್ರವಾಗಿದ್ದು , ಡಾಕ್ಟರ್ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ನನ್ನ ಪಾತ್ರವೂ ಬಹಳ ವಿಭಿನ್ನವಾಗಿದೆ. ಹಾಡುಗಳು ನಿಮಗೆ ಹೇಗೆ ಅನ್ನಿಸಿತು , ನಿರ್ದೇಶಕ ಬಹಳಷ್ಟು ಶ್ರಮ ಪಟ್ಟಿದ್ದಾರೆ. ನಮಗೆ ಬೆಂಬಲವನ್ನ ನೀಡಿ ಎಂದು ಕೇಳಿಕೊಂಡರು.

ಸಂಗೀತ ನಿರ್ದೇಶಕ ವಿಶ್ವಿ, ಇದು ನನ್ನ ಮೊದಲ ಸಂಗೀತ ನಿರ್ದೇಶನದ ಚಿತ್ರ. ಈ ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದೆ. ಒಂದು ಹಾಡು ಲಾಟಿನ್ ಭಾಷೆಯಲ್ಲಿ ಮೂಡಿದೆ. ಈ ಚಿತ್ರದ ರೀ ರೆಕಾರ್ಡಿಂಗ್ ಕೆಲಸ ಬಹಳ ಉತ್ತಮವಾಗಿ ಮೂಡಿ ಬಂದಿದೆ. ನಿಮ್ಮ ಸಪೋರ್ಟ್ ನಮ್ಮ ಟೀಮ್ ಮೇಲೆ ಇರಲಿ ಎಂದರು.

ಚಿತ್ರದಲ್ಲಿ
ಬಾಲರಾಜವಾಡಿ , ರಘು ರಾಮನಕೊಪ್ಪ , ಜಗಪ್ಪ , ಸ್ವಾತಿ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಈ ಒಂದು ಚಿತ್ರಕ್ಕೆ ರಾಜಕಾಂತ್ ಛಾಯಾಗ್ರಹಣ , ಶ್ರೀನಿವಾಸ್ ಹಾಗೂ ಶಶಿಧರ್ ಸಂಕಲನವಿದೆ. AVV ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗಿರುವ ಈ ಚಿತ್ರದ ಹಾಡುಗಳನ್ನು ಎಂ. ಆರ್. ಟಿ ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿದೆ.

*ಲವ್ ಯೂ ಮುದ್ದು ಎಂದ ಸಿದ್ದು.ಪ್ರೇಮಕಥೆ ಹಿಂದೆ ಬಿದ್ದ ಕೆಮಿಸ್ಟ್ರಿ ಆಫ್ ಕರಿಯಪ್ಪ ಸಾರಥಿ ಕುಮಾರ್...*ಕೆಮಿಸ್ಟ್ರಿ ಆಫ್ ಕರಿಯಪ್ಪ ಸೂತ್ರಧಾರರ ಹ...
07/08/2025

*ಲವ್ ಯೂ ಮುದ್ದು ಎಂದ ಸಿದ್ದು.
ಪ್ರೇಮಕಥೆ ಹಿಂದೆ ಬಿದ್ದ ಕೆಮಿಸ್ಟ್ರಿ ಆಫ್ ಕರಿಯಪ್ಪ ಸಾರಥಿ ಕುಮಾರ್...

*ಕೆಮಿಸ್ಟ್ರಿ ಆಫ್ ಕರಿಯಪ್ಪ ಸೂತ್ರಧಾರರ ಹೊಸ ಸಿನಿಮಾ ಅನೌನ್ಸ್.. ಲವ್ ಯೂ ಮುದ್ದು ಫಸ್ಟ್ ಲುಕ್ ರಿಲೀಸ್*

ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಕುಮಾರ್ ಈಗ ಹೊಸ ಸಿನಿಮಾ ಘೋಷಿಸಿದ್ದಾರೆ. ಕುಮಾರ್‌ ಅವರ ಹೊಸ ಪ್ರಯತ್ನಕ್ಕೆ ಲವ್ ಯೂ ಮುದ್ದು ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆ. ಮಹಾರಾಷ್ಟ್ರದಲ್ಲಿ ನಡೆದ ನೈಜ ಪ್ರೇಮಕಥೆಯನ್ನು ಕುಮಾರ್ ಅವರು ಸಿನಿಮಾ ರೂಪಕ್ಕಿಳಿಸಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

ಲವ್ ಯೂ ಮುದ್ದು ಸಿನಿಮಾದಲ್ಲಿ ನಾಯಕನಾಗಿ ಸಿದ್ದು ನಟಿಸುತ್ತಿದ್ದು, ನವನಟಿ ರೇಷ್ಮಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ರಾಜೇಶ್ ನಟರಂಗ, ಗಿರೀಶ್ ಶಿವಣ್ಣ, ತಬಲಾ ನಾಣಿ, ಶ್ರೀವತ್ಸ, ಅಪೂರ್ವ ಹಾಗೂ ಉಷಾ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಕಾರ್ಕಳ, ಕುಮಟಾ, ಬೆಂಗಳೂರು ಸುತ್ತಮುತ್ತ 45 ದಿನಗಳ ಶೂಟಿಂಗ್ ನಡೆಸಲಾಗಿದೆ. ಕಿಶನ್ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಕಿಶನ್ ಟಿಎನ್ ಲವ್ ಯೂ‌ ಮುದ್ದು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ TS ಸಾಥ್ ಕೊಟ್ಟಿದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿಎಸ್ ದೀಪು ಸಂಕಲನ ಚಿತ್ರಕ್ಕಿದೆ.

*N1ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ**ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ IPT 12 ಸೀಸನ್-2**ಮತ್ತೆ ಶುರು IP...
07/08/2025

*N1ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ*

*ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ IPT 12 ಸೀಸನ್-2*

*ಮತ್ತೆ ಶುರು IPT 12 ..ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ ಸೀಸನ್-2 ಕ್ರಿಕೆಟ್ ಟೂರ್ನಮೆಂಟ್*

ಸುನಿಲ್ ಕುಮಾರ್ ಬಿ. ಆರ್ ನೇತೃತ್ವದ ಎನ್ 1 ಕ್ರಿಕೆಟ್ ಅಕಾಡೆಮಿ ಕ್ರಿಕೆಟ್ ಪ್ರೇಮಿಗಳಿಗಾಗಿ ಹಲವಾರು ಟೂರ್ನಮೆಂಟ್ ಆಯೋಜಿಸಿ ಯಶಸ್ವಿ ಕಂಡಿದೆ. ಇದೀಗ ಮತ್ತೊಮ್ಮೆ IPT12 ಏರ್ಪಡಿಸಿದೆ.‌ ಕಳೆದ ವರ್ಷ IPT12 ಯಶಸ್ವಿಯಾಗಿ ಜರುಗಿದ್ದು, ಇದೀಗ IPT12 ಸೀಸನ್ 2 ಚಾಲನೆ ದೊರೆತಿದೆ. ಡಾಕ್ಟರ್ಸ್, ಲಾಯರ್ಸ್, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು, ಸಿವಿಲ್ ಕಾಂಟ್ರಾಕ್ಟರ್ಸ್,ಎಕ್ಸ್ಜಿ ಡಿಪಾರ್ಟ್ಮೆನ್ ಕರ್ನಾಟಕ ಪೊಲೀಸ್,ಪ್ರೈವೇಟ್ ಲಿಮಿಟೆಡ್ ಕಂಪನಿ ವಿನ್ ಟೈಮ್ ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್ IPT12 ಇದಾಗಿದೆ. ಈ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಸೀಸನ್ ಗೆ ಚಾಲನೆ ದೊರೆತಿದ್ದು, ಟ್ರೋಫಿ ಬಿಡುಗಡೆ ಕಾರ್ಯಕ್ರಮ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಡಿಜಿಪಿ

ಅಲೋಕ್ ಕುಮಾರ್, ಅಬಕಾರಿ ಇಲಾಖೆ ಹೆಚ್ಚುವರಿ ಕಮಿಷನರ್ ಡಾ.ವೈ.ಮಂಜುನಾಥ್, ನಟರಾದ ಸಚಿನ್ ಚೆಲುವರಾಯಸ್ವಾಮಿ, ಶರತ್ ಪದ್ಮನಾಭ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇಂಡಿಪೆಂಡೆನ್ಸ್ ಕಪ್ ಪ್ರೊಫೆಷನಲ್ ಟೂರ್ನಮೆಂಟ್ ಎರಡನೇ ಆವೃತ್ತಿ
ಒಂದು ವಾರಗಳ ಕಾಲ ನಡೆಯಲಿದೆ. 12 ಓವರ್ ಗಳ ಪಂದ್ಯಾವಳಿಯು ಹಗಲು ಮತ್ತು ರಾತ್ರಿ ನಡೆಯಲಿದ್ದು, ಆಗಸ್ಟ್ 9 ರಿಂದ 15 ರವರೆಗೆ ಲೀಗ್-ಕಮ್-ನಾಕೌಟ್ ಸ್ವರೂಪದಲ್ಲಿ ಪ್ರಾರಂಭವಾಗಲಿದೆ. ಟೂರ್ನಮೆಂಟ್ ಗೆ ಎಂ ಆರ್ ಗ್ರೂಪ್ಸ್ ಟೈಟಲ್ ಸ್ಪಾನ್ಸರ್ ಮಾಡಿದೆ.
ಬೆಂಗಳೂರಿನ ಅಶೋಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯವನ್ನು ಆಯೋಜಿಸಲಾಗಿದೆ.


*ಭಾಗವಹಿಸುವ ತಂಡಗಳಿವು...*

• ಎಂಆರ್ ಪ್ಯಾಂಥರ್ಸ್
• ಬುಲ್ ಸ್ಕ್ವಾಡ್
• ಟೀಮ್ ಲಾಯರ್ಸ್
• ಲಿಯೋಸ್ ಲೈಫ್ ಸೆವಿಯರ್ಸ್
• ಸಿವಿಲ್ ಟೈಗರ್ಸ್
• ವಿಜಿ
• ಬೆಂಗಳೂರು ವಾರಿಯರ್ಸ್
• ವಿನ್ ಟೈಮ್ ರಾಕರ್ಸ್

ಹೊಸ ಕಥೆಯೊಂದಿಗೆ ಬಂದ ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕ ಕುಮಾರ್..'ಲವ್ ಯೂ ಮುದ್ದು' ಪ್ರೇಮಕಥೆಯಲ್ಲಿ ಸಿದ್ದು ಹೀರೋ
07/08/2025

ಹೊಸ ಕಥೆಯೊಂದಿಗೆ ಬಂದ ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕ ಕುಮಾರ್..'
ಲವ್ ಯೂ ಮುದ್ದು' ಪ್ರೇಮಕಥೆಯಲ್ಲಿ ಸಿದ್ದು ಹೀರೋ






07/08/2025

ಹೊಸಬರ ಕನಸಿಗೆ ಧ್ರುವ ಸರ್ಜಾ ಸಾಥ್
ಮಗ್ನೆ ಆಲ್ಬಂ ಸಾಂಗ್ ಹೊರ ಬಂತು...


ಸಿನಿಮಾ ರಂಗದ ಕನಸು ಹೊತ್ತು ಚಿತ್ರರಂಗದಲ್ಲಿ ಸಾಧಿಸಬೇಕು ಎಂದು ಬರೋರು ಲಕ್ಷಾಂತರ ಮಂದಿ. ಆ ಲಕ್ಷಾಂತರ ಮಂದಿಗಳಲ್ಲಿ ಕೆಲವರನ್ನ ಮಾತ್ರ ಜನರು ಲಕ್ಷವಿಟ್ಟು ನೋಡ್ತಾರೆ. ಕಾರಣ ಅವರಲ್ಲಿ ಅಡಗಿರುವ ಪ್ರತಿಭೆ. ಇಲ್ಲೊಬ್ಬ ಪ್ರತಿಭಾವಂತನನ್ನು ಸ್ಯಾಂಡಲ್ವುಡ್ನ ‘ಕೆ.ಡಿ’ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಗುರುತಿಸಿದ್ದಾರೆ , ಆತನ ಪ್ರಯತ್ನವನ್ನ ಬೆನ್ತಟ್ಟಿ ಭೇಷ್ ಎಂದಿದ್ದಾರೆ. ಹಾಗಾದ್ರೆ ಆ ಪ್ರತಿಭೆ ಯಾರು ಅನ್ನೋ ಪ್ರಶ್ನೆ ಗೆ ಉತ್ತರ ವಾಲೀಸ್ ಸಂತೋಷ್.ಎನ್.

ವಾಲೀಸ್ ಸಂತೋಷ್ ಪ್ರತಿಭವಂತ ನೃತ್ಯ ಪಟು , ಡ್ಯಾನ್ಸ್ ಕೊರಿಯೋಗ್ರಫರ್. ಮಾಗಡಿಯ ರೈತಾಪಿ ಕುಟುಂಬದಲ್ಲಿ ಜನಿಸಿದ ವಾಲೀಸ್ ಸಂತೋಷ್ ಸಿನಿಮಾ ರಂಗದ ಕನಸು ಹೊತ್ತು , ಡ್ಯಾನ್ಸ್ ಕೊರಿಯೋಗ್ರಫರ್ ಫಿಲ್ಡ್ನಲ್ಲಿ ಫಿಲ್ಡಿಂಗ್ಗೆ ಇಳಿದಿದ್ದಾರೆ. ಅನೇಕ ಹೇಸರಾಂತ ಕನ್ನಡ ಕೊರಿಯೋಗ್ರಫರ್ಸ್ಗಳ ಜೊತೆ ಡ್ಯಾನ್ಸರ್ ಆಗಿ, ಅಸಿಸ್ಟೆಂಟ್ ಕೊರಿಯೋಗ್ರಫರ್ ಆಗಿ , ಕನ್ನಡದ ಡಿಕೆಡಿ , ತೆಲುಗಿನ ಡಿ ಶೋ ಜೊತೆಗೆ ತಮಿಳಿನ ರಿಯಾಲಿಟಿ ಶೋಗಳಲ್ಲಿ ಕೊರಿಯೋಗ್ರಫರ್ ಆಗಿಯೂ ಕೆಲಸ ಮಾಡಿರುವ ಅನುಭವ ಹೊಂದಿರುವ ವಾಲೀಸ್ ಸಂತೋಷ್ ಈಗ ಆಲ್ಬಂ ಸಾಂಗ್ ಒಂದರ ಮೂಲಕ ಕನ್ನಡಿಗರ ಆಶೀರ್ವಾದ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ.

ತಾವೇ ಒಂದು ತಂಡ ಕಟ್ಟಿ ಗೋಡೆಯಂಗೆ ನಿಲ್ಲ ಬೇಕು ಅನ್ನೋ ಮಾನೋಭಾವದಿಂದ ವಾಲೀಸ್ ಫ್ಲಿಕ್ಸ್ ಅನ್ನೋ ಸಂಸ್ಥೆ ಕಟ್ಟಿ ಮಗ್ನೇ , ಚಟ್ವಂತ ಕೊಟ್ರೆ ಮುಟ್ ನೋಡಬೇಕು ಅನ್ನೋ ಮಾಸ್ ಆಲ್ಬಂ ಮೂಲಕ ಬರುತ್ತಿದ್ದಾರೆ. ಇವ್ರ ಈ ಪ್ರಯತ್ನಕ್ಕೆ ಹನುಮ ಭಕ್ತ ಧ್ರುವ ಸರ್ಜಾ ಸಾಥ್ ನೀಡಿದ್ದಾರೆ. ಸಾಂಗ್ ಲಾಂಚ್ ಮಾಡಿ ಗುಡ್ ಲಕ್ ಹೇಳಿದ್ದಾರೆ.

ಈ ವಿಚಾರವನ್ನ ಪತ್ರಿಕಾ ಮಿತ್ರರ ಜೊತೆ ಹಂಚಿಕೊಂಡಿರುವ ವಾಲೀಸ್ ಸಂತೋಷ್ ಮುಂದೆ ಹೀರೋ ಆಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡೋ ಕನಸಿನ ಯೋಜನೆಯಲ್ಲಿ ಇದ್ದಾರೆ. ತನ್ನೆದೆಯಾದ ಡ್ಯಾನ್ಸ್ ಕ್ಲಾಸ್ಗಳನ್ನ ನಡೆಸುತ್ತಿರುವ ವಾಲೀಸ್ ಒಂದು ಯುವ ತಂತ್ರಜ್ಞರ ತಂಡಕಟ್ಟಿದ್ದಾರೆ. ತನ್ ಲೈಫ್ನಲ್ಲಿ ಆದ ಅವಮಾನವನ್ನ ಸ್ಫೂರ್ತಿಯಾಗಿ ಇಟ್ಕೊಂಡು ಮಗ್ನೇ ಆಲ್ಬಂ ಸಾಂಗ್ ಮಾಡಿದ್ದಾರೆ ವಾಲೀಸ್ ಸಂತೋಷ್.
ಯುವಕ ಮಾರುತಿ ರಾವ್ ಸಂಕಲನ ಮತ್ತು ಛಾಯಾಗ್ರಹಣ ಮಗ್ನೇ ಆಲ್ಬಂ ಸಾಂಗ್ ಗಿದೆ. ಧ್ರುವ ಕೇಶವ್ ಸಂಗೀತ , ಸಂತೋಷ್ ಗೆಳೆಯ ತೇಜಸ್ ಕುಮಾರ್ ಸಾಹಿತ್ಯ ಈ ಹಾಡಿಗಿದೆ. ಪಕ್ಕಾ ಮಾಸ್ ಸ್ಟೈಲ್ನಲ್ಲಿ ಒಬ್ಬ ಕಮರ್ಶಿಯಲ್ ಹೀರೋ ಗೆ ನೀಡುವ ಬಿಲ್ಡಪ್ ಸಾಂಗ್ ರೀತಿ ಹಾಡು ಮೂಡಿಬಂದಿದ್ದು ಱಪ್ ಶೈಲಿಯ ಟಚ್ ಇದೆ. ನೀವೇನಾದ್ರು ಈ ಮಗ್ನೇ ಹಾಡನ್ನ ಕೇಳದಿದ್ದರೆ Wallis Flics Youtube ಚಾನೆಲ್ನಲ್ಲಿ ಕೇಳಬಹುದು , ಹೊಸಬಹ ಪ್ರಯತ್ನ ಎಷ್ಟರ ಮಟ್ಟಿಗಿದೆ ಅಂತ ಪ್ರಶಂಸಿಸ ಬಹುದು.

07/08/2025

ಒಪ್ಪಂದದ ಮೇರೆಗೆ ಮಡೆನೂರು ಮನು ಮೇಲಿನ‌ ಕೇಸ್ ಹಿಂಪಡೆದ ಮಿಂಚು





"ರೋಲೆಕ್ಸ್" ಗೆ ಡಬ್ಬಿಂಗ್ ಪೂರ್ಣ ಇದು ಕೋಮಲ್ ಕುಮಾರ್ ಚಿತ್ರ:ಸೋನಾಲ್ ಮೊಂತೆರೊ ನಾಯಕಿಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು...
07/08/2025

"ರೋಲೆಕ್ಸ್" ಗೆ ಡಬ್ಬಿಂಗ್ ಪೂರ್ಣ

ಇದು ಕೋಮಲ್ ಕುಮಾರ್ ಚಿತ್ರ:ಸೋನಾಲ್ ಮೊಂತೆರೊ ನಾಯಕಿ

ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ‌‌"ರೋಲೆಕ್ಸ್".

ಈ ಹಿಂದೆ "ಬಿಲ್ ಗೇಟ್ಸ್" ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಸಿ.ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್ ಅವರು "ರೋಲೆಕ್ಸ್" ಚಿತ್ರದಲ್ಲಿ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಕಾಮಿಡಿಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಹಾಗೂ ಒಂದು ಹಾಡಿನ ಚಿತ್ರೀಕರಣ ಮುಕ್ತಾಯವಾಗಿದೆ‌. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಆ ಹಾಡುಗಳ ಚಿತ್ರೀಕರಣ ಮುಕ್ತಾಯವಾದರೆ, "ರೋಲೆಕ್ಸ್" ಚಿತ್ರದ ಚಿತ್ರೀಕರಣ ಸಂಪೂರ್ಣವಾಗುತ್ತದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಕೋಮಲ್ ಅವರು ಈ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ "ರೋಲೆಕ್ಸ್" ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಾಲ್ ಮೊಂತೆರೊ, ಅಚ್ಯುತಕುಮಾರ್, ನವೀನ್ ಪಡೀಲ್, ಅರುಣ ಬಾಲರಾಜ್ ಪ್ರಮುಖಪಾತ್ರದಲ್ಲಿ ನಟಿಸಿದ್ದು, ನಿರ್ಮಾಪಕರಾದ ಅಂಬಟಿ ಮಧು ಮೋಹನ್ ಕೃಷ್ಣ ಅವರು ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನವಿರುವ "ರೋಲೆಕ್ಸ್" ಚಿತ್ರಕ್ಕೆ ಮುರಳಿಕೃಷ್ಣ ಅವರ ನಿರ್ಮಾಣ ನಿರ್ವಹಣೆ ಇದೆ. ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.





zee5kannada ಮೊಟ್ಟ ಮೊದಲ ಬಾರಿಗೆ ಸಖತ್ ಸಸ್ಪೆನ್ಸ್ ಥಿಲ್ಲರ್ ವೆಬ್ ಸೀರೀಸ್ "ಶೋಧ" ದಲ್ಲಿ ರೋಹಿತ್ ಪಾತ್ರದ ಮೂಲಕ ನಿಮ್ಮ ಮುಂದೆ ಬರ್ತಿದ್ದಾರೆ ...
07/08/2025

zee5kannada ಮೊಟ್ಟ ಮೊದಲ ಬಾರಿಗೆ ಸಖತ್ ಸಸ್ಪೆನ್ಸ್ ಥಿಲ್ಲರ್ ವೆಬ್ ಸೀರೀಸ್ "ಶೋಧ" ದಲ್ಲಿ ರೋಹಿತ್ ಪಾತ್ರದ ಮೂಲಕ ನಿಮ್ಮ ಮುಂದೆ ಬರ್ತಿದ್ದಾರೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪವನ್ ಕುಮಾರ್!

"ಶೋಧ" | ಆಗಸ್ಟ್ 22 ರಂದು Z5 ಕನ್ನಡದಲ್ಲಿ.

PREMIERES 22nd August on ZEE5























less

Address

62, 4th Floor, Renukamba Studio, 4th Main Road, 18th Cross, Malleshwaram
Bangalore
560055

Alerts

Be the first to know and let us send you an email when Cini Lahari posts news and promotions. Your email address will not be used for any other purpose, and you can unsubscribe at any time.

Share