Samaya mithra

Samaya mithra karnataka state News
Bengaluru Local News
Bengaluru City News & Videos
Intresting Events
Public Activites
Magzine

ಜನಪರವಾದ ಸುದ್ದಿಗಳು, ವಿಶೇಷ ಲೇಖನ ಗಳು,  ವಿಶಿಷ್ಟ ರೀತಿಯ ಪುಟ ವಿನ್ಯಾಸ ಹೀಗೆ ಎಲ್ಲಾ ಆಯಾಮಗಳಲ್ಲೂ ಅತ್ಯುತ್ತಮ ರೀತಿಯಲ್ಲಿ ಮೂಡಿ ಬರುತ್ತಿರುವ ...
12/08/2022

ಜನಪರವಾದ ಸುದ್ದಿಗಳು, ವಿಶೇಷ ಲೇಖನ ಗಳು, ವಿಶಿಷ್ಟ ರೀತಿಯ ಪುಟ ವಿನ್ಯಾಸ ಹೀಗೆ ಎಲ್ಲಾ ಆಯಾಮಗಳಲ್ಲೂ ಅತ್ಯುತ್ತಮ ರೀತಿಯಲ್ಲಿ ಮೂಡಿ ಬರುತ್ತಿರುವ ಸಮಯ ಮಿತ್ರ ಪತ್ರಿಕೆಯ ನ್ಯಾಯಪರವಾದ ನಿಲುವಿನ ಮೂಲಕ ರಾಜ್ಯದಲ್ಲಿ ಒಳ್ಳೆಯ ಹೆಸರು ಗಳಿಸಲಿ ಎಂದು ಹಾರೈಸುತ್ತೇನೆ.
-ಎಂ.ಎನ್.ಶ್ರೀಕಾಂತ್ (ಪುಟ್ಟ), ಮಾಜಿ ಬಿಬಿಎಂಪಿ ಸದಸ್ಯರು ದೇವಸಂದ್ರ ವಾರ್ಡ್ 55, ಕೆ.ಆರ್.ಪುರ, ಬೆಂಗಳೂರು

YOUTUBE CHANNEL: https://youtu.be/1i-3AC3DYF0

ಜನಪರವಾದ ಸುದ್ದಿಗಳು, ವಿಶೇಷ ಲೇಖನ ಗಳು, ವಿಶಿಷ್ಟ ರೀತಿಯ ಪುಟ ವಿನ್ಯಾಸ ಹೀಗೆ ಎಲ್ಲಾ ಆಯಾಮಗಳಲ್ಲೂ ಅತ್ಯುತ್ತಮ ರೀತಿಯಲ್ಲಿ ಮೂಡಿ...

11 ಕೋಟಿ ರು. ಅಂದಾಜು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಚಾಲನೆ :ಯಲಹಂಕ : ಕ್ಷೇತ್ರದ ಹೆಸರಘಟ್ಟ ಹೋಬಳಿಯ ಸುರದೇನಪುರ, ಮಾರಸಂದ್ರ, ಅರಕೆರೆ...
12/08/2022

11 ಕೋಟಿ ರು. ಅಂದಾಜು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ :

ಯಲಹಂಕ : ಕ್ಷೇತ್ರದ ಹೆಸರಘಟ್ಟ ಹೋಬಳಿಯ ಸುರದೇನಪುರ, ಮಾರಸಂದ್ರ, ಅರಕೆರೆ, ಕಡತನಮಲೆ, ಬುಡಮನಹಳ್ಳಿ, ಚೊಕ್ಕನಹಳ್ಳಿ, ಶ್ಯಾನಬೋಗನಹಳ್ಳಿ, ಕಾಕೋಳು, ಸೋಣ್ಣೆನಹಳ್ಳಿ, ಕಾಮಾಕ್ಷಿಪುರ, ಕಾರ್ಲಾಪುರ, ಚಲ್ಲಹಳ್ಳಿ, ಹನಿಯೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 11 ಕೋಟಿ ರು.ಅಂದಾಜು ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಬಿಡಿಎ ಅಧ್ಯಕ್ಷ, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಭೂಮಿಪೂಜೆ ನೆರವೇರಿಸಿದರು.

ಇದೇ ವೇಳೆ "ಹರ್ ಘರ್ ತಿರಂಗಾ" ಅಭಿಯಾನದ ಪ್ರಯುಕ್ತ ಭೇಟಿ ನೀಡಿದ ಪ್ರತಿ ಗ್ರಾಮಗಳ ಮಕ್ಕಳಿಗೆ ರಾಷ್ಟ್ರಧ್ವಜವನ್ನು ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ 'ಮುಖ್ಯಮಂತ್ರಿ ಗಳ ವಿಶೇಷ ಅನುದಾನದ ಅಡಿಯಲ್ಲಿ ಇಂದು ಹೆಸರಘಟ್ಟ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 11 ಕೋಟಿ ರು. ಅಂದಾಜು ವೆಚ್ಚದಲ್ಲಿ ಮುಖ್ಯ ರಸ್ತೆಗಳು, ಸಂಪರ್ಕ ರಸ್ತೆಗಳು, ಒಳಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಕಾಮಗಾರಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು. ಯಲಹಂಕ ಕ್ಷೇತ್ರ ವ್ಯಾಪ್ತಿಯ 20 ಗ್ರಾಮ ಪಂಚಾಯ್ತಿಗಳು,1 ನಗರ ಸಭೆ ಮತ್ತು 5 ಬಿಬಿಎಂಪಿ ವಾರ್ಡ್ ಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಸುಮಾರು 150 ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಯಲಹಂಕ ಕ್ಷೇತ್ರದಲ್ಲಿ ಶೇ.70%ರಷ್ಟು ಅಭಿವೃದ್ಧಿ ಕಾರ್ಯಗಳು ಕೈಗೂಡಲಿವೆ ಎಂದರು.

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಮಾತನಾಡಿದ ಶಾಸಕರು 'ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ದೇಶದಾದ್ಯಂತ ಪಕ್ಷಾತೀತವಾಗಿ ಹರ್ ಘರ್ ತಿರಂಗಾ ಅಭಿಯಾನ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಷ್ಟೊಂದು ದೊಡ್ಡ ಸಂಖ್ಯೆಯ ತಿರಂಗಾ ಅಭಿಯಾನವನ್ನು ಇದುವರೆಗೆ ಯಾರೂ ಸಹ ನೋಡಿರಲಿಲ್ಲ. ಇದೊಂದು ಹೆಮ್ಮೆಯ ಸಂಗತಿಯಾಗಿದ್ದು, ಈ ಮೂಲಕ ದೇಶದ ಜನರಲ್ಲಿ ದೇಶಪ್ರೇಮವನ್ನು ಉದ್ದೀಪನಗೊಳಿಸುತ್ತಿರುವ ಪ್ರಧಾನಿಯವರ ಕಾರ್ಯಕ್ಕೆ ಹೃತ್ಪೂರ್ವಕ ಧನ್ಯವಾದ ತಿಳಿಸಲಿಚ್ಛಿಸುತ್ತೇನೆ. ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಯಲಹಂಕ ಕ್ಷೇತ್ರದಲ್ಲಿ ಈಗಾಗಲೇ 50 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ತಿರಂಗಾ ಗಳನ್ನು ತಲುಪಿಸಲಾಗಿದ್ದು, ಕ್ಷೇತ್ರದಲ್ಲಿ ಅಗತ್ಯವಿರುವಷ್ಟು ತಿರಂಗಾ ಗಳನ್ನು ವಿತರಿಸಲಾಗುವುದು. ಆ.13ರಿಂದ 15 ರವರೆಗೆ ನಡೆಯಲಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸರ್ವರೂ ಅಭಿಮಾನ ಪೂರ್ವಕವಾಗಿ ಪಾಲ್ಗೊಳ್ಳುವ ಮೂಲಕ ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸವಿ ಕ್ಷಣವನ್ನು ಪ್ರತಿಯೊಬ್ಬರೂ ಅನುಭವಿಸುವಂತಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹೆಚ್.ಬಿ.ಹನುಮಯ್ಯ, ದೊಡ್ಡಬಳ್ಳಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸತೀಶ್ ಕಡತನಮಲೆ, ಅರಕೆರೆ ಗ್ರಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣಗೌಡ, ಉಪಾಧ್ಯಕ್ಷೆ ಶಿಲ್ಪಾ ರಾಜಣ್ಣ, ಸೊಣ್ಣೇನಹಳ್ಳಿ ಗ್ರಾ.ಪಂ.ಅದ್ಯಕ್ಷೆ ಅನಸೂಯಮ್ಮ ಆಂಜನೇಯಗೌಡ, ತಿಮ್ಮೇಗೌಡ, ಬೆಂ.ಉತ್ತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ವಸಂತ್ ಅರಕೆರೆ, ಬಿಜೆಪಿ ಯುವ ಮುಖಂಡ ಚೊಕ್ಕನಹಳ್ಳಿ ನಾಗೇಶ್, ಗ್ರಾ.ಪಂ. ಸದಸ್ಯರಾದ ಅಂಬರೀಶ್ ಬಾಬು, ಚನ್ನಪ್ಪ, ರಾಮಯಲ್ಲಪ್ಪ, ಶಶಿ, ಗುತ್ತಿಗೆದಾರ ರಾಮಮೂರ್ತಿ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರಿದ್ದರು.

ಯಲಹಂಕ : ಕ್ಷೇತ್ರದ ಹೆಸರಘಟ್ಟ ಹೋಬಳಿಯ ಸುರದೇನಪುರ, ಮಾರಸಂದ್ರ, ಅರಕೆರೆ, ಕಡತನಮಲೆ, ಬುಡಮನಹಳ್ಳಿ, ಚೊಕ್ಕನಹಳ್ಳಿ, ಶ್ಯಾನಬೋಗನಹಳ್ಳಿ, ಕ....

ಮೋಸ ಮಾಡಿ ಬಿಜೆಪಿ ವಲಸೆ ಹೋಗಿರುವ ಶಾಸಕರಿಗೆ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೆವೆ ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ಕೆ.ಆರ...
12/08/2022

ಮೋಸ ಮಾಡಿ ಬಿಜೆಪಿ ವಲಸೆ ಹೋಗಿರುವ ಶಾಸಕರಿಗೆ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೆವೆ ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೆ.ಆರ್.ಪುರ :-ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಾಗೂ ಎಲ್ಲಾ ರೀತಿಯ ಸ್ಥಾನಮಾನಗಳನ್ನು ಅನುಭವಿಸಿ ಕೊನೆಗೆ ಪಕ್ಷಕ್ಕೆ ಮೋಸ ಮಾಡಿ ಬಿಜೆಪಿ ವಲಸೆ ಹೋಗಿರುವ ಶಾಸಕರಿಗೆ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೆವೆ ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕೆ.ಆರ್.ಪುರ ಕ್ಷೇತ್ರದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವ ಸಿದ್ದತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಿತ್ತೆಗೆದು ಕಾಂಗ್ರೆಸ್ ಪಕ್ಷದ ಅಧಿಕಾರ ನೀಡಲು ಜನರು ತೀರ್ಮಾನಿಸಿದ್ದಾರೆ. ಸರ್ವೆ ನಡೆಸಿದ್ದೇವೆ, ಸರ್ವೆ ಪ್ರಕಾರ ಕಾಂಗ್ರೆಸ್ ಪರ ಜನಾಭಿಪ್ರಾಯ ಮೂಡಿದೆ,ಜನಸೇವೆ ಮಾಡುವ ಉತ್ತಮ ಪ್ರಾಮಾಣಿಕ ಶಾಸಕರು ಬೇಕೆಂದು ಅಭಿಪ್ರಾಯ ಜನರಿಂದ ಕೇಳಿ ಬರುತ್ತಿದೆ ಜನರಿಂದ ಬದಲಾವಣೆ ಬಯಸಿದ್ದು, ಈ ಕ್ಷೇತ್ರದ ಶಾಸಕ ಬೈರತಿ ಬಸವರಾಜ ಸೋಲಿಸಿ ಶಾಶ್ವತವಾಗಿ ಮನೆಗೆ ಕಳಿಸಲು ಮತದಾರರು ತುದಿಗಾಳಲ್ಲಿ ನಿಂತಿದ್ದಾರೆ.

ದುರಾಡಳಿತದಿಂದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಇದರಿಂದ ಜನತೆ ರೋಸಿ ಹೋಗಿದ್ದಾರೆ ಈ ಬಾರಿ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ, ಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇವೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ಎದುರಾಗಬಹುದು ಕಾಂಗ್ರೆಸ್ ಅಭ್ಯರ್ಥಿ ಗಳನ್ನು ಗೆಲ್ಲಿಸಲು ಎಲ್ಲಾ ರೀತಿಯ ಸಿದ್ದತೆ ಈಗಿನಿಂದಲ್ಲೇ ತಯಾರಿ ಮಾಡಿಕೊಳ್ಳಿ,ಯಾವುದೇ ಕಾರಣಕ್ಕೂ ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಧೃತಿಗೆಡದೆ ಮನೆ ಮನೆ ತೆರಳಿ ಯುಪಿಎ ಮತ್ತು ರಾಜ್ಯ ಕಾಂಗ್ರೆಸ್ ಆಡಳಿತ ಅವದಿಯಲ್ಲಿ ನಡೆದಿರುವ ಅಭಿವೃದ್ಧಿ ಸಾಧನಗಳು ಮತ್ತು ಜನಪರ ಯೋಜನೆಗಳನ್ನು ಜನರ ಮನಮುಟ್ಟುವಂತೆ ಕೆಲಸ ಮಾಡುಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್,
ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ,ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರುಳಪ್ಪ,ಎಂ.ಮಂಜುನಾಥ್, ವೆಂಕಟೇಶ್, ಮುಖಂಡರಾದ ಎಲ್.ಮುನಿಸ್ವಾಮಿ,ಡಿ.ಎ.ಗೋಪಾಲ್, ಅಗರ ಪ್ರಕಾಶ್,ಪ್ರಸನ್ನ,ಸತ್ಯನಾರಾಯಣ ಪಟೇಲ್,ಪ್ರವೀಣ್ ಗೌಡ,ಇದ್ದರು.

ಕೆ.ಆರ್.ಪುರ :- ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಾಗೂ ಎಲ್ಲಾ ರೀತಿಯ ಸ್ಥಾನಮಾನಗಳನ್ನು ಅನುಭವಿಸಿ ಕೊನೆಗೆ ಪಕ್ಷಕ್ಕೆ ಮೋಸ ಮಾಡಿ ಬಿಜೆಪ...

ಸಚಿವ ಬೈರತಿ ಬಸವರಾಜು ನೇತೃತ್ವದಲ್ಲಿ. ಕೆ.ಆರ್.ಪುರ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆ :ಕೆ.ಆರ್.ಪುರ : ಕೆ.ಆರ್.ಪುರ ಕ್ಷ...
11/08/2022

ಸಚಿವ ಬೈರತಿ ಬಸವರಾಜು ನೇತೃತ್ವದಲ್ಲಿ. ಕೆ.ಆರ್.ಪುರ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆ :
ಕೆ.ಆರ್.ಪುರ : ಕೆ.ಆರ್.ಪುರ ಕ್ಷೇತ್ರದ ವಿಜಿನಾಪುರದ ಕೆಂಪೇಗೌಡ ಪ್ರತಿಮೆಯಿಂದ ಟಿ.ಸಿ.ಪಾಳ್ಯ ಸಿಗ್ನಲ್ ವರೆಗೆ ಸಚಿವ ಬೈರತಿ ಬಸವರಾಜು ನೇತೃತ್ವದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೃಹತ್ ಬಾವುಟಗಳೊಂದಿಗೆ ಪಾದಯಾತ್ರೆ ಹಮ್ನಿಕೊಳ್ಳಲಾಗಿದೆ.

ಪಾದಯಾತ್ರೆ ಕುರಿತು ಮಾಜಿ ಬಿಬಿಎಂಪಿ ಸದಸ್ಯ ಎಂ.ಎನ್.ಶ್ರೀಕಾಂತ್(ಪುಟ್ಟ) ಮಾತನಾಡಿ
'ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಕರೆಯ ಮೇರೆಗೆ ದೇಶದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಕೈಗೊಂಡಿದ್ಸು, ಇದರ ಅಂಗವಾಗಿ ಇಂದು ಕೆ.ಆರ್.ಪುರ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವರೂ, ನಮ್ಮ ನೆಚ್ಚಿನ ನಾಯಕರಾದ ಬೈರತಿ ಬಸವರಾಜು ರವರ ನೇತೃತ್ವದಲ್ಲಿ ಕ್ಷೇತ್ರದ ವಿಜನಾಪುರದ ಕೆಂಪೇಗೌಡ ಪ್ರತಿಮೆಯ ಬಳಿಯಿಂದ ಟಿ.ಸಿ.ಪಾಳ್ಯ ಸಿಗ್ನಲ್ ವರೆಗೆ ಸುಮಾರು 5 ಕಿ.ಮೀ.ಗಳ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ರವರು ಆಗಮಿಸಲಿದ್ದು, ಸಹಸ್ರಾರು ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಪಾದಯಾತ್ರೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದು, ಬೃಹತ್ ಬಾವುಟಗಳೊಂದಿಗೆ ಪಾದಯಾತ್ರೆಯಲ್ಲಿ ಸಾಗಲಿದ್ದಾರೆ. ಸ್ವಾತಂತ್ರ್ಯದ ಸವಿ ಕ್ಷಣವನ್ನು ಸ್ಮರಿಸುವ ಸಂಕೇತವಾಗಿರುವ ಇಂಥದೊಂದು ಹೆಮ್ಮೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಅತೀವ ಸಂತೋಷವಿದೆ' ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ರಾಜ್ಯ ಮಹಿಳಾ ಮೋರ್ಚಾಅಧ್ಯಕ್ಷ ಗೀತಾವಿವೇಕಾನಂದ ಮಾಜಿ ಪಾಲಿಕೆ ಸದಸ್ಯ ಸಿದ್ದಲಿಂಗಯ್ಯ, ಅಂತೋಣಿಸ್ವಾಮಿ, ಜೈಪ್ರಕಾಶ್, ಶ್ರೀಕಾಂತ್, ಸುಗುಮಾರ್, ಎಸ್.ಜಿ.ನಾಗರಾಜ್, ಮುಖಂಡರಾದ ಮುನೇಗೌಡ, ಬಾಕ್ಸರ್ ನಾಗರಾಜ್,ಚಿದಾನಂದ್, ವಿಡಿಎಸ್ ಪ್ರದೀಪ್,ಹೊರಮಾವು ವೆಂಕಿ, ಎಂಎಲ್ ಮುನಿರಾಜು, ಇದ್ದರು.

ಕೆ.ಆರ್.ಪುರ :- ಗಾಳಿ,ನೀರು ,ಬೆಳಕು, ಪ್ರಕೃತಿಯಲ್ಲಿ ದೇವರನ್ನ ಕಂಡ ಜಗತ್ತಿನ ಏಕಮಾತ್ರ ದೇಶ ನಮ್ಮದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...

ವಿಭಿನ್ನ ರೀತಿಯ ವಿನ್ಯಾಸ, ಹೊಸ ಪರಿಕಲ್ಪನೆ, ಸತ್ಯ ನಿಷ್ಠ ವರದಿಗಳು, ಸಮಾಜ ಮುಖಿಯಾದ ಅತ್ಯುತ್ತಮ ಲೇಖನಗಳ ಮೂಲಕ ಮುದ್ರಣ ಮಾಧ್ಯಮ ಕ್ಷೇತ್ರದಲ್ಲಿ ...
10/08/2022

ವಿಭಿನ್ನ ರೀತಿಯ ವಿನ್ಯಾಸ, ಹೊಸ ಪರಿಕಲ್ಪನೆ, ಸತ್ಯ ನಿಷ್ಠ ವರದಿಗಳು, ಸಮಾಜ ಮುಖಿಯಾದ ಅತ್ಯುತ್ತಮ ಲೇಖನಗಳ ಮೂಲಕ ಮುದ್ರಣ ಮಾಧ್ಯಮ ಕ್ಷೇತ್ರದಲ್ಲಿ ಸಮಯ ಮಿತ್ರ ಪತ್ರಿಕೆಗೆ ಶುಭಾಶಯಗಳು, ಈ ಶುಭ ಸಂದರ್ಭದಲ್ಲಿ ಸಮಯ ಮಿತ್ರ ಪತ್ರಿಕೆ ರಾಜ್ಯದಲ್ಲಿ ಹೆಚ್ಚು ಹೆಚ್ಚು ಓದುಗರನ್ನು ತನ್ನತ್ತ ಸೆಳೆಯುವ ಮೂಲಕ ರಾಜ್ಯದ ಜನರ ಮನೆ ಮಾತಾಗಲಿ ಎಂದು ಹಾರೈಸುತ್ತೇನೆ.-ಎಸ್.ಆರ್.ವಿಶ್ವನಾಥ್, ಬಿಡಿಎ ಅಧ್ಯಕ್ಷರು, ಟಿಟಿಡಿ ಆಡಳಿತ ಮಂಡಳಿ ನಿರ್ದೇಶಕರು, ಜನಪ್ರಿಯ ಶಾಸಕರು, ಯಲಹಂಕ ವಿಧಾನ ಸಭಾ ಕ್ಷೇತ್ರ.

ವಿಭಿನ್ನ ರೀತಿಯ ವಿನ್ಯಾಸ, ಹೊಸ ಪರಿಕಲ್ಪನೆ, ಸತ್ಯ ನಿಷ್ಠ ವರದಿಗಳು, ಸಮಾಜ ಮುಖಿಯಾದ ಅತ್ಯುತ್ತಮ ಲೇಖನಗಳ ಮೂಲಕ ಮುದ್ರಣ ಮಾಧ್ಯಮ...

ದೈಹಿಕ, ಮಾನಸಿಕ ಸದೃಡ ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯಸಿದ್ದರಾಮಯ್ಯ ಅಮೃತ ಮಹೋತ್ಸವ ವೇದಿಕೆಗೆ ಸಿದ್ದರಾಮಯ್ಯ ಬರುತ್ತಿದ್ದಂ...
04/08/2022

ದೈಹಿಕ, ಮಾನಸಿಕ ಸದೃಡ ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

ಸಿದ್ದರಾಮಯ್ಯ ಅಮೃತ ಮಹೋತ್ಸವ ವೇದಿಕೆಗೆ ಸಿದ್ದರಾಮಯ್ಯ ಬರುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ಹಾಕಿದ ಜೈಕಾರ ಮುಗಿಲು ಮುಟ್ಟಿತು. ಸುಮಾರು ನಾಲ್ಕು ಲಕ್ಷ ಖುರ್ಚಿಗಳನ್ನು ಹಾಕಲಾಗಿತ್ತು. ಆದರೂ ಸಾಕಾಗಲಿಲ್ಲ. ಎಷ್ಟೋ ಜನರು ಮೈದಾನದ ಹೊರಗಡೆ ಸಾವಿರಾರು ಜನರು ನಿಲ್ಲುವಂತಾಯಿತು. ಬೆಳಿಗ್ಗೆಯಿಂದಲೇ ಬಸ್ ಗಳು, ರೈಲು, ಕಾರು, ಟಾಟಾಸುಮೋ, ಬೈಕ್ ಸೇರಿದಂತೆ ವಾಹನಗಳಲ್ಲಿ ಆಗಮಿಸಿದರು. ಬೆಳ್ಳಂಬೆಳಿಗ್ಗೆ ಮಳೆ ಶುರುವಾದರೂ ಜನರು ಆಗಮಿಸುವುದು ಕಡಿಮೆ ಆಗಲಿಲ್ಲ.
ರಾಷ್ಟ್ರೀಯ ಹೆದ್ದಾರಿಯಂತೂ ಕಾಂಗ್ರೆಸ್ ಮಯವಾಗಿತ್ತು. ಎಲ್ಲಿ ನೋಡಿದರೂ ಸಿದ್ದರಾಮಯ್ಯ, ಕಾಂಗ್ರೆಸ್ ಬಾವುಟಗಳು ರಾರಾಜಿಸಿದವು. ಜನರು ಸೇರಿದ್ದು ಗಮನಿಸಿದರೆ ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್ ತಯಾರಿ ಆರಂಭಿಸಿದೆ ಎಂಬ ಮಾತು ಕೇಳಿ ಬಂತು.ವೇದಿಕೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರಾದ ಬಿ. ಎಲ್. ಶಂಕರ್, ಕೆ. ಎನ್. ರಾಜಣ್ಣ, ಶಾಸಕ ಯು. ಟಿ. ಖಾದರ್ ಸೇರಿದಂತೆ ಬಹುತೇಕ ಮುಖಂಡರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು. ಅವರು ಬೆಳೆದು ಬಂದ ಹಾದಿ, ಮುಖ್ಯಮಂತ್ರಿ ಆಗಿದ್ದಾಗ ಕೆಲಸ ಮಾಡಿದ್ದನ್ನು ಕೊಂಡಾಡಿದರು.

ಬಿ. ಎಲ್. ಶಂಕರ್ ಮಾತನಾಡಿ ಈ ಮಹೋತ್ಸವಲ್ಲಿ ಒಟ್ಟು 8ರಿಂದ 10 ಲಕ್ಷ ಜನರು ಪಾಲ್ಗೊಂಡಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸೇರಿರುವುದರಿಂದ ಸಮಸ್ಯೆಯಾಗಿದೆ. ಪಕ್ಷದ ಮುಖಂಡರು ವೇದಿಕೆಗೆ ಬರಲು ಸಾಧ್ಯವಾಗಲಿಲ್ಲ. ರಾಷ್ಟ್ರೀಯ ಹೆದ್ದಾರಿ ತುಂಬೆಲ್ಲಾ ಜನರು ಸೇರಿದ್ದು, ಜನರು ಸಿದ್ದರಾಮಯ್ಯರ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸಾಕ್ಷಿ ಎಂದರು.

* ಸಿದ್ದು ನಾಯಕತ್ವದಲ್ಲಿ ಮತ್ತೊಮ್ಮೆ ಅಧಿಕಾರ :

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ ದಾವಣಗೆರೆಗೆ ಎಲ್ಲೆಡೆಯಿಂದ ಜನಸಮುದಾಯ ಹರಿದು ಬಂದಿದೆ. 10 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿದೆ. ಜನರು ಬರುವುದನ್ನುನೋಡಿ ನಮಗೆ ಆಶ್ಚರ್ಯ ಮತ್ತು ಸಂತೋಷ ಆಯ್ತು. ನೇರ, ದಿಟ್ಟ, ಆರೋಪ ಇಲ್ಲದ ನಿಷ್ಕಳಂಕ ರಾಜಕಾರಣಿ. ಬ್ರಾಹ್ಮಣ, ಲಿಂಗಾಯತ ವಿರೋಧಿ ಸಿದ್ದರಾಮಯ್ಯ ಎಂಬ ಪಟ್ಟ ಕಟ್ಟಿದ್ದಾರೆ. ಇದು ಸುಳ್ಳು. ಎಲ್ಲಾ ವರ್ಗದವರಿಗೂ ಅನುಕೂಲ ಮಾಡಿಕೊಟ್ಟ ಧೀಮಂತ ರಾಜಕಾರಣಿ. ಮುಂದಿನ ರಾಜಕಾರಣ ಬದಲಾಯಿಸುವ, ದಿಕ್ಕು ಬದಲಿಸುವ ಕಾರ್ಯಕ್ರಮ ಇದು. ಈ ಜನಸಾಗರ ಆಶೀರ್ವದಿಸಬೇಕು. ಸಿದ್ದರಾಮಯ್ಯ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟೋಣ, ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.

* ಡಿಕೆಶಿ ನಡುವೆ ಮನಸ್ತಾಪವಿಲ್ಲ:
ಇನ್ನು ತಮ್ಮ ಜನ್ಮದಿನದ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ವಿರೋಧವಿದೆ ಎಂಬ ಸುದ್ದಿ ವಿರೋಧ ಪಕ್ಷ ಸೃಷ್ಟಿಸಿರುವ ಗೊಂದಲ, ನನ್ನ ಹುಟ್ಟುಹಬ್ಬ ಆಚರಿಸಲು ಡಿಕೆ ಶಿವಕುಮಾರ್ ಬೆಂಬಲವಿದೆ. ಇಲ್ಲಿವರೆಗೆ ನಡೆದ ಎಲ್ಲಾ ಗೊಂದಲಗಳಿಗೂ ಕಾರಣ ರಾಜ್ಯದ ಆಡಳಿತ ಪಕ್ಷ. ಕಾಂಗ್ರೆಸ್ನಲ್ಲಿ ನಾವೆಲ್ಲಾ ಒಂದಾಗಿದ್ದೇವೆ. ಯಾರ ನಡುವೆ ಬಿನ್ನಾಭಿಪ್ರಾಯವಿಲ್ಲ. ಮುಂದಿನ ಚುನಾವಣೆಯಲ್ಲಿನಾವೆಲ್ಲರೂ ಒಟ್ಟಾಗಿ ಶ್ರಮಿಸಿ ಕರ್ನಾಟಕದಲ್ಲಿ ಬಿಜೆಪಿ ಸರಕಾರವನ್ನು ತೊಲಗಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.
ದಾವಣಗೆರೆ, ಆಗಸ್ಟ್ 3: ಇತ್ತೀಚೆಗೆ 2023ರ ವಿಧಾನ ಸಭೆ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದು ಹೇಳಿಕೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ದಾವಣೆಗೆರೆಯಲ್ಲಿ ನಡೆಯುತ್ತಿರುವ ತಮ್ಮ75ನೇ ಜನ್ಮದಿನ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಉಲ್ಟಾ ಹೊಡೆದಿದ್ದು, ತಾವೂ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರುವವರೆಗೂ ರಾಜಕೀಯದಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹಿತೈಷಿಗಳು ಈ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ತಾವೂ ರಾಜಕೀಯದಲ್ಲಿ ಮತ್ತಷ್ಟು ವರ್ಷಗಳ ಕಾಲ ಇರುವುದಾಗಿ ಹಾಗೂ ಮತ್ತೊಮ್ಮೆ ಸಿಎಂ ಆಗುವ ಇಂಗಿತವನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

75 ವರ್ಷಗಳ ಸಕ್ರಿಯ ರಾಜಕಾರಣದಲ್ಲಿ ಸುಮಾರು 50 ವರ್ಷಗಳ ಕಾಲ ನಾಡಿನ ಜನರ ಜೊತೆ ಇದ್ದೇನೆ. 1975 ಆಗಸ್ಟ್ನಲ್ಲಿ ನಾನು ವಕೀಲ ನಾಗಿ ನೋಂದಾಯಿಸಿಕೊಂಡಿದ್ದೆ. 1983ರಲ್ಲಿ ಶಾಸಕನಾದೆ, 1984ರಲ್ಲಿ ಮಂತ್ರಿಯಾದೆ. ಅಲ್ಲಿಂದ ಇಲ್ಲಿವರೆಗೆ ನಿರಂತರವಾಗಿ ರಾಜ್ಯದ ಜನರೊಂದಿಗೆ ಸಂಪರ್ಕದಲ್ಲಿದ್ದೇನೆ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ರಾಜ್ಯದ 224 ಕ್ಷೇತ್ರಗಳಿಂದ ನನ್ನ ಜನ್ಮದಿನದ ಆಚರಣೆಯ ಕಾರ್ಯಕ್ರಮಕ್ಕೆ ಬಂದಂತದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದ ಎಂದರು.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಶಕ್ತಿಯೇ ಬಹಳ ದೊಡ್ಡದು, ಎಲ್ಲರಿಂದಲೂ ಇಷ್ಟು ಸುದೀರ್ಘ ಕಾಲ ರಾಜಕೀಯದಲ್ಲಿ ಇರಲು ಸಾಧ್ಯವಾಗಲ್ಲ. ನನ್ನ ಮೇಲೆ ಜನರ ನಿರಂತರ ಪ್ರೀತಿ , ವಿಶ್ವಾಸ ಇದ್ದಿದ್ದರಿಂದ 44 ವರ್ಷಗಳ ಕಾಲ ರಾಜಕೀಯದಲ್ಲಿದ್ದೇನೆ. ಇಷ್ಟು ವರ್ಷಗಳಲ್ಲಿ ನಾನು ಶಾಸಕ , ಮಂತ್ರಿಯಾಗಿ, ಉಪಮುಖ್ಯ ಮಂತ್ರಿಯಾಗಿ , ಮುಖ್ಯಮಂತ್ರಿಯಾಗಿ ಜನರ ಸೇವೆ ಮಾಡಲು ಸಾಧ್ಯವಾಗಿದೆ. ಇದಕ್ಕೆಲ್ಲಾ ಸಮಸ್ತ ಕನ್ನಡ ಜನತೆಗೆ ಧನ್ಯವಾದ ಹೇಳುತ್ತೇನೆ.
ನಾನು ಎಲ್ಲಿಯವರೆಗೆ ದೈಹಿಕವಾಗಿ, ಮಾನಸಿಕ ಸದೃಡವಾಗಿರುತ್ತೇನೋ ಅಲ್ಲಿಯವರೆಗೆ ನಾನು ರಾಜಕೀಯದಲ್ಲಿ ಮುಂದುವರಿಯುತ್ತೇನೆ, ಜನರ ಸೇವೆ ಮಾಡುತ್ತೇನೆ ಎಂದು ಹೇಳುವ ಮೂಲಕ ಮುಂದಿನ ವಿಧಾನ ಸಭೆ ಚುನಾವಣೆ ತಮ್ಮ ಕೊನೆಯ ಚುನಾವಣೆಯಲ್ಲ ಎನ್ನವುದನ್ನು ಖಾತ್ರಿ ಪಡಿಸಿದ್ದಾರೆ.

#ಅಮೃತಮಹೋತ್ಸವ

ದಾವಣಗೆರೆ : ಮಧ್ಯಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೆ ವೇದಿಕೆಯ...

ಹ್ಯಾಟ್ರಿಕ್ ಹೀರೋ ಎಸ್.ಆರ್.ವಿಶ್ವನಾಥ್ ಅರವ ಅದ್ದೂರಿ ಹುಟ್ಟು ಹಬ್ಬ ಆಚರಣೆಯಲಹಂಕ : ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಬಿಡಿಎ ಅದ್ಯ...
25/07/2022

ಹ್ಯಾಟ್ರಿಕ್ ಹೀರೋ ಎಸ್.ಆರ್.ವಿಶ್ವನಾಥ್ ಅರವ ಅದ್ದೂರಿ ಹುಟ್ಟು ಹಬ್ಬ ಆಚರಣೆ

ಯಲಹಂಕ : ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಬಿಡಿಎ ಅದ್ಯಕ್ಷರು ಹಾಗೂ ಟಿಟಿಡಿ ಸದಸ್ಯರಾದ ಎಸ್ .ಆರ್ ವಿಶ್ವನಾಥ್ ತಮ್ಮ ಹುಟ್ಟು ಹಬ್ಬವನ್ನು ಯಲಹಂಕ ಬಳಿ ಇರುವ ಹೊನ್ನೆನಹಳ್ಳಿ ಖಾಸಗಿ ಹೋಟೆಲ್ ರಮಡ ದಲ್ಲಿ ಅದ್ದೂರಿಯಾಗಿ ಆಯೋಜಿಸಿದ್ದರು.

ಯಲಹಂಕ ಕ್ಷೇತ್ರದ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆಗಮಿಸಿ ಬೆಳಗ್ಗೆಯಿಂದಲೇ ಸಾಲಿನಲ್ಲಿ ನಿಂತು ಹಾರ-ತುರಾಯಿ ಮೈಸೂರು ಪೇಟ ತೊಡಿಸಿ ನೆಚ್ಚಿನ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳು ತಿಳಿಸಿದರು.

ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು ಹಾಗೆ ಬಂದವರಿಗೆಲ್ಲ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು ನಂತರ ಬೀದಿಬದಿ ವ್ಯಾಪಾರಿ ಗಳಿಗೆ ತಳ್ಳುವ ಗಾಡಿಗಳು ಹಾಗೂ ಅಂಗವಿಕಲರಿಗೆ ದ್ವಿಚಕ್ರ ವಾಹನ ಗಳನ್ನು ಶಾಸಕರು ಹಾಗೂ ವಾಣಿಶ್ರೀ ವಿಶ್ವನಾಥ್ ಮತ್ತು ಜನಪ್ರತಿನಿಧಿಗಳು ಸೇರಿ ವಿತರಿಸಿದರು.

ಇನ್ನು ಶಾಸಕರ ಹುಟ್ಟು ಹಬ್ಬಕ್ಕೆ ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ.ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ.ಸಚಿವ ಆರ್.ಅಶೋಕ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಬಂದು ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ
ಯಲಹಂಕ ಕ್ಷೇತ್ರದ ಸಮಸ್ತ ಜನತೆ ಹಾಗೂ ಬಿಜೆಪಿ ಮುಖಂಡರು ಕಾರ್ಯಕರ್ತರು ಸಾವಿರಾರು ಅಭಿಮಾನಿಗಳು ಭಾಗವಹಿಸಿದ್ದರು.


ಯಲಹಂಕ : ಪೊಲೀಸ್ ಸಿಬ್ಬಂದಿಗಳಿಗೆ, ಬಿಬಿಎಂಪಿ ಪೌರ ಕಾರ್ಮಿಕರಿಗೆ ಸನ್ಮಾನ, ಕಿಟ್ ವಿತರಣೆ, ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಅಡಿಯಲ್.....

ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 131ನೇ ಅಂಬೇಡ್ಕರ್ ಜಯಂತಿ ಆಚರಣೆ.           #
14/04/2022

ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 131ನೇ ಅಂಬೇಡ್ಕರ್ ಜಯಂತಿ ಆಚರಣೆ.
#

14/04/2022

ಈ ಪ್ರತಿಭಟನಾ ಧರಣಿಯಲ್ಲಿ ವಿಪಕ್ಷದ ನಾಯಕ ಸಿದ್ಧರಾಮಯ್ಯ, ಎಐಸಿಸಿ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಕೆಪಿಸಿಸಿ ಎಲ್ಲಾ ಕಾರ್ಯಾಧ್ಯಕ್ಷರು, ರಾಜ್ಯ ನಾಯಕರು ಈ ಧರಣಿಯಲ್ಲಿ ಪಾಲ್ಗೊಳ್ಳಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ಏಪ್ರಿಲ್ 15ರಂದು ಕೆಪಿಸಿಸಿ ವತಿಯಿಂದ ಕಾಂಗ್ರೆಸ್ ರಾಜ್ಯ ನಾಯಕರನ್ನು ಒಳಗೊಂಡ 5 ತಂಡಗಳನ್ನು ರಚಿಸಿಕೊಂಡು ರಾಜ್ಯದ ಪ್ರತಿ ವಿಧಾನ ಸಭಾ ಕ್ಷೇತ್ರ, ತಾಲ್ಲೂಕು ಕೇಂದ್ರ, ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ 40% ಕಮಿಷನ್ ವಿಷಯವನ್ನು ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Credit: Indian National Congress
#

10/04/2022

ಬ್ಯಾಟರಾಯನಪುರ : ಕ್ಷೇತ್ರದ ಬೆಟ್ಟಹಲಸೂರು ಗ್ರಾಮದ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು 3 ಲಕ್ಷ ರು. ಅಂದಾಜು ವೆಚ್ಚದಲ್ಲಿ ಗ್ರಾಮದ ವೃ....

06/02/2020

Address

1st Main B. Narayanapura White Field Road Near Venkateshwara Temple
Bangalore
560016

Alerts

Be the first to know and let us send you an email when Samaya mithra posts news and promotions. Your email address will not be used for any other purpose, and you can unsubscribe at any time.

Contact The Business

Send a message to Samaya mithra:

Share