ಸಾರಥಿ ನ್ಯೂಸ್

ಸಾರಥಿ ನ್ಯೂಸ್ BENDAKALURU MEDIA BROADCASTING SERVICES PRIVATE LIMITED
(1)

ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ, ಆರೋಗ್ಯ ಮತ್ತು ಶಾಂತಿಯನ್ನು ...
08/08/2025

ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ, ಆರೋಗ್ಯ ಮತ್ತು ಶಾಂತಿಯನ್ನು ತರಲಿ ಎಂದು ಶುಭಹಾರೈಸುತ್ತೇನೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜನಾನುರಾಗಿ ಶ್ರೀ ಕೃಷ್ಣಬೈರೇಗೌಡ ಅವರು ನೇಮಕವಾಗಿದ್ದು ಅವರಿಗೆ ಪ್ರೀತಿಯ ಸ್ವಾಗತ.ಯೂತ್ ಕಾಂಗ್ರೆಸ್ ನಿಂದ ರ...
07/08/2025

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜನಾನುರಾಗಿ ಶ್ರೀ ಕೃಷ್ಣಬೈರೇಗೌಡ ಅವರು ನೇಮಕವಾಗಿದ್ದು ಅವರಿಗೆ ಪ್ರೀತಿಯ ಸ್ವಾಗತ.

ಯೂತ್ ಕಾಂಗ್ರೆಸ್ ನಿಂದ ರಾಜಕಾರಣ ಪ್ರವೇಶಿಸಿದ ಕೃಷ್ಣಬೈರೇಗೌಡ ಅವರು ರಾಜಕಾರಣದಲ್ಲಿ ಅತ್ಯುನ್ನತ ಸ್ಥಾನ ಗಳಿಸಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. 2013ರಿಂದ 18ರ ಅವಧಿಯಲ್ಲಿ ಕೃಷಿ ಸಚಿವರಾಗಿ ಅನ್ನದಾತರ ಅಪತ್ಭಾಂಧವರಾಗಿ ಕೆಲಸ ನಿರ್ವಹಿಸಿದ್ದರು.

ಪ್ರಸ್ತುತ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಜನ ಸ್ನೇಹಿ ಆಡಳಿತ ನೀಡುತ್ತಿದ್ದಾರೆ. ಶ್ರೀ Krishna Byre Gowda ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದು ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆ ದೃಷ್ಟಿಯಿಂದ ನೆರವಾಗಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ.

07/08/2025
ತಮಿಳುನಾಡು ರಾಜಕಾರಣದ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಮುತ್ತುವೆಲ್ ಕರುಣಾನಿಧಿಯವರ ಪುಣ್ಯಸ್ಮರಣೆಯಂದು ಗೌರವ ನಮನಗಳು.Chief Minis...
07/08/2025

ತಮಿಳುನಾಡು ರಾಜಕಾರಣದ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಮುತ್ತುವೆಲ್ ಕರುಣಾನಿಧಿಯವರ ಪುಣ್ಯಸ್ಮರಣೆಯಂದು ಗೌರವ ನಮನಗಳು.

Chief Minister of Tamil Nadu M. K. Stalin

07/08/2025

ಚಾಲನಾ ಶಾಲೆಯ ಏಜೆಂಟರು ಮತ್ತು ಅಧಿಕಾರಿಗಳು ನೀಡಿದ ಪರವಾನಗಿಗಳನ್ನು ಹೊಂದಿರುವವರಿಗಿಂತ ಅಪಘಾತಗಳಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು.

Ramalinga Reddy Transport Department Karnataka

07/08/2025

ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಸಂಭವಿಸಿದ ಘಟನೆ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳನ್ನು ಬಳಸಿಕೊಳ್ಳಬೇಕು ಮತ್ತು ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಕಲಿಯಬೇಕು, ನಮ್ಮಿಂದಲೇ ಬದಲಾವಣೆ ಸಾಧ್ಯಈ ಹೆಣ್ಣು ಮಗುವಿಗೆ ನ್ಯಾಯ ಸಿಗಲೇಬೇಕು

ಮುಷ್ಕರ ಸ್ಥಗಿತಗೊಳಿಸದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿ ದಾಖಲು: ಸಾರಿಗೆ ನೌಕರರ ಸಂಘಗಳಿಗೆ ಹೈಕೋರ್ಟ್​ ತಾಕೀತು - KSRTC STRIKEನ್ಯಾಯಾಲಯದ ಆದ...
06/08/2025

ಮುಷ್ಕರ ಸ್ಥಗಿತಗೊಳಿಸದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿ ದಾಖಲು: ಸಾರಿಗೆ ನೌಕರರ ಸಂಘಗಳಿಗೆ ಹೈಕೋರ್ಟ್​ ತಾಕೀತು - KSRTC STRIKE

ನ್ಯಾಯಾಲಯದ ಆದೇಶವಿದ್ದರೂ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿರುವುದು ನ್ಯಾಯಾಂಗ ನಿಂದನೆಯಾಗಿದೆ. ನೌಕರರ ಸಂಘಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಳ್ಳಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿತು.

ಮುಷ್ಕರ ಸ್ಥಗಿತಗೊಳಿಸದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿ ದಾಖಲು: ಸಾರಿಗೆ ನೌಕರರ ಸಂಘಗಳಿಗೆ ಹೈಕೋರ್ಟ್​ ತಾಕೀತು

ಬೆಂಗಳೂರು: ನಾಳೆ ಮುಷ್ಕರ ನಡೆಸುವುದಿಲ್ಲ ಎಂಬುದಾಗಿ ಸಾರಿಗೆ ನೌಕರರ ಸಂಘವು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ನಗರದ ಜೆ. ಸುನೀಲ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಜೋಷಿ ಅವರಿದ್ದ ನ್ಯಾಯಪೀಠಕ್ಕೆ ರಸ್ತೆ ಸಾರಿಗೆ ನಿಗಮಗಳ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರು ಈ ಮಾಹಿತಿ ನೀಡಿದರು.

ನ್ಯಾಯಾಲಯ ಕಲಾಪ ಪ್ರಾರಂಭವಾಗುತ್ತಿದ್ದಂತೆ ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೋಕೇಟ್​ ಜನರಲ್​ ಶಶಿಕಿರಣ್​ ಶೆಟ್ಟಿ, ಸಾರಿಗೆ ಎಂಬುದು ಅಗತ್ಯ ಸೇವೆಯಾಗಿದೆ. ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ. ಕೈಗಾರಿಕೆ ವಿವಾದ ಕಾಯ್ದೆಯಡಿಯಲ್ಲಿ ಸರ್ಕಾರ ಸಾರಿಗೆ ನಿಗಮಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಲಾಗುತ್ತಿದೆ. ಈ ನಡುವೆ ಹೈಕೋರ್ಟ್​ ಸಾರಿಗೆ ಮುಷ್ಕರ ನಡೆಸದಂತೆ ಆದೇಶ ನೀಡಿದೆ. ಆದರೂ, ಮುಷ್ಕರ ಮುಂದುರೆದಿದೆ ಎಂದು ತಿಳಿಸಿದರು.

ಈ ವೇಳೆ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘದ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಮುಷ್ಕರ ಸ್ಥಗಿತವಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವಕೀಲರು, ಬೆಂಗಳೂರಿನಲ್ಲಿ ಸಂಚಾರ ಮುಂದುವರೆದಿದೆ. ಕೆಲ ಸಂವಹನಾ ಕಾರಣದಿಂದಾಗಿ ಜಿಲ್ಲೆಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ವಿವರಿಸಿದರು.

ಇದಕ್ಕೆ ಗರಂ ಆದ ನ್ಯಾಯಪೀಠ, ನ್ಯಾಯಾಲಯದ ಆದೇಶವಿದ್ದರೂ ಮುಷ್ಕರ ಮುಂದುವರೆಸಿರುವುದು ನ್ಯಾಯಾಂಗ ನಿಂದನೆಯಾಗಿದೆ. ನೌಕರರ ಸಂಘಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿತು.

ಅಲ್ಲದೆ, ಮುಷ್ಕರ ಸ್ಥಗಿತಗೊಳಿಸಿರುವ ಕುರಿತಂತೆ ಬುಧವಾರ ನ್ಯಾಯಪೀಠಕ್ಕೆ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಸಂಘಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುವುದಕ್ಕೆ ಅದೇಶ ನೀಡಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು ಎಂದು ಪೀಠ ಎಚ್ಚರಿಕೆ ನೀಡಿತು.

ಸರ್ಕಾರದೊಂದಿಗೆ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ: ಸಾರಿಗೆ ನಿಗಮಗಳ ನೌಕರರ ಯಾವುದೇ ಸಮಸ್ಯೆ ಇದ್ದಲ್ಲಿ ಸರ್ಕಾರದ ಜೊತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಿ. ಅದನ್ನು ಹೊರತುಪಡಿಸಿ ಜನಸಾಮಾನ್ಯರನ್ನು ಒತ್ತೆಯಾಗಿರಿಸುವುದು, ಅವರಿಗೆ ಸಮಸ್ಯೆ ಉಂಟಾಗುವಂತೆ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ಪೀಠ ತರಾಟೆಗೆ ತೆಗೆದುಕೊಂಡಿತು.

ಎಸ್ಮಾ ಅಡಿ ಬಂಧನ: ಅಗತ್ಯ ಸೇವೆ ನಿರ್ವಹಣಾ ಕಾಯ್ದೆ (ಎಸ್ಮಾ) ಜಾರಿಯಲ್ಲಿದ್ದರೂ ಮುಷ್ಕರ ಮುಂದುವರೆಸಲಾಗಿದೆ. ಎಸ್ಮಾ ಕಾಯ್ದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ಮುಷ್ಕರ ನಿಂತಿರುವುದಕ್ಕೆ ಸಂಬಂಧಿಸಿದಂತೆ ಬುಧವಾರ ನ್ಯಾಯಪೀಠಕ್ಕೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್​ 7ಕ್ಕೆ ಮುಂದೂಡಿತು.

04/08/2025

KSRTC, BMTCನೌಕರರ ಮುಖಂಡರ ಜೊತೆಗಿನ ಸಭೆ ಬಳಿಕ Ramalinga Reddy ಹೇಳಿದ್ದೇನು?

Chief Minister of Karnataka Siddaramaiah DK Shivakumar Ramalinga Reddy Sowmya Reddy Transport Department Karnataka

04/08/2025

ಮುಷ್ಕರ ಸಂಬಂಧಪಟ್ಟಂತೆ
- ಶ್ರೀ ಯೋಗೇಶ್, ಸಾರಿಗೆ ಆಯುಕ್ತರು

Ramalinga Reddy Transport Department Karnataka

Address

No 108/7 Jakkur Main Road Opp Govt School Ground
Bangalore
560064

Alerts

Be the first to know and let us send you an email when ಸಾರಥಿ ನ್ಯೂಸ್ posts news and promotions. Your email address will not be used for any other purpose, and you can unsubscribe at any time.

Contact The Business

Send a message to ಸಾರಥಿ ನ್ಯೂಸ್:

Share