Ochre Productions

Ochre Productions Contact information, map and directions, contact form, opening hours, services, ratings, photos, videos and announcements from Ochre Productions, Broadcasting & media production company, Bangalore.

 #ಮೋಳಿಗೆ_ಮಾರಯ್ಯ ನವರ  #ವಚನಆನೆ ಕುದುರೆ ಭಂಡಾರವಿರ್ದಡೇನೊ?ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ.ಈ ಹುರುಳಿಲ್ಲದ ಸಿರಿಯ ನ...
06/12/2024

#ಮೋಳಿಗೆ_ಮಾರಯ್ಯ ನವರ #ವಚನ
ಆನೆ ಕುದುರೆ ಭಂಡಾರವಿರ್ದಡೇನೊ?
ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ.
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ.
ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ?
ಕೈವಿಡಿದ ಮಡದಿ ಪರರ ಸಂಗ, ಪ್ರಾಣ ವಾಯುವಿನ ಸಂಗ.
ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ...




















 #ಉಳಿಯುಮೇಶ್ವರ_ಚಿಕ್ಕಣ್ಣ ನವರ  #ವಚನಆನು ಭಕ್ತ, ಆನು ಶರಣ, ಆನು ಲಿಂಗೈಕ್ಯನೆಂದೊಡೆ ಲಿಂಗವು ನಗದೆ?ಪಂಚೇಂದ್ರಿಯಂಗಳು ನಗವೆ? ಅರಿಷಡ್ವರ್ಗಂಗಳು ನ...
05/12/2024

#ಉಳಿಯುಮೇಶ್ವರ_ಚಿಕ್ಕಣ್ಣ ನವರ #ವಚನ
ಆನು ಭಕ್ತ, ಆನು ಶರಣ, ಆನು ಲಿಂಗೈಕ್ಯನೆಂದೊಡೆ ಲಿಂಗವು ನಗದೆ?
ಪಂಚೇಂದ್ರಿಯಂಗಳು ನಗವೆ? ಅರಿಷಡ್ವರ್ಗಂಗಳು ನಗವೆ?
ಎನ್ನ ತನುವಿನೊಳಗಣ ಸತ್ವರಜತಮೋ ಗುಣಂಗಳು ನಗವೆ?
ಹೇಳಯ್ಯಾ ಉಳಿಯುಮೇಶ್ವರಾ?




















 #ವಚನ #ಅಕ್ಕಮ್ಮಆಚಾರ ತಪ್ಪಿದಲ್ಲಿ ಪ್ರಾಯಶ್ಚಿತ್ತ ಉಂಟೆಂಬಅನಾಚಾರಿಗಳ ಮುಖವ ನೋಡಬಹುದೆ ?ಆಚಾರವಟ್ಟದ ಹೊನ್ನೆ ? ಮೊತ್ತದ ಮಡಕೆಯೆ ? ಸಂತೆಯ ಬೆವಹಾ...
04/12/2024

#ವಚನ
#ಅಕ್ಕಮ್ಮ
ಆಚಾರ ತಪ್ಪಿದಲ್ಲಿ ಪ್ರಾಯಶ್ಚಿತ್ತ ಉಂಟೆಂಬ
ಅನಾಚಾರಿಗಳ ಮುಖವ ನೋಡಬಹುದೆ ?
ಆಚಾರವಟ್ಟದ ಹೊನ್ನೆ ? ಮೊತ್ತದ ಮಡಕೆಯೆ ? ಸಂತೆಯ ಬೆವಹಾರವೆ ?
ಜೂಜಿನ ಮಾತೆ ? ವೇಶ್ಯೆಯ ಸತ್ಯವೆ ? ಪೂಸರ ವಾಚವೆ ?
ಇಂತೀ ವ್ರತದ ನಿಹಿತವ ತಿಳಿದಲ್ಲಿ,
ಇಷ್ಟಬಾಹ್ಯನ ವ್ರತಭ್ರಷ್ಟನ ಸರ್ವಪ್ರಮಥರಲ್ಲಿ ಅಲ್ಲಾ ಎಂದವನ
ನಾನರಿತು ಕೂಡಿದೆನಾದಡೆ, ಅರಿಯದೆ ಕೂಡಿ ಮತ್ತರಿದಡೆ,
ಆ ತನುವ ಬಿಡದಿರ್ದಡೆ ಎನಗದೆ ಭಂಗ.
ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಪ್ಪಿದಡೆ ಹೊರಗೆಂದು ಮತ್ತೆ
ಕೂಡಿಕೊಳ್ಳೆ.




















ಮಾಧ್ಯಮದ ಮೂಲಕ ಜನಸಾಮಾನ್ಯರ ಧ್ವನಿಯಾಗಿ, ತಮ್ಮ ಪ್ರೇರಣಾದಾಯಕ ಮಾತುಗಳಿಂದ ನಮ್ಮ ಹೃದಯ ಗೆದ್ದಿರುವ ದಿಲೀಪ್ ಪಾಟೀಲ್ ಕುರಂದವಾಡೆ  ಅವರಿಗೆ ಜನ್ಮದಿ...
04/12/2024

ಮಾಧ್ಯಮದ ಮೂಲಕ ಜನಸಾಮಾನ್ಯರ ಧ್ವನಿಯಾಗಿ, ತಮ್ಮ ಪ್ರೇರಣಾದಾಯಕ ಮಾತುಗಳಿಂದ ನಮ್ಮ ಹೃದಯ ಗೆದ್ದಿರುವ ದಿಲೀಪ್ ಪಾಟೀಲ್ ಕುರಂದವಾಡೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನ ಯಶಸ್ಸಿನಿಂದ ತುಂಬಿರಲಿ ಎಂದು ಹಾರೈಸುತ್ತೇವೆ.

 #ವಚನ #ಜಕ್ಕಣಯ್ಯಆರರಿಂದತ್ತತ್ತ ಮೀರಿದ ಮಹಾಮಹಿಮನ ಸಂಗದಿಂದಸಕಲನಿಃಕಲವ ನೋಡಿ, ಮೂರು ಮಂದಿರವ ದಾಂಟಿ,ಮಹಾಮಹಿಮನ ಕೂಡಿ,ನಿಃಪ್ರಿಯವಾದ ಶರಣನ ಎನಗೊಮ...
03/12/2024

#ವಚನ
#ಜಕ್ಕಣಯ್ಯ
ಆರರಿಂದತ್ತತ್ತ ಮೀರಿದ ಮಹಾಮಹಿಮನ ಸಂಗದಿಂದ
ಸಕಲನಿಃಕಲವ ನೋಡಿ, ಮೂರು ಮಂದಿರವ ದಾಂಟಿ,
ಮಹಾಮಹಿಮನ ಕೂಡಿ,
ನಿಃಪ್ರಿಯವಾದ ಶರಣನ ಎನಗೊಮ್ಮೆ ತೋರಿಸಯ್ಯ
ಝೇಂಕಾರ ನಿಜಲಿಂಗಪ್ರಭುವೆ.




















 #ವಚನ  #ತೋಂಟದ_ಸಿದ್ಧಲಿಂಗ_ಶಿವಯೋಗಿಆಸುವಳಿದ ಕಾಯದಂತೆದೆಸೆಗೆಟ್ಟಿನಯ್ಯ ದೆಸೆಗೆಟ್ಟಿನಯ್ಯ.ಅದೇನು ಕಾರಣವೆಂದಡೆ:ಪಶುಪತಿಯ ಭಕ್ತಿ ವಿಶ್ವಾಸವಿಲ್ಲದ...
02/12/2024

#ವಚನ

#ತೋಂಟದ_ಸಿದ್ಧಲಿಂಗ_ಶಿವಯೋಗಿ
ಆಸುವಳಿದ ಕಾಯದಂತೆ
ದೆಸೆಗೆಟ್ಟಿನಯ್ಯ ದೆಸೆಗೆಟ್ಟಿನಯ್ಯ.
ಅದೇನು ಕಾರಣವೆಂದಡೆ:
ಪಶುಪತಿಯ ಭಕ್ತಿ ವಿಶ್ವಾಸವಿಲ್ಲದೆ ವಿಷಯಾತುರನಾಗಿರ್ದೆನಯ್ಯ.
ಇದು ಕಾರಣ,
ಎನ್ನ ಸಂಸಾರವಿಷಯಂಗಳ ಮಾಣಿಸಿ ಭಕ್ತನೆಂದೆನಿಸಯ್ಯಾ,
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.




















 #ಚನ್ನಬಸವಣ್ಣ ನವರ  #ವಚನಆಚಾರ ಗುರುಸ್ಥಲ, ಅನುಭಾವ ಲಿಂಗಸ್ಥಲ,ಅವಧಾನ ಅರ್ಪಿತಸ್ಥಲ, ಪರಿಣಾಮ ಪ್ರಸಾದಿಸ್ಥಲ,ಸಮಾಧಾನ ಶರಣಸ್ಥಲ, ಅರಿವು ನಿಃಪತಿಯಾ...
30/11/2024

#ಚನ್ನಬಸವಣ್ಣ ನವರ #ವಚನ
ಆಚಾರ ಗುರುಸ್ಥಲ, ಅನುಭಾವ ಲಿಂಗಸ್ಥಲ,
ಅವಧಾನ ಅರ್ಪಿತಸ್ಥಲ, ಪರಿಣಾಮ ಪ್ರಸಾದಿಸ್ಥಲ,
ಸಮಾಧಾನ ಶರಣಸ್ಥಲ, ಅರಿವು ನಿಃಪತಿಯಾಗಿ ತೆರಹಿಲ್ಲದ
ನಿಜದಲ್ಲಿಲಿಂಗೈಕ್ಯವು, ಕೂಡಲಚೆನ್ನಸಂಗಮದೇವಾ




















 #ಅಲ್ಲಮಪ್ರಭುದೇವರ   #ವಚನ ಆರುಸ್ಥಲದಲ್ಲಿ ಅರಿತಿಹೆನೆಂದುಸಹಭೋಜನದಲ್ಲಿ ಉಂಬ ಅಣ್ಣಗಳು ನೀವು ಕೇಳಿರೊ !ಅಂಗದ ಮೇಲೆ ಲಿಂಗಸಂಬಂಧಿಯಾದಡೇನಯ್ಯ,ಆ ಲಿ...
29/11/2024

#ಅಲ್ಲಮಪ್ರಭುದೇವರ #ವಚನ
ಆರುಸ್ಥಲದಲ್ಲಿ ಅರಿತಿಹೆನೆಂದು
ಸಹಭೋಜನದಲ್ಲಿ ಉಂಬ ಅಣ್ಣಗಳು ನೀವು ಕೇಳಿರೊ !
ಅಂಗದ ಮೇಲೆ ಲಿಂಗಸಂಬಂಧಿಯಾದಡೇನಯ್ಯ,
ಆ ಲಿಂಗವ ತನ್ನ ಪ್ರಾಣಕ್ಕೆ ಅವಧರಿಸದನ್ನಕ್ಕ !
ಆ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರ
ಬಾಹ್ಯಕ್ರೀಯ ಮಾಡಿದಡೇನಯ್ಯ ನೈಷ್ಠೆಇಲ್ಲದನ್ನಕ್ಕ
ಅಷ್ಟಮದಂಗಳ ನಷ್ಟವಮಾಡಿ ಪಂಚೇಂದ್ರಿಯಂಗಳ ಲಿಂಗಮುಖವ ಮಾಡಿ
ದೇಹೇಂದ್ರಿಯ ಮನ ಪ್ರಾಣಾದಿಗಳ ಪ್ರಕೃತಿಯನಳಿದು !
ಇಷ್ಟ ಪ್ರಾಣ ಭಾವವೆಂಬ ತ್ರಿವಿಧ ಲಿಂಗಕ್ಕೆ
ರೂಪು ರುಚಿ ತೃಪ್ತಿಯನೀವ ವರ್ಮಾದಿವರ್ಮಂಗಳ ಭೇದವನರಿಯದೆ !
ಕರಸ್ಥಲದಲ್ಲಿ ಲಿಂಗವಿಡಿದು ಸಹಭೋಜನವೆಂದು ಒಂದಾಗಿ ಉಂಡು
ತಮ್ಮ ಒಡಲ ಹೊರೆವ ಲಿಂಗದ್ರೋಹಿಗಳ ನೋಡಿ ನಗುತ್ತಿರ್ದೆನಯ್ಯಾ
ಗುಹೇಶ್ವರಾ.




















 #ಅಂಬಿಗರ_ಚೌಡಯ್ಯ ನವರ  #ವಚನ ಆವಾವ ತ್ರಿಗುಣಭೇದದಲ್ಲಿವಿಶ್ವಾಸವ ಮಾಡಿದಡೂ ಭಾವಶುದ್ಧವಾಗಿರಬೇಕು.ಯೋಗಿಯಾದಲ್ಲಿ ದೇಹಧರ್ಮವ ಮರೆದು, ಭೋಗಿಯಾದಲ್ಲಿ...
28/11/2024

#ಅಂಬಿಗರ_ಚೌಡಯ್ಯ ನವರ #ವಚನ

ಆವಾವ ತ್ರಿಗುಣಭೇದದಲ್ಲಿವಿಶ್ವಾಸವ ಮಾಡಿದಡೂ ಭಾವಶುದ್ಧವಾಗಿರಬೇಕು.
ಯೋಗಿಯಾದಲ್ಲಿ ದೇಹಧರ್ಮವ ಮರೆದು, ಭೋಗಿಯಾದಲ್ಲಿ ಸಂಚಿತವ
ಮರೆದು,
ತ್ಯಾಗಿಯಾದಲ್ಲಿ ನೆನಹು ಹಿಂಚು ಕೊಡುವುದು ಮುಂಚಾಗಿರಬೇಕು.
ಇಂತೀ ಯೋಗಿ ಭೋಗಿ ತ್ಯಾಗಿ,
ಇಂತೀ ತ್ರಿವಿಧವನೊಳಕೊಂಡು ವಿರಕ್ತನಾದಲ್ಲಿ
ಆತನ ಅಡಿಗೆರಗುವೆನೆಂದನಂಬಿಗ ಚೌಡಯ್ಯ.




















 #ಅಲ್ಲಮಪ್ರಭುದೇವ ರ  #ವಚನಆಳುದ್ದಿಯದೊಂದು ಬಾವಿ ಆಕಾಶದ ಮೇಲೆ ಹುಟ್ಟಿತ್ತು ನೋಡಾ !ಆ ಬಾವಿಯ ನೀರನೊಂದು ಮೃಗ ಬಂದು ಕುಡಿಯಿತ್ತು.ಕುಡಿಯ ಬಂದ ಮೃಗ...
27/11/2024

#ಅಲ್ಲಮಪ್ರಭುದೇವ ರ #ವಚನ
ಆಳುದ್ದಿಯದೊಂದು ಬಾವಿ ಆಕಾಶದ ಮೇಲೆ ಹುಟ್ಟಿತ್ತು ನೋಡಾ !
ಆ ಬಾವಿಯ ನೀರನೊಂದು ಮೃಗ ಬಂದು ಕುಡಿಯಿತ್ತು.
ಕುಡಿಯ ಬಂದ ಮೃಗವು ಆ ನೀರೊಳಗೆ ಮುಳಿಗಿದಡೆ
ಉರಿಯ ಬಾಣದಲೆಚ್ಚು ತೆಗೆದೆ ನೋಡಾ !
ಒಂದೆ ಬಾಣದಲ್ಲಿ ಸತ್ತ ಮೃಗವು,
ಮುಂದಣ ಹೆಜ್ಜೆಯನಿಕ್ಕಿತ್ತ ಕಂಡೆ !
ಅಂಗೈಯೊಳಗೊಂದು ಕಂಗಳು ಮೂಡಿ,
ಸಂಗದ ಸುಖವು ದಿಟವಾಯಿತ್ತು !
ಲಿಂಗಪ್ರಾಣವೆಂಬುದರ ನಿರ್ಣಯವನು ಇಂದು ಕಂಡೆನು ಗುಹೇಶ್ವರಾ.




















 #ಬಸವಣ್ಣ ನವರ  #ವಚನ ಆಶೆ ಇಚ್ಛೆಗೆನ್ನ ಗಾಸಿ ಮಾಡದಿರಯ್ಯಾ, ದಾಸೋಹಿಯಾಗಿರ್ಪ ದಾಸನಾಗಿರಿಸೆನ್ನಕೂಡಲಸಂಗಮದೇವಾ, ನಿಮ್ಮ ಧರ್ಮ.                ...
26/11/2024

#ಬಸವಣ್ಣ ನವರ #ವಚನ
ಆಶೆ ಇಚ್ಛೆಗೆನ್ನ ಗಾಸಿ ಮಾಡದಿರಯ್ಯಾ, ದಾಸೋಹಿಯಾಗಿರ್ಪ ದಾಸನಾಗಿರಿಸೆನ್ನ
ಕೂಡಲಸಂಗಮದೇವಾ, ನಿಮ್ಮ ಧರ್ಮ.




















 #ದೇಶಿಕೇಂದ್ರ_ಸಂಗನಬಸವಯ್ಯ ನವರ  #ವಚನಆದಿಭಕ್ತಿವಿಡಿದು ಮೆಲ್ಲಮೆಲ್ಲನೆ ಸಾದ್ಥಿಸಿ ಕೈಗೊಟ್ಟ ಪರಿಯ ನೋಡಾ !ಹಾದಿ ಬಟ್ಟೆಯ ಸಾಧಕರತ್ತ ಸವೆಯದೆಮೂದೇ...
25/11/2024

#ದೇಶಿಕೇಂದ್ರ_ಸಂಗನಬಸವಯ್ಯ ನವರ #ವಚನ
ಆದಿಭಕ್ತಿವಿಡಿದು ಮೆಲ್ಲಮೆಲ್ಲನೆ ಸಾದ್ಥಿಸಿ ಕೈಗೊಟ್ಟ ಪರಿಯ ನೋಡಾ !
ಹಾದಿ ಬಟ್ಟೆಯ ಸಾಧಕರತ್ತ ಸವೆಯದೆ
ಮೂದೇವರ ಮಾಟದೊಳಗಿರ್ದು
ಕೂಟಕೈದಿದ ಗುರುನಿರಂಜನ ಚನ್ನಬಸವಲಿಂಗದಲ್ಲಿ.




















Address

Bangalore

Opening Hours

Monday 10am - 6pm
Tuesday 10am - 6pm
Wednesday 10am - 6pm
Thursday 10am - 6pm
Friday 10am - 6pm
Saturday 10am - 1am

Alerts

Be the first to know and let us send you an email when Ochre Productions posts news and promotions. Your email address will not be used for any other purpose, and you can unsubscribe at any time.

Contact The Business

Send a message to Ochre Productions:

Share