ROCK TV

ROCK TV Follow us for all the latest news and updates in Kannada 💕

14/08/2026

ಹೇಮಾ ಅವರು ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಕಂಟೆಂಟ್ ಕ್ರಿಯೇಟ್ ಮಾಡುವುದು ಮತ್ತು ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿರುತ್ತಿದ್ದಳು. ಈ ವಿಚಾರವಾಗಿ ದಂಪತಿಗಳ ನಡುವೆ ಸಾಕಷ್ಟು ಬಾರಿ ಜಗಳ ನಡೆದಿತ್ತು. “ರೀಲ್ಸ್ ಮಾಡುವುದನ್ನು ನಿಲ್ಲಿಸು, ಸಂಸಾರದ ಕಡೆ ಗಮನ ಕೊಡು” ಎಂಬ ಪತಿಯ ಮನವಿಗೆ ಹೇಮಾ ಕಿವಿಗೊಟ್ಟಿರಲಿಲ್ಲ ಎನ್ನಲಾಗಿದೆ

14/08/2026

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ

14/08/2026

ಆಗಸ್ಟ್ 8 ರಂದು ಎಸ್‌ಐಆರ್ ಗಣತಿ ಪ್ರಕ್ರಿಯೆಯ ಒಂದು ಹಂತ ಮುಕ್ತಾಯಗೊಳ್ಳಲಿದೆ. ಗಣತಿ ನಮೂನೆ ಸಿಗದೇ ಇದ್ದವರು ಅಥವಾ ಸ್ಥಳಾಂತರಗೊಂಡ 80 ಲಕ್ಷಕ್ಕೂ ಹೆಚ್ಚು ಮತದಾರರು ಹೆದರುವ ಅಗತ್ಯವಿಲ್ಲ. ನೀವು ಕರ್ನಾಟಕದ ಯಾವುದೇ ಭಾಗದಲ್ಲಿದ್ದರೂ ಫಾರ್ಮ್ – 6 (Form 6) ಭರ್ತಿ ಮಾಡುವ ಮೂಲಕ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು.

ಒಟ್ಟು 57,787 ಮತಗಟ್ಟೆಗಳಲ್ಲಿ ಶೇ.100ರಷ್ಟು ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ. ರಾಜ್ಯದ 175 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.100ರಷ್ಟು ಮತ್ತು 49 ಕ್ಷೇತ್ರಗಳಲ್ಲಿ ಶೇ.90ರಿಂದ ಶೇ.100ರಷ್ಟು ಕೆಲಸಗಳು ಪೂರ್ಣಗೊಂಡಿವೆ. 19 ಜಿಲ್ಲೆಗಳು ಶೇ.100ರಷ್ಟು ಮತ್ತು 15 ಜಿಲ್ಲೆಗಳು ಶೇ. 90ರಿಂದ ಶೇ. 100ರಷ್ಟು ಕಾರ್ಯ ಮುಕ್ತಾಯವಾಗಿದೆ.

‘ದಿನಾಂಕ 11.08.2026 ರ ಆದೇಶದನ್ವಯ ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ...
14/08/2026

‘ದಿನಾಂಕ 11.08.2026 ರ ಆದೇಶದನ್ವಯ ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ. ಆದರೆ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ. ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ತಮ್ಮಲ್ಲಿ ಕೋರುತ್ತೇನೆ.

ಮುಂದುವರೆದಂತೆ ದಿನಾಂಕ: 15.08.2026 ರಂದು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು, ನಾನು ಹಾಜರಾಗಲು ಸಾಧ್ಯವಾಗದ ಕಾರಣ ಅದರಿಂದ ವಿನಾಯಿತಿ ನೀಡಲು ತಮ್ಮಲ್ಲಿ ಕೋರಲಾಗಿದೆ. ಇನ್ನು ಸದರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ನೀಡಲಾಗಿದ್ದು, ಈಗಾಗಲೇ ಈ ಸಂಬಂಧ ವರದಿಯನ್ನು ಸಲ್ಲಿಸಲಾಗಿರುತ್ತದೆ” ಎಂದು ಜಮೀರ್ ಅವರು ತಮ್ಮ ಪತ್ರದಲ್ಲಿ ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ

ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಹೀಗಾಗಿ, ಗುಟ್ಕಾ ನಿಷೇಧ ಆದೇಶವನ...
14/08/2026

ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಹೀಗಾಗಿ, ಗುಟ್ಕಾ ನಿಷೇಧ ಆದೇಶವನ್ನು ಶೀಘ್ರದಲ್ಲೇ ಹಿಂಪಡೆಯುವಂತೆ ಸೂಚನೆ ನೀಡಲಾಗಿದೆ. ಈ ಆದೇಶ ಇಂದೋ ಅಥವಾ ನಾಳೆಯೋ ಹೊರಬೀಳುವ ಸಾಧ್ಯತೆಯಿದೆ.

ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು. ಬಳಿಕ ನಡೆದ ಸಂಪುಟ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ

13/08/2026

ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಳೆದ ವಾರ ನೋಯ್ಡಾ ಪೊಲೀಸರು ದೂರು ಆಧರಿಸಿ ‘ಜೀರೋ ಎಫ್‌ಐಆರ್‌’ ದಾಖಲಿಸಿದ್ದರು. ಎಫ್‌ಐಆರ್‌ನಲ್ಲಿ ಆರೋಪಿಯ ಹೆಸರು ರುಚಿಕಾ ಸಿಂಗ್, ವಯಸ್ಸು 25 ಎಂದು ನಮೂದಿಸಲಾಗಿತ್ತು. ಆದರೆ, ಎಫ್‌ಐಆರ್‌ನಲ್ಲಿ ತನ್ನ ಮಗಳ ಹೆಸರು ಮತ್ತು ವಯಸ್ಸು ತಪ್ಪಾಗಿ ನಮೂದಿಸಲಾಗಿದೆ ಎಂದು ಆಕೆಯ ತಾಯಿ ಸ್ಪಷ್ಟಪಡಿಸಿದ್ದಾರೆ.

ತನ್ನ ಮಗಳ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ ಅವರು, “ತಪ್ಪು ಮಾಡಿದ್ದೇವೆ ಎಂಬ ಅರಿವು ನಮಗಿದೆ. ಈ ತಪ್ಪಿಗಾಗಿ ನಾವು ನಾಚಿಕೆಪಡುತ್ತಿದ್ದೇವೆ. ಆದರೆ, ತಪ್ಪು ಹೆಸರು ಮತ್ತು ವಯಸ್ಸಿನಲ್ಲಿ ದಾಖಲಿಸಿರುವ ಎಫ್‌ಐಆರ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಜೀ ಅವರು ರದ್ದುಪಡಿಸುವಂತೆ ನಾನು ಕೈಮುಗಿದು ಮನವಿ ಮಾಡುತ್ತೇನೆ. ಆಗ ನನ್ನ ಮಗಳು ನೆಮ್ಮದಿಯಿಂದ ಬದುಕಬಹುದು. ಈಗ ಆಕೆ ನಿಮ್ಮ ಮೇಲ್ವಿಚಾರಣೆಯಲ್ಲಿದ್ದಾಳೆ” ಎಂದು ಹೇಳಿದ್ದಾರೆ.

13/08/2026

ಈ ಕುರಿತು ನಿರ್ಣಯ ಮಂಡಿಸಿದ ತಮಿಳನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ತಮಿಳು ಕೇವಲ ಒಂದು ಭಾಷೆಯಲ್ಲ, ನಮ್ಮ ಜೀವನಾಡಿ ಮತ್ತು ಭಾವನೆ. ರಾಜ್ಯದ ಭಾಷಾ ಮತ್ತು ಸಾಂಸ್ಕೃತಿಕ ಹಕ್ಕುಗಳ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ವಿಜಯ್, ತಮಿಳು ಎಂದರೆ ಹೆಮ್ಮೆ, ತಮಿಳು ಎಂದರೆ ಶಕ್ತಿ. ʼತಮಿಳುʼ ಎಂದು ಹೇಳಿದ ಕ್ಷಣ ಇಡೀ ತಮಿಳುನಾಡು ಒಂದಾಗಿ ನಿಲ್ಲುತ್ತದೆ. ತಮಿಳ್ ತಾಯ್ ವಳ್ತು ಗೆ ಮೊದಲ ಸ್ಥಾನ ನೀಡುವುದು ನಮ್ಮ ಹಕ್ಕು. ತಮಿಳುನಾಡಿನ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ನಡೆಯುವ ಕಾರ್ಯಕ್ರಮಗಳ ಆರಂಭದಲ್ಲಿ ಮೊದಲು ರಾಜ್ಯ ಗೀತೆಯನ್ನು ಹಾಡಬೇಕು ಎಂಬ ನಿರ್ಣಯವನ್ನು ತಮಿಳುನಾಡು ಸರ್ಕಾರ ಕೈಗೊಂಡಿದೆ. ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲು ರಾಷ್ಟ್ರಗೀತೆ ನುಡಿಸುವಂತೆ ನಿರ್ದೇಶನ ನೀಡಿತ್ತು. ಜುಲೈನಲ್ಲಿ ರಾಜ್ಯಗಳು ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು

ಈ ಸಂಬಂಧ ವಿಡಿಯೋ ಮಾಡಿ, ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ನಿಮ್ಮ ವೆಬ್‌ಸೈಟ್‌ನಲ್ಲಿ ನನ್ನ ಮತದಾರರ ಗುರುತಿನ ಚೀಟಿ ಖಾಯಂ ಆಗಿ ವರ್...
13/08/2026

ಈ ಸಂಬಂಧ ವಿಡಿಯೋ ಮಾಡಿ, ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ನಿಮ್ಮ ವೆಬ್‌ಸೈಟ್‌ನಲ್ಲಿ ನನ್ನ ಮತದಾರರ ಗುರುತಿನ ಚೀಟಿ ಖಾಯಂ ಆಗಿ ವರ್ಗಾವಣೆಯಾಗಿದೆ ಹಾಗಾಗಿ ಫಾರ್ಮ್ 6 ಭರ್ತಿ ಮಾಡಿ ಹೊಸ ಐಡಿಗೆ ಅರ್ಜಿ ಸಲ್ಲಿಸಿ ಎಂದು ತೋರಿಸಿದ್ದು ನಿಜವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಈ ವಿಷಯವನ್ನು ನಾನು ಪ್ರಸ್ತಾಪಿಸಿ ಲಕ್ಷಾಂತರ ಜನರಿಗೆ ತಲುಪಿದ ಕೆಲವೇ ಗಂಟೆಗಳಲ್ಲಿ, ಅಧಿಕಾರಿಗಳು ನನಗೆ ಕರೆ ಮಾಡಿ ತಪ್ಪಾಗಿದೆ, ಸರಿಪಡಿಸುತ್ತೇವೆ ಎಂದು ಹೇಳಿ ಸೋಶಿಯಲ್ ಮೀಡಿಯಾದಲ್ಲಿ ಹಾಕಲು ವಿನಂತಿಸಿದ್ದು ಹೌದಲ್ಲವೇ? ಆದರೆ ಅದೇ ದಿನ ಸಂಜೆ ಪ್ರೆಸ್ ಮೀಟ್ ಕರೆದು ಅದು ವರ್ಗಾವಣೆಯಾಗಿದೆ ಡಿಲೀಟ್ ಆಗಿಲ್ಲ ಎಂದು ಸುಳ್ಳು ಹೇಳಿದಿರಿ ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, "ಸ್ವಾತಂತ್ರ್ಯದ ನಂತರ ಐದು ದಶಕಗಳಿಗೂ ಹೆಚ್ಚು ಕಾಲ, RSS ತನ್ನ ನಾಗ್ಪುರ ಪ್ರ...
13/08/2026

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, "ಸ್ವಾತಂತ್ರ್ಯದ ನಂತರ ಐದು ದಶಕಗಳಿಗೂ ಹೆಚ್ಚು ಕಾಲ, RSS ತನ್ನ ನಾಗ್ಪುರ ಪ್ರಧಾನ ಕಚೇರಿಯಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸಿರಲಿಲ್ಲ. 2002ರಲ್ಲಿ ಮಾತ್ರ ಅಧಿಕೃತವಾಗಿ ತ್ರಿವರ್ಣ ಧ್ವಜವನ್ನು ಅಲ್ಲಿ ಹಾರಿಸಲಾಯಿತು" ಎಂದು ವಿವರಿಸಿದರು.

ಬಿಜೆಪಿಯ ದೇಶಭಕ್ತಿಯ ವಿರೋಧಾಭಾಸವನ್ನು ಪ್ರಶ್ನಿಸಿದ ಅವರು, "ಅದರ ಮಾತೃ ಸಂಸ್ಥೆಯಾದ RSS ತ್ರಿವರ್ಣ ಧ್ವಜದ ಬದಲಿಗೆ ಭಗವಾ ಧ್ವಜವನ್ನು ಏಕೆ ಆಯ್ಕೆ ಮಾಡಿಕೊಂಡಿತು?ಅಲ್ಲದೆ, RSS ಪಥಸಂಚಲನಗಳಲ್ಲಿ ಸ್ವಯಂಸೇವಕರು ಭಾರತದ ತ್ರಿವರ್ಣ ಧ್ವಜವನ್ನು ಹೊತ್ತೊಯ್ಯುವುದನ್ನು ಯಾರಾದರೂ ನೋಡಿದ್ದಾರೆಯೇ?" ಎಂದು ಕೇಳಿದ್ದಾರೆ.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಡ್ಜ್, ‘ಹೆಡ್​​ಫೋನ್ಸ್ ಕೊಟ್ಟವರು ಯಾರು? ಮಹಿಳಾ ಸೆಲ್​​ನಲ್ಲಿ ಆರೋಪಿಗಳಿಗೆ ಅಧಿಕಾರಿಗಳು ಹೆಡ್​​ಫೋನ್ಸ...
13/08/2026

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಡ್ಜ್, ‘ಹೆಡ್​​ಫೋನ್ಸ್ ಕೊಟ್ಟವರು ಯಾರು? ಮಹಿಳಾ ಸೆಲ್​​ನಲ್ಲಿ ಆರೋಪಿಗಳಿಗೆ ಅಧಿಕಾರಿಗಳು ಹೆಡ್​​ಫೋನ್ಸ್ ಕೊಡುತ್ತಿದ್ದಾರೆಯೇ?’ ಎಂದು ಪ್ರಶ್ನಿಸಿದ ಜಡ್ಜ್, ಈ ಬಗ್ಗೆ ವಿವರಣೆ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಆರೋಪಿಗಳೆಲ್ಲ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು, ವಿಚಾರಣೆ ವೇಳೆ ಪ್ರತಿಯೊಬ್ಬ ಆರೋಪಿಯೂ ತಾವಿರುವ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಇಂದೂ ಸಹ ಎಲ್ಲರೂ ವಿಚಾರಣೆಗೆ ಹಾಜರಾಗಿದ್ದರು. ಆದರೆ ಪವಿತ್ರಾ ಗೌಡ ಮಾಡಿದ ಕಾರ್ಯಕ್ಕೆ ಜಡ್ಜ್ ಸಿಟ್ಟಾದರು.

Address

Bangalore

Alerts

Be the first to know and let us send you an email when ROCK TV posts news and promotions. Your email address will not be used for any other purpose, and you can unsubscribe at any time.

Shortcuts

Share