VT NEWS KANNADA

VT NEWS KANNADA Welcome to Vt News! Welcome to the official page of VT News Kannada, your trusted source for the latest news and updates in the world of Kannada media.
(2)

Your go-to source for all the latest news and entertainment updates in Kannada.Follow us for the latest updates and join the conversation. ಕನ್ನಡ ಮಾಧ್ಯಮ ಜಗತ್ತಿನಲ್ಲಿ ಇತ್ತೀಚಿನ ಸುದ್ದಿ ಮತ್ತು ನವೀಕರಣಗಳಿಗಾಗಿ ನಿಮ್ಮ ವಿಶ್ವಾಸಾರ್ಹ ಮೂಲವಾದ VT ನ್ಯೂಸ್ ಕನ್ನಡದ ಅಧಿಕೃತ ಫೇಸ್‌ಬುಕ್ ಪುಟಕ್ಕೆ ಸುಸ್ವಾಗತ. ನಿಮಗೆ ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಯನ್ನು ತರಲು ನಾವು ಪ್ರಯತ್ನಿಸುತ್ತೇವೆ, ನಿಮಗೆ

ಮಾಹಿತಿ ನೀಡುತ್ತೇವೆ ಮತ್ತು ನಿಮ್ಮ ಸುತ್ತಲಿನ ಪ್ರಪಂಚದೊಂದಿಗೆ ಸಂಪರ್ಕದಲ್ಲಿದ್ದೇವೆ. We strive to bring you accurate and unbiased news coverage, keeping you informed and connected to the world around you. GMAIL- [email protected]
www.vtnewskannada.com
mob- 9535253535

ಸಮಸ್ತ ನಾಡಿನ ಜನತೆಗೆ ಮಹಾನವಮಿ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಶುಭಾಶಯಗಳು...
01/10/2025

ಸಮಸ್ತ ನಾಡಿನ ಜನತೆಗೆ ಮಹಾನವಮಿ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಶುಭಾಶಯಗಳು...

ನಟಿ ರಮ್ಯಾ...
01/10/2025

ನಟಿ ರಮ್ಯಾ...

01/10/2025
ನಟಿ ತಮನ್ನಾ ಫೋಟೋಸ್...
30/09/2025

ನಟಿ ತಮನ್ನಾ ಫೋಟೋಸ್...

ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿ...
30/09/2025

ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಮುಖ್ಯಾಂಶಗಳು...

*ಮಹಾರಾಷ್ಟ್ರ, ಉಜನಿಯಲ್ಲಾಗುವ ಮಳೆ ಜೊತೆಗೆ ನಮ್ಮಲ್ಲೂ ಬೀಳುತ್ತಿರುವ ದಾಖಲೆ ಮಳೆ ಸೇರಿ ಅನಾಹುತದ ಪ್ರಮಾಣ ಹೆಚ್ಚಾಗುತ್ತಿದೆ.

*ಅಗತ್ಯ ಇರುವ ಕಡೆ ತಾತ್ಕಾಲಿಕ, ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಲು ಸಿಎಂ ಸೂಚಿಸಿದರು.

*ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ fitness ಪರೀಕ್ಷಿಸುವುದನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಗಮನಿಸಬೇಕು‌. Fitness ಇಲ್ಲದಿದ್ದರೆ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯವಾಗಿ ಮಾಡಬೇಕು. ಇದರಲ್ಲಿ ನಿರ್ಲಕ್ಷ್ಯ ಸಹಿಸಲ್ಲ ಎಂದು ಖಡಕ್ ಸೂಚನೆ ನೀಡಲಾಯಿತು.

*ಹಣಕ್ಕೆ ಕೊರತೆ ಇಲ್ಲ. PD ಖಾತೆಯಲ್ಲಿ ಹಣ ಸಂಗ್ರಹ ಇದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಿರಂತರವಾಗಿ ನಡೆಸಿ.

*ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದ ಗ್ರಾಮಗಳ ಸ್ಥಳಾಂತರದ ಬಗ್ಗೆ ಹಿಂದಿನ ಎಲ್ಲಾ ಇಲಾಖೆ ಅನುಭವಗಳನ್ನು ಪರಿಗಣಿಸಿ ಸೂಕ್ತ ಯೋಜನೆ ರೂಪಿಸಲು ಸೂಚನೆ ನೀಡಲಾಯಿತು.

*ಪ್ರವಾಹದಿಂದ ಕೃಷಿ ಭೂಮಿಯ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿರುತ್ತದೆ. ಇದರಿಂದ ಪರಿಹಾರ ಕೊಟ್ಟರೂ ಬೆಳೆ ಬೆಳೆಯುವುದು ಕಷ್ಟ. ಹೀಗಾಗಿ ಕೆರೆಗಳಲ್ಲಿರುವ ಫಲವತ್ತಾದ ಹೂಳನ್ನು ತೆಗೆದು ಫಲವತ್ತತೆ ಕಳೆದುಕೊಂಡ ಕೃಷಿ ಭೂಮಿಗೆ ಹಾಕಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡುವ ಬಗ್ಗೆ ಚರ್ಚಿಸಲಾಯಿತು.‌

*ಪ್ರವಾಹ ಪೀಡಿಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಧ್ಯಂತರ ಅವಧಿಗೆ "ಪ್ರಕೃತಿ ವಿಕೋಪದಿಂದ ಆದ ಹಾನಿ" ಎಂದು ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಯಿತು. ಕೆಲವು ಜಿಲ್ಲಾಧಿಕಾರಿಗಳು ಮಾತ್ರ ಹೊರಡಿಸಿದ್ದು ಉಳಿದವರೂ ಹೊರಡಿಸಿ ಎಂದು ಸೂಚಿಸಿದರು.

*ಕೃಷಿ ವಿಮೆ ಸಮರ್ಪಕವಾಗಿ ಒದಗಿಸುವಂತೆ ವಿಮಾ ಕಂಪನಿಗಳಿಗೆ ಖಡಕ್ ಸೂಚನೆ ನೀಡಬೇಕು*

*ಜಿಲ್ಲಾಧಿಕಾರಿಗಳು ಬ್ಯಾಂಕರ್ ಗಳ ಜೊತೆಗೆ ಚರ್ಚಿಸಬೇಕು. ಸಂತ್ರಸ್ಥ ರೈತರ ನೆರವಿಗೆ ಧಾವಿಸುವಂತೆ ಸೂಚಿಸಲಾಯಿತು*

*ಗ್ರಾಮೀಣ ನೀರು ಸರಬರಾಜು ವ್ಯವಸ್ಥೆ ಪರೀಕ್ಷಿಸಬೇಕು. ಅಂತರ್ಜಲ ಕಲುಷಿತಗೊಳ್ಳುವ ಅಪಾಯ ಇರುವು

*ಸಾಂಕ್ರಾಮಿಕ ರೋಗಗಳು ಹೆಚ್ಚುವ ಅಪಾಯವಿದ್ದು ಆರೋಗ್ಯ ರಕ್ಷಣೆಗೆ ಗಮನ ಹರಿಸಿ. ಶಾಲಾ ಮಕ್ಕಳ ಹಾಸ್ಟೆಲ್ ಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯವಾಗಿ ನಡೆಸಿ*

*ಮಳೆಯಲ್ಲಿ ದಾಖಲೆಗಳು, ಗುರುತಿನ ಚೀಟಿ ಕೊಚ್ಚಿ ಹೋಗಿರುವ , ಹಾಳಾಗಿರುವುದು ವರದಿಯಾಗಿದೆ. ಆ ಜನರು ಆತಂಕ ಪಡುವ ಅಗತ್ಯ ಇಲ್ಲದಂತೆ ಅಭಿಯಾನದ ರೂಪದಲ್ಲಿ ಹೊಸ ಗುರುತಿನ ಚೀಟಿ, ದಾಖಲೆಗಳು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

*ಜಂಟಿ ಸಮೀಕ್ಷೆ ಅತ್ಯಂತ ಸಮರ್ಪಕ ಮತ್ತು ವೈಜ್ಞಾನಿಕವಾಗಿರುವಂತೆ ಎಚ್ಚರ ವಹಿಸಿ.*

*ಅಂದಾಜು ಕಂದಾಯ ಇಲಾಖೆಯಿಂದ ಸಾವಿರ ಕೋಟಿಯಷ್ಟು ಪರಿಹಾರ ಕೊಡಬೇಕಾಗಬಹುದು ಎನ್ನುವ ಅಂದಾಜಿನಲ್ಲಿ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ*

*ಮಹಾರಾಷ್ಟ್ರ ಸರ್ಕಾರ ಪ್ರವಾಹಕ್ಕೆ 2200 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಮಹಾರಾಷ್ಟ್ರಕ್ಕೆ ಕೊಡುವ ಮಾದರಿಯಲ್ಲೇ ರಾಜ್ಯಕ್ಕೂ ಪರಿಹಾರ ಹಣವನ್ನು ಬಿಡುಗಡೆಗೊಳಿಸುವಂತೆ ಕೇಂದ್ರ ಕ್ಕೆ ಒತ್ತಾಯಿಸಲು ಸಭೆ ತೀರ್ಮಾನಿಸಿತು.

*ಹವಾಮಾನ ಬದಲಾವಣೆಯ ತೀವ್ರ ಪರಿಣಾಮವನ್ನು ರಾಜ್ಯ ಎದುರಿಸುತ್ತಿದೆ. ಒಟ್ಟು ಎಂಟು ಜಿಲ್ಲೆಗಳಲ್ಲಿ ಇದರ ಪರಿಣಾಮ ಮತ್ತು ಅನಾಹುತಗಳು ಆಗಿವೆ.

*SDRF ಪ್ರಕಾರ ಪರಿಹಾರದ ಜೊತೆಗೆ ಪರಿಹಾರದ ಪ್ಯಾಕೇಜ್ ಘೋಷಿಸಬೇಕು ಎನ್ನುವ ಬೇಡಿಕೆ ಇದೆ. ಹೆಕ್ಟೇರ್ ಗೆ 8500ರೂ, ತರಿ ನೀರಾವರಿ ಜಮೀನಿಗೆ 17 ಸಾವಿರ ಇದೆ. ಕೆರೆ ಕ್ರಾಪ್ ಗೆ 22 ಸಾವಿರದ 500 ರೂಪಾಯಿ ಸಮೀಕ್ಷೆ ಮುಗಿದ ತಕ್ಷಣ ಈ ಮಾನದಂಡದಲ್ಲಿ ಪರಿಹಾರ ಬಿಡುಗಡೆಗೆ ಕಂದಾಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.‌

*10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಅಂದಾಜಿದೆ. ಇದುವರೆಗೂ 5 ಲಕ್ಷ ಹೆಕ್ಟೇರ್ ಮಾತ್ರ ಜಂಟಿ ಸಮೀಕ್ಷೆ ಆಗಿದೆ. 5 ಲಕ್ಷ ಬಾಕಿ ಇದೆ.

ಬೆಂಡೆಬೆಂಬ್ಲಿ ಮಳೆ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಹಣ್ಣು ವಿತರಣೆಯಾದಗಿರಿ: ರೈತರಿಗೆ ಆತ್ಮಸ್ಥೈರ್ಯ ತುಂಬಿದ ವಿಜಯೇಂದ್ರ ಯಾದಗಿರಿ: ಯಾದಗ...
30/09/2025

ಬೆಂಡೆಬೆಂಬ್ಲಿ ಮಳೆ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಹಣ್ಣು ವಿತರಣೆ

ಯಾದಗಿರಿ: ರೈತರಿಗೆ ಆತ್ಮಸ್ಥೈರ್ಯ ತುಂಬಿದ ವಿಜಯೇಂದ್ರ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಸದ್ಯಪುರ ಮತ್ತು ವಡಗೇರಾ ತಾಲ್ಲೂಕಿನ ನಾಯ್ಕಲ್ ಹಾಗೂ ಬೆಂಡೆಬೆಂಬ್ಲಿಯದಲ್ಲಿ ಅತಿವೃಷ್ಟಿಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಭೇಟಿ ನೀಡಿದರು. ಇದೇವೇಳೆ ಅವರು ಸಂಕಷ್ಟಕ್ಕೆ ಒಳಗಾದ ರೈತರ ಕಷ್ಟಗಳನ್ನು ಆಲಿಸಿ ಆತ್ಮಸ್ಥೈರ್ಯ ತುಂಬಿದರು.
ನಂತರ ವಡಗೇರಾ ತಾಲ್ಲೂಕಿನ ಬೆಂಡೆಬೆಂಬ್ಲಿಯ ಮಳೆ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ ಅವರು ನಿರಾಶ್ರಿತರಿಗೆ ಹಣ್ಣುಗಳನ್ನು ವಿತರಿಸಿದರು.
ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್ ಪಾಟೀಲ್ ನಡಹಳ್ಳಿ, ಮಾಜಿ ಶಾಸಕ ರಾಜುಗೌಡ ನಾಯಕ, ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಮಾಜಿ ಜಿಲ್ಲಾಧ್ಯಕ್ಷರಾದ ಅಮೀನರಡ್ಡಿ ಯಾಳಗಿ, ಡಾ.ಶರಣಭೂಪಾಲರಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಸೊನ್ನದ ಮತ್ತು ಅಡಿವೆಪ್ಪ ಜಾಕ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್. ಸಾಹುಕಾರ, ಹಿರಿಯ ಮುಖಂಡÀ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮ, ಪರುಶುರಾಮ ಕುರಕುಂದಿ ಹಾಗೂ ಮೆಲಪ್ಪ ಗುಳಗಿ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಸಿದ್ದಣ್ಣಗೌಡ ಕಾಡಂನೋರ, ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ, ಸ್ವಾಮಿ ಹೆಡಗಿಮದ್ರಾ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

*ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ**ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂ...
30/09/2025

*ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ*

*ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ*

*ಬೆಂಗಳೂರು, ಸೆಪ್ಟೆಂಬರ್‌ 30*

ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು.

ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕಿತ್ತು. ಏನೂ ಮಾಡದೆಯೇ ಹೆಲಿಕಾಪ್ಟರ್‌ನಲ್ಲಿ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದರು.

*ಅಕ್ಟೋಬರ್‌ ಕ್ರಾಂತಿ*

ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ. ಕ್ರಾಂತಿಯ ನಂತರ ಸಿಎಂ ಬದಲಾವಣೆಯಾಗುವ ಲಕ್ಷಣವಿದೆ. ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್‌ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್‌ ಆಗಿಲ್ಲ. ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಅಭಿವೃದ್ಧಿ ಆಗಿಲ್ಲ ಎನ್ನುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಸೂಕ್ತ ಎಂದರು.

ಜಾತಿ ಸಮೀಕ್ಷೆಯಲ್ಲಿ ಸರ್ಕಾರ ಅನಗತ್ಯವಾದ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಜಾತಿ ಸಮೀಕ್ಷೆಯಲ್ಲಿ ತೀರಾ ವೈಯಕ್ತಿಕ ವಿಷಯ ಕೇಳಿದರೆ ಜನರು ಮಾಹಿತಿ ನೀಡದೇ ಇರಬಹುದು. ಇದು ಜನರಿಗೆ ಬಿಟ್ಟ ವಿಚಾರ ಎಂದು ಕೋರ್ಟ್‌ ಕೂಡ ಹೇಳಿದೆ. ಕೇಂದ್ರ ಸರ್ಕಾರ ಸಂವಿಧಾನದ ಪ್ರಕಾರ ತನ್ನ ಅಧಿಕಾರ ಚಲಾಯಿಸಿ ಜಾತಿ ಗಣತಿ, ಜನ ಗಣತಿ ಮಾಡುತ್ತಿದೆ. ರಾಜ್ಯ ಸರ್ಕಾರಕ್ಕೆ ಸಮೀಕ್ಷೆಯ ಅಧಿಕಾರವೇ ಇಲ್ಲ ಎಂದರು.

ಸಮೀಕ್ಷೆ ಮಾಡುವವರಿಗೆ ತರಬೇತಿ ನೀಡಿಲ್ಲ. ಸಮೀಕ್ಷೆ ಮಾಡದ ಸಿಬ್ಬಂದಿಯನ್ನು ಅಮಾನತು ಮಾಡುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ. ರಾಜ್ಯ ಸರ್ಕಾರದಿಂದ ಸಮೀಕ್ಷೆ ಅಗತ್ಯವೇ ಇರಲಿಲ್ಲ. ಎರಡು ಕೋಟಿ ಮನೆಗಳ ಹಣೆಬರಹವನ್ನು ಎರಡೇ ದಿನಗಳಲ್ಲಿ ಬರೆಯಲು ಮುಂದಾಗಿದ್ದಾರೆ. ಜಾತಿ ಸಮೀಕ್ಷೆಯ ಕಾಲಂಗಳಲ್ಲಿ ಕೇವಲ ಜಾತಿ/ಧರ್ಮಕ್ಕೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಸಾಮಾಜಿಕ-ಶೈಕ್ಷಣಿಕದ ಅಂಶಗಳಿಲ್ಲ. ಸಮೀಕ್ಷೆ ಮುಗಿದ ನಂತರ ವರದಿಯನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಜಾತಿ ಸಮೀಕ್ಷೆಗೆ ನಮ್ಮ ವಿರೋಧವಿಲ್ಲ, ಆದರೆ ಜಾತಿ/ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದು, ಆ ನಡೆಯನ್ನೇ ಇಲ್ಲಿ ತೋರಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡದ ಸ್ಥಾನ ನೀಡಲು ನಮ್ಮ ಅಭ್ಯಂತರವಿಲ್ಲ ಎಂದರು.

ಬೆಂಗಳೂರಿನ ರಸ್ತೆ ಗುಂಡಿಗಳು ಸಾವಿನ ಗುಂಡಿಗಳಾಗಿವೆ. ಬೆಂಗಳೂರಿನಲ್ಲಿ ಒಬ್ಬ ಯುವತಿ ರಸ್ತೆ ಗುಂಡಿಯಿಂದಾಗಿ ಜೀವ ಕಳೆದುಕೊಂಡಿದ್ದಾಳೆ. ಈ ಸಾವಿಗೆ ಕಾರಣ ಯಾರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಬೈಕ್‌ನಲ್ಲಿ ಓಡಾಡಿದರೂ, ಸಿಎಂ ನಗರ ಪ್ರದಕ್ಷಿಣೆ ಮಾಡಿದರೂ ಪ್ರಯೋಜನವಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅದಾದ ನಂತರ ಗುಂಡಿಗಳು ಉಂಟಾಗಿವೆ. ಆದರೂ ಈ ಸರ್ಕಾರ ದುರಸ್ತಿ ಮಾಡಿಲ್ಲ ಎಂದರು.
#

30/09/2025

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಂಗಳವಾರ ನೀಡಿದ ಪ್ರತಿಕ್ರಿಯೆ...

*ಮಹಿಳೆಯರಿಗೆ ಅವಹೇಳಕಾರಿ ಹೇಳಿಕೆ, ಅಪಮಾನ ಮಾಡಿದ ಅನಿರುದ್ಧ ಆಚಾರ್ಯರ ವಿರುದ್ದ ಮಹಿಳೆಯರಿಂದ ಪ್ರತಿಭಟನೆ* ಬೆಂಗಳೂರು: ಉತ್ತರಪ್ರದೇಶ ಕಥಾವಾಚಕ ಅ...
30/09/2025

*ಮಹಿಳೆಯರಿಗೆ ಅವಹೇಳಕಾರಿ ಹೇಳಿಕೆ, ಅಪಮಾನ ಮಾಡಿದ ಅನಿರುದ್ಧ ಆಚಾರ್ಯರ ವಿರುದ್ದ ಮಹಿಳೆಯರಿಂದ ಪ್ರತಿಭಟನೆ*

ಬೆಂಗಳೂರು: ಉತ್ತರಪ್ರದೇಶ ಕಥಾವಾಚಕ ಅನಿರುದ್ಧ ಆಚಾರ್ಯ ಮಹಿಳೆಯರು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ಪ್ರತಿಭಟನೆ ಮಾಡಲಾಯಿತು.

ಹಿಂದೂ ಮಹಿಳೆಯರಿಗೆ ಅಪಮಾನ ಧಕ್ಕೆ ತಂದಿರುವ ಕುರಿತು ಪ್ರತಿಭಟನೆಯಲ್ಲಿ ಮಮತಾ ಅಗರ್ ವಾಲ್ , ಸ್ನೇಹ ಅಗರ್ ವಾಲ್, ಪ್ರಿಯಾಂಕ್ ಶ್ರೀ ವಾಸ್ತವ, ಮಧು ಶರ್ಮ, ರಮ್ಯ ಶರ್ಮ ಜ್ಯೋತಿಕಾ, ಸಂಗೀತ ರವರು ಮಹಿಳೆಯರು ಭಾಗವಹಿಸಿದ್ದರು.

ದೇಶದಲ್ಲಿ ಶೇಕಡ 65ರಷ್ಟು ಮಹಿಳೆಯರು ಇದ್ದಾರೆ. ಮಹಿಳೆಯರು ಇಂದು ಎಲ್ಲ ರಂಗದಲ್ಲಿ ತನ್ನದೇ ಆದ ಗೌರವ ಸ್ಥಾನಮಾನ ಹೊಂದಿದ್ದಾಳೆ.

ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ರಾಜಕೀಯ ಮತ್ತು ಎಲ್ಲ ರಂಗದಲ್ಲಿ ಮಹಿಳೆಯರು ಸಾಧನೆ ಮಾಡಿ ತೋರಿಸಿದ್ದಾಳೆ, ಅದರು ಸಮಾಜದಲ್ಲಿ ಕೀಳುಮಟ್ಟದ ವ್ಯಕ್ತಿಗಳು ಮಹಿಳೆಯರನ್ನ ಶೋಷಣೆ, ಅಪಮಾನ, ಅವಮಾನ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು ನಡೆಯುತ್ತಿದೆ ಈ ಹಾದಿಯಲ್ಲಿ ವ್ಯಾಸ ಪೀಠದ ಅನಿರುದ್ಧ ಆಚಾರ್ಯರವರ ಅವಿವೇಕತದ ಮಾತುಗಳಿಂದ ಮಹಿಳೆಯರಿಗೆ ಅಪಮಾನವಾಗಿದೆ.

ತಾಯಿ, ಅಕ್ಕ, ತಂಗಿ ಮಗಳಾಗಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಮಹಿಳೆಯರಿಗೆ ಅದ ಅಪಮಾನ ನಾವು ಸಹಿಸುವುದಿಲ್ಲ.

ವ್ಯಾಸ ಪೀಠದ ಆಚಾರ್ಯರಾದ ಅನಿರುದ್ಧ ಆಚಾರ್ಯರವರು ಮಹಿಳೆಯರು ಅವಹೇಳನಕಾರಿ ಹೇಳಿಕೆಯಿಂದ ಮಹಿಳೆಯರ ಗೌರವಕ್ಕೆ ಧಕ್ಕೆಯಾಗಿದೆ.

ಕೊಡಲೇ ವ್ಯಾಸ ಪೀಠದ ಅನಿರುದ್ಧ್ ಆಚಾರ್ಯರವರು ದೇಶದ ಮಹಿಳೆಯರಲ್ಲಿ ಕ್ಷೇಮೆ ಹೇಳಬೇಕು ಮತ್ತು ವ್ಯಾಸ ಪೀಠದಿಂದ ಕೆಳಗೆ ಇಳಿಯಬೇಕು ಇಲ್ಲದಿದ್ದಲ್ಲಿ ದೇಶಾದ್ಯಂತ ಉಗ್ರ ಪ್ರತಿಭಟನೆ ಮಾಡಲಾಗುವುದು ಮಹಿಳೆಯರು ಹೇಳಿದರು.

ಪದೇಪದೆ ಕೇಂದ್ರದ ಜತೆ ಘರ್ಷಣೆ ಬೇಡ, ಅದರಿಂದ ಉಪಯೋಗ ಇಲ್ಲ ಎಂದು ರಾಜ್ಯ ಸರಕಾರಕ್ಕೆ ಕಿವಿಮಾತುನವದೆಹಲಿ:* ಬೆಂಗಳೂರಿನಲ್ಲಿ ಎಸಿ ರೂಂಗಳಲ್ಲಿ ಕೂತು...
30/09/2025

ಪದೇಪದೆ ಕೇಂದ್ರದ ಜತೆ ಘರ್ಷಣೆ ಬೇಡ, ಅದರಿಂದ ಉಪಯೋಗ ಇಲ್ಲ ಎಂದು ರಾಜ್ಯ ಸರಕಾರಕ್ಕೆ ಕಿವಿಮಾತು

ನವದೆಹಲಿ:* ಬೆಂಗಳೂರಿನಲ್ಲಿ ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡುವುದಲ್ಲ, ಸೋಮಾರಿತನ ಬಿಟ್ಟು ಮೊದಲು ನೆರೆ ಸಂತ್ರಸ್ತರ ನೆರವಿಗೆ ಬನ್ನಿ. ತಕ್ಷಣವೇ ಕಲ್ಯಾಣ ಕರ್ನಾಟಕ್ಕೆ ನೆರೆ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ *ಮಂಗಳವಾರ* ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಕಲ್ಯಾಣ ಕರ್ನಾಟಕದಲ್ಲಿ ನೆರೆ ಸಂಕಷ್ಟದಲ್ಲಿ ಜನರಿದ್ದರೆ ರಾಜ್ಯದಲ್ಲಿರುವ ಸರಕಾರ ʼಕುಂಭಕರ್ಣ ನಿದ್ರೆʼಯಲ್ಲಿದೆ ಎಂದು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿ ಸೇರಿ ಸಂಪುಟದ 36 ಸಚಿವರಿಗೆ ಇವತ್ತು ಜ್ಞಾನೋದಯವಾಗಿದೆ. ಅಷ್ಟೂ ಸಚಿವರು ಇಲ್ಲಿವರೆಗೆ ಏನು ಮಾಡುತ್ತಿದ್ದರು? ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಂದ ಸರಕಾರದ ವಿರುದ್ಧ ಟೀಕೆಗಳು ಶುರುವಾದ ಮೇಲೆ ಮುಖ್ಯಮಂತ್ರಿಗಳು ನೆರೆಪೀಡಿತ ಜಿಲ್ಲೆಗಳಿಗೆ ತೆರಳಿ ಏರಿಯಲ್‌ ಸರ್ವೇ ಮಾಡಿದ್ದಾರೆ. ಆದರೆ, ನೆರೆ ಪ್ರತಿ ವರ್ಷದ ಸಮಸ್ಯೆ. ಕಳೆದ 3 ತಿಂಗಳಿಂದ ಈ ಸರಕಾರ ಗಾಢ ನಿದ್ರೆಯಲ್ಲಿತ್ತು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

*ಸಿಎಂ ಹೇಳಿಕೆ ಬಗ್ಗೆ ನಿರಾಶೆ ಆಗಿದೆ:*

ಪರಿಹಾರಕ್ಕೆ ಒತ್ತಾಯ ಮಾಡುತ್ತಿರುವ ಪ್ರತಿಪಕ್ಷಗಳ ಬಗ್ಗೆ ಮುಖ್ಯಮಂತ್ರಿ ನೀಡುತ್ತಿರುವ ಉತ್ತರ, ಹೇಳಿಕೆಗಳನ್ನು ನೋಡಿದರೆ ನಿರಾಶೆಯಾಗುತ್ತದೆ. ಪ್ರತಿಪಕ್ಷವನ್ನು ಬೈದರೆ ನೆರೆ ಸಂತ್ರಸ್ತರ ಸಮಸ್ಯೆ ನೀಗುತ್ತದೆಯೇ? ಅವರ ಹೇಳಿಕೆಗಳು ಅವರು ಅಲಂಕರಿಸುವ ಹುದ್ದೆಗೆ ತಕ್ಕುದಾಗಿಲ್ಲ. ಸಂಪುಟದಲ್ಲಿ 36 ಜನ ಮಂತ್ರಿಗಳಿದ್ದಾರೆ. ಅವರೆಲ್ಲರೂ ಎಲ್ಲಿ ಹೋಗಿದ್ದಾರೆ? ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡಿದ್ದು ಸಾಕು ಎಂದು ಗುಡುಗಿದ ಅವರು; ಮೊದಲು ಜಡತ್ವ ಬಿಟ್ಟು ಪ್ರತೀ ಜಿಲ್ಲೆಗೂ ಇಬ್ಬರು-ಮೂವರು ಮಂತ್ರಿಗಳನ್ನು ಕಳಿಸಿ. ವಿಶೇಷ ತಂಡಗಳನ್ನು ನಿಯೋಜಿಸಿ. ಸಚಿವರು ಕನಿಷ್ಠ 3 ದಿನ ಜಿಲ್ಲೆಗಳಲ್ಲಿಯೇ ಮೊಕ್ಕಂ ಹೂಡಲಿ. ಮೊದಲು ಜನರ ಬಳಿಗೆ ಹೋಗಿ ಅವರ ಕಷ್ಟಕ್ಕೆ ಮಿಡಿಯಲಿ ಎಂದು ಒತ್ತಾಯಿಸಿದರು.


ನನಗೆ ಆರೋಗ್ಯ ಸಮಸ್ಯೆ ಇಲ್ಲದೇ ಇದ್ದಿದ್ದರೆ ನೆರೆಪೀಡಿತ ಪ್ರದೇಶಗಳಲ್ಲಿ ಕನಿಷ್ಠ ಒಂದು ವಾರ ಕಾಳವಾದರೂ ಕ್ಯಾಂಪ್ ಮಾಡುತ್ತಿದ್ದೆ. ಇನ್ನೊಂದು ಕಡೆ 2 ದಿನಗಳ ಹಿಂದೆಯೇ ನಾನು ನೆರೆ ಪ್ರದೇಶಗಳಿಗೆ ಹೋಗಲು ಸಿದ್ದವಾಗಿದ್ದೆ. ಹವಾಮಾನ ಸರಿ ಇಲ್ಲದ ಕಾರಣ ಅಧಿಕಾರಿಗಳು ಬರಬೇಡಿ ಎಂದರು. ಪ್ರವಾಹ ಬಂದು ಎರಡುಮೂರು ದಿನಗಳು ಆದ ಮೇಲೆ ಮಂತ್ರಿಗಳು ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ. ಹೀಗೆ ಮಾಡಿದರೆ ಹೇಗೆ? ಎಂದು ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಪ್ರಶ್ನೆ ಮಾಡಿದರು.


*ಸರಕಾರಕ್ಕೆ ಕಿವಿಮಾತು ಹೇಳಿದ ಹೆಚ್ಡಿಕೆ:*


ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಕಿವಿಮಾತು ಹೇಳಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಪದೇಪದೆ ಕೇಂದ್ರ ಸರಕಾರದ ಜೊತೆ ಘರ್ಷಣೆ ಮಾಡಿಕೊಳ್ಳಬೇಡಿ. ಅದರಿಂದ ಉಪಯೋಗ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಇಡಿ. ಸರಿಯಾದ ರೀತಿಯಲ್ಲಿ ಮನವಿ ಕೊಟ್ಟು ಪರಿಹಾರ ಕೇಳಿದರೆ ಕೇಂದ್ರದ ನೆರವು ಸಿಗುತ್ತದೆ. ಮೊದಲು ಒರಟು ಮಾತು ಬಿಡಿ. ಈವರೆಗೂ ರಾಜ್ಯದ ಒಬ್ಬ ಸಚಿವ ಅಥವಾ ಅಧಿಕಾರಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರನ್ನು ಭೇಟಿ ಮಾಡಿಲ್ಲ ಎಂದು ಅವರು ಹರಿಹಾಯ್ದರು.


ಇಷ್ಟೊತ್ತಿಗೆ ಪರಿಹಾರ ಕ್ರಮಗಳು ಕೈಗೊಳ್ಳಬೇಕಿತ್ತು. ಸರಕಾರ, ಮುಖ್ಯಮಂತ್ರಿಗಳು ಇನ್ನಿತರರು ವಿಡಿಯೋ ಕಾನ್ಫರೆನ್ಸ್ ಮಾಡಿ ಗರಂ ಆಗಿದ್ದು ಸಾಕು. ಧಮ್ಕಿ, ಗರಂ ಆದರೆ ಕೆಲಸ ಆಗುತ್ತದೆಯೇ? ಮೊದಲು ನಿಮ್ಮ ಮಂತ್ರಿಗಳನ್ನು ತಂಡಗಳನ್ನಾಗಿ ಮಾಡಿ ಕಳುಹಿಸಿ. ಇವರ ದಮ್ಮು ತಾಕತ್ತುಗಳು ಎಲ್ಲಿಗೆ ಹೋದವು? ಹಿಂದೆ ಪಾದಯಾತ್ರೆ ಮಾಡಿದ್ದರು. ಆದರೆ, ರಾಜ್ಯ ಅಭಿವೃದ್ಧಿ ವಿಷಯ ಬಂದಾಗ ಕೇಂದ್ರವನ್ನು ಸರಿದೂಗಿಸಿಕೊಂಡು ಹೋಗಿಲ್ಲ. ಮೋದಿ ಅವರ ಮೂರನೇ ಅವಧಿಯ ಸರಕಾರ ಬಂದು ಒಂದೂವರೆ ವರ್ಷವಾಯಿತು. ಈ ತನಕ ಯಾವ ಸಚಿವರೂ ಬಂದು ನನ್ನನ್ನು ಭೇಟಿ ಮಾಡಿಲ್ಲ. ಬೈಯುವುದರಿಂದ ಏನು ಆಗಲ್ಲ. ಬದಲಿಗೆ ದೆಹಲಿಗೆ ಬಂದು ಕೇಂದ್ರದ ಜೊತೆ ಮಾತಾಡಿ. ಮೊದಲು ಕೇಂದ್ರಕ್ಕೆ ಮನವಿ ಕೊಡಿ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ. ಕೇಂದ್ರ ಸ್ಪಂದಿಸುತ್ತದೆ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.


ರಾಜ್ಯದಲ್ಲಿ ಬೇಕಿಲ್ಲದ ವಿಷಯಗಳತ್ತ ಹೆಚ್ಚು ಕಾಲ ವ್ಯರ್ಥವಾಗುತ್ತಿದೆ. ಜಾತಿ ಗಣತಿ ಅಂತ ಮಾಡುತ್ತಿದ್ದಾರೆ. ಅದನ್ನು ಮಾಡಲು ಇನ್ನೊಂದು ದೊಡ್ಡ ಸಮಸ್ಯೆಯನ್ನು ಸೃಷ್ಟಿ ಮಾಡುತ್ತಿದ್ದಾರೆ. ಈ ಸರಕಾರದಿಂದ ಜನರಿಗೆ ಯಾವುದೇ ಉಪಯೋಗ ಆಗುತ್ತಿಲ್ಲ. ಕಾಂತರಾಜು ಆಯೋಗದ ಭಜನೆ ನಿಲ್ಲಿಸಿ. ಗ್ಯಾರಂಟಿ ಕೊಟ್ಟೆವು ಎಂದರು. ಈಗ ಕಲ್ಯಾಣ ಕರ್ನಾಟಕವನ್ನು ಗ್ಯಾರಂಟಿಗಳು ಕಾಪಾಡುತ್ತಿವೆಯೇ? ಅವರಿಗೆ ನೆರೆಯನ್ನು ತಡೆದು ಶಾಶ್ವತ ಪರಿಹಾರ ನೀಡಬೇಕು. ಈ ಸರಕಾರದಿಂದ ಅದು ಸಾಧ್ಯವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

*ಬೆಂಗಳೂರು ಪರಿಸ್ಥಿತಿ ನೋಡಿ:*

ಬೆಂಗಳೂರು ನಗರದ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಬೆಂಗಳೂರು ಉಸ್ತುವಾರಿ ಸಚಿವರು ಭಾರೀ ಬಿಜಿ ಇದ್ದರು, ಹಾಗಾಗಿ ಅವರನ್ನು ಬಿಟ್ಟೇ ಸಿಎಂ ನಗರ ಪ್ರದಕ್ಷಿಣೆ ಮಾಡಿದರು. ಸಿಎಂ ಅವರು ಮುಚ್ಚಿದ ಗುಂಡಿ ನೋಡ್ಕೊಂಡು ಹೋಗುತ್ತಿದ್ದರೆ ಅವರ ಹಿಂದೆ ಹಾಕಿರುವ ಟಾರು ಕಿತ್ತುಕೊಂಡು ಹೋಗಿದೆ. ಗ್ಯಾರಂಟಿ ಸ್ಕೀಮ್ ಮಾಡಿ ಖಜಾನೆ ಖಾಲಿ ಅಂಥ ನಾನು ಹೇಳಲ್ಲ. ಜನರೂ ಕೇಳಿರಲಿಲ್ಲ. ಆದರೆ ದಸರಾ ಹೆಸರಲ್ಲಿ ಈಗ ಬಸ್ ಟಿಕೆಟ್ ಬೆಲೆ ಹೆಚ್ಚಳ ಮಾಡಿದೆ ಸರಕಾರ. ಖಾಸಗಿ ಬಸ್ಸುಗಳ ಜತೆ ಕೆಎಸ್‌ಆರ್‌ಟಿಸಿ ಕೂಡ ದರ ಏರಿಕೆಗೆ ಪೈಪೋಟಿಗೆ ಬಿದ್ದಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.


ರೈತರಿಗೆ ಈ ಸರಕಾರ ಏನನ್ನೂ ಒಳ್ಳೆಯದು ಮಾಡಿಲ್ಲ. ಅವರಿಗೆ ಸಕಾಲಕ್ಕೆ ಅಗತ್ಯ ಸಾಲ ಸಿಗುತ್ತಿಲ್ಲ. ನಾನು ಸಿಎಂ ಆಗಿದ್ದಾಗ ೩೫% ಸಾಲ ನೀಡುತ್ತಿದ್ದೆ. ಈಗ ಇವರು ಗ್ಯಾರಂಟಿ ಕೊಟ್ಟವರು! ಎಷ್ಟು ಪರ್ಸೆಂಟ್ ಸಾಲ ಕೊಟ್ಟಿದ್ದೀರಿ, ಹೇಳಿ? ಎಂದು ಸಿಎಂಗೆ ಪ್ರಶ್ನೆ ಹಾಕಿದ ಕೇಂದ್ರ ಸಚಿವರು; ಇವರು ನೀಡುತ್ತಿರುವ ಸಾಲದ ಪ್ರಮಾಣ ಕೇವಲ ೧೭% ಗೆ ಕುಸಿದಿದೆ. ಇದು ಈ ಸರಕಾರದ ರೈತಪರ ಕಾಳಜಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.



ಕರ್ನಾಟಕ ದಲ್ಲಿ ಉತ್ತಮ ಮಳೆಯಾಗಿದೆ.‌ ಜಲಾಶಯಗಳು ನಿರೀಕ್ಷೆಗೂ ಮೀರಿ ತುಂಬಿವೆ. ಇದರಿಂದ ರೈತರು ಖುಷಿಯಾಗಿದ್ದರು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಡೆ ಮಳೆ ಹೆಚ್ಚಿ ಪ್ರವಾಹದ ಸ್ವರೂಪ ಪಡೆಯಿತು. ಗೌರಿ ಗನೇಶ ಹಬ್ಬದ ವೇಳೆಯಲ್ಲೇ ಕಲ್ಯಾಣ ಕರ್ನಾಟಕ, ಬೆಳಗಾವಿ ಭಾಗದಲ್ಲಿ ಪ್ರವಾಹ ಸೃಷ್ಟಿಯಾಗಿತ್ತು. ಈಗಲೂ ಸಹ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ದೊಡ್ಡ ಪ್ರವಾಹ ಉಂಟಾಗಿದೆ. ನಾನು ಆ ಜಿಲ್ಲೆಗಳ ಡಿಸಿಗಳ ಜೊತೆ ದೂರವಾಣಿಯಲ್ಲಿ ಮಾತಾಡಿ ಮಾಹಿತಿ ಪಡೆದಿದ್ದೇನೆ. ಪ್ರತಿ ಒಂದು ಜಿಲ್ಲೆಯಲ್ಲೂ ಒಂದು ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಆಗಿದೆ. ಮನೆಗಳಿಗೆ ನೀರು ನುಗ್ಗಿ ಜನರು ಬೀದಿಪಾಲಾಗಿದ್ದಾರೆ. ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ. ಇಷ್ಟೂ ಜಿಲ್ಲೆಗಳ 12 ಗೋಶಾಲೆಗಳು ಸಂಪೂರ್ಣ ಮುಳುಗಿವೆ. ಜಾನುವಾರುಗಳು ಪ್ರಾಣ ಕಳೆದುಕೊಂಡಿವೆ ಎಂದು ಅವರು ಹೇಳಿದರು.


ನೆರೆಯ ಮಹಾರಾಷ್ಟ್ರದಿಂದ ನಿತ್ಯವೂ 4.5 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ ಬರುತ್ತಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದ ಭೀಮಾ, ಕೃಷ್ಣಾ ನದಿ ಪಾತ್ರಗಳಲ್ಲಿಯೂ ಅತಿವೃಷ್ಠಿಯಾಗಿ ಅಷ್ಟೇ ಪ್ರಮಾಣದ ನೀರು ಹರಿಯುತ್ತಿದೆ. ಏಕಕಾಲಕ್ಕೆ ಇಷ್ಟು ದೊಡ್ಡ ಪ್ರಮಾಣದ ನೀರು ಪ್ರವಾಹ ಸ್ವರೂಪ ಪಡೆದು ಅಪಾರ ನಷ್ಟ ಉಂಟು ಮಾಡಿದೆ ಎಂದು ಅವರು ಹೇಳಿದರು.


ನೆರೆಪೀಡಿತ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ಅನಾಹುತ ಆಗಿದೆ. ಹಳ್ಳಿಗಳಿಗೆ ಹಳ್ಳಿಗಳು ಜಲಾವೃತವಾಗಿವೆ. ಇಷ್ಟು ದಿನದಿಂದ ಜನರು ನೊಂದಿದ್ದಾರೆ. ಕಳೆದ ಹತ್ತು ವರ್ಷಗಳಿಂದಲೂ ಇದೇ ಸಮಸ್ಯೆ. ಈ ಬಾರಿ ಇಷ್ಟೊಂದು ಮಟ್ಟಿಗೆ ಪ್ರಳಯ ಸದೃಶ ನೆರೆ ಬಂದರೂ ಯಾವೊಬ್ಬ ಮಂತ್ರಿಯೂ ಭೇಟಿ ಕೊಟ್ಟಿಲ್ಲ. ಚಿಕ್ಕಮಗಳೂರು ಭಾಗದಲ್ಲಿ ಮಳೆ ಬಂದು ವಿಧ್ವಂಸ ಸೃಷ್ಟಿಯಾಗಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ, ಮನೆಗಳು ಹಾನಿಯಾಗಿವೆ. ಇಷ್ಟೆಲ್ಲಾ ಆಗಿದ್ದರೂ ಈವರೆಗೂ ಸರಕಾರ ಜನರ ನೆರವಿಗೆ ಬಂದಿಲ್ಲ ಎಂದು ಅವರು ದೂರಿದರು.

ಇಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಧಾರವಾಡ ಇವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾ...
30/09/2025

ಇಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಧಾರವಾಡ ಇವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ ಇವರ ಮುಖಾಂತರ ದಸರಾ ಮತ್ತು ಮತ್ತು ಬನ್ನಿ ಹಬ್ಬದ ನಿಮಿತ್ತ ಎರಡು ದಿನ ರಜೆ ಕೊಡುವ ಬಗ್ಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ವಿ.ಎಫ್.ಚುಳಕಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಹೊನ್ನಪ್ಪನವರ್ ಹುಬ್ಬಳ್ಳಿ ಶಹರ ಅಧ್ಯಕ್ಷರಾದ ಶ್ರೀ ಎಮ್ ಎಚ್ ಜಂಗಳಿ ಧಾರವಾಡ ಗ್ರಾಮೀಣ ಅಧ್ಯಕ್ಷರಾದ ಶ್ರೀ ಅಜಿತ್ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಎಲ್ಲ ಗಣತಿ ದಾರರಿಗೆ ಮತ್ತು ಅಧಿಕಾರಿ ವರ್ಗದವರಿಗೆ ಶಿಕ್ಷಕರಿಗೆ ಹಬ್ಬದ ಶುಭಾಶಯಗಳು ಕೋರಿದರು

ಖರ್ಗೆ ಕುಟುಂಬಕ್ಕೆ ಮೊದಲು ಪರಿಹಾರ ಕೊಡಿ; ರೈತರ ಸಂಕಷ್ಟಕ್ಕೂ ಸ್ಪಂದಿಸಿ- ವಿಜಯೇಂದ್ರಕಲಬುರ್ಗಿ: ಮೊದಲು ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ...
30/09/2025

ಖರ್ಗೆ ಕುಟುಂಬಕ್ಕೆ ಮೊದಲು ಪರಿಹಾರ ಕೊಡಿ;
ರೈತರ ಸಂಕಷ್ಟಕ್ಕೂ ಸ್ಪಂದಿಸಿ- ವಿಜಯೇಂದ್ರ

ಕಲಬುರ್ಗಿ: ಮೊದಲು ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಡಿ. ಜೊತೆಗೇ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ ಬೆಳೆ ನಾಶವಾಗಿದೆ. 4 ಎಕರೆಗೆ ಪರಿಹಾರ ಕೊಡಿಸಿ ಎಂದು ಕೇಳಿದರೆ, ನನ್ನದೇ 40 ಎಕರೆ ಇದೆ; ನನ್ನ ಬೆಳೆಯೂ ಸಂಪೂರ್ಣ ನಾಶವಾಗಿದೆ. ಪರಿಹಾರ ಬಂದಿಲ್ಲ ಎಂಬ ಮಾತು ಮಲ್ಲಿಕಾರ್ಜುನ ಖರ್ಗೆಯವರದು ಎಂದು ಆಕ್ಷೇಪಿಸಿದರು.
ಒಣಭೂಮಿಗೆ ಎನ್‍ಡಿಆರ್‍ಎಫ್ ನಿಯಮದಡಿ ಹೆಕ್ಟೇರ್‍ಗೆ 6 ಸಾವಿರ ರೂ. ಪರಿಹಾರ ಇತ್ತು. ಆದರೆ, ಮುಖ್ಯಮಂತ್ರಿಗಳಾಗಿದ್ದ ರೈತನಾಯಕ ಯಡಿಯೂರಪ್ಪ ಅವರು ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪ್ರವಾಹಪೀಡಿತರಿಗೆ ರಾಜ್ಯದಿಂದ ಎನ್‍ಡಿಆರ್‍ಎಫ್ ಮಾದರಿಯ ನೆರವು ನೀಡಿದ್ದರು. ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪ ಮಾಡುತ್ತಿಲ್ಲ; ಆ ಕಾಳಜಿ ವ್ಯಕ್ತವಾಗಲಿ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಸಂದಿಗ್ಧ ಪರಿಸ್ಥಿತಿಯಲ್ಲಿರುವ ರೈತರ ಬಗ್ಗೆ ಈಗ ನೀವು ಕಾಳಜಿ ತೋರಿಸದೇ ಇದ್ದರೆ ಇನ್ಯಾವಾಗ ಕಾಳಜಿ ತೋರಿಸುತ್ತೀರಿ ಎಂದು ಪ್ರಶ್ನಿಸಿದರು. ಎಕರೆಗೆ 25ರಿಂದ 30 ಸಾವಿರ ರೂ. ಪರಿಹಾರ ಕೊಡಬೇಕೆಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಹಿಂದೂ ಸಮಾಜ ಒಡೆಯಲು ಹೊರಟಿದ್ದಾರೆ..
ಜಾತಿ ಸಮೀಕ್ಷೆ ಕುರಿತು ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ನಿನ್ನೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರಕಾರದ ಜಾತಿ ಸಮೀಕ್ಷೆಯನ್ನೂ ವಿರೋಧಿಸುತ್ತೀರಾ ಎಂದು ಕೇಳಿದ್ದಾರೆ. ಕಾಂತರಾಜು ವರದಿಗೆ 180 ಕೋಟಿ ಖರ್ಚು ಮಾಡಿದ್ದೀರಲ್ಲವೇ? ನೀವೇ ಮುಖ್ಯಮಂತ್ರಿ ಇದ್ದರೂ ಅದನ್ನು ಅನುಷ್ಠಾನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.
ಇವತ್ತು 500- 600 ಕೋಟಿ ಖರ್ಚು ಮಾಡಿ ಸಮೀಕ್ಷೆ ಮಾಡುವುದನ್ನು ಬಿಜೆಪಿ ವಿರೋಧಿಸಲು ಹೊರಟಿಲ್ಲ. ಸ್ವಾತಂತ್ರ್ಯಾನಂತರದಲ್ಲಿ ಹಿಂದಿನ ಕಾಂಗ್ರೆಸ್, ಯುಪಿಎ ಸರಕಾರವು ಜಾತಿ ಗಣತಿ ಕುರಿತು ಇಂಥ ದಿಟ್ಟ ನಿರ್ಧಾರ ಮಾಡಿರಲಿಲ್ಲ. ಮನಮೋಹನ್ ಸಿಂಗ್ ಅವರ ಸರಕಾರ ತೀರ್ಮಾನ ಮಾಡಿದರೂ ರಾಹುಲ್ ಗಾಂದಿಯವರುü ಅದನ್ನು ವಿರೋಧಿಸಿದ್ದರು ಎಂದು ಗಮನ ಸೆಳೆದರು.
ರಾಜ್ಯ ಸರಕಾರವು ಜಾತಿ ಜನಗಣತಿ ನೆಪದಲ್ಲಿ ಪಗಡೆಯಾಟ ಮಾಡಲು ಹೊರಟಿದೆ. ಹಿಂದೂ ಸಮಾಜ ಒಡೆಯಲು ಹೊರಟಿದ್ದಾರೆ. ರಾಜ್ಯ ಸರಕಾರಕ್ಕೆ ಅಧಿಕಾರ ಇದೆಯೋ ಇಲ್ಲವೋ; ನಾವು ಜಾತಿ ಜನಗಣತಿಯನ್ನು ವಿರೋಧಿಸುತ್ತಿಲ್ಲ. ಸಿಎಂ ಇಚ್ಛಾಶಕ್ತಿ ಬಗ್ಗೆ ಗೊಂದಲ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಜನಗಣತಿ ಮಾಡಲು ಹೊರಟಿದ್ದಾರಾ ಅಥವಾ ಪ್ರಾಮಾಣಿಕವಾಗಿ ಹಿಂದುಳಿದ, ಶೋಷಿತ ಸಮುದಾಯಗಳಿಗೆ ನ್ಯಾಯ ಕೊಡಲೆಂದು ಇದನ್ನು ಮಾಡುತ್ತಿದ್ದಾರಾ? ಅವರಲ್ಲಿ ಪ್ರಾಮಾಣಿಕ ಕಳಕಳಿ ಕಾಣುತ್ತಿಲ್ಲ; ಜನರಲ್ಲೂ ಅನುಮಾನ ಹುಟ್ಟುಹಾಕಿದ್ದಾರೆ ಎಂದು ಆಕ್ಷೇಪಿಸಿದರು.

ಪ್ರಶ್ನೆಗೆ ಉತ್ತರ ನೀಡಿದ ಅವರು, ಶೋಷಿತ- ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ನ್ಯಾಯ ಕೊಡಬೇಕೆಂಬ ಬದ್ಧತೆ ಬಿಜೆಪಿಗೆ ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಬಿಜೆಪಿ ಅಲ್ಲ ಎಂದು ತಿಳಸಿದರು. ಸಿದ್ದರಾಮಯ್ಯನವರ ಮನಸ್ಥಿತಿಗೆ ನಮ್ಮ ವಿರೋಧ ಇದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಹೈಕೋರ್ಟ್ ಏನು ಆದೇಶ ಮಾಡಿದೆ? ಯಾಕೆ ಕೆಲಸಕ್ಕೆ ಬಾರದ ಪ್ರಶ್ನೆಗಳನ್ನು ಇಟ್ಟುಕೊಂಡಿದ್ದಾರೆ? 60ಕ್ಕೂ ಹೆಚ್ಚು ಪ್ರಶ್ನೆಗಳಿದ್ದು, ಇದರಲ್ಲಿ ಎಲ್ಲವೂ ಕಡ್ಡಾಯವಲ್ಲ ಎಂದು ರಾಜ್ಯ ಹೈಕೋರ್ಟ್ ತಿಳಿಸಿದೆ ಎಂದು ಗಮನ ಸೆಳೆದರು.
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೇಶ್ ಜಾಧÀವ್, ಶಾಸಕ ಬಸವರಾಜ ಮತ್ತಿಮೂಡ್, ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಶಶಿಲ್ ನಮೋಶಿ, ಮಾಜಿ ಶಾಸಕರಾದ ಅಮರನಾಥ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ಬಿಜೆಪಿ ಕಲಬುರಗಿ ನಗರ ಜಿಲ್ಲಾಧ್ಯಕ್ಷ ಚಂದ್ರಕಾಂತ್ ಬಿ. ಪಾಟೀಲ್, ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಹಾಗೂ ಮುಖಂಡರು ಇದ್ದರು.

Address

Bangalore

Alerts

Be the first to know and let us send you an email when VT NEWS KANNADA posts news and promotions. Your email address will not be used for any other purpose, and you can unsubscribe at any time.

Contact The Business

Send a message to VT NEWS KANNADA:

Share