09/08/2026
ಸಂಪುಟ ಪುನರಚನೆ ಅಸಮಾಧಾನದಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ: ಮಾಜಿ ಸಚಿವ ಕೆ.ಎನ್. ರಾಜಣ್ಣ
ಯಾವುದೇ ಸರ್ಕಾರದಲ್ಲಿ ಸಂಪುಟ ಪುನರಚನೆ ಮಾಡಿದಾಗ ಅಲ್ಪಸ್ವಲ್ಪ ಅಸಮಾಧಾನಗಳು ಸಹಜವಾಗಿ ಬರುತ್ತವೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಅಂತಹ ಅಸಮಾಧಾನಗಳನ್ನು ಆಯಾಯ ಪಕ್ಷದ ಮುಖಂಡರೇ ಸರಿಪಡಿಸಲಿದ್ದು, ಇದರಿಂದ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ವರಿಷ್ಠರೊಂದಿಗೆ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.