Kendasampige

Kendasampige ಕೆಂಡಸಂಪಿಗೆ ಎಂಬುದು ಕನ್ನಡ ಅಂತರ್ಜಾಲ ಲೋಕ

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ.

ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ

್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ.

ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ.

ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.

ಹೀಗೊಂದು ಆಸ್ಟ್ರೇಲಿಯಾದ ಋತು-ಗಾನ: ಡಾ. ವಿನತೆ ಶರ್ಮ ಅಂಕಣಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿ...
19/09/2025

ಹೀಗೊಂದು ಆಸ್ಟ್ರೇಲಿಯಾದ ಋತು-ಗಾನ: ಡಾ. ವಿನತೆ ಶರ್ಮ ಅಂಕಣ

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿಯ ಕಾಯುವಿಕೆಯಿದೆ. ಮಳೆಗಾಗಿ ಕಾಯುತ್ತಿರುವುದು ಭೂಮಿ, ಪ್ರಾಣಿಪಕ್ಷಿಗಳು ಮತ್ತು ನಾವು ಮನುಷ್ಯರು. ನಮ್ಮ ಕಾಯುವಿಕೆ ಪ್ರಕೃತಿಮಾತೆಗೆ ನಿಧಾನವಾಗಿ ಅರ್ಥವಾಯಿತೇನೊ ಅನ್ನುವಂತೆ ಭಾಸವಾಗುವುದು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬೀಸುವ ಬಿರುಗಾಳಿಯಿಂದ. ಇದು ಬರಲಿರುವ ಬೇಸಿಗೆಯ ಮಳೆಗಾಲದ ಚಿಹ್ನೆ. ಡಿಸೆಂಬರ್, ಜನವರಿ ತಿಂಗಳುಗಳಲ್ಲಿ ಮಳೆಗಾಲ. ಇದು ಒಮ್ಮೊಮ್ಮೆ ಫೆಬ್ರವರಿಗೂ ವಿಸ್ತರಿಸಿ ಅಲ್ಲಲ್ಲಿ ಪ್ರವಾಹಗಳು ಹರಿಯುತ್ತವೆ. ಮಾರ್ಚ್ ತಿಂಗಳಿಂದ ಮೇ ವರೆಗೆ ಶರತ್ಕಾಲ. ನಂತರ ಚಳಿಗಾಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿಯ ಕಾಯುವಿಕೆಯಿದೆ. ಮಳೆಗಾಗಿ ಕಾಯುತ್ತಿರುವುದ...

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ...
19/09/2025

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ.....

ಹಿರಿಯರಿಗೂ ಇಂದಿನ ಪೀಳಿಗೆಗೂ ಇರುವ ಅಂತರವನ್ನು ದಾಟುವುದು ಹೇಗೆ?: ಎಲ್.ಜಿ.ಮೀರಾ ಅಂಕಣ   ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗ...
19/09/2025

ಹಿರಿಯರಿಗೂ ಇಂದಿನ ಪೀಳಿಗೆಗೂ ಇರುವ ಅಂತರವನ್ನು ದಾಟುವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ’ ತಮ್ಮ ಸಂತಾನಗಳ ಮನಸ್ಸಿನ ಹಾಗೂ ಬದುಕಿನ ಮರ್ಮವೇನು ಎಂಬುದನ್ನು ಅರಿಯಲು ಮೊದಲು ತಾವೇ ಒಂದು ಹೆಜ್ಜೆ ಮುಂದೆ ಇಡಬೇಕಿದೆ. ಜಗತ್ತೇ ಒಂದು ಹಳ್ಳಿಯಾದ ಅಂತರ್ಜಾಲದ ಯುಗದಲ್ಲಿ, ಹಳ್ಳಿಯೇ ತಮ್ಮ ಜಗತ್ತಾಗಿದ್ದ ಪೀಳಿಗೆಗೆ ಮತ್ತು ಅವರ ಮಕ್ಕಳಿಗೆ ಈ ಹೆಜ್ಜೆಯು ಒಂದು ಸವಾಲು. ಆದರೆ, ವಿಧಿ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮಿಂದ ಮಾನಸಿಕವಾಗಿ ಹಾಗೂ ಭಾವನಾತ್ಮಕವಾಗಿ ದೂರ ಆಗಬಾರದು ಎಂದರೆ ಅವರ ಬದುಕಿನ ಲಯಗಳನ್ನು ಅರಿಯಲು ಹಿರಿಯ ಪೀಳಿಗೆಯವರು ಪ್ರಯತ್ನ ಮಾಡಲೇಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೆಂಟನೆಯ ಬರಹ

ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ’ ತಮ್ಮ ಸಂತಾನಗಳ ಮನಸ್ಸಿನ ಹಾಗೂ ಬದುಕಿನ ಮರ್ಮವೇನು ಎ....

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾ...
18/09/2025

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ‌ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎ...

ದೇವರಾಜ್ ಹುಣಸಿಕಟ್ಟಿ ಬರೆದ ಗಜಲ್
17/09/2025

ದೇವರಾಜ್ ಹುಣಸಿಕಟ್ಟಿ ಬರೆದ ಗಜಲ್

"ಲೋಕದ ಅಳಲಿನ ಮುಂದೆ ನಮ್ಮದೆಂಥ ದುಃಖ.. ಇಷ್ಟಿಷ್ಟೇ ತಾಳ್ಮೆಯನ್ನೆ ಗುಣಿಸುವುದಿದೆ ಬದುಕಿನ ತುಂಬಾ ಅಂಬೆಗಾಲಿಡುತ್ತಲೇ ಬರುತ್ತದೆ ಅಷ್...

ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರುಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದ...
16/09/2025

ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರು

ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ. ನವ ಮಾಸ ತುಂಬಿದ ಬಳಿಕ ಜೀವದ ಬದಲಿಗೆ ಶೂನ್ಯವನ್ನು ಹಡೆದ ಒಡಲು ಹೊಸದಾದ ಖಾಲಿತನಕ್ಕೀಡಾಗುತ್ತದೆ. ಬಂದೇ ಬರುವನೆಂದು ನಂಬಿದ್ದ ಅತಿಥಿ.. ಬರಲೇ ಬೇಕಿದ್ದ ಅತಿಥಿ.. ಅವನ ಸ್ವಾಗತಕ್ಕೆ ಏನೆಲ್ಲ ತಯಾರಾಗಿತ್ತು! ತಂದಿಟ್ಟುಕೊಂಡ ಮಲ್ಲಿಗೆ ಮೆದುವಿನ ಟೊಪ್ಪಿಯಿತ್ತು. ಮೊಲದ ತುಪ್ಪಳದಂಥಾ ಅಂಗಿಯಿತ್ತು. ಅದರ ಅಂಚಲ್ಲಿ ಕೈಯಲ್ಲೇ ಹೊಲಿದ ಕಸೂತಿಯಿತ್ತು. ಕಟ್ಟಿದ ತೊಟ್ಟಿಲಿತ್ತು. ಕೈಗೆ ಕೊಡಲು ಕಾದಿದ್ದ ಗಿಲಿಗಿಚ್ಚಿಯಿತ್ತು.. ಅಲ್ಲಿ ಎಲ್ಲವೂ ಇತ್ತು.
ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ, ಮಂಗಳವಾರಗಳಂದು, ಹದಿನೈದು ದಿಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ

ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ....

ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ...
16/09/2025

ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹ

ಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ಅರೆಬರೆ ಉತ್ತರ ಕೊಟ್ಟೋ ಜಾರಿಕೊಳ್ಳುತ್ತಾರೆ. ತಮ್ಮ ನಂಬಿಕೆಗಳಿಗೆ ಹಾಗೂ ಆಚಾರ, ವಿಚಾರಕ್ಕೆ ಸರಿಹೊಂದದೆ ಇರುವ ಪ್ರಶ್ನೆಗಳನ್ನು ಮಕ್ಕಳು ಕೇಳಿದಾಗ ಕಸಿವಿಸಿಗೊಂಡು ಕೋಪಿಸಿಕೊಳ್ಳುವುದನ್ನು ನೋಡಿದ್ದೇವೆ. ಯಾವುದೇ ವಿಷಯದ ಬಗ್ಗೆ ಗೊತ್ತಿಲ್ಲದಿರುವುದು ಅವಮಾನದ ಮಾತಲ್ಲ. ನಾವೇ ಏನೋ ಊಹೆ ಮಾಡಿಕೊಂಡು, ಖಾಲಿ ಇರುವ ಜಾಗದಲ್ಲಿ ಏನೋ ತುಂಬಿಕೊಂಡು ಸತ್ಯವನ್ನು ಹುಡುಕುವ ಗೋಜಿಗೆ ಹೋಗದಿರುವುದು ತಪ್ಪು. ಪ್ರಶ್ನಿಸುವುದನ್ನು ಉತ್ತೇಜಿಸದೆ ಮಕ್ಕಳನ್ನು ಸುಮ್ಮನಾಗಿಸುವುದು, ಬೈಯುವುದು ಸಾಮಾನ್ಯವಾಗಿದೆ.
ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

ಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ಅರೆಬರೆ ಉತ್ತರ ಕೊಟ್ಟೋ ಜಾರಿಕೊಳ್ಳುತ್ತಾರೆ. ತಮ್ಮ ನಂ....

ನಾಳೆಯಿಂದ ವಿನಾಯಕ ಅರಳಸುರಳಿ ಬರೆಯುವ ಹೊಸ ಅಂಕಣ
15/09/2025

ನಾಳೆಯಿಂದ ವಿನಾಯಕ ಅರಳಸುರಳಿ ಬರೆಯುವ ಹೊಸ ಅಂಕಣ

ಆಟೋ ಕರೆಕ್ಷನ್: ಸುಮಾವೀಣಾ ಸರಣಿಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ...
15/09/2025

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೈದನೆಯ ಬರಹ ನಿಮ್ಮ ಓದಿಗೆ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ...

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನ...
14/09/2025

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್ರಾಣಿ, ಕಾಡು ಬಿಟ್ಟು ನನ್ನ ತೋಟಕ್ಕೆ ಬರಲು ಕಾರಣವೇನಿರಬಹುದೆಂದು ಚಿಂತಿಸುತ್ತಾ ಹಾಸಿಗೆಯ ಮೇಲೆ ಮಲಗಿದೆ. ಹಾಗೆಯೇ ಅದರ ಆಹಾರ ಪದ್ಧತಿಗಳನ್ನು ಜ್ಞಾಪಿಸಿಕೊಳ್ಳತೊಡಗಿದೆ. ಮಲಬಾರ್ ಸೀವೆಟ್ ಕೆಲ ಚಿಕ್ಕ ಪ್ರಾಣಿಗಳನ್ನೂ, ಮೊಟ್ಟೆಗಳನ್ನೂ ಇಷ್ಟಪಟ್ಟು ತಿನ್ನುತ್ತದೆಂದು ಎಲ್ಲೋ ಓದಿದ್ದು ನೆನಪಾಯಿತು. ಸಂಜೆ ಹೆಗ್ಗಾಲುವೆಯ ಬಳಿ ಕಟ್ಟ ಹಾಕಲು ಹೋಗಿದ್ದಾಗ ಒಂದೆರಡು ಹುಂಡುಕೋಳಿಗಳು ಸರ‍್ರೆಂದು ಸದ್ದು ಮಾಡುತ್ತಾ, ನನ್ನನ್ನೇ ಗಾಬರಿಗೊಳಿಸಿ ಓಡಿಹೋಗಿದ್ದವು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ ‘ಅಡಿಯಪ್ಪ ಮತ್ತು ಸಿವೆಟ್’ ನಿಮ್ಮ ಈ ಭಾನುವಾರದ ಓದಿಗೆ

ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್....

ಅವಳಿ ನಗರಗಳ ದರ್ಶನ: ದರ್ಶನ್‌ ಜಯಣ್ಣ ಸರಣಿಇದೆಲ್ಲಕ್ಕೆ ಶಿಕರಪ್ರಾಯದಂತೆ ಇದ್ದುದು ಅಲ್ಲಿನ ಆಲ್ ಕರಾ ಗುಹೆ. ನೋಡಲಿಕ್ಕೆ ನಮ್ಮ ಬದಾಮಿಯ ಗುಹೆಯ ಬಣ...
13/09/2025

ಅವಳಿ ನಗರಗಳ ದರ್ಶನ: ದರ್ಶನ್‌ ಜಯಣ್ಣ ಸರಣಿ

ಇದೆಲ್ಲಕ್ಕೆ ಶಿಕರಪ್ರಾಯದಂತೆ ಇದ್ದುದು ಅಲ್ಲಿನ ಆಲ್ ಕರಾ ಗುಹೆ. ನೋಡಲಿಕ್ಕೆ ನಮ್ಮ ಬದಾಮಿಯ ಗುಹೆಯ ಬಣ್ಣವಿರುವ ಇದು ಸಾವಿರಾರು ವರ್ಷಗಳ ಹಿಂದೆ ಇಲ್ಲಿದ್ದ ಸಮುದ್ರದಿಂದ ರೂಪುಗೊಂಡಿರುವುದಾಗಿಯೂ ಅದರ ಒಳಮೈಯಲ್ಲಿ ಕ್ಯಾಲ್ಸಿಯಂ ಕಾರ್ಬೊನೇಟ್ ಇರುವುದಾಗಿಯೂ ಅಲ್ಲಿನ ಗೈಡ್ ನಮಗೆ ಹೇಳಿದರು. ಅದರ ಎತ್ತರ ಆಕೃತಿ ನಮ್ಮ ಶಿರಸಿಯ ಯಾಣದಂತಿದೆಯಾದರೂ ಒಂದು ಲಾವಾದ ಪರಿಣಾಮದಿಂದ ಮತ್ತೊಂದು ಮರಳುಗಾಡಿನಲ್ಲಿ ಯಾವಾಗಲೋ ಬಿದ್ದ ಬೀಳುತ್ತಿದ್ದ ಮಳೆಯಿಂದ ಆಗಿರಬಹುದೆಂದು ನಂತರ ನಾನು ತಿಳಿದುಕೊಂಡೆ. ಸೌದಿಯ ಟೂರಿಸಂನವರು ಈ ಗುಹೆಯನ್ನು ಮತ್ತು ಅಲ್ಲಿನ ಪ್ರಾಚೀನ ಮಾರುಕಟ್ಟೆಯನ್ನು ಚೆನ್ನಾಗಿ ಪ್ರಮೋಟ್ ಮಾಡುತ್ತಿದ್ದರೂ ಎಲ್ಲಿಯೂ ಜುಡಾ, ಜೀಸಸ್‌ನ ಬಗ್ಗೆ ಹೇಳಲಿಲ್ಲ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಒಂಭತ್ತನೆಯ ಕಂತು

ಇದೆಲ್ಲಕ್ಕೆ ಶಿಕರಪ್ರಾಯದಂತೆ ಇದ್ದುದು ಅಲ್ಲಿನ ಆಲ್ ಕರಾ ಗುಹೆ. ನೋಡಲಿಕ್ಕೆ ನಮ್ಮ ಬದಾಮಿಯ ಗುಹೆಯ ಬಣ್ಣವಿರುವ ಇದು ಸಾವಿರಾರು ವರ್ಷಗ...

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ...
12/09/2025

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ...

Address


Alerts

Be the first to know and let us send you an email when Kendasampige posts news and promotions. Your email address will not be used for any other purpose, and you can unsubscribe at any time.

Contact The Business

Send a message to Kendasampige:

  • Want your business to be the top-listed Media Company?

Share

Our Story

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ. ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ. ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ. ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.