
12/04/2025
ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಕೋಮಲ ಮಾತು ಕೇಳಿದ ಸೆಲ್ವಿಗೆ ಏನೇನೊ ಆಲೋಚನೆಗಳು ಸುತ್ತಿಕೊಂಡವು. ಸೆಲ್ವಿ ಗಣಿ ಕಾರ್ಮಿಕ ಮಣಿಯನ್ನು ಮದುವೆ ಮಾಡಿಕೊಂಡಿದ್ದು. ಮಣಿ ತಂದೆ ಸೆಲ್ವಮ್ ಅಪಘಾತದಲ್ಲಿ ಸತ್ತುಹೋಗಿದ್ದು. ಅವಳ ತಂದೆ ಅಯ್ಯಪ್ಪನಿಗೆ ಸಿಲಿಕೋಸಿಸ್ ಬಂದು ಸತ್ತುಹೋಗಿದ್ದು. ಮಣಿ ಮತ್ತು ಸೆಲ್ವಿಯ ಮಧ್ಯೆ ತೊಂದರೆಗಳು; ಹೀಗೆ ಸಾಲು ಸಾಲಾಗಿ ಅವಳನ್ನು ಕಾಡತೊಡಗಿದವು. ಇಪ್ಪತ್ತು ವರ್ಷಗಳ ಹಿಂದೆ ಸೆಲ್ವಿ ತಾನು ಬಸರಿಯಾದಾಗ ಅಪ್ಪ ಅಮ್ಮನಿಗೆ ಹೇಳಿ ಬಸರಿ ತೆಗೆಸಿ ಡಿಗ್ರಿ ಮುಗಿಸಿ ಒಂದು ಕೆಲಸಕ್ಕೆ ಸೇರಿಕೊಂಡು ಬೇರೆ ಯಾರನ್ನಾದರೂ ಮದುವೆ ಮಾಡಿಕೊಂಡಿದ್ದರೆ? ತನ್ನ ಬದುಕು ಈ ರೀತಿ ಇರುತ್ತಿರಲಿಲ್ಲ!
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ
ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ ಡಾ. ಎಂ. ವೆಂಕಟಸ್ವಾಮಿ | Apr 12, 2025 | ದಿನದ ಅಗ್ರ ಬರಹ | ಕೋಮಲ ಮಾತು ಕೇಳಿದ ಸೆಲ್ವಿಗೆ ಏನೇನ....