Kendasampige

Kendasampige ಕೆಂಡಸಂಪಿಗೆ ಎಂಬುದು ಕನ್ನಡ ಅಂತರ್ಜಾಲ ಲೋಕ

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ.

ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ

್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ.

ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ.

ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.

ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿಕೋಮಲ ಮಾತು ಕೇಳಿದ ಸೆಲ್ವಿಗೆ ಏನೇನೊ ಆಲೋಚನೆಗಳು ಸುತ್ತಿಕೊಂಡವು. ಸೆಲ್ವಿ ಗಣಿ ಕಾರ್ಮಿಕ ಮಣಿ...
12/04/2025

ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೋಮಲ ಮಾತು ಕೇಳಿದ ಸೆಲ್ವಿಗೆ ಏನೇನೊ ಆಲೋಚನೆಗಳು ಸುತ್ತಿಕೊಂಡವು. ಸೆಲ್ವಿ ಗಣಿ ಕಾರ್ಮಿಕ ಮಣಿಯನ್ನು ಮದುವೆ ಮಾಡಿಕೊಂಡಿದ್ದು. ಮಣಿ ತಂದೆ ಸೆಲ್ವಮ್ ಅಪಘಾತದಲ್ಲಿ ಸತ್ತುಹೋಗಿದ್ದು. ಅವಳ ತಂದೆ ಅಯ್ಯಪ್ಪನಿಗೆ ಸಿಲಿಕೋಸಿಸ್ ಬಂದು ಸತ್ತುಹೋಗಿದ್ದು. ಮಣಿ ಮತ್ತು ಸೆಲ್ವಿಯ ಮಧ್ಯೆ ತೊಂದರೆಗಳು; ಹೀಗೆ ಸಾಲು ಸಾಲಾಗಿ ಅವಳನ್ನು ಕಾಡತೊಡಗಿದವು. ಇಪ್ಪತ್ತು ವರ್ಷಗಳ ಹಿಂದೆ ಸೆಲ್ವಿ ತಾನು ಬಸರಿಯಾದಾಗ ಅಪ್ಪ ಅಮ್ಮನಿಗೆ ಹೇಳಿ ಬಸರಿ ತೆಗೆಸಿ ಡಿಗ್ರಿ ಮುಗಿಸಿ ಒಂದು ಕೆಲಸಕ್ಕೆ ಸೇರಿಕೊಂಡು ಬೇರೆ ಯಾರನ್ನಾದರೂ ಮದುವೆ ಮಾಡಿಕೊಂಡಿದ್ದರೆ? ತನ್ನ ಬದುಕು ಈ ರೀತಿ ಇರುತ್ತಿರಲಿಲ್ಲ!
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ ಡಾ. ಎಂ. ವೆಂಕಟಸ್ವಾಮಿ |  Apr 12, 2025 | ದಿನದ ಅಗ್ರ ಬರಹ | ಕೋಮಲ ಮಾತು ಕೇಳಿದ ಸೆಲ್ವಿಗೆ ಏನೇನ....

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿದೈವ ದರುಶನದ ನಂತರ ಜೇಮ್ಸ್ ತನ್ನ ಪತ್ನಿಯ ಕಾಲಿಗೆ ಮುಲಾಮು ಹಚ್ಚಿ ನೇವೇರ...
11/04/2025

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿ

ದೈವ ದರುಶನದ ನಂತರ ಜೇಮ್ಸ್ ತನ್ನ ಪತ್ನಿಯ ಕಾಲಿಗೆ ಮುಲಾಮು ಹಚ್ಚಿ ನೇವೇರಿಸುವ ದೃಶ್ಯ ಬರುತ್ತದೆ. ಅದನ್ನು ಸ್ನಾನ ಮುಗಿಸಿ ಬರುವ ಮಗ ನೋಡುತ್ತಾ ನಿಲ್ಲುತ್ತಾನೆ. ಗಂಡಸರ ತುಕ್ಕು ಹಿಡಿದ ಈಗೋಗಳಿಗೆ ಈ ದೃಶ್ಯ ಚಾಟಿ ಏಟಿನಂತೆ ಕಾಣುತ್ತದೆ. ಮುಂದೆ, ಜೇಮ್ಸ್ ಕಾಣೆಯಾಗಿ ಸುಂದರಂ ಆಗಿ ಬದಲಾದಾಗ, ಬಸ್ಸಿನಲ್ಲಿದ್ದ ಒಂದು ಪರಿವಾರ ಎರ್ನಾಕುಳಮ್ ನತ್ತ ಸಾಗುವ ಗಾಡಿಯ ಹತ್ತಿ ಹೋಗಿ ಬಿಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ನನ್ ಪಾಕಲ್ ನೆರತು ಮಾಯಕಮ್’ ಸಿನಿಮಾದ ವಿಶ್ಲೇಷಣೆ

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿ ರಾಮ್ ಪ್ರಕಾಶ್ ರೈ ಕೆ. |  Apr 11, 2025 | ದಿನದ ಅಗ್ರ ಬರಹ | ದೈವ ದರುಶನದ ನಂ.....

“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್‌ ಬರಹಬಂಗಾಳದ ರಕ್ತ ಚರಿತ್ರೆಯನ್ನು ಲಕ್ಷಾಂತರ ಜನರ ನಿತ್ಯ ನರಕವನ್ನು ಪ್ರಭುತ್ವಗಳ ನಾಚಿಕೆಗೇಡ...
10/04/2025

“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್‌ ಬರಹ

ಬಂಗಾಳದ ರಕ್ತ ಚರಿತ್ರೆಯನ್ನು ಲಕ್ಷಾಂತರ ಜನರ ನಿತ್ಯ ನರಕವನ್ನು ಪ್ರಭುತ್ವಗಳ ನಾಚಿಕೆಗೇಡಿನ ಹುಸಿತನವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಈ ಕೃತಿ ತೆರೆದಿಡುತ್ತದೆ. ಹಳೆಯ ಕಳೆದ ಶತಮಾನದ ಕೊನೆಯಲ್ಲಿ ನಮ್ಮ ದೇಶದಲ್ಲಿ ಹಲವು ಹೆಸರಾಂತ ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆಯನ್ನು ಅವರ ಅಸಲಿ ಮುಖವನ್ನು ತೆರೆದಿಡುತ್ತದೆ. “ವಿರೋಧಿಗಳು ನನಗೆ ಪ್ರೀತಿ ತೋರಿಸಿದಾಗ ಸಾಧ್ಯವಾಗದ್ದು, ಕೋಪ ತೋರಿಸಿದಾಗ ಸಾಧ್ಯವಾಗಿದೆ. ನನ್ನ ಕೋಪವನ್ನು ಅವರು ಜೀವಂತವಾಗಿಟ್ಟಿದ್ದಾರೆ. ಅವರ ಕೋಪದ ಫಲ ಶ್ರುತಿಯೇ ನನ್ನ ಪುಸ್ತಕ.” ಬ್ಯಾಪಾರಿಯವರ ಮಾತಿದು.
ಮನೋರಂಜನ್‌ ಬ್ಯಾಪಾರಿಯವರ ಆತ್ಮಕತೆಯನ್ನು ಡಾ. ಎಚ್. ಎಸ್.ನಾಗಭೂಷಣ “ಚಾಂಡಾಳನೊಬ್ಬನ ಆತ್ಮ ವಿಮರ್ಶೆ” ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು ಇದರ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್‌ ಬರಹ ದೇವಿಕಾ ನಾಗೇಶ್ |  Apr 10, 2025 | ದಿನದ ಅಗ್ರ ಬರಹ | ಬಂಗಾಳದ ರಕ್ತ ಚರಿತ್ರೆಯನ್ನು ಲ.....

ಸ್ರೀರಾಮ್ನೋಮಿ: ಸುಮಾ ಸತೀಶ್ ಸರಣಿರಾಮುನ್ನ ಒಲಿಸ್ಕಣಾದು ಕಷ್ಟ. ಹನುಮಂತನ್ನ ಒಲಿಸ್ಕಣಾದು ಸುಲ್ಬ. ರಾಮಾ ಅಂದ್ರೆ ಸಾಕು ಹನುಮ ಓಡೋಡ್ಕಂಡು ಬರ್ತಾನ...
09/04/2025

ಸ್ರೀರಾಮ್ನೋಮಿ: ಸುಮಾ ಸತೀಶ್ ಸರಣಿ

ರಾಮುನ್ನ ಒಲಿಸ್ಕಣಾದು ಕಷ್ಟ. ಹನುಮಂತನ್ನ ಒಲಿಸ್ಕಣಾದು ಸುಲ್ಬ. ರಾಮಾ ಅಂದ್ರೆ ಸಾಕು ಹನುಮ ಓಡೋಡ್ಕಂಡು ಬರ್ತಾನೆ. ಆಗ ಬ್ಯಾರೆ ಆಟ ಕಟ್ದೆ ರಾಮ್ನೂ ಹಿಂದಿಂದ್ಲೇ ಬತ್ತಾನೆ‌ ಅಂಬೋದು ಅಜ್ಜಿ ಯೋಳ್ತಿದ್ದ ಇಚಾರ. ಅಂಗಾಗಿ ರಾಮನ ಹತ್ರುಕ್ಕೆ ಹೋಗಾಕೆ ಸಲೀಸು ಹನುಮಂತನ ಭಜನೆ ಮಾಡೋದು. ಹನುಮ ಕಪಿ ಅಲ್ವೇ. ಕಿಚಪಿಚಾಂತ ನಾವೂ ಕಪಿಗಳಂಗೇ ಭಜನೆ ಹಾಡ್ತಿದ್ವಿ. ಮರದಾಗಿರೋವೂ ಜಾತಿಪ್ರೀತಿಗೆ ಓಡಿಬರೋ ಅಂಗೆ ಇರ್ತಿತ್ತು ನಮ್ಮ ಆಲಾಪ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿಯಲ್ಲಿ ರಾಮನವಮಿಯ ಆಚರಣೆಯ ಕುರಿತ ಬರಹ ನಿಮ್ಮ ಓದಿಗೆ

ಸ್ರೀರಾಮ್ನೋಮಿ: ಸುಮಾ ಸತೀಶ್ ಸರಣಿ ಸುಮಾ ಸತೀಶ್ |  Apr 9, 2025 | ದಿನದ ಅಗ್ರ ಬರಹ | ರಾಮುನ್ನ ಒಲಿಸ್ಕಣಾದು ಕಷ್ಟ. ಹನುಮಂತನ್ನ ಒಲಿಸ್ಕಣಾದು ಸು.....

ಓದುತ್ತಿದ್ದಾಗಲೇ ನಾನು ಮೇಷ್ಟ್ರು ಎಂಬ ಸುಳ್ಳಿನ‌ ಕತೆ ಕಟ್ಟಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿಅವಳು “ನಿಮ್ಮ ತರಹದವರನ್ನೇ ನಾನು ಕಾಲೇಜಿನಲ್...
08/04/2025

ಓದುತ್ತಿದ್ದಾಗಲೇ ನಾನು ಮೇಷ್ಟ್ರು ಎಂಬ ಸುಳ್ಳಿನ‌ ಕತೆ ಕಟ್ಟಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಅವಳು “ನಿಮ್ಮ ತರಹದವರನ್ನೇ ನಾನು ಕಾಲೇಜಿನಲ್ಲಿ ನೋಡಿದೆ” ಎಂದಾಗ ನಾನು ನಗುತ್ತಾ “ಹೋ.. ಹೋ… ಅವನಾ? ನನ್ನ ತಮ್ಮ, ಅವನನ್ನು ನೋಡಿ ನೀನು ನಾನೇ ಎಂದು ಭಾವಿಸಿದೆಯಾ” ಎಂದು ಹೊಸ ಕಥೆ ಕಟ್ಟಿದೆ. ಆಗ ಅವಳು “ಅದ್ಹೇಗೆ? ನೀವಿಬ್ಬರೂ ಒಂದೇ ಕ್ಲಾಸಲ್ಲಿ ಇರಬೇಕಿತ್ತಲ್ವಾ?” ಎಂದಾಗ “ಹೋ ಹೋ ಅದಾ ಅವನು ಫೇಲ್ ಆಗೀ ಆಗೀ ಹಿಂದಕ್ಕೆ ಉಳಿದುಕೊಂಡ ನಾನು ಪಾಸ್ ಆಗೀ ಆಗೀ ಮುಂದಕ್ಕೆ ಹೋದೆ” ಎಂದೆ. ಅವಳು ನಂಬಿದಳು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೈದನೆಯ ಕಂತು ನಿಮ್ಮ ಓದಿಗೆ

ಓದುತ್ತಿದ್ದಾಗಲೇ ನಾನು ಮೇಷ್ಟ್ರು ಎಂಬ ಸುಳ್ಳಿನ‌ ಕತೆ ಕಟ್ಟಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ ಬಸವನಗೌಡ ಹೆಬ್ಬಳಗೆರೆ |  Apr 8, 2025 | ದ....

ವೈ ದಿಸ್ ಡೆಲಿವರಿ ಡೆಲಿವರಿ ಡಿ…: ಸುಮಾವೀಣಾ ಸರಣಿಮೊನ್ನೆ ಆಚೆ ಹೋಗಕೆ ಇದ್ದೆ. ಅಲ್ಲೊಬ್ಬ ಡೆಲಿವರಿ ಬಾಯ್ ಫೋನ್ ಲೌಡಲ್ಲಿ ಇಟ್ಕೊಂಡು “ಹಲೋ ಇವತ್ತ...
07/04/2025

ವೈ ದಿಸ್ ಡೆಲಿವರಿ ಡೆಲಿವರಿ ಡಿ…: ಸುಮಾವೀಣಾ ಸರಣಿ

ಮೊನ್ನೆ ಆಚೆ ಹೋಗಕೆ ಇದ್ದೆ. ಅಲ್ಲೊಬ್ಬ ಡೆಲಿವರಿ ಬಾಯ್ ಫೋನ್ ಲೌಡಲ್ಲಿ ಇಟ್ಕೊಂಡು “ಹಲೋ ಇವತ್ತು ಡಿಲೆವರಿ ಇತ್ತು” ಎಂದ. ಆಚೆಕಡೆಯಿಂದ ಹಲೋ ತಮ್ಮ ಹೆಸರು ಅಂದ್ರೆ ರತ್ನ ಅಂದ್ರು. ಹೌದು ಮೇಡಮ್ ಡೆಲಿವರಿ ಮಾಡ್ತೀನಿ ನೀವ್ ಇರ್ತೀರ ಎಂದರೆ ಆ ಕಡೆಯಿಂದ ಇಲ್ಲ ನನ್ ಮಗಳ್ ಇರ್ತಾಳೆ ಫೋನ್ ಮಾಡಿ ಹೇಳ್ತೀನಿ… ಹಣ ಕಳ್ಸ್ತೀನಿ ಅಲ್ಲೆ ಡೆಲಿವರಿ ಮಾಡಿ” ಅನ್ನೋದ. ನನಗೆ “ಡೆಲಿವರಿ ಕೊಡಿ” ಅಂದ್ರೆ ಏನಾಗ್ತಿತ್ತು ಹಾಳಾದವರಿಗೆ ಅನ್ನಿಸಿ ಮುಂದೆ ಹೋದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೈದನೆಯ ಬರಹ ನಿಮ್ಮ ಓದಿಗೆ

ವೈ ದಿಸ್ ಡೆಲಿವರಿ ಡೆಲಿವರಿ ಡಿ…: ಸುಮಾವೀಣಾ ಸರಣಿ ಸುಮಾವೀಣಾ |  Apr 7, 2025 | ದಿನದ ಅಗ್ರ ಬರಹ | ಮೊನ್ನೆ ಆಚೆ ಹೋಗಕೆ ಇದ್ದೆ. ಅಲ್ಲೊಬ್ಬ ಡೆಲಿವರ...

‘ರೈತ ಕವಿ’ ಲೆನಾರ್ಟ್ ಸ್ಯೋಗ್ರೆನ್ : ಎಸ್. ಜಯಶ್ರೀನಿವಾಸ ರಾವ್ ಸರಣಿಈ ಕಾರ್ಯದ ವಿರೋಧಾಭಾಸದ ಸ್ವರೂಪವು ಅವರ ಕವಿತೆಗಳಿಗೆ ಒಂದು ರೀತಿಯ ಮೊಂಡುತನ...
07/04/2025

‘ರೈತ ಕವಿ’ ಲೆನಾರ್ಟ್ ಸ್ಯೋಗ್ರೆನ್ : ಎಸ್. ಜಯಶ್ರೀನಿವಾಸ ರಾವ್ ಸರಣಿ

ಈ ಕಾರ್ಯದ ವಿರೋಧಾಭಾಸದ ಸ್ವರೂಪವು ಅವರ ಕವಿತೆಗಳಿಗೆ ಒಂದು ರೀತಿಯ ಮೊಂಡುತನದ ನಿಷ್ಠುರತೆಯನ್ನು ನೀಡುತ್ತದೆ. ಮೌನದ ದಿಕ್ಕಿನಲ್ಲಿ ಮಾತನಾಡುವ ಈ ಮಾತು, ಭಾಷೆಯ ಮೂಲಕ ಭಾಷೆಯಿಲ್ಲದವರ ಜಗತ್ತನ್ನು ವ್ಯಾಖ್ಯಾನಿಸುವ ಈ ಪ್ರಯತ್ನ – ಅದರೊಂದಿಗೆ, ಯಾವಾಗಲೂ ಅಡಗಿರುವ ವೈಫಲ್ಯದ ಭಾವನೆಯ ಜೊತೆ – ಸ್ಯೋಗ್ರೆನ್ ಅವರು ಇದನ್ನು ಮುವ್ವತ್ತಕ್ಕೂ ಹೆಚ್ಚು ಕವನ ಸಂಕಲನಗಳಲ್ಲಿ ನಿರಂತರವಾಗಿ ಮತ್ತು ಸಮಚಿತ್ತದಿಂದ ನಿರ್ವಹಿಸುತ್ತಾ ಬಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಲೆನಾರ್ಟ್ ಸ್ಯೋಗ್ರೆನ್-ರವರ (Lennart Sjögren, 1930) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

‘ರೈತ ಕವಿ’ ಲೆನಾರ್ಟ್ ಸ್ಯೋಗ್ರೆನ್ : ಎಸ್. ಜಯಶ್ರೀನಿವಾಸ ರಾವ್ ಸರಣಿ ಎಸ್. ಜಯಶ್ರೀನಿವಾಸ ರಾವ್ |  Apr 7, 2025 | ದಿನದ ಅಗ್ರ ಬರಹ | ಈ ಕಾರ್ಯದ ವಿ....

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ...
06/04/2025

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ. ಅವನು ಬೆಳೆದ ಆಹಾರವನ್ನು ಅನುಭೋಗಿಸುವವರು ಇರದಿದ್ದರೆ ಅವನಿಗೆ ಅಸ್ತಿತ್ವ ಇರುವುದಿಲ್ಲ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಡಾ. ವಿಶ್ವನಾಥ ಎನ್ ನೇರಳಕಟ್ಟೆ |  Apr 6, 2025 | ದಿನದ ಅಗ್ರ ಬರಹ | “ನಮ್ಮ ಅಸ್ತಿತ್ವ ಇರ.....

ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪ್ರತಿದಿನವೂ ಆಸ್...
05/04/2025

ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣ

ಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪ್ರತಿದಿನವೂ ಆಸ್ಟ್ರೇಲಿಯನ್ ನಗರಗಳ ಹೊರವಲಯಗಳಲ್ಲಿ ವಾಸಿಸುತ್ತಿರುವ ವಲಸಿಗ ಸಮುದಾಯಗಳಿಗೆ ಭೇಟಿಕೊಟ್ಟು, ಭರವಸೆಗಳನ್ನು ಕೊಡುತ್ತಿದ್ದಾರೆ. ತಾವು ವಲಸಿಗರ ‘ಆಸ್ಟ್ರೇಲಿಯನ್ ಕನಸು’ ಎಂಬುದಕ್ಕೆ ಬೆಂಬಲ ಕೊಟ್ಟು, ವಲಸಿಗರ ಜೀವನವನ್ನು ಹಸನು ಮಾಡುವ ಮಾತನ್ನು ಆಡುತ್ತಿದ್ದಾರೆ. ವಲಸಿಗರೂ ಅಷ್ಟೇ, ಬಹಳ ಆಸಕ್ತಿಯಿಂದ ಚುನಾವಣಾ ವಿಷಯಗಳಲ್ಲಿ ಭಾಗವಹಿಸುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣ ಡಾ. ವಿನತೆ ಶರ್ಮ |  Apr 5, 2025 | ದಿನದ ಅಗ್ರ ಬರಹ | ಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸ....

ಬದುಕೆಂದರೆ ಜಟಕಾ ಬಂಡಿಯೇ ಇನ್ನೇನೂ ಅಲ್ಲ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ   ಪಕ್ಕದಲ್ಲಿ ಸ್ಟೂಲ್ ಮೇಲೆ ಕುಳಿತಿರುವ ವಿಜಯ ಕೂಡ ಸಣ್ಣಗೆ ಇಳಿದುಹ...
05/04/2025

ಬದುಕೆಂದರೆ ಜಟಕಾ ಬಂಡಿಯೇ ಇನ್ನೇನೂ ಅಲ್ಲ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿ ಸ್ಟೂಲ್ ಮೇಲೆ ಕುಳಿತಿರುವ ವಿಜಯ ಕೂಡ ಸಣ್ಣಗೆ ಇಳಿದುಹೋಗಿದ್ದಾಳೆ. ಆದರೂ ಅವಳ ಮುಖದ ಮೇಲಿನ ಕಾಂತಿ ಇನ್ನೂ ಒಂದಷ್ಟು ಉಳಿದುಕೊಂಡಿದೆ. ಅವಳ ಗಂಡ ಚಿನ್ನದ ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಜ್ಞಾಪಕದಂತೆ ಅವಳ ಕಿವಿಗಳಲ್ಲಿ ಚಿನ್ನದ ಓಲೆಗಳು ಕಾಣಿಸುತ್ತಿವೆ. ವಾರ್ಡ್‌ನ ಎರಡೂ ಕಡೆ ಗೋಡೆಗಳ ಪಕ್ಕ ಸಾಲಾಗಿ ಹಾಸಿರುವ ಹಾಸಿಗೆಗಳ ಮೇಲೆ ಗಣಿ ಕಾರ್ಮಿಕರು ಹಾಸಿಗೆಗಳಲ್ಲಿ ಕುಳಿತು ಮಲಗಿ ಮಾತನಾಡುತ್ತಿದ್ದಾರೆ. ಈ ವಾರ್ಡ್‌ನಲ್ಲಿ ಬರೀ ಗಣಿ ರೋಗಗಳಿಂದ ಬಳಲುತ್ತಿರುವ ಕಾರ್ಮಿಕರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

ಬದುಕೆಂದರೆ ಜಟಕಾ ಬಂಡಿಯೇ ಇನ್ನೇನೂ ಅಲ್ಲ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ ಡಾ. ಎಂ. ವೆಂಕಟಸ್ವಾಮಿ |  Apr 5, 2025 | ಸಾಹಿತ್ಯ | ಪಕ್ಕದಲ್ಲಿ ಸ್ಟ.....

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡ...
04/04/2025

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡರ್ ಕಂಬಿ ಕಟ್ಟಿದ. ಕಾಂಕ್ರೀಟು ದಿವಸ ಅವನಿರಲಿ ಅಂತ ಮಲ್ಲಯ್ಯ ಹೇಳಲಿಲ್ಲ, ನಾನೂ ಅವನಿಗೆ ಹೇಳಲಿಲ್ಲ. ಕಾಂಕ್ರಿಟ್ ಹಾಕ್ತಾ ಇದಾರೆ. ಮೆಟ್ಟಲಿಗೆ ಅಂತ ಕಟ್ಟಿದ ಕಂಬಿ ಮುಂದಿನಿಂದ ಮೆಟ್ಟಲು ಏರುವ ರೀತಿ ಇರಬೇಕಿತ್ತು. ಅದು ಹೇಗೆ ಇಟ್ಟರೂ ಸರಿ ಬರ್ತಿಲ್ಲ! ನೋಡಿ ನಿಮ್ಮೋನು ಮಾಡಿರೋ ತಿರುಪತಿ ಕೆಲಸ. ಅವನಿಗೆ ಈಗಲೇ ಬರಕ್ಕೆ ಹೇಳಿ…! ಅವನನ್ನ ಹುಡುಕಿ ನಾನೆಲ್ಲಿ ಹೋಗಲಿ ಆ ಸಮಯದಲ್ಲಿ? ಫೋನ್ ಬೇರೆ ಇಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೇಳನೆಯ ಕಂತು

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ ಎಚ್. ಗೋಪಾಲಕೃಷ್ಣ |  Apr 4, 2025 | ದಿನದ ಅಗ್ರ ಬರಹ | ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, .....

ಸ್ತ್ರೀ ಅಸ್ಮಿತೆಯ ವಿಭಿನ್ನ ನೆಲೆಗಳು: ಡಾ. ಎಲ್.ಜಿ. ಮೀರಾ ಅಂಕಣಸ್ತ್ರೀತ್ವವನ್ನು, ಅದರಿಂದ ಹೊಮ್ಮುವ ಅರಿವನ್ನು ತಾತ್ವಿಕವಾಗಿ ನಿರ್ವಚಿಸುವುದು ...
04/04/2025

ಸ್ತ್ರೀ ಅಸ್ಮಿತೆಯ ವಿಭಿನ್ನ ನೆಲೆಗಳು: ಡಾ. ಎಲ್.ಜಿ. ಮೀರಾ ಅಂಕಣ

ಸ್ತ್ರೀತ್ವವನ್ನು, ಅದರಿಂದ ಹೊಮ್ಮುವ ಅರಿವನ್ನು ತಾತ್ವಿಕವಾಗಿ ನಿರ್ವಚಿಸುವುದು ಒಂದು ಬಗೆಯಾದರೆ, ಪ್ರಸ್ತುತ ಬದುಕನ್ನು ಕಾಣುವ-ಕಟ್ಟುವ ಕ್ರಮವೊಂದನ್ನು ಅದು ನೀಡುವುದೇ ಎಂದು ಅನ್ವಯಕ್ರಮದಿಂದ ನೋಡುವುದು ಇನ್ನೊಂದು ಬಗೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಸ್ತ್ರೀಯ ಅಸ್ಮಿತೆಯು ಎದುರಿಸುತ್ತಿರುವ ಸವಾಲುಗಳನ್ನು ಚೇತನಾ ಗುರುತಿಸಿದ್ದಾರೆ ……. ಮಹಿಳೆಯರು ತಮ್ಮನ್ನು ಸ್ವಯಂ ಸಂಘಟಿಸಿಕೊಳ್ಳಲು ತಮ್ಮ ಅಸ್ಮಿತೆಯ ಮೂಲ ಸ್ವರೂಪ ಹಾಗೂ ಶಕ್ತಿ ಸಾಧ್ಯತೆಗಳನ್ನು ಅರಿಯುವುದು ಮೊದಲ ಹೆಜ್ಜೆ. ಇದು ಸಾಮಾಜಿಕ ಚಲನೆಗೂ ಪ್ರೇರಣೆಯಾಗುವ ಸಂಗತಿ. ಹೇರಿದ ಕವಚವನ್ನು ನಿಧಾನವಾಗಿ ಕಳಚಿಕೊಳ್ಳುತ್ತ ಅಸೀಮ ಆಗಸದೆಡೆಗೆ ನೋಟನೆಟ್ಟ ಸ್ತ್ರೀಸಂಕಥನವಿದು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನಾರನೆಯ ಬರಹ

ಸ್ತ್ರೀ ಅಸ್ಮಿತೆಯ ವಿಭಿನ್ನ ನೆಲೆಗಳು: ಡಾ. ಎಲ್.ಜಿ. ಮೀರಾ ಅಂಕಣ ಡಾ. ಎಲ್.ಜಿ. ಮೀರಾ |  Apr 4, 2025 | ದಿನದ ಅಗ್ರ ಬರಹ | ಸ್ತ್ರೀತ್ವವನ್ನು, ಅದರಿಂದ ...

ಕಡುಬಿನ ಪುರಾಣ: ಭವ್ಯ ಟಿ.ಎಸ್. ಸರಣಿಮಳೆಗಾಲದಲ್ಲಿ ಮಲೆನಾಡಿನ ಹಸು, ಎತ್ತುಗಳಿಗೆ ಹುರುಳಿಕಾಳು ಬೇಯಿಸಿ ಕೊಡುತ್ತಾರೆ. ಈ ಹುರುಳಿ ಬೇಯಿಸಿದ ನೀರಿಗ...
03/04/2025

ಕಡುಬಿನ ಪುರಾಣ: ಭವ್ಯ ಟಿ.ಎಸ್. ಸರಣಿ

ಮಳೆಗಾಲದಲ್ಲಿ ಮಲೆನಾಡಿನ ಹಸು, ಎತ್ತುಗಳಿಗೆ ಹುರುಳಿಕಾಳು ಬೇಯಿಸಿ ಕೊಡುತ್ತಾರೆ. ಈ ಹುರುಳಿ ಬೇಯಿಸಿದ ನೀರಿಗೆ ಹುರುಳಿಕಟ್ಟು ಎನ್ನುತ್ತಾರೆ. ಇದರ ರುಚಿ ಬಲ್ಲವರೇ ಬಲ್ಲರು. ಕುದ್ದು ದಪ್ಪಗಾಗಿ ಹದಗೊಂಡ ಹುರುಳಿಕಟ್ಟಿಗೆ ಸಾಸಿವೆ, ಬೆಳ್ಳುಳ್ಳಿ, ಕರಿಬೇವು, ಒಣ ಮೆಣಸಿನ ಒಗ್ಗರಣೆ ಕೊಟ್ಟು, ಸ್ವಲ್ಪ ವಾಟೆಹುಳಿ ಅಥವಾ ಹುಣಸೆಹಣ್ಣು ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿದರೆ ಘಮಘಮಿಸುವ ಹುರುಳಿಕಟ್ಟಿನ ಸಾರು ತಯಾರಾಗುತ್ತದೆ. ಇದನ್ನು ಕಡುಬಿಗೆ ಕಲಸಿ ತಿಂದರೆ ಸ್ವರ್ಗಕ್ಕೆ ಮೂರೇ‌ ಗೇಣು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಲೆನಾಡಿನ ಕಡುಬಿನ ಕುರಿತ ಬರಹ ನಿಮ್ಮ ಓದಿಗೆ

ಕಡುಬಿನ ಪುರಾಣ: ಭವ್ಯ ಟಿ.ಎಸ್. ಸರಣಿ ಭವ್ಯ ಟಿ.ಎಸ್. |  Apr 3, 2025 | ದಿನದ ಅಗ್ರ ಬರಹ | ಮಳೆಗಾಲದಲ್ಲಿ ಮಲೆನಾಡಿನ ಹಸು, ಎತ್ತುಗಳಿಗೆ ಹುರುಳಿಕಾಳು ...

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹಮಧ್ಯ ಪ್ರದೇಶದಲ್ಲಿನ ಕೆಲವು ಬುಡಕಟ್ಟುಗಳು ಕನ್ನಡಕ್ಕೆ ಬಲು ಹತ್ತಿರದ ಭಾಷೆಗಳನ್ನು ಮಾತನಾಡುತ್...
03/04/2025

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ

ಮಧ್ಯ ಪ್ರದೇಶದಲ್ಲಿನ ಕೆಲವು ಬುಡಕಟ್ಟುಗಳು ಕನ್ನಡಕ್ಕೆ ಬಲು ಹತ್ತಿರದ ಭಾಷೆಗಳನ್ನು ಮಾತನಾಡುತ್ತಾರೆ. ಇತ್ತೀಚೆಗೆ ಅದರ ಮೂಲ ಕರ್ನಾಟಕ ಮತ್ತು ಅವರೆಲ್ಲಾ ಎಲ್ಲೆಡೆ ಹಬ್ಬಿದ್ದ ನಮ್ಮ ಸಾಮ್ರಾಜ್ಯಗಳ ಜೀವಂತ ಮನುಷ್ಯ ಉಳಿಕೆಗಳು ಎಂಬುದು ಕಂಡು ಬಂದಿದೆ. ಮಹಾರಾಷ್ಟ್ರದ ಮರಾಠಿಯ ಕೊಂಕಣಿಯ ಬೆಳವಣಿಗೆಯಲ್ಲಿ ಕನ್ನಡದ ಭಾಷೆಗಳ ಕೊಡುಗೆಯಿದೆ, ತೆಲುಗಿಗೆ ತಮಿಳಿಗೆ ಎಷ್ಟೋ ಕೊಡು-ಕೊಳ್ಳುವ ಪ್ರಕ್ರಿಯೆಗಳಾಗಿವೆ. ಅದು ನಾವು ಉಪಯೋಗಿಸುವ ಎಷ್ಟೋ ಪದಗಳಲ್ಲಿ, ಅಕ್ಷರಗಳಲ್ಲಿ ತೋರುತ್ತದೆ.
ಕನ್ನಡ ಭಾಷೆ ಮತ್ತು ಅದರ ಬಳಕೆಯ ಕುರಿತು ದರ್ಶನ್‌ ಜಯಣ್ಣ ಬರಹ

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ ದರ್ಶನ್ ಜಯಣ್ಣ |  Apr 3, 2025 | ದಿನದ ಅಗ್ರ ಬರಹ | ಮಧ್ಯ ಪ್ರದೇಶದಲ್ಲಿನ ಕೆಲವು ಬುಡಕಟ್ಟುಗ.....

ಯುಗ ಯುಗಾದಿ ಕಳೆದರೂ ಮರೆಯಲಾಗದ ಸಂಭ್ರಮ: ಸುಮಾ ಸತೀಶ್ ಸರಣಿಮನೆ ಹೆಂಗಸರಿಗೆ ಮಧ್ಯರಾತ್ರಿಯಿಂದಲೇ ಸುರುವಾಗ್ತಿತ್ತು. ಬೆಳಗಿನ ಜಾವ ಎರಡು ಗಂಟೆಯಿಂ...
02/04/2025

ಯುಗ ಯುಗಾದಿ ಕಳೆದರೂ ಮರೆಯಲಾಗದ ಸಂಭ್ರಮ: ಸುಮಾ ಸತೀಶ್ ಸರಣಿ

ಮನೆ ಹೆಂಗಸರಿಗೆ ಮಧ್ಯರಾತ್ರಿಯಿಂದಲೇ ಸುರುವಾಗ್ತಿತ್ತು. ಬೆಳಗಿನ ಜಾವ ಎರಡು ಗಂಟೆಯಿಂದಲೇ ಹೂರಣ ರುಬ್ಬುವ, ಒಬ್ಬಟ್ಟು ತಟ್ಟುವ, ಬೇಯಿಸುವ ಸದ್ದು. ಹೋಳಿಗೆ ವಾಸನೆಗೆ ಊರೆಲ್ಲಾ ಘಮಗುಡುತ್ತಿತ್ತು. ಒಬ್ಬಟ್ಟು ಸಾರು ಮರಳಿಸುತ್ತಿದ್ದರೆ ಮೂಗಿನ ಹೊಳ್ಳೆಗಳು ಅರಳಿ, ನಿಮಿರುತ್ತಿದ್ದವು. ದೊಡ್ಡ ದೊಡ್ಡ ಬೇಸನ್ನುಗಳಲ್ಲಿ ಒಬ್ಬಟ್ಟಿನ ರಾಶಿ. ಆಗೆಲ್ಲಾ ಒಬ್ಬೊಬ್ಬರೂ ಹತ್ತು – ಹನ್ನೆರಡು ಒಬ್ಬಟ್ಟು, ಸಣ್ಣಮಿಳ್ಳೆ ತುಪ್ಪ – ಬಟ್ಟಲು ಹಾಲು ಹಾಕಿಕೊಂಡು ಬಾರಿಸುತ್ತಿದ್ದರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಯುಗಾದಿಯ ಸಂಭ್ರಮಗಳ ಕುರಿತ ಬರಹ ನಿಮ್ಮ ಓದಿಗೆ

ಯುಗ ಯುಗಾದಿ ಕಳೆದರೂ ಮರೆಯಲಾಗದ ಸಂಭ್ರಮ: ಸುಮಾ ಸತೀಶ್ ಸರಣಿ ಸುಮಾ ಸತೀಶ್ |  Apr 2, 2025 | ದಿನದ ಅಗ್ರ ಬರಹ | ಮನೆ ಹೆಂಗಸರಿಗೆ ಮಧ್ಯರಾತ್ರಿಯಿಂ.....

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ  ಕೊಲಂಬಿಯಾದಲ್ಲಿ ದೊಡ್ಡವರು ಮಾತ್ರವಲ್ಲ, ಚಿಕ್ಕ ಮಕ್ಕಳೂ ಸಹ ಕಾಫಿಪ್ರಿಯರು. ...
01/04/2025

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಕೊಲಂಬಿಯಾದಲ್ಲಿ ದೊಡ್ಡವರು ಮಾತ್ರವಲ್ಲ, ಚಿಕ್ಕ ಮಕ್ಕಳೂ ಸಹ ಕಾಫಿಪ್ರಿಯರು. ಊಟದ ನಂತರವೂ ಸಹ ಕಾಫಿ ಕುಡಿಯುವ ಅಭ್ಯಾಸವನ್ನು ಇವರು ಇಟ್ಟುಕೊಂಡಿದ್ದಾರೆ. ರಾತ್ರಿಯ ಊಟದ ನಂತರ ಹೆತ್ತವರೇ ತಮ್ಮ ಮಕ್ಕಳಿಗೆ ಕಾಫಿಯನ್ನು ಕುಡಿಯುವುದಕ್ಕೆ ಕೊಡುತ್ತಾರೆ. ಇದನ್ನು ‘ಕಾಫಿ ಕಾನ್ ಲೆಚೆ’ ಎಂದು ಕೊಲಂಬಿಯನ್ ಭಾಷೆಯಲ್ಲಿ ಕರೆಯಲಾಗುತ್ತದೆ. ಅಂದರೆ ‘ಹಾಲಿನ ಜೊತೆಗೆ ಕಾಫಿ’ ಎಂದರ್ಥ. ಮಕ್ಕಳಿಗೆ ಹಾಲಿನ ಜೊತೆಗೆ ಬೆರೆಸಿದ ಲೈಟಾದ ಕಾಫಿಯನ್ನು ಕೊಡುವ ದೊಡ್ಡವರು ಸ್ಟ್ರಾಂಗ್ ಕಾಫಿಯನ್ನೇ ಕುಡಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕೊಲಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ ಡಾ. ವಿಶ್ವನಾಥ ಎನ್ ನೇರಳಕಟ್ಟೆ |  Apr 1, 2025 | ದಿನದ ಅಗ್ರ ಬರಹ | ಕೊಲಂಬಿಯಾ...

ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹಮೀನು ಎಂದಿನಂತೆ ನೂರು ಮೀಟರ್ ರೇಸಿನಲ್ಲಿ ಬಿದ್ದಿತ್ತು. ಹೆಂಡತಿಗೆ ಕರೆದು ತೋರಿಸಿದೆ. ‘ಎಲ್ಲಿ ಸಾಯ...
01/04/2025

ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ

ಮೀನು ಎಂದಿನಂತೆ ನೂರು ಮೀಟರ್ ರೇಸಿನಲ್ಲಿ ಬಿದ್ದಿತ್ತು. ಹೆಂಡತಿಗೆ ಕರೆದು ತೋರಿಸಿದೆ. ‘ಎಲ್ಲಿ ಸಾಯಲಿಕ್ಕೆ ಬಂದಿದೆಯೆನೋ’ ಎಂದು ಉತ್ತರಿಸಿ ಮನೆಗೆಲಸದಲ್ಲಿ ತೊಡಗಿಸಿಕೊಂಡಳು. ನಮಗೆ ಮೀನನ್ನು ಸಂಭಾಳಿಸುವುದಕ್ಕಿಂತ ಮಕ್ಕಳನ್ನು ನಿಯಂತ್ರಿಸುವುದೇ ಕಷ್ಟಕರವಾಗಿತ್ತು. ಎಲ್ಲಿ ಬೌಲನ್ನು ಬಿಳಿಸುತ್ತಾರೋ…. ಎಂಬ ಭಯ..! ಮಗಳು ಕಿಡ್ಡಿಯಂತೂ “ಹತ್ರ ಹೋಗಬೇಡ ಬಾಂಬಿ ಮೀನು ಕಚ್ಚುತ್ತೆ” ಎಂದು ತನ್ನ ತೊದಲು ನುಡಿಯಲ್ಲಿ ಅಣ್ಣನಿಗೆ ಉಪದೇಶ ನೀಡಿ ತಾನೆ ಬೌಲ್‌ನ ಮುಂದೆ ಮೀನುಗಳು ಭಯ ಬೀಳುವಂತೆ ಹಲ್ಲು ಕಿರಿದುಕೊಂಡು ನಿಲ್ಲುತ್ತಿದ್ದಳು.
ಮಯೂರ ಬಿ ಮಸೂತಿ ಬರಹ ನಿಮ್ಮ ಓದಿಗೆ

ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ ಮಯೂರ ಬಿ ಮಸೂತಿ |  Apr 1, 2025 | ಸಂಪಿಗೆ ಸ್ಪೆಷಲ್ | ಮೀನು ಎಂದಿನಂತೆ ನೂರು ಮೀಟರ್ ರೇಸಿನಲ್ಲಿ ಬ....

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವೈದ್ಯಕೀಯ ಯಂತ್ರಗಳು ಹಗಲು ಹೊತ್ತು ಕೊಂಯ ಕೊಂಯ ಮಾಡುವು...
31/03/2025

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವೈದ್ಯಕೀಯ ಯಂತ್ರಗಳು ಹಗಲು ಹೊತ್ತು ಕೊಂಯ ಕೊಂಯ ಮಾಡುವುದನ್ನು ಸಹಿಸಿದರೂ ರಾತ್ರಿಯ ನೀರವ ವಾತಾವರಣದಲ್ಲಿ ಕಿರಿಕಿರಿ ಎನಿಸುತ್ತಿತ್ತು. ಅಂಥ ಪ್ರಸಂಗಗಳಲ್ಲಿ ರೋಗಿಗಳು ಅಸಹಾಯಕರಾಗಿ ಸಹನೆ ಕಳೆದುಕೊಳ್ಳುವ ಸ್ಥಿತಿಯಲ್ಲಿರುತ್ತಾರೆ. ಆಗ ನಾನೊಂದು ಉಪಾಯ ಹುಡುಕಿದೆ. ಫ್ಯಾನಿನ ತಂಗಾಳಿಯ ಕಡೆಗೆ ಮಾತ್ರ ಲಕ್ಷ್ಯಕೊಟ್ಟು ಬೇರೆ ಏನನ್ನೂ ಯೋಚಿಸದೆ ಅದನ್ನೇ ಆನಂದಿಸುತ್ತಿದ್ದೆ. ಯಾವ ಮಗ್ಗುಲು ಹೊರಳಿ ಮಲಗಿದರೆ ಖುಷಿ ಕೊಡುವುದೋ ಹಾಗೆ ಮಲಗಿ ಅದನ್ನೇ ಆನಂದಿಸುತ್ತಿದ್ದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 99ನೇ ಕಂತು ನಿಮ್ಮ ಓದಿಗೆ

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ ರಂಜಾನ್ ದರ್ಗಾ |  Mar 31, 2025 | ದಿನದ ಅಗ್ರ ಬರಹ | ರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವ....

Address


Alerts

Be the first to know and let us send you an email when Kendasampige posts news and promotions. Your email address will not be used for any other purpose, and you can unsubscribe at any time.

Contact The Business

Send a message to Kendasampige:

Shortcuts

  • Address
  • Alerts
  • Contact The Business
  • Claim ownership or report listing
  • Want your business to be the top-listed Media Company?

Share

Our Story

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ. ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ. ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ. ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.