ABC News Karnataka

ABC News Karnataka ಕನ್ನಡಿಗನಿಂದ ❤️ ಕನ್ನಡಿಗರಿಗೆ 🙏🏻🙏🏻
(1)

03/11/2025

ಕೃಷ್ಣ ಇನ್ನು ಜಾಸ್ತಿ ಡಾರ್ಲಿಂಗ್ ಆಗ್ಬಿಟ್ರು "Brat"ನಿಂದ Darling Krishna

03/11/2025

ಮನಿಷಾ ತಮ್ಮ ಜೊತೆಜೊತೆ ಒಲೆಯನ್ನು ತೋರ್ಸಿದ್ದೇ ಜಾಸ್ತಿ

ಗಿಲ್ಲಿ ನಟ ಎಷ್ಟು ಸ್ಟ್ರಾಂಗ್ ಅನ್ನೋದು ಗೊತ್ತಾಯ್ತು ಅನ್ಸುತ್ತೆ ಅಲ್ವಾ                 Courtesy - colors kannada
03/11/2025

ಗಿಲ್ಲಿ ನಟ ಎಷ್ಟು ಸ್ಟ್ರಾಂಗ್ ಅನ್ನೋದು ಗೊತ್ತಾಯ್ತು ಅನ್ಸುತ್ತೆ ಅಲ್ವಾ

Courtesy - colors kannada

03/11/2025

ಹೊಸ ತಂಡದೊಂದಿಗೆ ನಿಶಿದ್ದ ಹೇಳೋಕೆ ಹೊರಟಿದ್ದು | Nishidda Kannada Movie

03/11/2025

ಪರಪ್ಪನ್ನ ಅಗ್ರಹಾರದಿಂದ ಕೋರ್ಟ್ ಗೆ ಹಾಜರಾದ ದರ್ಶನ್

03/11/2025

ಮರಳುಗಾಡಿನಿಂದ ಕನ್ನಡಕ್ಕೆ ಬಂದ ನಟಿ ವಿಜೇತ ABC News Karnataka

ಭಾರತೀಯ ಮಹಿಳಾ ತಂಡಕ್ಕೆ 13 ನೇ ವಿಶ್ವ ಕಪ್                     ABC News Karnataka
02/11/2025

ಭಾರತೀಯ ಮಹಿಳಾ ತಂಡಕ್ಕೆ 13 ನೇ ವಿಶ್ವ ಕಪ್
ABC News Karnataka

*ದುನಿಯಾ ವಿಜಯ್ - ರಚಿತರಾಮ್ ಅಭಿನಯದ ಬಹು ನಿರೀಕ್ಷಿತ  "ಲ್ಯಾಂಡ್ ಲಾರ್ಡ್" ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.*  *ಕನ್ನಡ ರಾಜ್ಯೋತ್ಸವದಂದ...
02/11/2025

*ದುನಿಯಾ ವಿಜಯ್ - ರಚಿತರಾಮ್ ಅಭಿನಯದ ಬಹು ನಿರೀಕ್ಷಿತ "ಲ್ಯಾಂಡ್ ಲಾರ್ಡ್" ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.*

*ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಯಿತು ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ಸಾರಥಿ ಫಿಲಂಸ್ ನಿರ್ಮಾಣದ ಈ ಚಿತ್ರದ ದಿ ಸರ್ವೈವರ್ ಟೀಸರ್* .

ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ. ಈ ಶುಭದಿನದಂದು ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ. ಬಹು ನಿರೀಕ್ಷಿತ ಈ ಚಿತ್ರ 2026 ರ ಜನವರಿ 23 ರಂದು ಬಿಡುಗಡೆಯಾಗಲಿದೆ. ಜನವರಿ 20 ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಆ ಸಂದರ್ಭದಲ್ಲೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಖುಷಿಯಾಗಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

ಇಂತಹ ಉತ್ತಮ ಸಂದೇಶವಿರುವ ಈ ಕಥೆಯನ್ನು ತೆರೆಗೆ ತರುತ್ತಿರುವ ನಿರ್ದೇಶಕ ಜಡೇಶ್ ಕೆ ಹಂಪಿ ಹಾಗೂ ನಿರ್ಮಾಣ ಮಾಡುತ್ತಿರುವ ಕೆ.ವಿ.ಸತ್ಯಪ್ರಕಾಶ್ ಹಾಗೂ ಕೆ.ಎಸ್ ಹೇಮಂತ್ ಗೌಡ ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ದುನಿಯಾ ವಿಜಯ್, ಕಷ್ಟದ ಸಮಯದಲ್ಲಿ ‌ಕೈ‌ ಹಿಡಿದ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದರು. ಇನ್ನೂ, ನಾನು ಹಾಗೂ ರಚಿತರಾಮ್ ಅವರು ಒಂದೇ ಬಡಾವಣೆಯವರು. ಮೊದಲಿನಿಂದಲೂ ಸ್ನೇಹಿತರು. ಅವರ ಜೊತೆಗೆ ಅಭಿನಯಿಸಿದ್ದು ಹಾಗೂ ತೆರೆಯ ಮೇಲೆ ಅಷ್ಟೇ ಅಲ್ಲ. ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ತಂತ್ರಜ್ಞರ ಕಾರ್ಯವೈಖರಿಯೂ ಚೆನ್ನಾಗಿದೆ. ನಮ್ಮ ಚಿತ್ರ ಜನವರಿ 23 ರಂದು ತೆರೆಗೆ ಬರಲಿದೆ. ಚಿತ್ರ ನಿಮ್ಮೆಲ್ಲರಿಗೂ ಮೆಚ್ಚುಗೆಯಾಗುವ ಭರವಸೆಯಿದೆ ಎಂದರು.

ಈ ಸಂದರ್ಭದಲ್ಲಿ ನಟಿ ರಚಿತಾರಾಮ್ ಮಾತನಾಡುತ್ತಾ, ನಾನು ಈ ಚಿತ್ರದ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತು‌. ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆ‌ ನಾನು ದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ.‌ ಅವರು ಕೂಡ ಕಥೆ ಚೆನ್ನಾಗಿದೆ ಎಂದರು. "ಜಾನಿ ಜಾನಿ ಎಸ್ ಪಪ್ಪ" ಚಿತ್ರದ ನಂತರ ನಾನು ದುನಿಯಾ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ. ಈ ಚಿತ್ರತಂಡದೊಟ್ಟಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ನಿಂಗವ್ವ ನನ್ನ ಪಾತ್ರದ ಹೆಸರು. ಟೀಸರ್ ಚೆನ್ನಾಗಿದೆ. ಚಿತ್ರ ಜನವರಿ 23 ತೆರೆಗೆ ಬರಲಿದೆ. ಎಲ್ಲರೂ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದರು.

ಇದೊಂದು 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆ. 45 ವರ್ಷಗಳ ಹಿಂದಿನದ್ದನ್ನು ತೆರೆಯ ಮೇಲೆ ತರುವುದು ಅಷ್ಟು ಸುಲಭವಲ್ಲ. ನಾವು ಅಂದುಕೊಂಡ ಹಾಗೆ ಚಿತ್ರ ಬಂದಿದೆ ಅಂದರೆ ಅದಕ್ಕೆ ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ದುನಿಯಾ ವಿಜಯ್ ಅವರ ಅಭಿನಯಕ್ಕೆ ಅಭಿಮಾನಿ ನಾನು. ರಚಿತಾರಾಮ್ ಅವರು ಅಭಿನಯಿಸಲು ಸೆಟ್ ಗೆ ಬಂದರೆ ಅವರ ಸಂಭಾಷಣೆಗೆ ವಿಷಲ್ ಬೀಳುತ್ತಿತ್ತು. ರಿತನ್ಯ, ಶಿಶಿರ್,‌ ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಎಲ್ಲರ ಅಭಿನಯವೂ‌ ಬಹಳ ಚೆನ್ನಾಗಿದೆ. ಐವತ್ತಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಚೆನ್ನಾಗಿ ಬಂದಿದೆ. ಅದರಲ್ಲೂ ಯೋಗರಾಜ್ ಭಟ್ ಅವರು ಬರೆದು ದುನಿಯಾ ವಿಜಯ್ ಹಾಗೂ ರಚಿತರಾಮ್ ಅವರು ಅಭಿನಯಿಸಿರುವ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಅದು ಸರ್ವಕಾಲಿಕ ಹಿಟ್ ಹಾಡುಗಳ ಸಾಲಿಗೆ ಸೇರಲಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡಿದ್ದಾರೆ. ಜನವರಿ 23 ನಮ್ಮ ಚಿತ್ರ ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ಜಡೇಶ್ ಕೆ. ಹಂಪಿ.

"ಸಾರಥಿ" ಚಿತ್ರದ ಬಳಿಕ ಹದಿನಾಲ್ಕು ವರ್ಷಗಳ ನಂತರ ನಮ್ಮ ಸಂಸ್ಥೆಯಿಂದ "ಲ್ಯಾಂಡ್ ಲಾರ್ಡ್" ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕರು ಒಂದೊಳ್ಳೆ ಕಥೆ ಮಾಡಿದ್ದಾರೆ. ನೋಡುಗರು ಕೊಡುವ ದುಡ್ಡಿಗೆ ಐದು ಪಟ್ಟು ಹೆಚ್ಚು ಮನೋರಂಜನೆ ಕೊಡುವ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ದುನಿಯಾ ವಿಜಯ್, ರಚಿತರಾಮ್ ಅವರು ಸೇರಿದಂತೆ ಎಲ್ಲಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದರು ನಿರ್ಮಾಪಕ ಕೆ.ವಿ.ಸತ್ಯಪ್ರಕಾಶ್. ನಮ್ಮ ಚಿತ್ರ ಜನವರಿ 23ರಂದು ಬಿಡುಗಡೆಯಾಗಲಿದೆ. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಉತ್ತಮ ಚಿತ್ರಗಳು ನಿರ್ಮಾಣವಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಂದೆ ಕೆ.ವಿ.ಸತ್ಯಪ್ರಕಾಶ್ ಅವರ ಜೊತೆಗೂಡಿ ಈ ಚಿತ್ರವನ್ನು ನಿರ್ಮಿಸಿರುವ ಕೆ.ಎಸ್.ಹೇಮಂತ್ ಗೌಡ ತಿಳಿಸಿದರು.

ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದುನಿಯಾ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ. ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆರೀತಿಯ ಪ್ರೀತಿ ತೋರಿಸುತ್ತಾರೆ ಎಂದು ಹಿರಿಯ ನಟಿ ಉಮಾಶ್ರೀ ಹೇಳಿದರು.

ಈ ಚಿತ್ರದ ಮೂಲಕ ನಾನು ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ಈ ಚಿತ್ರದಲ್ಲೂ ನಾನು ದುನಿಯಾ ವಿಜಯ್ ಅವರ ಮಗಳಾಗಿಯೇ ಕಾಣಿಸಿಕೊಂಡಿದ್ದೇನೆ ಎಂದರು ದುನಿಯಾ ವಿಜಯ್ ಪುತ್ರ ರಿತನ್ಯ.

ಚಿತ್ರದಲ್ಲಿ ನಟಿಸಿರುವ ಮಿತ್ರ, ಶಿಶಿರ್, ಅಭಿಷೇಕ್ ದಾಸ್ ಛಾಯಾಗ್ರಾಹಕ ಸ್ವಾಮಿ ಜೆ ಗೌಡ, ಸಂಭಾಷಣೆ ಬರೆದಿರುವ ಮಾಸ್ತಿ, ಶ್ರೀಕಾಂತ್ ಮುಂತಾದ ಚಿತ್ರತಂಡದ ಸದಸ್ಯರು "ಲ್ಯಾಂಡ್ ಲಾರ್ಡ್" ಚಿತ್ರದ ಕುರಿತು ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರರಂಗದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ABC News Karnataka

*ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಬಿಡುಗಡೆ.* .*ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾ...
02/11/2025

*ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಬಿಡುಗಡೆ.* .

*ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್* .

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ "45" ಚಿತ್ರದ
"AFRO ಟಪಾಂಗ" ಅದ್ದೂರಿ ಪ್ರಮೋಷನ್ ಸಾಂಗ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಪ್ರಮೋಷನ್ ಸಾಂಗ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಹಾಡಿನಲ್ಲಿ ಉಗಾಂಡ ದೇಶದ ಹೆಸರಾಂತ ಜಿಟೊ ಕಿಡ್ಸ್ ಜೊತೆಗೆ ಚಿತ್ರದ ನಾಯಕರಾದ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರದ "AFRO ಟಪಾಂಗ"
ಪ್ರಮೋಷನ್ ಸಾಂಗ್ ಅದ್ದೂರಿಯಾಗಿ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಈ ಹಾಡಿಗೆ ನೃತ್ಯ ಮಾಡಲು ಉಗಾಂಡದಿಂದ ಜಿಟೊ ಕಿಡ್ಸ್ ಎಂಬ ಹೆಸರಾಂತ ನೃತ್ಯಗಾರರು ಭಾರತಕ್ಕೆ ಬಂದಿದ್ದಾರೆ. ಅವರು ಅಭಿನಯಿಸಿರುವ ಮೊದಲ ಭಾರತದ ಚಿತ್ರ ಕೂಡ "45" ಆಗಿದೆ. ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದೇವೆ. ತೆರೆಯ ಮೇಲೆ ನೋಡಿದಾಗ ಹಾಡು‌ ತುಂಬಾ ಚೆನ್ನಾಗಿ ಮೂಡಿಬಂದಿದೆ. ಇದರ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ, ನಮ್ಮ ಚಿತ್ರ ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.

ನಾನು ನಿರ್ದೇಶಕನಾಗಲು ಶಿವರಾಜಕುಮಾರ್ ಅವರೆ ಕಾರಣ ಎಂದು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ನಮ್ಮ "45" ಚಿತ್ರದಲ್ಲಿ ಹಾಡಿಲ್ಲ. ಆದರೆ, ಪ್ರಮೋಷನಲ್ ಸಾಂಗ್ ಮಾಡಬೇಕೆಂಬ ಆಸೆ ಇತ್ತು. ಮಾಮೂಲಿ ತರಹ ಮಾಡುವುದು ಬೇಡ ಅಂದುಕೊಂಡೆವು. ಆಗ ನನಗೆ ಉಗಾಂಡದ ಜಿಟೊ ಕಿಡ್ಸ್ ಈ ಪ್ರಮೋಷನ್ ಸಾಂಗ್ ನಲ್ಲಿ ಅಭಿನಯಿಸಿದರೆ ಚೆಂದ ಎನಿಸಿತು. ಕಷ್ಟಪಟ್ಟು ಅವರನ್ನು ಸಂಪರ್ಕ ಮಾಡಿದ್ದೆವು. ಇವರ ಜೊತೆಗೆ ನಮ್ಮ ಚಿತ್ರದ ಮೂರು ಜನ ನಾಯಕರು ಅಭಿನಯಿಸಿದ್ದಾರೆ. ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡು ಇಷ್ಟು ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಹಾಗೂ ವಿಶೇಷವಾಗಿ ನಿರ್ಮಾಪಕರಿಗೆ ಧನ್ಯವಾದ ಎಂದರು.

"45" ಚಿತ್ರ ಬರೀ ಕರ್ನಾಟಕ ಮಾತ್ರ ಅಲ್ಲ. ಭಾರತದಾದ್ಯಂತ ಯಶಸ್ವಿಯಾಗಲಿ. ಏಕೆಂದರೆ ಅಂತಹ ಕಂಟೆಂಟ್ ವುಳ್ಳ ಸಿನಿಮಾ ಇದು. ಅರ್ಜುನ್ ಜನ್ಯ ಈ ಚಿತ್ರದ ಕಥೆ ಹೇಳಿದಾಗ ನೀವೆ ನಿರ್ದೇಶನ ಮಾಡಿ ಎಂದು ಹೇಳಿದ್ದೆ. ಈಗ ಈ ಹಾಡು ನೋಡಿದಾಗ ಅವರ ನಿರ್ದೇಶನದ ಬಗ್ಗೆ ತಿಳಿಯುತ್ತಿದೆ. ನಾನು, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಮೂರು ಜನ ಈ ಚಿತ್ರದ ನಾಯಕರು. ಅಭಿನಯದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ ಎಂದು ಶಿವರಾಜಕುಮಾರ್ ತಿಳಿಸಿದರು.

ಈ ಚಿತ್ರದ ಬಗ್ಗೆ ನನಗೆ ಆರಂಭದಿಂದಲೂ ಪ್ರೀತಿ. ಚಿತ್ರದ ಕುರಿತು ನಾನು ಅರ್ಜುನ್ ಜನ್ಯ ಅವರಿಗೆ ಕರೆ ಮಾಡಿ ಕೇಳುತ್ತಿರುತ್ತೇನೆ. ನಾನು ನೋಡಿ ಬೆಳೆದ ಇಬ್ಬರು ಕನ್ನಡ ಚಿತ್ರರಂಗದ ಮಹಾನ್ ನಟರ ಜೊತೆಗೆ ಅಭಿನಯಿಸಿರುವುದು ಬಹಳ ಖುಷಿಯಾಗಿದೆ. ಅವರಿಬ್ಬರು ತೆರೆಯ ಮೇಲೆ ಒಟ್ಟಿಗೆ ಬಂದಾಗ ವಿಷಲ್ ಹಾಕಿ ಸಂಭ್ರಮಿಸಿದ್ದೇನೆ ಎಂದು ರಾಜ್ ಬಿ ಶೆಟ್ಟಿ ಹೇಳಿದರು.

ವಿ.ಎಫ್.ಎಕ್ಸ್ ಉಸ್ತುವಾರಿ ವಹಿಸಿಕೊಂಡಿರುವ ಕೆನಡಾದ ಯಶ್ ಶೆಟ್ಟಿ ಮಾತನಾಡಿ, ಡಿಸೆಂಬರ್ 25 ಕ್ಕೆ ಚಿತ್ರ ತೆರೆಗೆ ಬರಲಿದೆ. ಅನೇಕ ಹಾಲಿವುಡ್ ಚಿತ್ರಗಳಿಗೆ ವಿ.ಎಫ್.ಎಕ್ಸ್ ಮಾಡಿರುವ ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಮಾಡಿರುವ ಮೊದಲ ಕನ್ನಡದ ಹಾಗೂ ಭಾರತದ ಚಿತ್ರ ಎಂದರು. ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸತ್ಯ ಹೆಗ್ಡೆ ಮಾತನಾಡಿದರು.
ABC News Karnataka

02/11/2025

ಕಾಜಲ್ ಕುಂದರ್ ಹೊಸ ಸಿನಿಮಾ ಇವೆಂಟ್ನಲ್ಲಿ ABC News Karnataka

02/11/2025

ಹೊಸಬರಿಗೆ ಸಪೋರ್ಟ್ ಮಾಡಲು ಭಗೀರ ಶ್ರೀಮುರಳಿ

02/11/2025

ಊಟ ಮಾಡ್ವಾಗಲು ತೆಗಿತೀರಾ ಬೇಡ ಪ್ಲೀಸ್

Address

Timmaiah Road Basaveshwarnagar
Bangalore
560079

Alerts

Be the first to know and let us send you an email when ABC News Karnataka posts news and promotions. Your email address will not be used for any other purpose, and you can unsubscribe at any time.

Contact The Business

Send a message to ABC News Karnataka:

Share

Please visit our FACEBOOK PAGE & YOUTUBE Channel for promotions Thank you

we encourage buisness developement plans here please do take a survey of our page & youtube channel for any advertisements