ABC News Karnataka

ABC News Karnataka ಕನ್ನಡಿಗನಿಂದ ❤️ ಕನ್ನಡಿಗರಿಗೆ 🙏🏻🙏🏻
(1)

ರಜನಿಕಾಂತ್ ಬೇಟಿ ಮಾಡಿರೋ ನಟಿ ಧನ್ಯ ರಾಮ್ ಕುಮಾರ್ ಸದ್ಯ ಜೈಲರ್ -2 ಶೂಟಿಂಗ್ ಗಾಗಿ ಮೈಸೂರಿನಲ್ಲಿ ಬೀಡು ಬಿಟ್ಟಿರೋ ನಟ ರಜನಿಕಾಂತ್
27/06/2025

ರಜನಿಕಾಂತ್ ಬೇಟಿ ಮಾಡಿರೋ ನಟಿ ಧನ್ಯ ರಾಮ್ ಕುಮಾರ್

ಸದ್ಯ ಜೈಲರ್ -2 ಶೂಟಿಂಗ್ ಗಾಗಿ ಮೈಸೂರಿನಲ್ಲಿ ಬೀಡು ಬಿಟ್ಟಿರೋ ನಟ ರಜನಿಕಾಂತ್

ಲೋಕಾಯುಕ್ತ ದಾಳಿ ಪ್ರಕರಣ.. ಧಾರವಾಡ ಮಲಪ್ರಭಾ ಪ್ರಾಜೆಕ್ಟ್‌ನಲ್ಲಿ ಇಂಜಿನಿಯರ್ ಆಗಿರುವ ವಲ್ಸಂದ್.. *ವಲ್ಸಂದ್ ಕುಟುಂಬಸ್ಥರ ಅಕೌಂಟ್‌ನಲ್ಲಿ 1.50...
27/06/2025

ಲೋಕಾಯುಕ್ತ ದಾಳಿ ಪ್ರಕರಣ..

ಧಾರವಾಡ ಮಲಪ್ರಭಾ ಪ್ರಾಜೆಕ್ಟ್‌ನಲ್ಲಿ ಇಂಜಿನಿಯರ್ ಆಗಿರುವ ವಲ್ಸಂದ್..

*ವಲ್ಸಂದ್ ಕುಟುಂಬಸ್ಥರ ಅಕೌಂಟ್‌ನಲ್ಲಿ 1.50 ಕೋಟಿ ಹಣ ಪತ್ತೆ*

ಇಂದು ಲೋಕಾಯುಕ್ತ ರೈಡ್ ಮಾಡಿದ್ದಾಗ ಬೆಳಕಿಗೆ..

ವಲ್ಸಂದ್, ಪತ್ನಿ ಮತ್ತು ಮಗನ ಅಕೌಂಟ್‌ನಲ್ಲಿ ಒಂದು‌ವರೆ ಕೋಟಿ ಹಣ ಪತ್ತೆ..‌

ಇಷ್ಟೇ‌ ಅಲ್ಲದೇ ಬೆಳಗಾವಿಯಲ್ಲಿ ಹೊಸದಾಗಿ ಫಾರ್ಮ್ ಹೌಸ್ ಪತ್ತೆ..

ಹೊಸದಾಗಿ ಫಾರ್ಮ್ ಹೌಸ್ ಒಂದನ್ನು ಖರೀದಿ ಮಾಡಿರುವ ವಲ್ಸಂದ್..

ಹೊಸ ಅವತಾರದಲ್ಲಿ ರಶ್ಮೀಕಾ ಮಂದಣ್ಣ,. ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ಮಿಂಚಲು ರಶ್ಮೀಕಾ ರೆಡಿ. ಮೈಸಾ ಚಿತ್ರದಲ್ಲಿ ರಶ್ಮೀಕಾ ಅಭಿನಯ....
27/06/2025

ಹೊಸ ಅವತಾರದಲ್ಲಿ ರಶ್ಮೀಕಾ ಮಂದಣ್ಣ,. ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ಮಿಂಚಲು ರಶ್ಮೀಕಾ ರೆಡಿ.
ಮೈಸಾ ಚಿತ್ರದಲ್ಲಿ ರಶ್ಮೀಕಾ ಅಭಿನಯ. ಮೈಸಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಐದು ಭಾಷೆಯಲ್ಲಿ ನಿರ್ಮಾಣವಾಗಲಿದೆ .
ಸಿನಿಮಾಗೆ ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದಾರೆ ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
Unformula Films Rashmika Mandanna


27/06/2025
ನಾತಿಚರಾಮಿಯ ಗೌರಿ ಮಂಸೋರೆಯ ದೂರ ತೀರ ಯಾನದಲಿ.ಮಂಸೋರೆ ನಿರ್ದೇಶಿಸಿರುವ ದೂರ ತೀರ ಯಾನ ಸಿನೆಮಾ ಇದೇ ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತ...
26/06/2025

ನಾತಿಚರಾಮಿಯ ಗೌರಿ ಮಂಸೋರೆಯ ದೂರ ತೀರ ಯಾನದಲಿ.
ಮಂಸೋರೆ ನಿರ್ದೇಶಿಸಿರುವ ದೂರ ತೀರ ಯಾನ ಸಿನೆಮಾ ಇದೇ ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಸಿನೆಮಾದ ಎರಡು ಹಾಡುಗಳು ಜನರ ಮನ್ನಣೆ ಗಳಿಸುತ್ತಿವೆ. ಸಿನೆಮಾ ಆರಂಭದಿಂದ ಇಲ್ಲಿಯವರೆಗೂ ನಾಯಕಿ ಮತ್ತು ನಾಯಕನ ಪಾತ್ರಗಳನ್ನು ಹೊರತುಪಡಿಸಿ ಉಳಿದ ತಾರಾಗಣದ ಪರಿಚಯ ಮಾಡಿಸದೇ ಬಂದಿದ್ದ ಸಿನೆಮಾ ತಂಡ ಈಗ ಉಳಿದ ಪಾತ್ರಗಳ ಪರಿಚಯ ಆರಂಭಿಸಿದ್ದಾರೆ. ಅದರಲ್ಲಿ ಮೊದಲ ಪಾತ್ರ ಗೌರಿ. ಈ ಪಾತ್ರದಲ್ಲಿ ನಟಿಸಿರುವವರು ಕನ್ನಡದ ಖ್ಯಾತ ನಟಿ ಶೃತಿ ಹರಿಹರನ್.
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ ಸಿನೆಮಾ “ನಾತಿಚರಾಮಿ”. ಮಂಸೋರೆ ನಿರ್ದೇಶನ ಮಾಡಿದ್ದ ಈ ಸಿನೆಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ಸಿನೆಮಾಗೆ ಐದು ರಾಷ್ಟ್ರ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿತ್ತು. ಇದು ಕೇವಲ ಪ್ರಶಸ್ತಿಯ ಕಾರಣಕಷ್ಟೇ ಅಲ್ಲದೇ ಈ ಸಿನೆಮಾದ ಕಥಾ ವಸ್ತುವೂ ಹೆಚ್ಚು ಚರ್ಚಿತವಾಗಿ, ನೆಟ್ ಫ್ಲಿಕ್ಸ್ ಮೂಲಕ ದೇಶ ವಿದೇಶದ ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಗೌರಿ ಪಾತ್ರ ಮಾಡಿದ್ದ ಶೃತಿ ಹರಿಹರನ್ ಮತ್ತೆ ಮಂಸೋರೆ ಅವರ ಹೊಸ ಸಿನೆಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಅವರ ಪಾತ್ರ ಪರಿಚಯದ ವಿಡಿಯೋ ಒಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

ನಾತಿಚರಾಮಿಯ ದಿಟ್ಟ ಮಹಿಳೆ ‘ಗೌರಿ’ ಕನ್ನಡ ಚಿತ್ರರಂಗದಲ್ಲೇ ಒಂದು ಐಕಾನಿಕ್ ಪಾತ್ರ . ಕನ್ನಡ ಸಿನೆಮಾಗಳಲ್ಲಿ ನಿರ್ದೇಶಕರು ತಮ್ಮದೇ ಸಿನೆಮಾದ ಪಾತ್ರಗಳನ್ನು ಮತ್ತೊಂದು ಸಿನೆಮಾದಲ್ಲಿ ತರುವುದರ ಮೂಲಕ ತಮ್ಮದೇ ಆದ ಸಿನೆಮಾ ಪ್ರಪಂಚವನ್ನು ಸೃಷ್ಟಿಸಿರುವುದು ಅಪರೂಪ. ಅಂತಹ ಅಪರೂಪದ ಜಗತ್ತನ್ನು ಮಂಸೋರೆಯವರು ತಮ್ಮ ದೂರ ತೀರ ಯಾನದಲ್ಲಿ ಸೃಷ್ಟಿರುವ ಪ್ರಯತ್ನವನ್ನು ಈ ವಿಡಿಯೋದಲ್ಲಿ ಕಾಣಬಹುದು. ಇಂತಹ ಅಚ್ಚರಿ ನೀಡಿರುವ ಮಂಸೋರೆ ಮತ್ತು ಗೌರಿ ಕಾಂಬಿನೇಶನ್ ತೆರೆಯ ಮೇಲೆ ಯಾವ ರೀತಿ ಮ್ಯಾಜಿಕ್ ಮಾಡಲಿದ್ದಾರೆ ಎಂಬ ಕುತೂಹಲ ಅವರ ಪ್ರೇಕ್ಷಕ ವರ್ಗದಲ್ಲಿ ದೂರ ತೀರ ಯಾನ ಸಿನೆಮಾದ ಬಗ್ಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ.
ದೂರ ತೀರ ಯಾನ ಸಿನೆಮಾ ಸೆನ್ಸಾರ್ ಪೂರ್ಣಗೊಳಿಸಿ ಯು/ಎ ಪ್ರಮಾಣ ಪತ್ರವನ್ನು ಪಡೆದಿದ್ದು ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದೆ, ಕನ್ನಡದ ಖ್ಯಾತ ನಟರಾದ ಕಿಚ್ಚ ಸುದೀಪ್ ರವರು ಜೂನ್ 28 ಶನಿವಾರ, ಬೆಳಗ್ಗೆ 11 ಗಂಟೆಗೆ ಡಿಜಿಟಲ್ ಮೂಲಕ ಸಿನೆಮಾದ ಟ್ರೈಲರ್ ಅನಾವರಣಗೊಳಿಸಲಿದ್ದಾರೆ.

ಹೇಗಿತ್ತು ಗೊತ್ತಾ 50 ವರ್ಷಗಳ ಹಿಂದಿನ ಕನ್ನಡ ಪತ್ರಿಕೆ ಕನ್ನಡ ಪ್ರಭ, ತುರ್ತು ಪರಿಸ್ಥಿತಿ ಘೋಷಿಸಿದ ಮೊದಲ ಕನ್ನಡ ಪತ್ರಿಕೆ ಗೆ ನಿಮದೊಂದು ಲೈಕ್ ...
25/06/2025

ಹೇಗಿತ್ತು ಗೊತ್ತಾ 50 ವರ್ಷಗಳ ಹಿಂದಿನ ಕನ್ನಡ ಪತ್ರಿಕೆ ಕನ್ನಡ ಪ್ರಭ, ತುರ್ತು ಪರಿಸ್ಥಿತಿ ಘೋಷಿಸಿದ ಮೊದಲ ಕನ್ನಡ ಪತ್ರಿಕೆ ಗೆ ನಿಮದೊಂದು ಲೈಕ್ ಇರಲಿ ABC News Karnataka

*ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ "ಜಂಗಲ್ ಮಂಗಲ್".* .   *ಟ್ರೇಲರ್ ನಲ್ಲೇ ಕುತೂಹಲ ಮ...
25/06/2025

*ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ "ಜಂಗಲ್ ಮಂಗಲ್".* .

*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಯಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರ ಜುಲೈ 4 ರಂದು ತೆರೆಗೆ‌*

ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ "ಜಂಗಲ್ ಮಂಗಲ್" ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್, ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ "ಜಂಗಲ್ ಮಂಗಲ್" ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ. ಹತ್ತುವರ್ಷಗಳಿಂದ ಕನ್ನಡ ಹಾಗೂ ತುಳು ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ. ಇದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆಯಾಗಿದ್ದರೂ, ಯೂನಿವರ್ಸಲ್ ಸಬ್ಜೆಕ್ಟ್ ಎನ್ನಬಹುದು. ಎಲ್ಲಾ ಪ್ರಾಂತ್ಯದಲ್ಲೂ ನಡೆಯುವ ಕಥೆಯೂ ಹೌದು‌. ಸಹ್ಯಾದ್ರಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪ್ರಜೀತ್ ಹೆಗಡೆ, ಸಂಕಲನಕಾರ ಮನು ಶೇಡ್ಗಾರ್ ಮುಂತಾದವರು ಬಂಡವಾಳ ಹಾಕಿದ್ದಾರೆ. ಯಶ್ ಶೆಟ್ಟಿ ನಾಯಕನಾಗಿ, ಹರ್ಷಿತ ರಾಮಚಂದ್ರ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಉಗ್ರಂ ಮಂಜು, ಬಲ ರಾಜವಾಡಿ ಮುಂತಾದವರಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ ಜುಲೈ 4 ರಂದು ಚಿತ್ರ ತೆರೆಗೆ ಬರಲಿದೆ ಎಂದರು.

ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಆದರೆ ನಾನು ಮೊದಲು ನಾಯಕನಾಗಿ ನಟಿಸಿದ ಚಿತ್ರ "ಸೂಜಿದಾರ". ಅದರಲ್ಲಿ ನಾನು ನಾಯಕನಾಗಿ ನಟಿಸಲು ಒಪ್ಪಿಕೊಳ್ಳಲು ಕಥೆಯೇ ಕಾರಣ. ಆನಂತರ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಲು ಕಥೆಯೇ ಕಾರಣ. ನಿಜ ಹೇಳಬೇಕೆಂದರೆ ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ . ಇನ್ನೂ ನಮ್ಮ ಚಿತ್ರಕ್ಕೆ ನಿರ್ಮಾಪಕ ಪ್ರಜೀತ್ ಹೆಗಡೆ ಅವರ ಸಹಕಾರ ಅಪಾರ. ಚಿತ್ರತಂಡದ ಎಲ್ಲರ ಸಹಕಾರವನ್ನು ಮರೆಯುವ ಹಾಗಿಲ್ಲ‌. ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಜುಲೈ 4 ರಂದು ಬಿಡುಗಡೆಯಾಗಲಿರುವ ನಮ್ಮ ಚಿತ್ರದ ವಿತರಣೆಗೆ ಸಹಾಯ‌ ಮಾಡುತ್ತಿದ್ದಾರೆ ಎಂದರು ನಾಯಕ ಯಶ್ ಶೆಟ್ಟಿ.

ದಿವ್ಯ ಎಂಬ ಮಧ್ಯಮ ವರ್ಗದ ಜವಾಬ್ದಾರಿಯುತ ಕರಾವಳಿ ಹೆಣ್ಣುಮಗಳ ಪಾತ್ರ ನನ್ನದು. ಅಂಗನವಾಡಿ ಶಿಕ್ಷಕಿಯ ಪಾತ್ರ ಎಂದು ತಮ್ಮ ಪಾತ್ರದ ಕುರಿತು ನಾಯಕಿ ಹರ್ಷಿತ ರಾಮಚಂದ್ರ ಹೇಳಿದರು.

ನಿರ್ದೇಶಕ ರಕ್ಷಿತ್ ಕುಮಾರ್ ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಖಳನಾಯಕ. ಈ ಹಿಂದೆ ಮಾಡಿರುವ ಚಿತ್ರಗಳಿಗಿಂತ ಭಿನ್ನ ಪಾತ್ರ ಎಂದು ಉಗ್ರಂ ಮಂಜು ತಿಳಿಸಿದರು‌.

ಸಂಕಲನಕಾರ - ನಿರ್ಮಾಪಕರಲ್ಲೊಬ್ಬರಾದ ಮನು ಶೇಡ್ಗಾರ್ ಹಾಗೂ ಬಂಡವಾಳ ಹೂಡಿರುವ ಪ್ರಜೀತ್ ಹೆಗಡೆ ಅವರು ಮಾತನಾಡಿ ಜುಲೈ 4 ರಂದು ತೆರೆಗೆ ಬರುತ್ತಿರುವ ನಮ್ಮ "ಜಂಗಲ್ ಮಂಗಲ್" ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿ ಪ್ರೋತ್ಸಾಹ ನೀಡಿ ಎಂದರು.

ಅನೂಪ್ ಸೀಳಿನ್ ಆಗು ಸುನಿಲ್ ರಾವ್  ಹೊಸ ಹಾಡು   the title
24/06/2025

ಅನೂಪ್ ಸೀಳಿನ್ ಆಗು ಸುನಿಲ್ ರಾವ್ ಹೊಸ ಹಾಡು the title

*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ಅಪ್ಪು ಕಪ್ ಸೀಸನ್ 3" ಗೆ  ಅದ್ದೂರಿ ಚಾಲನೆ* .    ಚೇತನ್ ಸೂರ್ಯ ಅವರ STELLER STUDIO & EVENT MANA...
24/06/2025

*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ಅಪ್ಪು ಕಪ್ ಸೀಸನ್ 3" ಗೆ ಅದ್ದೂರಿ ಚಾಲನೆ* .

ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ
"ಅಪ್ಪು ಕಪ್"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಎರಡು ಸೀಸನ್ ಅದ್ದೂರಿಯಾಗಿ ನಡೆದಿದೆ. ಜುಲೈನಲ್ಲಿ " ಅಪ್ಪು ಕಪ್ ಸೀಸನ್ 3" ಲೀಗ್ ಪಂದ್ಯಗಳು ಆರಂಭವಾಗಲಿದೆ. ಇತ್ತೀಚೆಗೆ "ಅಪ್ಪು ಕಪ್ ಸೀಸನ್ 3" ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಅಶ್ವಿನಿ ಪುನೀತ್ ರಾಜಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸರವಣ, ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಶಾಸಕರಾದ ರಾಜು ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಟಾರ್ ರಾಯಭಾರಿಗಳಾದ ಪ್ರಿಯಾಂಕ ಉಪೇಂದ್ರ, ಅನಿರುದ್ಧ ಜಟ್ಕರ್, ಸೃಜನ್ ಲೋಕೇಶ್ , ರಾಜವರ್ಧನ್ ಹಾಗೂ ಗುಡ್ ವಿಲ್ ಸ್ಟಾರ್ ರಾಯಭಾರಿ ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಕಲಾವಿದರು ಉಪಸ್ಥಿತರಿದ್ದರು.

STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ "ಅಪ್ಪು ಕಪ್ ಸೀಸನ್ 3" ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಉದ್ಘಾಟನಾ ಸಮಾರಂಭ ನಡೆದಿದೆ.
ಕಳೆದೆರೆಡು ಸೀಸನ್ ಗಳಿಂದ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಮ್ಮ ಜೊತೆಗೆ ಇದ್ದಾರೆ. ಅವರಿಗೆ ಹಾಗೂ ಸರವಣ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ. ಈ ಬಾರಿಯ "ಅಪ್ಪು ಕಪ್" ನ ವಿಶೇಷವೆಂದರೆ ಜುಲೈ 25,26,27 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆಗಸ್ಟ್ 16, 17 ರಂದು ಗೋವಾದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಒಟ್ಟು ಹತ್ತು ತಂಡಗಳಿರುತ್ತದೆ. ಅದರಲ್ಲಿ ನಾಲ್ಕು ತಂಡಗಳು ಫೈನಲ್ ಪ್ರವೇಶಿಸಲಿದೆ ಎಂದು ಆಯೋಜಕರಾದ ಚೇತನ್ ಸೂರ್ಯ ಹೇಳಿದರು‌.

ಅಶ್ವಿನಿ ಪುನೀತ್ ರಾಜಕುಮರ್ "ಅಪ್ಪು ಕಪ್" ಯಶಸ್ವಿಯಾಗಲೆಂದು ಹಾರೈಸಿದರು. ಸದಾ ನಾನು ಚೇತನ್ ಅವರ ಜೊತೆಗೆ ಇರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಸಾಯಿ ಗೋಲ್ಡ್ ಪ್ಯಾಲೆಸ್ ನ ಮಾಲೀಕರಾದ ಸರವಣ ತಿಳಿಸಿದರು.

ಅಪ್ಪು ಕಪ್ ಸೀಸನ್ 3 ರಲ್ಲಿ ಭಾಗವಹಿಸುತ್ತಿರುವ ತಂಡಗಳ ವಿವರ

೧) "ವೀರ ಕನ್ನಡಿಗ ಬುಲ್ಸ್" ಮಾಲೀಕರು ಮೊನೀಶ್ ಸಿ, ನಾಯಕ ದಿಲೀಪ್ ರಾಜ್ ಹಾಗೂ ಸ್ಟಾರ್ ರಾಯಭಾರಿ ಸೃಜನ್ ಲೋಕೇಶ್.
೨) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ, ನಾಯಕ ದಿಗಂತ್, ಸ್ಟಾರ್ ರಾಯಭಾರಿ ಅವಿನಾಶ್ ದಿವಾಕರ್ .
೩) "ಜಾಕಿ ರೈಡರ್ಸ್" ಮಾಲೀಕರು ಶ್ರೀಹರ್ಷ, ‌ನಾಯಕ ಮನೋರಂಜನ್ ರವಿಚಂದ್ರನ್, ಸ್ಟಾರ್ ರಾಯಭಾರಿ ಪ್ರಿಯಾಂಕ ಉಪೇಂದ್ರ.
೪) "ಮೌರ್ಯ ಸ್ಟ್ರೈಕರ್ಸ್" ಮಾಲೀಕರು ವಿಜೇತ್, ನಾಯಕ ಪ್ರಮೋದ್ ಶೆಟ್ಟಿ, ಸ್ಟಾರ್ ರಾಯಭಾರಿ ರಾಜವರ್ಧನ್.
೫)"ಯುವರತ್ನ ಚಾಂಪಿಯನ್ಸ್ " ಮಾಲೀಕರು ದಿವ್ಯ ರಂಗೇನಹಳ್ಳಿ, ನಾಯಕ ಇಂದ್ರಜಿತ್ ಲಂಕೇಶ್, ಸ್ಟಾರ್ ರಾಯಭಾರಿ ಧನ್ಯ ರಾಮಕುಮಾರ್.
೬) ಪವರ್ ಪೈತಾನ್ಸ್, ಮಾಲೀಕರು ರೂಪ, ನಾಯಕ ಸದಾಶಿವ ಶೆಣೈ, ಸ್ಟಾರ್ ರಾಯಭಾರಿ ಸಿಂಧೂ ಲೋಕನಾಥ್.
೭)ಗಂಧದಗುಡಿ ವಾರಿಯರ್ಸ್ ಮಾಲೀಕರು ಸತೀಶ್ ಎಂ, ನಾಯಕ ಹರೀಶ್ ನಾಗರಾಜ್, ಸ್ಟಾರ್ ರಾಯಭಾರಿ ವಿಕ್ರಮ್ ರವಿಚಂದ್ರನ್.
೮) "ಜೇಮ್ಸ್ ವಾರಿಯರ್ಸ್" ಮಾಲೀಕರು ಸತ್ಯ, ನಾಯಕ ರವಿಚೇತನ್, ಸ್ಟಾರ್ ರಾಯಭಾರಿ ಅನಿರುದ್ಧ ಜಟ್ಕರ್ .
೯)"ದೊಡ್ಮನೆ ಡ್ರಾಗನ್ಸ್" ಮಾಲೀಕರು ಸುರೇಶ್ & ನಿರಂತರ ಗಣೇಶ್, ನಾಯಕ ಪ್ರವೀಣ್ ತೇಜ್, ‌ಸ್ಟಾರ್ ರಾಯಭಾರಿ ವಸಿಷ್ಠ ಸಿಂಹ.
೧೦) "ಅರಸು ಹಂಟರ್ಸ್", ಮಾಲೀಕರು ಆನಂದ್, ನಾಯಕ ಭುವನ್ ಗೌಡ, ಸ್ಟಾರ್ ರಾಯಭಾರಿ ಇಮ್ರಾನ್ ಸರ್ದಾರಿಯಾ .

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ'ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮ...
23/06/2025

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ'ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದಂತಹ ಎಸ್. ನಾರಾಯಣ್ ಅವರು ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರು ಜೊತೆಯಾಗಿದ್ದಾರೆ. ಈ ವಿಷಯವಾಗಿ ಇಂದು (22-06-2025) ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಈ ಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಶ್ರೀ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಮತ್ತೊಬ್ಬ ನಿರ್ಮಾಪಕರಾದ ರಮೇಶ್ ಯಾದವ್, ಎಸ್ ನಾರಾಯಣ್, ರಾಜೇಂದ್ರಸಿಂಗ್ ಬಾಬು ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ಅನಿವಾರ್ಯ ಕಾರಣಗಳಿಂದ ಅನುಪಸ್ಥಿತರಾಗಿದ್ದು ಈ ಘನಕಾರ್ಯಕ್ಕೆ ಸಂದೇಶವನ್ನು ಕಳುಹಿಸಿಕೊಟ್ಟು ಶುಭ ಹಾರೈಸಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವು ಈಹೊತ್ತಿನ ಅಗತ್ಯವಾಗಿದ್ದು, ಎಲ್ಲ ನಟರಿಗೂ ಅಂಥದ್ದೊಂದು ಗೌರವ ಸಂದಿದ್ದರೂ, ವಿಷ್ಣುವರ್ಧನ್ ಅವರಿಗೆ ಅಂಥಹ ಗೌರವ ಸಿಕ್ಕಿಲ್ಲವಾದ್ದರಿಂದ, ಕನ್ನಡ ಚಲನಚಿತ್ರರಂಗದಲ್ಲಿ ಇಂಥದ್ದೊಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ತುರ್ತು ಇರುವುದರಿಂದ ಸಮಸ್ತ ಕಲಾವಿದರ ಸಂಘ ಮತ್ತು ಕಲಾವಿದರು ಭಾಗವಹಿಸುವುದಾಗಿ ತಿಳಿಸಿದ್ದಾರೆ.

ಹಾಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ನರಸಿಂಹಲು ಅವರು ಕೂಡ ಇದೇ ಮಾತುಗಳನ್ನು ಹೇಳಿ, ವಾಣಿಜ್ಯ ಮಂಡಳಿಯು ಈ ಕಾರ್ಯಕ್ರಮಕ್ಕೆ ಕೇವಲ ಸಹಕಾರವನ್ನಲ್ಲದೆ ಸಹಭಾಗಿತ್ವವನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು. ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ಅವರು ಕೂಡ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ರಾಜೇಂದ್ರಸಿಂಗ್ ಬಾಬು ಅವರು ಮಾತನಾಡಿ, ಈ ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ವಿಷ್ಣುವರ್ಧನ್ ಅವರ ಆಪ್ತರನ್ನೆಲ್ಲ ಆಹ್ವಾನಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಜೊತೆಗೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ಖ್ಯಾತ ನಟರನ್ನು ಈ ಅಮೃತ ಮಹೋತ್ಸವಕ್ಕೆ ಹಾಜರಾಗುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು. ನಂತರ ಮಾತನಾಡಿದ ಎಸ್. ನಾರಾಯಣ್ ಅವರು, ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿ, ಇದಕ್ಕೆ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಾಸಲಿದೆ ಎಂಬ ಭರವಸೆಯ ಜೊತೆಗೆ, ಈಗಾಗಲೇ ಅಮರನಟ ಎಂಬ ಕಾರ್ಯಕ್ರಮವನ್ನು ಡಾ. ರಾಜ್ ಕುಮಾರ್ ಅವರ ಹೆಸರಲ್ಲಿ , ಅಂಬಿ ಸಂಭ್ರಮ ಎನ್ನುವ ಕಾರ್ಯಕ್ರಮವನ್ನು ಡಾ. ಅಂಬರೀಷ್ ಅವರ ಹೆಸರಲ್ಲಿ ಆಯೋಜಿಸಿದ ಅನುಭವ ತನಗಿರುವುದರಿಂದ, ಕನ್ನಡ ಚಿತ್ರರಂಗದ ತ್ರಿಮೂರ್ತಿಗಳಲ್ಲೊಬ್ಬರದ ಡಾ. ವಿಷ್ಣುವರ್ಧನ್ ಅವರ ಕಾರ್ಯಕ್ರಮದಲ್ಲೂ ಭಾಗಿಯಾಗುವ ಭಾಗ್ಯ ನನಗೆ ದಕ್ಕಿರುವುದು ತಮ್ಮ ಪುಣ್ಯ ಎಂಬ ಸಂತೋಷವನ್ನು ಹೊರಹಾಕಿದರು.

ಕೊನೆಯಲ್ಲಿ ಮಾತನಾಡಿದ ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವೀರಕಪುತ್ರ ಶ್ರೀನಿವಾಸ್ ಅವರು, ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಕನ್ನಡ ಚಿತ್ರರಂಗದ ಮಟ್ಟಿಗೆ ಇದು ಬೂಸ್ಟರ್ ಡೋಸ್ ಕಾರ್ಯಕ್ರಮವಾಗಿ ಕೆಲಸ ಮಾಡಲಿದೆ ಮತ್ತು ಡಾ. ವಿಷ್ಣುವರ್ಧನ್ ಅವರಿಗೆ ಆದ ಅನೇಕ ನೋವುಗಳಿಗೆ ಉತ್ತರವಾಗಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದು, ಮತ್ತು ಇಡೀ ರಾಜ್ಯಾದ್ಯಂತ ದಸರಾ ರೀತಿಯಲ್ಲಿ ಈ ಉತ್ಸವವನ್ನು ಆಯೋಜಿಸಬೇಕೆಂದು ಕರೆ ನೀಡಿದರು.

-ವೀರಕಪುತ್ರ ಶ್ರೀನಿವಾಸ
ABC News Karnataka

23/06/2025

ಮಾದೇವ ಚಿತ್ರಕ್ಕೆ ದೊರೆತ ಜಯಕ್ಕೆ ತುಲಾ ಭಾರ ಮಾಡಿಸಿ ಹರಕೆ ತೀರಿಸಿದ ವಿನೋದ್ ಪ್ರಭಾಕರ್ | ABC News Karnataka

ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಅವರಿಗೆ " ಲಕ್ಷೀ ಪುತ್ರ " ಚಿತ್ರತಂಡದಿಂದ ಹುಟ್ಟುಹಬ್ಬದ ಶುಭಾಶಯಗಳು 🎂💐"ಲಕ್ಷ್ಮಿ ಪುತ್ರ" 💰ಚಿತ್ರದ 2 ನೇ ಹಂತದ ...
22/06/2025

ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಅವರಿಗೆ " ಲಕ್ಷೀ ಪುತ್ರ " ಚಿತ್ರತಂಡದಿಂದ ಹುಟ್ಟುಹಬ್ಬದ ಶುಭಾಶಯಗಳು 🎂💐

"ಲಕ್ಷ್ಮಿ ಪುತ್ರ" 💰ಚಿತ್ರದ 2 ನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ🎥❤️







gowda.798







Address

Timmaiah Road Basaveshwarnagar
Bangalore
560079

Alerts

Be the first to know and let us send you an email when ABC News Karnataka posts news and promotions. Your email address will not be used for any other purpose, and you can unsubscribe at any time.

Contact The Business

Send a message to ABC News Karnataka:

Share

Please visit our FACEBOOK PAGE & YOUTUBE Channel for promotions Thank you

we encourage buisness developement plans here please do take a survey of our page & youtube channel for any advertisements