Jds Karunadu

Jds Karunadu ಕಟ್ಟೋಣ ಬನ್ನಿ ಸಮೃದ್ಧ ಕರುನಾಡು. Twitter:https://twitter.com/JDSKarunadu
Instagram : https://www.instagram.com/jdskarunaduofficial/

( fan page )
(218)

ಜನರೊಂದಿಗೆ ಜನತಾದಳ
05/08/2025

ಜನರೊಂದಿಗೆ ಜನತಾದಳ

05/08/2025

ಬಸ್ ಮುಷ್ಕರ

ಕಾಂಗ್ರೆಸ್ ಸರಕಾರ ವಜಾಗೊಳಿಸಿ: ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹತುಮಕೂರು:ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ಸರಕಾ...
05/08/2025

ಕಾಂಗ್ರೆಸ್ ಸರಕಾರ ವಜಾಗೊಳಿಸಿ:
ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ತುಮಕೂರು:ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ಸರಕಾರವನ್ನು ಈ ಕೂಡಲೇ ವಜಾಗೊಳಿಸಬೇಕೆಂದು ಜೆಡಿ (ಎಸ್) ನಾಯಕರು ಆಗ್ರಹಿಸಿದರು.
ಸಕಾಲದಲ್ಲಿ ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಎದುರುಗಡೆ ಅವರು ಪ್ರತಿಭಟನೆ ನಡೆಸಿದರು.
"ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಲಂಚಗುಳಿತನ, ದುರಾಡಳಿತ ಮತ್ತು ವೈಫಲ್ಯತೆಯಿಂದ ಜನತೆ ಬಸವಳಿದಿದ್ದಾರೆ. ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರಿನಲ್ಲಿ ಉತ್ತಮ ಮಳೆ ಬಿದ್ದು ರಾಜ್ಯದ ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ.
ಆದರೆ, ರಾಜ್ಯ ಸರ್ಕಾರ ರೈತರಿಗೆ ಅಗತ್ಯವಿರುವ ರಸ ಗೊಬ್ಬರವನ್ನು ಪೂರೈಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಆದರಲ್ಲಿ ರಸ ಗೊಬ್ಬರಗಳಾದ ಯೂರಿಯಾ ಮತ್ತು ಡಿ.ಪಿ.ಎ.ಗಳನ್ನು ಸಾಕಷ್ಟು ಪ್ರಮಾಣದಲ್ಲಿ ಶೇಖರಣೆ ಮಾಡಿ ವಿತರಿಸದೇ ಇರುವುದರಿಂದ ರೈತರು ಪರದಾಡುತ್ತಿದ್ದಾರೆ. ಈ ಗೊಬ್ಬರಗಳನ್ನು ಕಾಳಸಂತೆಯಲ್ಲಿ ವರ್ತಕರು ದುಬಾರಿ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾಜ್ಯಕ್ಕೆ ಕೊರತೆ ಇರುವ ಗೊಬ್ಬರಗಳನ್ನು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ಸಂಪರ್ಕಿಸಿ ಪಡೆಯಲು ಕಾಂಗ್ರೆಸ್ ಸರಕಾರ ವಿಫಲವಾಗಿದೆ," ಎಂದು ಪಕ್ಷದ ಯುವ ಘಟಕದ ಕಾರ್ಯಾಧ್ಯಕ್ಷ ರಾಜು ನಾಯಕ್ ಆಕ್ರೋಶ ವ್ಯಕ್ತಪಡಿಸಿದರು.
"ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ 6.8 ಲಕ್ಷ ಟನ್ ರಸ ಗೊಬ್ಬರ ನಿಗದಿ ಮಾಡಿದ್ದು, ಈ ಪೈಕಿ ಕೇವಲ 5.27 ಲಕ್ಷ ಟನ್ ರಸ ಗೊಬ್ಬರ ನೀಡಿರುವುದಾಗಿ ರಾಜ್ಯ ಸರ್ಕಾರ ಆಪಾದನೆ ಮಾಡುತ್ತಿದೆ. ಆದರೆ, ಬಾಕಿಯಿರುವ 1.5 ಲಕ್ಷ ಟನ್ ರಸ ಗೊಬ್ಬರವನ್ನು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ತರುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳಿಂದ ಮುಂಗಾರು ಮಳೆ ಅಬ್ಬರದಿಂದ ಉಂಟಾದ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಭಾರಿ ಪ್ರಮಾಣದಲ್ಲಿ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿ ಉಂಟಾಗಿದೆ. ಆದರೆ, ರಾಜ್ಯ ಸರ್ಕಾರ ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಿಪತ್ತು ಪರಿಹಾರ ನಿಧಿಯಿಂದ ಅಗತ್ಯ ಅನುದಾನ ನೀಡಿ ನೆರೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು, ಬೀದರ, ಬಳ್ಳಾರಿ, ವಿಜಯನಗರ ಹಾಗೂ ಬೆಳಗಾವಿ ಜಿಲ್ಲೆಯ ಹಲವು ಭಾಗಗಳು ಹಾಗೂ ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಕಳೆದ 6 ವಾರಗಳಿಂದ ಮಳೆ ಕೊರತೆಯಿಂದ ರೈತರು ನಾಟಿ ಮಾಡಿದ ಫಸಲು ಒಣಗುತ್ತಿವೆ. ರೈತರು ಕೃಷಿ ಚಟುವಟಿಕೆ ನಡೆಸಲು ಆಕಾಶದತ್ತ ಮುಖ ಮಾಡಿದ್ದಾರೆ. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಆಹಾರ ಮತ್ತು ಮೇವಿನ ಕೊರತೆ ಉಂಟಾಗಿದೆ.

ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ನವದೆಹಲಿಯ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಾಖಾ ಮಠಕ್ಕೆ ತೆರಳಿ ಪರಮಪೂಜ್ಯ ...
04/08/2025

ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ನವದೆಹಲಿಯ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಾಖಾ ಮಠಕ್ಕೆ ತೆರಳಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.
#ɴᴇᴡᴅᴇʟʜɪ

04/08/2025

ಕಾಂಗ್ರೆಸ್ ನಾಯಕರು ಕಥೆ

ರಾಜ್ಯಸಭಾ ಸಂಸದೆ ಶ್ರೀಮತಿ ಸಂಗೀತಾ ಬಲವಂತ್ ಅವರು ಇಂದು ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಸಂಸತ್ತಿನಲ್ಲಿರುವ ಅವರ ಕಚೇರಿಯಲ್ಲಿ ಭೇಟಿಯಾದರು...
04/08/2025

ರಾಜ್ಯಸಭಾ ಸಂಸದೆ ಶ್ರೀಮತಿ ಸಂಗೀತಾ ಬಲವಂತ್ ಅವರು ಇಂದು ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಸಂಸತ್ತಿನಲ್ಲಿರುವ ಅವರ ಕಚೇರಿಯಲ್ಲಿ ಭೇಟಿಯಾದರು. ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ನಾವು ಚರ್ಚೆ ನಡೆಸಿ. ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ನಡೆಸಿ ಸರಿಪಡಿಸವುದಾಗಿ ಮಾನ್ಯ ಸಚಿವರು ಭರವಸೆ ನೀಡಿದರು.
H D Kumaraswamy

03/08/2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಹಿರಿಯೂರು.

ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ *ಶ್ರೀ ಹೆಚ್ ರಮೇಶ್ ಗೌಡ* ರವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ...
03/08/2025

ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ *ಶ್ರೀ ಹೆಚ್ ರಮೇಶ್ ಗೌಡ* ರವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಯುವ ಘಟಕದ ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಹಾಗೂ ಕಾರ್ಯಕರ್ತರ ಸಭೆಯು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾಜಿ ಶಾಸಕರಾದ ಶ್ರೀ ಕೆ ಎ ತಿಪ್ಪೇಸ್ವಾಮಿ ರವರು, ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಶೈಲಾ ಸಂತೋಜಿ ರಾವ್, ಬೆಂಗಳೂರು ನಗರದ ಕಾರ್ಯಾಧ್ಯಕ್ಷರಾದ ಶ್ರೀ ಕೆ ವಿ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ವಿ. ನಾಗೇಶ್ವರರಾವ್, ಯುವ ಘಟಕದ ಕಾರ್ಯಾಧ್ಯಕ್ಷರಾದ ಶ್ರೀ ಸುಗಮ್ ಗೌಡ, ಬೆಂಗಳೂರು ನಗರ ವಿಭಾಗಗಳ ಅಧ್ಯಕ್ಷರುಗಳಾದ ಶ್ರೀ ಅಫ್ರೋಜ್ ಬೇಗ್ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗ, ಶ್ರೀ ಫಣಿರಾಜ್ ಹಿರಿಯಣ್ಣ ಗೌಡ ಮಾಹಿತಿ ತಂತ್ರಜ್ಞಾನ ವಿಭಾಗ, ಶ್ರೀ ಎಂ ಗೋಪಾಲ ಕಾರ್ಮಿಕ ವಿಭಾಗ, ಶ್ರೀ ಜಿ. ವೇಲು ಪರಿಶಿಷ್ಟ ಜಾತಿ ವಿಭಾಗ, ಶ್ರೀ ಪಿ ಮಹೇಶ್ ಸೇವಾದಳ ವಿಭಾಗ, ವಿಧಾನಸಭಾ ಕ್ಷೇತ್ರ ಅಧ್ಯಕ್ಷರುಗಳಾದ ಶ್ರೀ ಎಂ ವೆಂಕಟಸ್ವಾಮಿ ಸಿ ವಿ ರಾಮನಗರ, ಶ್ರೀ ಬಿ ಆರ್ ಪ್ರಕಾಶ್ ವಿಜಯನಗರ, ಶ್ರೀ ವೇಣುಗೋಪಾಲ್ ಯಲಹಂಕ, ಶ್ರೀ ಆರ್ ಕುಮಾರ್ ಚಿಕ್ಕಪೇಟೆ, ಶ್ರೀ ಗಣೇಶ್ ಬೊಮ್ಮನಹಳ್ಳಿ, ಶ್ರೀ ಟಿ ಶಿವಕುಮಾರ್ ಸರ್ವಜ್ಞನಗರ ಹಾಗೂ ಯುವ ಘಟಕದ ಮುಖಂಡರು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

01/08/2025

ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ, ಜೆಪಿ ಭವನ, ಬೆಂಗಳೂರು.

ಅಸ್ಸಾಂ ರಾಜ್ಯದ ಬೋಕಾಜನ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಸುಧಾರಿತ ಜೀವರಕ್ಷಕ ಆಂಬ್ಯುಲೆನ್ಸ್ ಅನ್ನು ಸಮರ್ಪಿಸಿದ ಮಾನ್ಯ ಕೇಂದ್ರ...
31/07/2025

ಅಸ್ಸಾಂ ರಾಜ್ಯದ ಬೋಕಾಜನ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಸುಧಾರಿತ ಜೀವರಕ್ಷಕ ಆಂಬ್ಯುಲೆನ್ಸ್ ಅನ್ನು ಸಮರ್ಪಿಸಿದ ಮಾನ್ಯ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ ಶ್ರೀ ಅವರು.

ರಿಚರ್ಡ್‌ಸನ್ & ಕ್ರುಡ್ಡಾಸ್ ಲಿಮಿಟೆಡ್ ಮತ್ತು CCI ಬೋಕಾಜನ್ ಕಂಪನಿಗಳ CSR ಉಪಕ್ರಮದಿಂದ ಬೋಕಾಜನ್‌ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ತುರ್ತು ವೈದ್ಯಸೇವೆ ಒದಗಿಸಲು ಇದರಿಂದ ಸಹಕಾರಿ.

ಇದು ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಸ್ವಾವಲಂಬಿ ಈಶಾನ್ಯವನ್ನು ನಿರ್ಮಿಸಲು, ಬಲವಾದ ಕೈಗಾರಿಕೆ ಮತ್ತು ಸುಸ್ಥಿರ ಬೆಳವಣಿಗೆ ಮೂಲಕ ಪ್ರತೀ ಸಮುದಾಯವನ್ನು ಸಬಲೀಕರಣಗೊಳಿಸಲು ದೃಢನಿಶ್ಚಯ ಹೊಂದಿದೆ. ಜೈ ಹಿಂದ್ 🇮🇳

https://whatsapp.com/channel/0029VahzzauIHphK6U1avr1Dಕೆಳಗೆ ಕೊಟ್ಟಿರುವ ಲಿಂಕ್ ಒತ್ತಿ / QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಶ್ರೀ ಹೆಚ್...
31/07/2025

https://whatsapp.com/channel/0029VahzzauIHphK6U1avr1D

ಕೆಳಗೆ ಕೊಟ್ಟಿರುವ ಲಿಂಕ್ ಒತ್ತಿ / QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ಅಧಿಕೃತ "ವಾಟ್ಸಾಪ್ ಚಾನಲ್" ಗೆ ಸೇರಿರಿ.

31/07/2025

ಮಾಧ್ಯಮಗಳ ಮುಂದೆ ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರ ಒಗ್ಗಟ್ಟು ಪ್ರದರ್ಶನ.

Address

Bangalore

Alerts

Be the first to know and let us send you an email when Jds Karunadu posts news and promotions. Your email address will not be used for any other purpose, and you can unsubscribe at any time.

Share