Hosa Ithihas/ಹೊಸ ಇತಿಹಾಸ

Hosa Ithihas/ಹೊಸ ಇತಿಹಾಸ Contact information, map and directions, contact form, opening hours, services, ratings, photos, videos and announcements from Hosa Ithihas/ಹೊಸ ಇತಿಹಾಸ, Media/News Company, Belgaum.

12/09/2024
ಕಾಕತಿ ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಗದ್ದುಗೆ ಏರಿದ ವರ್ಷಾ ಮುಚ್ಚಂಡಿಕರ್, ರೇಣುಕಾ ಕೋಳಿ...ಕಾಕತಿ ಗ್ರಾಮ ಪಂಚಾಯತ್ ಎರಡನೆಯ ಅವಧಿಯ ಅಧ್ಯಕ್ಷ ಉ...
04/08/2023

ಕಾಕತಿ ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಗದ್ದುಗೆ ಏರಿದ ವರ್ಷಾ ಮುಚ್ಚಂಡಿಕರ್, ರೇಣುಕಾ ಕೋಳಿ...

ಕಾಕತಿ ಗ್ರಾಮ ಪಂಚಾಯತ್ ಎರಡನೆಯ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಜರುಗಿತು. ಅಧ್ಯಕ್ಷರ ಸ್ಥಾನಕ್ಕೆ ಮಹಿಳಾ ಸಾಮಾನ್ಯ ವರ್ಗ ಮೀಸಲಿದ್ದರೆ ಉಪಾಧ್ಯಕ್ಷ ಸ್ಥಾನಕ್ಕೆ ಮಹಿಳಾ ಸಾಮಾನ್ಯ ವರ್ಗ ಮೀಸಲಾಗಿತ್ತು.

ಎರಡು ಸ್ಥಾನಗಳು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿರುವುದ ರಿಂದ ಹಚ್ಚಿನ ಪೈಪೋಟಿ ನಿರೀಕ್ಷೆಯಲ್ಲಿತ್ತು, ಆದರೆ ಸಚಿವ ಸತೀಶ್ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಈ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿ ಮಾಡಲಾಯಿತು.
ಕಾಕತಿ ಗ್ರಾಮ ಪಂಚಾಯತ್ 37 ಸದಸ್ಯರ ಹೊಂದಿರುವ ಗ್ರಾಮ ಪಂಚಾಯತ್ ಹೆಚ್ಚಿನ ಸಂಖ್ಯಾಬಲ ಕಾಂಗ್ರೆಸ್ ಪಕ್ಷ ಬೆಂಬಲಿತ ಸದಸ್ಯರಿದ್ದಾರೆ. ಚುನಾವಣೆ ಸಂದರ್ಭದಲ್ಲಿ 37 ಸದಸ್ಯರ ಬಗ್ಗೆ 31 ಸದಸ್ಯರು ಹಾಜರಿದ್ದರು ,
ಅಧ್ಯಕ್ಷರಾಗಿ ವರ್ಷಾ ಲಕ್ಷ್ಮಣ್ ಮುಚ್ಚಂಡಿಕರ್, ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಜ್ಯೋತಿಬಾ ಕೋಳಿ ಇವರು ಅವಿರೋಧವಾಗಿ ಆಯ್ಕೆಯಾದರು.
ಮೊದಲನೆಯ ಅವಧಿಯ ಅಧ್ಯಕ್ಷರಾದ ಸುನಿಲ್ ಸುನಗಾರ್ ಅವರು ಮಾತನಾಡಿ ಕಾಕತಿ ಗ್ರಾಮ ಪಂಚಾಯತ್ ಒಂದು ಆದರ್ಶ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ನಾವು ಪ್ರಯತ್ನಿಶೀಲರಾಗಿರೋಣ ಎಂದು ನೂತನ ಅಧ್ಯಕ್ಷರಿಗೆ ಭರವಸೆ ನೀಡಿದರು. ನೂತನ ಅಧ್ಯಕ್ಷ ಉಪಾಧ್ಯಕ್ಷರ ಬೆಂಬಲಿಸಿದೆ ಎಲ್ಲಾ ಸದಸ್ಯರುಗಳಿಗೆ ಧನ್ಯವಾದಗಳು ಹೇಳಿ ಕಾಕತಿ ಗ್ರಾಮ ಪಂಚಾಯತವನ್ನು ಅಭಿವೃದ್ಧಿ ಹಾಗೂ ಮಾದರಿಯ ಗ್ರಾಮ ಪಂಚಾಯತಿಯನ್ನಾಗಿ ಮಾಡೋಣ ಎಂದು ಕರೆ ಕೊಟ್ಟರು.

ಮರಕಟ್ಟಿ ಗ್ರಾಮ ಪಂಚಾಯತ್ಅಧ್ಯಕ್ಷರಾಗಿ ವಿಠಲ್ ತಳವಾರ್ ಆಯ್ಕೆ…!!ಪ್ರಕೃತಿ ಬೆಳಗಾವಿ ಸುದ್ದಿ : ಬೈಲಹೊಂಗಲ್ ತಾಲೂಕಿನಮರಕಟ್ಟಿ ಗ್ರಾಮ ಪಂಚಾಯಿತಿ ಎ...
04/08/2023

ಮರಕಟ್ಟಿ ಗ್ರಾಮ ಪಂಚಾಯತ್
ಅಧ್ಯಕ್ಷರಾಗಿ ವಿಠಲ್ ತಳವಾರ್ ಆಯ್ಕೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೈಲಹೊಂಗಲ್ ತಾಲೂಕಿನ
ಮರಕಟ್ಟಿ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ
ಅಧ್ಯಕ್ಷರಾದ ವಿಠಲ ಚಂದ್ರಪ್ಪ ತಳವಾರ
ಆಯ್ಕೆಯಾಗಿದ್ದಾರೆ.
ಅವರಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಜಿಲ್ಲಾ ಅಧ್ಯಕ್ಷರು
ಸಚಿನ್ ಲಕ್ಷ್ಮಣ್ ದಡ್ಡಿ ಇವರು ಮತ್ತು ರವಿ ತಳವಾರ್ ಶ್ರೀಪಾದ್ ಬಿರ್ಚಿ
ಈರಣ್ಣ ಇವರೆಲ್ಲರೂ ಸೇರಿ ಅಧ್ಯಕ್ಷರಿಗೆ ಸನ್ಮಾನ
ಮಾಡಲಾಯಿತು.****
****

ಬೈಲಹೊಂಗಲ್ ತಾಲೂಕಿನ ಮರಕಟ್ಟಿ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾದ ವಿಠಲ ಚಂದ್ರಪ್ಪ ತಳವಾರ ಆಯ್ಕೆಯಾಗಿದ್ದಾರೆ.
ಅವರಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಜಿಲ್ಲಾ ಅಧ್ಯಕ್ಷರು ಸಚಿನ್ ಲಕ್ಷ್ಮಣ್ ದಡ್ಡಿ ಇವರು ಮತ್ತು ರವಿ ತಳವಾರ್ ಶ್ರೀಪಾದ್ ಬಿರ್ಚಿ ಈರಣ್ಣ ಇವರೆಲ್ಲರೂ ಸೇರಿ ಅಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು.

ಸಂವಿಧಾನ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆ ಸಮಾನತೆ: ಉಸ್ತುವಾರಿ ಸಚಿವ ಕಾರಜೋಳ...ಬೆಳಗಾವಿ : “ಗಣತಂತ್ರ ಭಾರತವು ಭಾರತದ ಪ್ರತಿ ಪ್ರಜೆಗೂ ಪರಮಾಧ...
26/01/2023

ಸಂವಿಧಾನ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆ ಸಮಾನತೆ: ಉಸ್ತುವಾರಿ ಸಚಿವ ಕಾರಜೋಳ...

ಬೆಳಗಾವಿ : “ಗಣತಂತ್ರ ಭಾರತವು ಭಾರತದ ಪ್ರತಿ ಪ್ರಜೆಗೂ ಪರಮಾಧಿಕಾರವನ್ನು ಘೋಷಿಸಿದೆ. ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ದಯಪಾಲಿಸಿದೆ. ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ” ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.74ನೇ ಗಣರಾಜ್ಯೋತ್ಸವ ಅಂಗವಾಗಿ ಗುರುವಾರ (ಜ.26) ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ 75 ವರ್ಷಗಳಲ್ಲಿ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟವಾಗಿ ಹೊರಹೊಮ್ಮಲು ಈ ಸಂವಿಧಾನವೇ ಮಾರ್ಗದರ್ಶಿಯಾಗಿದೆ.

ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ನಮ್ಮ ಬೆಳಗಾವಿ ಜಿಲ್ಲೆ ಕರ್ನಾಟಕದ ಜಿಲ್ಲೆಗಳಲ್ಲಿ ಹಿರಿದಾದ ಸ್ಥಾನಪಡೆದಿದೆ. ಇಲ್ಲಿನ ಜನರು ಧರ್ಮ ಸಹಿಷ್ಣುಗಳು. ಭಾಷಾ ವೈವಿಧ್ಯತೆಯ ನಡುವೆಯೂ ಏಕತೆಯನ್ನು ಮೆರೆದವರು ಅದಕ್ಕಾಗಿ ಅವರನ್ನು ಅಭಿನಂದಿಸುತ್ತಿದ್ದೇನೆ ಎಂದು ಸಚಿವ ಗೋವಿಂದ ಕಾರಜೋಳ ಅವರು ಹೇಳಿದರು.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಬೆನಕೆ, ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ಉತ್ತರ ವಲಯ ಐಜಿಪಿ ಎನ್.ಸತೀಶ್ ಕುಮಾರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್. ಹೆಚ್.ವಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿವಿಧ ಶಾಲಾ-ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಣ್ಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ....ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನವದೆಹಲಿಯಲ್...
26/01/2023

ಕಣ್ಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ....

ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನವದೆಹಲಿಯಲ್ಲಿ ನಡೆಯುತ್ತಿರುವ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು.
ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ನಾರಿಶಕ್ತಿ ಎಲ್ಲರ ಗಮನ ಸೆಳೆದಿದೆ. ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ.ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ವೃಕ್ಷ ಮಾತೆ ಮತ್ತು ಸಾಲುಮರದ ತಿಮ್ಮಕ್ಕ ಅವರು ಸಮಾಜಕ್ಕೆ ಸಲ್ಲಿಸಿದ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಇಂದು ಬಿಜೆಪಿ ದೂರುಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಮಿಕ್ಸರ್ ಹಾಗೂ ...
26/01/2023

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಇಂದು ಬಿಜೆಪಿ ದೂರು

ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಮಿಕ್ಸರ್ ಹಾಗೂ ಸ್ಟೀಲ್‌ ಬಾಕ್ಸ್‌ಗಳನ್ನು ಮತದಾರರಿಗೆ ಹಂಚುತ್ತಿದ್ದಾರೆ.ಈ ಬಗ್ಗೆ ಜನವರಿ 26ರಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಭ್ರಷ್ಟಾಚಾರ ಬಗ್ಗೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೂರು ನೀಡಿದ್ದಾರೆ.
ರಮೇಶ ಅವರು 6 ಸಾವಿರ ರೂಪಾಯಿ ಹಂಚಿರುವ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು, ಮಿಕ್ಸರ್ ಹಂಚಿಕೆ ಬಗ್ಗೆ ವಿಡಿಯೊ ತೋರಿಸಿದರು.

ಡಿಸಿ ನಿತೇಶ್ ಪಾಟೀಲರಿಗೆ ರಾಜ್ಯಮಟ್ಟದ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿ ಪ್ರದಾನ..ಬೆಳಗಾವಿ : ಭಾರತ ಚುನಾವಣಾ ಆಯೋಗದ ವತಿಯಿಂದ ...
26/01/2023

ಡಿಸಿ ನಿತೇಶ್ ಪಾಟೀಲರಿಗೆ ರಾಜ್ಯಮಟ್ಟದ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿ ಪ್ರದಾನ..

ಬೆಳಗಾವಿ : ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಪ್ರದಾನ ಮಾಡಲಾಯಿತು.
ಚುನಾವಣಾ ಆಯೋಗದ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಬುಧವಾರ(ಜ.25) ಏರ್ಪಡಿಸಲಾಗಿದ್ದ “13ನೇ ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ನೀಡಲಾಯಿತು.

ಇದೇ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರರಾಗಿರುವ ರಾಜೇಶ್ ಬುರ್ಲಿ ಅವರಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ವಿಭಾಗದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮತದಾರರ ನೋಂದಣ , ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣ ಸಿ ವಿವಿಧ ವಿಭಾಗಗಳಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿರುತ್ತದೆ.

ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಭಾಗಿಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್...
26/01/2023

ಮಂದಿರ ಉದ್ಘಾಟನೆ ಸಮಾರಂಭದಲ್ಲಿ
ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಭಾಗಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ವಿಠ್ಠಲ ರುಕ್ಮೀಣಿ ಮಂದಿರದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾದರು.

ದೇವರ ದರ್ಶನ, ಆಶೀರ್ವಾದ ಪಡೆದ ಅವರು, ಸಾಮೂಹಿಕ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರಲ್ಲದೆ ಪ್ರಸಾದ ವಿತರಣೆಯಲ್ಲೂ ಭಾಗಿಯಾದರು.

ಈ ಸಮಯದಲ್ಲಿ ಉಳವಪ್ಪ ಮಲ್ಲಣ್ಣವರ, ಶಂಕರಗೌಡ ಪಾಟೀಲ, ಅಡಿವೇಶ ಇಟಗಿ, ಶ್ರೀಕಾಂತ, ರಾಮನಗೌಡ ಪಾಟೀಲ, ಚನ್ನಪ್ಪ ಹಿರೇಹೊಳಿ, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶಾಕ್:‌ ಶಿಸ್ತು ಸಮಿತಿ ನೋಟಿಸ್‌ ಜಾರಿಬೆಂಗಳೂರು: ಶಾಸಕ ಯತ್ನಾಳ್ ಇತ್ತೀಚಿನ ಹೇಳಿಕೆಗಳಿಂದ ಶಿಸ್ತಿನಿ ಪಕ್ಷವಾದ ...
26/01/2023

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶಾಕ್:‌
ಶಿಸ್ತು ಸಮಿತಿ ನೋಟಿಸ್‌ ಜಾರಿ

ಬೆಂಗಳೂರು: ಶಾಸಕ ಯತ್ನಾಳ್ ಇತ್ತೀಚಿನ ಹೇಳಿಕೆಗಳಿಂದ ಶಿಸ್ತಿನಿ ಪಕ್ಷವಾದ ಬಿಜೆಪಿಯಲ್ಲಿ ಮುಜುಗಕ್ಕಿಡಾಗುವ ಪ್ರಶ್ನೆ ಹುಟ್ಟುತ್ತಿವೆ. ಹೀಗಾಗಿ ಮುರುಗೇಶ್‌ ನಿರಾಣಿ ವಿರುದ್ಧ ಯತ್ನಾಳ್ ಬಳಸಿದ ಪಿಂಪ್ ಪದದಿಂದ ಹೈಕಮಾಂಡ್ ಕಾರಣ ಕೇಳಿ ಶೋಕಾಸ್ ನೋಟಿಸ್‌ ಜಾರಿ ಮಾಡಿದೆ.

ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್‌ ಕೊಟ್ಟಿದ್ದು, 10 ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ. 2 ದಿನಗಳ ಹಿಂದೆಯಷ್ಟೇ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಈ ಮಧ್ಯೆ, ಸೂಕ್ತಕಾಲದಲ್ಲಿ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತದೆ. ಟಿಕೆಟ್ ನೀಡುವಾಗ ಎಲ್ಲಾ ವಿಚಾರ ಪರಿಗಣನೆ ಆಗುತ್ತದೆ. ಜನನೂ ಪಾಠ ಕಲಿಸುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಅದು ಬಿಜೆಪಿ ಕಾರ್ಯಕ್ರಮ ಅಲ್ಲ, ಸಮಾವೇಶಕ್ಕೆ ಹೋಗುವ ಅಗತ್ಯ ನನ್ನಗಿಲ್ಲ: ಸಂಜಯ ಪಾಟೀಲ ಬೆಳಗಾವಿ: ತಾಲೂಕಿನ ಸುಳೆಬಾವಿಯಲ್ಲಿ ಶಾಸಕ ರಮೇಶ ಜಾರಕಿಹೊ...
26/01/2023

ಅದು ಬಿಜೆಪಿ ಕಾರ್ಯಕ್ರಮ ಅಲ್ಲ, ಸಮಾವೇಶಕ್ಕೆ ಹೋಗುವ ಅಗತ್ಯ ನನ್ನಗಿಲ್ಲ: ಸಂಜಯ ಪಾಟೀಲ

ಬೆಳಗಾವಿ: ತಾಲೂಕಿನ ಸುಳೆಬಾವಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾದ ಸಮಾವೇಶಕ್ಕೆ ಸ್ವಪಕ್ಷದ ಸಂಜಯ ಪಾಟೀಲ ನಾನು ಅಲ್ಲಿಗೆ ಹೋಗುವ ಅಗತ್ಯವಿಲ್ಲ ಎಂದು ಸಂಜಯ ಪಾಟೀಲ ಮಾದ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಗ್ರಾಮೀಣ ರಾಜಕಾರಣ ರಾಜ್ಯ ಮಟ್ಟದಲ್ಲಿ ಬಿರುಗಾಳಿ ಎಬಿಸಿದ್ದು, ಶಾಸಕಿ ಲಕ್ಷ್ಮೀಯನ್ನು ಹಣಿಯಲು ರಮೇಶ ಪದೇ ಪದೇ ಗ್ರಾಮೀಣ ಪ್ರದೇಶಕ್ಕೆ ಎಂಟ್ರಿ ಕೊಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಇಂದು ಬೃಹತ್‌ ಸಮಾವೇಶ ಆಯೋಜನೆ ಮಾಡಿಕೊಂಡಿದ್ದು. ಇದಕ್ಕೆ ಸಂಜಯ ಪಾಟೀಲ ಅವರು ಖುದ್ದಾಗಿ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಸಮಾವೇಶದಲಲಿ ಬಿಜೆಪಿ ಬ್ಯಾನರ್ ಇರುವದಿಲ್ಲ. ಅದು ಬಿಜೆಪಿ ಕಾರ್ಯಕ್ರಮ ಅಲ್ಲ. ಅಂತ ಸ್ಥಳದಲ್ಲಿ ನಾನು ಒರ್ವ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಹೋಗುವದು ಸರಿಯಲ್ಲ. ರಮೇಶ ಜಾರಕಿಹೊಳಿ ಅವರ ಬಗ್ಗೆ ನನಗೆ ಗೌರವ ಇದೆ. ಆದರೆ ಇದು ಬಿಜೆಪಿ ಕಾರ್ಯಕ್ರಮ ಅಲ್ಲ ಅನ್ನುವ ನಿಟ್ಟಿನಲ್ಲಿ ನಾನು ಅಲ್ಲಿ ಹೋಗುವದಿಲ್ಲ ಎಂದು ನುಡಿದರು.

ಧ್ವಜಾರೋಹಣ ಚಿಕ್ಕೋಡಿ ಎಸಿ ಯಡವಟ್ಟು: ಶೂ ಹಾಕಿಕೊಂಡೆ ಧ್ವಜಾರೋಹಣ..ಚಿಕ್ಕೋಡಿ: ಧ್ವಜಾರೋಹಣ ವೇಳೆ ಚಿಕ್ಕೋಡಿ ಎಸಿ ಯಡವಟ್ಟು ಮಾಡಿಕೊಂಡಿದ್ದು, ಸಾಮ...
26/01/2023

ಧ್ವಜಾರೋಹಣ ಚಿಕ್ಕೋಡಿ ಎಸಿ ಯಡವಟ್ಟು:
ಶೂ ಹಾಕಿಕೊಂಡೆ ಧ್ವಜಾರೋಹಣ..

ಚಿಕ್ಕೋಡಿ: ಧ್ವಜಾರೋಹಣ ವೇಳೆ ಚಿಕ್ಕೋಡಿ ಎಸಿ ಯಡವಟ್ಟು ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ತರಾತುರಿಯಲ್ಲಿ ಬೂಟು ಕಾಲಿನಲ್ಲೇ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ಅಂಬೇಡ್ಕರ್ ಹಾಗೂ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲು ಮುಂದಾಗಿದ್ದಾರೆ. ಸಿಬ್ಬಂದಿಗಳು ಹೇಳಿದ ಬಳಿಕ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಶೂ ಬಿಚ್ಚಿದ್ದಾರೆ. ಶೂವನ್ನ ಸಿಬ್ಬಂದಿಗಳು ಕೈಯಿಂದ ತೆಗೆದು ಬೆರೆಡೆಗೆ ಇಟ್ಟಿದ್ದಾರೆ.

ಮಾಧವ ಗಿತ್ತೆ ಅವರು ಎಲ್ಲಾ ರಾಜಕೀಯ ಗಣ್ಯರು ಬಂದು ಕುಳಿತ ಬಳಿಕ 9:15ಕ್ಕೆ ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದರು. ಎ.ಸಿ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Address

Belgaum

Website

Alerts

Be the first to know and let us send you an email when Hosa Ithihas/ಹೊಸ ಇತಿಹಾಸ posts news and promotions. Your email address will not be used for any other purpose, and you can unsubscribe at any time.

Share