Innews

Innews IN News is a leading news channel in North Karnataka, India. Covering daily news & events for Belgavi Call for commercial Ads 9902687265
(2)

05/06/2026

ಬೆಳಗಾವಿ
ನಗರದಲ್ಲಿನ ಭಾಗ್ಯನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಬಹುಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಪರಿಶೀಲನೆ ಮತ್ತು ದಾಳಿ ಕಾರ್ಯ ಶುಕ್ರವಾರ ಎರಡನೇ ದಿನವೂ ಮುಂದುವರಿಸಿ ಕಚೇರಿ ಸೀಜ್ ಮಾಡಿದರು.
ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣಕುಮಾರ ನಾಯಕ್ ನೇತೃತ್ವದ ತಂಡ ಕಂಪನಿಯ ಮುಖ್ಯ ಕಚೇರಿಗೆ ಭೇಟಿ ನೀಡಿ ದಾಖಲೆಗಳು, ಹೂಡಿಕೆ ಮಾಹಿತಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆ ನಡೆಸಿತು. ಈ ವೇಳೆ ಕಚೇರಿಯನ್ನು ಸೀಜ್ ಮಾಡುವ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಕೆಲ ಮಹಿಳಾ ಸಿಬ್ಬಂದಿಗಳು ಭಾವನಾತ್ಮಕವಾಗಿ ಕಣ್ಣೀರು ಹಾಕಿದ ಘಟನೆ ನಡೆಯಿತು. ಹೊರಗಡೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಠೇವಣಿದಾರರು ಕಣ್ಣೀರು ಹಾಕಿದರು.
ಭಾಗ್ಯನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಸುಮಾರು 72 ಮಂದಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದು, ಕಳೆದ ಎರಡು ದಿನಗಳಿಂದ ಅಧಿಕಾರಿಗಳು ಸಿಬ್ಬಂದಿಯಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಅಗತ್ಯವಿದ್ದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಕಂಪನಿಯ ವಿರುದ್ಧ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆಯುತ್ತಿದೆ. ಎರಡು ದಿನಗಳ ಪರಿಶೀಲನೆ ಹಾಗೂ ದಾಳಿ ಕುರಿತ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದ್ದು, ಜಿಲ್ಲಾಧಿಕಾರಿಗಳ ಸೂಚನೆಯಂತೆ ಕಚೇರಿಯನ್ನು ಸೀಜ್ ಮಾಡಿ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ಬರ್ಡ್ಸ್ ಮತ್ತು ಕೆಪಿಐಡಿ ಕಾಯ್ದೆಯಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದ್ದು, ಹೂಡಿಕೆದಾರರ ಹಣಕಾಸು ವ್ಯವಹಾರಗಳ ಕುರಿತು ಸಮಗ್ರ ತನಿಖೆ ಮುಂದುವರಿದಿದೆ.

ಬೆಳಗಾವಿಯಲ್ಲಿ ಪರಿಸರ ದಿನಾಚರಣೆ ಮತ್ತು ‘ಗೋಲ್ಡನ್ ಆರೋ’ ಪ್ರಶಸ್ತಿ ಪ್ರದಾನ: 120 ಕಬ್ಸ್ ಮತ್ತು ಬುಲ್‌ಬುಲ್‌ಗಳಿಗೆ ಅತ್ಯುನ್ನತ ಗೌರವ!• ಜೈನ್ ಹ...
05/06/2026

ಬೆಳಗಾವಿಯಲ್ಲಿ ಪರಿಸರ ದಿನಾಚರಣೆ ಮತ್ತು ‘ಗೋಲ್ಡನ್ ಆರೋ’ ಪ್ರಶಸ್ತಿ ಪ್ರದಾನ: 120 ಕಬ್ಸ್ ಮತ್ತು ಬುಲ್‌ಬುಲ್‌ಗಳಿಗೆ ಅತ್ಯುನ್ನತ ಗೌರವ!
• ಜೈನ್ ಹೆರಿಟೇಜ್ ಶಾಲೆಯಲ್ಲಿ ಭವ್ಯ ಪರಿಸರ ದಿನಾಚರಣೆ
• 120 ವಿದ್ಯಾರ್ಥಿಗಳಿಗೆ ಗೋಲ್ಡನ್ ಆರೋ ಪ್ರಶಸ್ತಿ
• ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಜಿಲ್ಲಾ ನ್ಯಾಯಾಧೀಶರು
• ಸೀಡ್ ಬಾಲ್ ಔಷಧೀಯ ಸಸ್ಯಗಳ ಪ್ರದರ್ಶನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಷ್ಠಿತ "ಗೋಲ್ಡನ್ ಆರೋ ಪ್ರಶಸ್ತಿ ಪ್ರದಾನ ಸಮಾರಂಭ-2026" ಅತ್ಯಂತ ಯಶಸ್ವಿಯಾಗಿ ನೆರವೇರಿತು. ಪರಿಸರ ಸಂರಕ್ಷಣೆಯ ಜಾಗೃತಿಯೊಂದಿಗೆ ಜಿಲ್ಲೆಯ ನೂರಕ್ಕೂ ಹೆಚ್ಚು ಸಾಧಕ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
"ಪ್ರಕೃತಿಯಿಂದ ಪ್ರೇರಿತ - ಭವಿಷ್ಯಕ್ಕಾಗಿ ಹವಾಮಾನ" ಎಂಬ ಪರಿಕಲ್ಪನೆಯಡಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರತಿನಿಧಿ ಹಾಗೂ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಕೆ. ಎನ್. ಶಿವಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಜೈನ್ ಹೆರಿಟೇಜ್ ಶಾಲೆಯ ಕಬ್ಸ್ ಮತ್ತು ಬುಲ್‌ಬುಲ್ಸ್ ವಿದ್ಯಾರ್ಥಿಗಳು ಔಷಧೀಯ ಸಸ್ಯಗಳು, ಸೀಡ್ ಬಾಲ್ ಹಾಗೂ ಕಾಂಪೋಸ್ಟ್ ಪಿಟ್‌ ಒಳಗೊಂಡ ಆಕರ್ಷಕ ಪ್ರದರ್ಶನವನ್ನು ಪ್ರಸ್ತುತಪಡಿಸಿ, ಪರಿಸರ ಸಂರಕ್ಷಣೆಯ ಸವಾಲುಗಳಿಗೆ ಸರಳ ಪರಿಹಾರಗಳನ್ನು ಆತ್ಮವಿಶ್ವಾಸದಿಂದ ವಿವರಿಸಿದರು. ಶಾಲೆಯ ಆವರಣದಲ್ಲಿ ಗಿಡ ನೆಡುವ ಅಭಿಯಾನ ಹಾಗೂ ಪರಿಸರ ಜಾಗೃತಿ ಪ್ರದರ್ಶನವನ್ನು ಆಯೋಜಿಸುವ ಮೂಲಕ ಭವಿಷ್ಯದ ಪೀಳಿಗೆಗೆ ಪ್ರಕೃತಿಯನ್ನು ಉಳಿಸುವ ದೃಢ ಸಂಕಲ್ಪವನ್ನು ವಿದ್ಯಾರ್ಥಿಗಳು ತೋರ್ಪಡಿಸಿದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬೆಳಗಾವಿ ಜಿಲ್ಲೆಯ ಒಟ್ಟು 120 ಕಬ್ಸ್ ಮತ್ತು ಬುಲ್‌ಬುಲ್ಸ್ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅತ್ಯುನ್ನತ ಗೌರವವಾದ "ಗೋಲ್ಡನ್ ಆರೋ ಪ್ರಶಸ್ತಿ 2026" ಅನ್ನು ನೀಡಿ ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಹಿರಿಯ ಅಧಿಕಾರಿಗಳಾದ ಶ್ರೀ ಗೋಪಾಲ್ ಕೃಷ್ಣ ಸಾಂತಂಗಿ, ಪರಿಸರ ಅಧಿಕಾರಿ ಶ್ರೀ ಹನುಮಂತಪ್ಪ, ವಿಜ್ಞಾನಿ ಡಾ. ಪಾಟೀಲ್ ಹಾಗೂ ಬಿ.ಎಸ್.ಜಿ ಅಧಿಕಾರಿಗಳಾದ ಶ್ರೀ ವಿಠ್ಠಲ್ ಎಸ್.ಬಿ. ಮತ್ತು ಶ್ರೀ ರಾಜಕುಮಾರ್ ಕೆ. ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ ನಾಯಕತ್ವ ಹಾಗೂ ಪರಿಸರ ಕಾಳಜಿಯನ್ನು ಶ್ಲಾಘಿಸಿದರು. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ರೋಹಿಣಿ ಕೆ. ಬಿ., ಮುಖ್ಯ ಆಡಳಿತಾಧಿಕಾರಿ ಶ್ರೀಮತಿ ಅಮೀ ದೋಷಿ ಮಾರ್ಗದರ್ಶನ ನೀಡಿದ್ದು, ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಶಿಕ್ಷಕರಾದ ಶ್ರೀಮತಿ ಪಲ್ಲವಿ ನಾಡಕರ್ಣಿ ಮತ್ತು ಶ್ರೀ ಸಾಗರ್ ಅವರ ಸಮರ್ಪಣಾ ಭಾವದ ಸೇವೆಯನ್ನು ಆಡಳಿತ ಮಂಡಳಿ ಮುಕ್ತಕಂಠದಿಂದ ಪ್ರಶಂಸಿಸಿತು.

05/06/2026

ಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್
❤️

ಬೆಳಗಾವಿಯ ‘ಕಾಹೆರ್’ 16ನೇ ಘಟಿಕೋತ್ಸವ: 1,810 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ; ಹೆಣ್ಣುಮಕ್ಕಳಿಗೆ ಸುವರ್ಣ ಪದಕಗಳ ಸುರಿಮಳೆ!ತಂತ್ರಜ್ಞಾನದ ಜೊತ...
05/06/2026

ಬೆಳಗಾವಿಯ ‘ಕಾಹೆರ್’ 16ನೇ ಘಟಿಕೋತ್ಸವ: 1,810 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ; ಹೆಣ್ಣುಮಕ್ಕಳಿಗೆ ಸುವರ್ಣ ಪದಕಗಳ ಸುರಿಮಳೆ!

ತಂತ್ರಜ್ಞಾನದ ಜೊತೆ ಸಾಮಾಜಿಕ ಬದ್ಧತೆಯಿರಲಿ ;ಡಾ. ವಿದ್ಯಾ ಯರವಡೇಕರ

ಬೆಳಗಾವಿಯ ಕಾಹೆರ್ ಸಂಸ್ಥೆಯ 16ನೇ ಘಟಿಕೋತ್ಸವ

ಒಟ್ಟು 1810 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಸಾಧನೆ ಜಗತ್ತಿನಲ್ಲಿ ಹೆಣ್ಣುಮಕ್ಕಳಿಗೆ ಸುವರ್ಣ ಪದಕಗಳ

ತಂತ್ರಜ್ಞಾನದ ಜೊತೆ ಸಾಮಾಜಿಕ ಬದ್ಧತೆಯಿರಲಿ ;ಡಾ. ವಿದ್ಯಾ ಯರವಡೇಕರ

ತಾಯಿ ನಿಮಗೆ ಜನ್ಮ ನೀಡಿದ ದಿನ ಅತ್ಯಂತ ಮುಖ್ಯವಾಗಿದ್ದು, ಅದರಂತೆ ನೀವು ಪದವಿ ಪಡೆಯುತ್ತಿರುವದು ಸಾಮಾಜಿಕ ಜನ್ಮ. ಹೊಸ ಜೀವನ ಆರಂಭವಾಗಿದೆ. ಇಲ್ಲಿಯವರೆಗೆ ನಿಮ್ಮನ್ನು ನಿಮ್ಮ ಪಾಲಕರು, ಕುಟುಂಬ, ಸ್ನೇಹಿತರು ಬೆಂಬಲಿಸಿದ್ದಾರೆ. ಆದರೆ ಇಂದಿನಿಂದ ನೀವು ಸಮಾಜದಲ್ಲಿ ವೈದ್ಯರು ಮತ್ತು ಆರೋಗ್ಯ ವೃತ್ತಿಪರರಾಗಿ ಹೊಸ ಜವಾಬ್ದಾರಿಗಳನ್ನು ನಿಭಾಯಿಸಬೇಕು. ಜಗತ್ತು ತುಂಬಾ ವಿಭಿನ್ನವಾಗಿದೆ. ವೈದ್ಯಕೀಯ ಜ್ಞಾನ ಮಾತ್ರ ಸಾಕಾಗುವುದಿಲ್ಲ. ಜಾಗತಿಕ ಬೆಳವಣಿಗೆಗಳು, ತಂತ್ರಜ್ಞಾನ, ಸಮಾಜದ ಅಗತ್ಯತೆಗಳನ್ನು ಅರಿತುಕೊಂಡು ಸಾಮಾಜಿಕ ಬದ್ದತೆ ಹಾಗೂ ಕಳಕಳಿಯಿಂದ ಮುನ್ನಡೆಯಬೇಕೆಂದು ಪೂನೆಯ ಸಿಂಬಾಸಿಸ್ ಸೊಸಾಯಟಿಯ ಪ್ರನ್ಸಿಪಲ್ ಡೈರೆಕ್ಟರ ಹಾಗೂ ಸಿಂಬಾಸಿಸಿ ಇಂಟರನ್ಯಾಶನಲ್ ಯುನಿರ್ವಸಿಸಿಟಯ ಪ್ರೊ ಚಾನ್ಸಲರ ಡಾ. ವಿದ್ಯಾ ಯರವಡೇಕರ ಹೇಳಿದರು.

ಬೆಳಗಾವಿಯ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಡೀಮ್ಡ್ ಟು ಬಿ ಯುನಿವರ್ಸಿಟಿ) 16ನೇ ಘಟಿಕೋತ್ಸವದಲ್ಲಿಂದು ಅವರು ಮಾತನಾಡಿದರು. ತಂತ್ರಜ್ಞಾನವು ಅದರಲ್ಲಿಯೂ ಮುಖ್ಯವಾಗಿ ಕೃತಕ ಬುದ್ಧಿಮತ್ತೆಯು ಆರೋಗ್ಯ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳನ್ನು ಮಾರ್ಪಡಿಸುತ್ತದೆ. ಹಳ್ಲೀಯಾಗಿರಲಿ, ದೊಡ್ಡ ನಗರವಾಗಿರಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಿ. ನಿರಂತರವಾಗಿ ಅದನ್ನು ಅಭ್ಯಸಿಸಿ. ತಂತ್ರಜ್ಞಾನ ಬಳಸುವಾಗ ರೋಗಿಯ ಕಡೆ ಆದ್ಯತೆ ಇರಲಿ. ಒಳ್ಳೆಯ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ. ರೋಗಿಗಳೊಂದಿಗೆ ಮಾತನಾಡಿ, ಅವರ ಸಮಸ್ಯೆಯನ್ನು ಆಲಿಸಿ, ರೋಗಿಗಳಿಗೆ ಔಷಧಕ್ಕಿಂತ ಹೆಚ್ಚು ಅಗತ್ಯವಿರುವುದು ಅವರ ಸಮಸ್ಯೆಗಳನ್ನು ಆಲಿಸುವದಾಗಿದೆ ಎಂದು ಸಲಹೆ ನೀಡಿದರು. ಬೈಟ್

ವಾರ್ಧಾ ಸವಾಂಗಿಯ ದತ್ತಾ ಮೆಘೆ ಇನ್ಸ್ಟಿಟ್ಯೂಟ್ ಆಫ್ ಹೈಯರ ಎಜ್ಯುಕೇಶನ್ ಆಂಡ ರಿಸರ್ಚನ ಉಪಕುಲಪತಿ ಡಾ. ಲಲಿತಭೂಷಣ ವಾಘ್ಮರೆ ಅವರು ಮಾತಣಾಡಿ, ಸಾಧಕರು ಜೀವನದಲ್ಲಿ ನಾವು ಅನುಸರಿಸಬೇಕಾದ ಆದರ್ಶ ವ್ಯಕ್ತಗಳಾಗಿದ್ದಾರೆ. ಜೀವನದಲ್ಲಿ ಕೆಲವರಿಗೆ ಸಮಯವಿರುತ್ತದೆ, ಕೆಲವರಿಗೆ ಜ್ಞಾನ ಮತ್ತು ಮೌಲ್ಯವಿರುತ್ತದೆ, ಕೆಲವರು ಸೌಂದರ್ಯ ಮತ್ತು ಶೈಲಿಯನ್ನು ಹೊಂದಿರುತ್ತಾರೆ, ಮತ್ತಿತರರು ವೃತ್ತಿಪರತೆಯನ್ನು ಹೊಂದಿರುತ್ತಾರೆ. ಆದರೆ ಈ ಎಲ್ಲ ಗುಣಗಳ ಸಮನ್ವಯ ಒಂದೇ ವ್ಯಕ್ತಿಯಲ್ಲಿ ಕಾಣುವುದು ಅಪರೂಪ ಎಂದ ಅವರು ಪಾಲಕರು ನಿಮ್ಮ ಜೀವನದ ನಿಜವಾದ ಹೂಡಿಕೆದಾರರು. ಅವರ ಶ್ರಮದಿಂದ ನಿಮ್ಮ ಯಶಸ್ಸಿನ “ಸ್ಟಾರ್ಟ್ಅಪ್” ಇಂದು ಬೆಳಕನ್ನು ಕಂಡಿದೆ. ಇದು ಅವರ ಕನಸಿನ ಮುಂದುವರಿದ ಹಂತ. ಆತ್ಮವಿಶ್ವಸದಿಂದ ಜೀವನದಲ್ಲಿ ಮುನ್ನುಗ್ಗಿ. ಪದವಿ ಪಡೆಯುವದು ಅಂತಿಮವಲ್ಲ ಇದು ಪ್ರಾರಂಭ. ಆದರೆ ನಿರಂತರ ಅಭ್ಯಾಸದಿಂದ ಮಾತ್ರ ನೈಪುಣ್ಯ ಬರುತ್ತದೆ. ವೃತ್ತಿಪರರಾಗಿರಿ, ಆದರೆ ಜೀವನವನ್ನೂ ಆನಂದಿಸಿ. ನಿಮ್ಮ ಮಾನಸಿಕ ಆರೋಗ್ಯದ ಬಗ್ಗೆ ಗಮನ ಕೊಡಿ. ಕುಟುಂಬ, ಸ್ನೇಹಿತರು ಮತ್ತು ಸಾಮಾಜಿಕ ಸಂಬಂಧಗಳನ್ನು ಬೆಳೆಸಿಕೊಳ್ಳಿ. ಕೇವಲ ವೃತ್ತಿಜೀವನವೇ ಸಾಕಾಗುವುದಿಲ್ಲ. ಕುತುಹಲವೇ ಜೀವನದ ಯಶಸ್ಸಿನ ಮೆಟ್ಟಿಲು. ಕೃತಕ ಬುದ್ದಿಮತ್ತೆ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ ಆದರೆ ಆ ಪ್ರಶ್ನೆ ನಿಮ್ಮಲ್ಲಿದೆ. ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚುತ್ತಿದೆ. ನೀವು ಸಮಾಜ ಸೇವೆಯಲ್ಲಿರಬೇಕಾದರೆ ಹಾಲಿಗೆ ಸಕ್ಕರೆ ಸೇರಿಸಿದಂತೆ ಇದ್ದಾಗ ಮಾತ್ರ ನಿಮ್ಮಿಂದ ಸಮಾಜ ಇನ್ನಷ್ಟು ಸುಂದರವಾಗಲಿ. ಇದು ನಿಮ್ಮ ಜೀವನದ ಪ್ರಾರಂಭ ಮಾತ್ರ ಎಂದು ಎಚ್ಚರಿಕೆ ನೀಡಿದರು. ಬೈಟ್

ಅಮೇರಿಕಾದ ಥಾಮಸ್ ಜೆಪ್ಪರಸನ್ ವಿಶ್ವವಿದ್ಯಾಲಯದ ಹಿರಿಯ ಯುರಾಲಾಜಿಸ್ಟ ಡಾ. ಲಿಯೋನಾರ್ಡ ಗೊಮೆಲ್ಲೊ ಅವರಿಗೆ ಡಾಕ್ಟರ ಆಫ್ ಸೈನ್ಸ ನೀಡಿ ಗೌರವಿಸಲಾಯಿತು.
ಕಾಹೆರನ ಉಪಕುಲಪತಿ ಡಾ. ಸಂದೀಪ ಶ್ರೀವಾತ್ಸವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಎಲ್ಇ ಅಕಾಡೆಮಿ ಆಫ್ ಹೈಯರ ಎಜ್ಯುಕೇಶನ ಆಂಡ ರಿಸರ್ಚನ ಕುಲಪತಿ ಡಾ. ಪ್ರಭಾಕರ ಕೋರೆ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಡಾ. ವಿ.ಎಂ. ಪಟ್ಟಣಶೆಟ್ಟಿ ಹಾಗೂ ಪರೀಕ್ಷಾ ನಿಯಂತ್ರಕರಾದ ಡಾ. ಚಂದ್ರ ಎಸ್. ಮೆಟಗುಡ್, ಗೆಮೊಲ್ಲೊ ಇನ್ನುಳಿದವರು ಉಪಸ್ಥಿತರಿದ್ದರು.

ಈ ಘಟಿಕೋತ್ಸವದಲ್ಲಿ ಆರೋಗ್ಯ ವಿಜ್ಞಾನಗಳ ವಿವಿಧ ವಿಭಾಗಗಳಲ್ಲಿ ಒಟ್ಟು 1810 ಪದವಿಗಳನ್ನು ಪ್ರದಾನ ಮಾಡಲಾಯಿತು. 40 ಚಿನ್ನದ ಪದಕಗಳು, 44 ಪಿಹೆಚ್.ಡಿ., 28 ಪೋಸ್ಟ್-ಡಾಕ್ಟರಲ್, 691 ಸ್ನಾತಕೋತ್ತರ, 1013 ಸ್ನಾತಕ ಹಾಗೂ 34 ಸ್ನಾತಕೋತ್ತರ ಡಿಪ್ಲೊಮಾ, ಫೆಲೋಶಿಪ್ ಮತ್ತು ಪ್ರಮಾಣಪತ್ರ ಕೋರ್ಸ್ಗಳ ಪದವಿ ಪ್ರದಾನ ಮಾಡಲಾಯಿತು. 34 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದು, ಅದರಲ್ಲಿ 26 ವಿದ್ಯಾರ್ಥಿನಿಯರು, 8 ವಿದ್ಯಾರ್ಥಿಗಳಿಗೆ 40 ಸುವರ್ಣ ಪದಕ ಪ್ರದಾನ ಮಾಡಲಾಯಿತು.

ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಡಾ. ಆದಿತ್ಯ ಪೊರವಾಲ ಅವರು ಎಂಬಿಬಿಎಸನಲ್ಲಿ 2, ಫಿಸಿಯೋಥೆರಪಿಯ ಡಾ. ಅನಸ್ತಾಸಿಯಾ ಎ. ಕಾರ್ವಾಲ್ಹೋ ಅವರು ಬಿಪಿಟಿಯಲ್ಲಿ 2 ಚಿನ್ನದ ಪದಕಗಳನ್ನು ಪಡೆದು ಸಂತಸ ವ್ಯಕ್ತಪಡಿಸಿದರು. ಬೈಟ್

ಡಾ. ಅವಿನಾಶ್ ಕವಿ ಮತ್ತು ಡಾ. ನೇಹಾ ಧಡೆಡ್ ಅವರು ಕಾರ್ಯಕ್ರಮ ನಿರೂಪಣೆ ನಡೆಸಿದರು.

ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ವಶ; ಖತರ್ನಾಕ್ ಕಳ್ಳನ ಬಂಧನ!1. ಬೆಳಗಾವಿ ಗ್ರಾಮೀಣ ಪೊಲೀಸರ ಭ...
05/06/2026

ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ವಶ; ಖತರ್ನಾಕ್ ಕಳ್ಳನ ಬಂಧನ!

1. ಬೆಳಗಾವಿ ಗ್ರಾಮೀಣ ಪೊಲೀಸರ ಭರ್ಜರಿ ಕಾರ್ಯಾಚರಣೆ
2. ಖತರ್ನಾಕ್ ಕಳ್ಳ ನಿಲೇಶ ಸುತಾರ ಬಂಧನ
3. 17.90 ಲಕ್ಷದ ಚಿನ್ನ, ಬೆಳ್ಳಿ ವಶ
4. ಸರಣಿ ಕಳ್ಳತನ ಪ್ರಕರಣದ ಸತ್ಯ ಬಯಲು
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು 17.90 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು, ಓರ್ವ ಖತರ್ನಾಕ್ ಆರೋಪಿಯನ್ನು ಬಂಧಿಸಲಾಗಿದೆ. ಮಾನ್ಯ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ.
ದಿನಾಂಕ 01/01/2026 ರಂದು ಬೆಳಗಾವಿಯ ಮಂಡೋಳಿ ರೋಡ್ ಭವಾನಿನಗರದ ನಿವಾಸಿ ರೋಹನ ರಾಜೇಶ ಜಾಧವ ಎಂಬುವವರ ಮನೆಯಲ್ಲಿ ನಡೆದಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 02/2026 ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಬೆಳಗಾವಿ ಗ್ರಾಮೀಣ ತನಿಖಾ ತಂಡವು ಮಂಡೋಳಿಯ ಸಂಭಾಜಿಗಲ್ಲಿಯ ನಿವಾಸಿ ನಿಲೇಶ ಭರಮಾ ಸುತಾರ (ವಯಸ್ಸು 41) ಎಂಬ ಆರೋಪಿತನನ್ನು ಬಂಧಿಸಿದೆ. ತೀವ್ರ ವಿಚಾರಣೆ ನಡೆಸಿದಾಗ ಆರೋಪಿತನು ತಾನು ಮತ್ತು ತನ್ನ ಗೆಳೆಯರು ಸೇರಿಕೊಂಡು ಭವಾನಿನಗರದ ರೋಹನ ಜಾಧವ ಅವರ ಮನೆ, ಮಜಗಾವ ಗ್ರಾಮದ ಗಂಗಾಗಲ್ಲಿಯ ಶ್ರೀಮತಿ ಲಕ್ಷ್ಮೀ ರುದ್ರಪ್ಪ ದೇವಲಾಪೂರ ಅವರ ಮನೆ ಹಾಗೂ ಮಜಗಾವ ಗ್ರಾಮದ ಶ್ರೀ ಗಣೇಶ ಆಭರಣ ಅಂಗಡಿಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ ಸುಮಾರು 7,00,000/- ರೂ. ಮೌಲ್ಯದ 45 ಗ್ರಾಂ ಚಿನ್ನ ಹಾಗೂ 10,90,000/- ರೂ. ಮೌಲ್ಯದ 4 ಕೆಜಿ 178 ಗ್ರಾಂ ಬೆಳ್ಳಿ ಸೇರಿದಂತೆ ಒಟ್ಟು 17,90,000/- ರೂ. ಕಿಮ್ಮತ್ತಿನ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಮಾನ್ಯ ಪೊಲೀಸ್ ಆಯುಕ್ತರು, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ), ಡಿಸಿಪಿ (ಅಪರಾಧ ಮತ್ತು ಸಂಚಾರ) ಹಾಗೂ ಎಸಿಪಿ ಬೆಳಗಾವಿ ಗ್ರಾಮೀಣ ಉಪವಿಭಾಗ ರವರ ಮಾರ್ಗದರ್ಶನದಲ್ಲಿ, ಬೆಳಗಾವಿ ಗ್ರಾಮೀಣ ಪೊಲೀಸ್ ಇನ್ಸ್‌ಪೆಕ್ಟರ್ ನಾಗನಗೌಡ ಕಟ್ಟಿಮನಿಗೌಡ್ರ, ಪಿಎಸ್‌ಐ ಸಂತೋಷ ದಳವಾಯಿ, ಪಿಎಸ್‌ಐ ಲಕ್ಷ್ಮಪ್ಪ ಜೋಡಟ್ಟಿ ಹಾಗೂ ಸಿಬ್ಬಂದಿಗಳಾದ ಸತೀಶ ನಾಯಕವಾಡ (ಸಿ.ಎಚ್.ಸಿ 1100), ಶ್ರೀಕಾಂತ ಉಪ್ಪಾರ (ಸಿ.ಎಚ್.ಸಿ 1370), ಬಾಳೇಶ ಪಡನಾದ (ಸಿ.ಪಿ.ಸಿ 1436), ಆನಂದ ಕೋಟಗಿ (ಸಿ.ಪಿ.ಸಿ 1919), ಶಿವಾನಂದ ವರ್ಚಗಲ್ಲ (ಸಿ.ಪಿ.ಸಿ 1934), ಅಮಿತ ರೂಪನವರ (ಸಿ.ಪಿ.ಸಿ 1946), ಶಿವಕುಮಾರ ಕಾಂಬಳೆ (ಸಿ.ಪಿ.ಸಿ 1932) ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ರಮೇಶ ಅಕ್ಕಿ, ಮಹಾದೇವ ಕಾಶಿದ ಮತ್ತು ದೀಪಕ ದೊಡ್ಡಗೋಣಿ ಒಳಗೊಂಡ ವಿಶೇಷ ತಂಡವು ಯಶಸ್ವಿಯಾಗಿ ನೆರವೇರಿಸಿದ್ದು, ಹಿರಿಯ ಅಧಿಕಾರಿಗಳು ಇಡೀ ತಂಡದ ಶ್ಲಾಘನೀಯ ಕೆಲಸವನ್ನು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.

05/06/2026

‘ಭಾರತ ಜೋಡೋ ಸಂಘ’ದಿಂದ ಆರ್ಥಿಕ ಹೊರೆಯಾಗಲ್ಲ: ಸಚಿವ ಜಾರಕಿಹೊಳಿ ಆಕ್ರೋಶ!
❤️

05/06/2026

ಎಚ್.ಕೆ. ಪಾಟೀಲ ಹಾಗೂ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸಚಿವ ಸ್ಥಾನ ನೀಡಿ; ಬಸವರಾಜ್ ಬಾವಲತ್ತಿ

ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೆಡ್ಡಿ ಸಮಾಜ Belagavi Reddy Samaj Press Meet

05/06/2026

05/06/2026 Afternoon Kannada live News Bulletin IN NEWS LIVE

ರಾಮಲಿಂಗಾರೆಡ್ಡಿ ರಾಜೀನಾಮೆ ಅಸ್ತ್ರ; ಉಸ್ತುವಾರಿಯನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್, ಅಸಮಾದಾನ ಶಮನಕ್ಕೆ ಕಸರತ್ತು!ಹಿರಿಯ ನಾಯಕ ರಾಮಲಿಂಗಾ...
05/06/2026

ರಾಮಲಿಂಗಾರೆಡ್ಡಿ ರಾಜೀನಾಮೆ ಅಸ್ತ್ರ; ಉಸ್ತುವಾರಿಯನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್, ಅಸಮಾದಾನ ಶಮನಕ್ಕೆ ಕಸರತ್ತು!

ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಘೋಷಣೆ ಬೆನ್ನಲ್ಲೇ ಅಲರ್ಟ್ ಆಗಿರುವ ಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಮಲಿಂಗಾರೆಡ್ಡಿ ಅವರ ಮನವೊಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಕ್ಷಣವೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, "ರಾಮಲಿಂಗಾರೆಡ್ಡಿ ಅವರು ಗ್ರಾಮೀಣ ಪ್ರದೇಶದವರಲ್ಲ, ಅವರಿಗೆ ನಗರ ಪ್ರದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಇಚ್ಛೆಯಿದೆ. ಸದ್ಯ ಅವರಿಗೆ ಜಲಸಂಪನ್ಮೂಲ ಇಲಾಖೆಯನ್ನು ನೀಡಲಾಗಿದೆ. ಅವರು ನನ್ನ ಅತ್ಯಂತ ಉತ್ತಮ ಸ್ನೇಹಿತ ಹಾಗೂ ಪಕ್ಷದ ಹಿರಿಯ ಮತ್ತು ಪ್ರಮುಖ ನಾಯಕರಾಗಿದ್ದಾರೆ. ಶೀಘ್ರದಲ್ಲೇ ನಾನು ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಎಲ್ಲಾ ಗೊಂದಲ ಹಾಗೂ ಸಮಸ್ಯೆಗಳನ್ನು ಬಗೆಹರಿಸುತ್ತೇನೆ," ಎಂದು ಹೇಳುವ ಮೂಲಕ ಅಸಮಾಧಾನದ ಜ್ವಾಲೆಯನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ.
❤️

ಬೆಳಗಾವಿಯ ಆದಿತ್ಯರಾಜ್ ಕ್ಯಾಪಿಟಲ್ ಸಂಸ್ಥೆಗೆ ಹೈ ಅಲರ್ಟ್ ಶಾಕ್: ಕೋಟ್ಯಂತರ ರೂಪಾಯಿ ವಂಚನೆ ಆರೋಪದ ಬೆನ್ನಲ್ಲೇ 2ನೇ ದಿನವೂ ಅಧಿಕಾರಿಗಳ ಬಿರುಸಿನ...
05/06/2026

ಬೆಳಗಾವಿಯ ಆದಿತ್ಯರಾಜ್ ಕ್ಯಾಪಿಟಲ್ ಸಂಸ್ಥೆಗೆ ಹೈ ಅಲರ್ಟ್ ಶಾಕ್:

ಕೋಟ್ಯಂತರ ರೂಪಾಯಿ ವಂಚನೆ ಆರೋಪದ ಬೆನ್ನಲ್ಲೇ 2ನೇ ದಿನವೂ ಅಧಿಕಾರಿಗಳ ಬಿರುಸಿನ ತಪಾಸಣೆ

ಬೆಳಗಾವಿ ತಿಲಕವಾಡಿಯಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದ ಹಿನ್ನೆಲೆ ಶುಕ್ರವಾರ ಎರಡನೇ ದಿನವೂ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ.

ಬೆಳಗಾವಿ ಎಸಿ ಶ್ರವಣಕುಮಾರ ನಾಯಕ್ ನೇತೃತ್ವದ ತಂಡ ನಿನ್ನೆ ಕಂಪನಿ ಕಚೇರಿಗೆ ದಾಳಿ ನಡೆಸಿದ್ದು, ಇಂದು ಕೂಡ ಕಂದಾಯ ಇಲಾಖೆ, ಸಹಕಾರ ಇಲಾಖೆ ಹಾಗೂ ಸೈಬರ್ ಕ್ರೈಮ್ ಪೊಲೀಸರ ಸಂಯುಕ್ತ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಕಂಪನಿಯ ಸಿಇಒ ಮಹಾರಾಷ್ಟ್ರ ಮೂಲದ ಬಾಲರಾಜ್ ಮಾನೆ ವಿಚಾರಣೆಗೆ ಇದುವರೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ದೇಶಾದ್ಯಂತ ಕಂಪನಿಗೆ ಒಟ್ಟು 9 ಶಾಖೆಗಳಿದ್ದು, ಬೆಳಗಾವಿ, ಬೆಂಗಳೂರು, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಲಭ್ಯವಾಗಿದೆ.
ಇದುವರೆಗೆ ಸುಮಾರು 5 ಸಾವಿರ ಹೂಡಿಕೆದಾರರ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆದರೆ ಹೂಡಿಕೆದಾರರ ಹಾಗೂ ಬ್ಯಾಂಕ್ ಖಾತೆಗಳ ಸಂಪೂರ್ಣ ಮಾಹಿತಿ ನೀಡಲು ಕೆಲ ಸಿಬ್ಬಂದಿಗಳು ವಿಳಂಬ ಮಾಡುತ್ತಿದ್ದಾರೆ ಎನ್ನಲಾಗಿದೆ. ಕಂಪನಿಯ ಮ್ಯಾನೇಜರ್ ಸೇರಿ ಹಲವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು, ಹಣಕಾಸು ವ್ಯವಹಾರಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಘಟನೆಯ ಹಿನ್ನೆಲೆ ಎಸಿಪಿಎಲ್ ಕಚೇರಿ ಸುತ್ತಮುತ್ತ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

Address

M B Square Building 4th Floor S P Office Road
Belgaum
590001

Alerts

Be the first to know and let us send you an email when Innews posts news and promotions. Your email address will not be used for any other purpose, and you can unsubscribe at any time.

Contact The Business

Send a message to Innews:

Share