Innews

Innews IN News is a leading news channel in North Karnataka, India. Covering daily news & events for Belgavi Call for commercial Ads 9902687265
(2)

26/07/2025

ಸಿಎಂ ಸ್ಥಾನ ಬಿಟ್ಟು ಅಹಿಂದ ಸಮಾವೇಶ ಮಾಡುತ್ತಿಲ್ಲ
ಸಚಿವ ಸಂಪುಟ ಪುನಾರಚನೆ ಸಿಎಂ,ಡಿಸಿಎಂ ಅವರನ್ನೇ ಕೇಳಬೇಕು
ನಾವು ಇಲ್ಲೆ ಬಾಗಲಕೋಟೆ, ಬೆಳಗಾವಿ,ವಿಜಯಪುರ ಲೆವೆಲ್‌ಲ್ಲೇ ಇರ್ತಿವಿ
ಬಾಡಗಂಡಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

26/07/2025

ಬೆಳಗಾವಿಯಲ್ಲಿ ಗಡಿ ಉಸ್ತುವಾರಿ ಸಚಿವ ಚ್.ಕೆ.ಪಾಟೀಲ ಅವರು ಕನ್ನಡ ಸಂಘಟನೆಗಳೊಂದಿಗೆ ಸಭೆ

26/07/2025

ಕರ್ನಾಟಕದಲ್ಲಿ ವಿಜಯೇಂದ್ರಂದು ಎನು ಇಲ್ಲಾ; ಹೊಸ ಆಶಾಭಾವನೆ ಮೂಡಿದೆ: ಶಾಸಕ ಯತ್ನಾಳ

26/07/2025

ಹೊರಗಿನ ಜನ ಎಂದು ಗೋವಾದಲ್ಲಿ ಹೆಚ್ಚಾಗುತ್ತಿರುವ ಕನ್ನಡಿಗರ ಮೇಲೆ ಹಲ್ಲೆ Goa kannidaga

ದೇಶಕ್ಕಾಗಿ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 26ನೇ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಚಿವರ ಹೇ...
26/07/2025

ದೇಶಕ್ಕಾಗಿ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

26ನೇ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಚಿವರ ಹೇಳಿಕೆ

ದೇಶ ಕಾಯಲು ಅತಿಹೆಚ್ಚು ಯೋಧರನ್ನು ನೀಡುತ್ತಿರುವ ಜಿಲ್ಲೆ ಬೆಳಗಾವಿ

ಬೆಳಗಾವಿ: ಎಲ್ಲಾ ಸೇವೆಗಳಿಗೂ ಶ್ರೇಷ್ಠ ಸೇವೆ ಎಂದರೆ ಅದು ದೇಶ ಸೇವೆ. ದೇಶದ ಗಡಿಯಲ್ಲಿ ನಿಂತು ಮಳೆ, ಚಳಿ ಎನ್ನದೇ ಎದುರಾಳಿ ವಿರುದ್ಧ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ನಗರದ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಇವರ ಆಶ್ರಯದಲ್ಲಿ ಶನಿವಾರ ನಡೆದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಸಚಿವರು, ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ, ಎಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಕರೆ ನೀಡಿದರು.

* ಮಾಜಿ ಸೈನಿಕರ ಜೀವನ ಎಲ್ಲರಿಗೂ ಮಾದರಿ
ಸೈನಿಕರು ಭಾರತದ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸೇವೆಯಿಂದ ನಿವೃತ್ತರಾದರೂ ಅವರ ಉತ್ಸಾಹ ಮಾತ್ರ ಕುಂದಿಲ್ಲ. ದೇಶದ ಗಡಿಯಲ್ಲಿ ನಿಂತು ವೈರಿಗಳ ಗುಂಡಿಗೆ ಎದೆಕೊಟ್ಟು ಹೋರಾಡಿದ ವೀರ ಯೋಧರ ಬಗ್ಗೆ ಎಷ್ಟು ಹೇಳಿದರೂ ಸಾಲದು ಎಂದು ಸಚಿವರು ಹೇಳಿದರು.

ಕಾರ್ಗಿಲ್ ಯುದ್ದವನ್ನು ಗೆದ್ದಿದ್ದೇವೆ, ಇತ್ತೀಚೆಗೆ ಅಪರೇಷನ್ ಸಿಂಧೂರು ಮೂಲಕ ನಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದೇವೆ. ಇದಕ್ಕೆ ಭಾರತದ ದೇಶ ಹೆಚ್ಚು ವೀರರನ್ನು ಹೊಂದಿರುವುದೇ ಸಾಕ್ಷಿ ಎಂದರು.

ನಾನು ಯಾವಾಗಲೂ ಸೈನಿಕರ ಬಗ್ಗೆ ಗೌರವ ಭಾವನೆ ಹೊಂದಿದ್ದೇನೆ. ದೇಶದ ಗಡಿ ಕಾದು ಬಂದಿರುವ ಮಾಜಿ ಸೈನಿಕರನ್ನು ಸದಾ ಗೌರವಿಸುತ್ತೇನೆ. ಸೈನಿಕರ ಬಗ್ಗೆ ವಿಶೇಷವಾದ ಗೌರವ, ಪ್ರೀತಿ, ಕಾಳಜಿ ಹೊಂದಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಸೈನಿಕರು ಸೇವೆಯಲ್ಲಿದ್ದ ವೇಳೆ ಮಳೆ ಚಳಿ ಬಿಸಿಲಿನಲ್ಲಿ ದೇಶಕ್ಕಾಗಿ ಹೋರಾಡುತ್ತಾರೆ. ನಿವೃತ್ತಿರಾದರೂ ಸುಮ್ಮನೆ ಕೂರದೇ ಸಮಾಜದ ಅಂಕುಕೊಂಡುಗಳನ್ನು ತಿದ್ದುವ ಕೆಲಸಗಳನ್ನು ಮಾಡುತ್ತಿದ್ದಾರೆ. ಮಾಜಿ ಸೈನಿಕರ ಬೇಡಿಕೆಗಳು ಸಾಕಷ್ಟಿವೆ, ಅವರ ಶಿಸ್ತು ಬದ್ಧ ಜೀವನವನ್ನು ನೋಡಿದರೆ, ಅವರಿಗೆ ಸರ್ಕಾರದ ಸಹಾಯವೇ ಅವಶ್ಯಕತೆ ಇಲ್ಲ ಎನಿಸುತ್ತದೆ. ಮಾಜಿ ಸೈನಿಕರೇ ನಮಗೆ ಆದರ್ಶ ಎಂದು ಸಚಿವರು ಹೇಳಿದರು.

* ಬೆಳಗಾವಿಯಲ್ಲಿ ಅತಿಹೆಚ್ಚು ಯೋಧರು
ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮನಂಥ ವೀರರನ್ನು ಈ ನಾಡಿಗೆ ಕೊಟ್ಟಿರುವ ಬೆಳಗಾವಿ ಜಿಲ್ಲೆ, ದೇಶ ಕಾಯಲು ಸಾವಿರಾರು ಸೈನಿಕರನ್ನು ನೀಡಿದೆ. ಕರ್ನಾಟಕದಿಂದ ಅತಿಹೆಚ್ಚು ಯೋಧರು ಇರುವ ಜಿಲ್ಲೆ ಎಂದರೆ ಅದು ನಮ್ಮ ಬೆಳಗಾವಿ. ಇದರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ರುದ್ರಯ್ಯ ಹಿರೇಮಠ್ ಸ್ವಾಮಿಗಳು, ಶಾಸಕರಾದ ಆಸಿಫ್ ಸೇಠ್, ಬಸಪ್ಪ ತಳವಾರ, ಯುವರಾಜ್ ಕದಂ, ಮನೋಹರ್ ಬೆಳಗಾಂವ್ಕರ್, ಶಂಕರಗೌಡ ಪಾಟೀಲ್, ಸುನೀಲ್ ದಾಗರ್, ಕಲ್ಲಪ್ಪ ಪಾಟೀಲ್, ಆರ್.ವಾಯ್.ಹಿರೇಮಠ್, ಮಾಜಿ ಸೈನಿಕರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಅಂಕಗಳಿಕೆಗಷ್ಟೇ ಸೀಮಿತವಾಗಬಾರದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ...
26/07/2025

ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಅಂಕಗಳಿಕೆಗಷ್ಟೇ ಸೀಮಿತವಾಗಬಾರದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ

ಬೆಳಗಾವಿ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಯಂತ್ರಗಳಾಗುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸದೇ, ಸಾಹಿತ್ಯಾಸಕ್ತರನ್ನಾಗಿ ಬೆಳೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಶನಿವಾರ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025ರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಈ ಸಮ್ಮೇಳನ ಮಕ್ಕಳಲ್ಲಿ ಮತ್ತು ಮಕ್ಕಳ ಸಾಹಿತಿಗಳಲ್ಲಿ ಹೊಸ ಉತ್ಸಾಹ, ಚೈತನ್ಯ ತುಂಬಲಿ ಎಂದು ಹಾರೈಸಿದರು.

ಮಕ್ಕಳ ಅಭಿವೃದ್ಧಿಗಾಗಿ ನನ್ನ ಇಲಾಖೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳಿದ್ದು, ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಮುಂದಿನ ಸಮ್ಮೇಳನಕ್ಕೆ ನನ್ನ ಇಲಾಖೆಯಿಂದ ಸಂಪೂರ್ಣ ಬೆಂಬಲ ನೀಡುತ್ತೇನೆ. ಇದು ಕೇವಲ ಮಕ್ಕಳ ಸಾಹಿತಿ, ಹಿರಿಯ ಸಾಹಿತಿಗಳಿಗೆ ಸೀಮಿತವಾಗದೇ, ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬ ಶಾಲಾ ಮಕ್ಕಳಿಗೂ ತಲುಪುವಂತಾಗಬೇಕು ಎಂದರು.

ಮಕ್ಕಳಲ್ಲಿಯೇ ನಮ್ಮ ಅಚಾರ, ವಿಚಾರಗಳು ಹೆಚ್ಚಾಗಬೇಕು, ಜೊತೆಗೆ ಮತ್ತೊಬ್ಬರಿಗೆ ಮುಟ್ಟಬೇಕು. ನಾಡಿನಲ್ಲಿ ಮಕ್ಕಳ ಪ್ರತಿಭೆಗೆ ಕೊರತೆಯಿಲ್ಲ. ಮಕ್ಕಳು ಸಾಹಿತ್ಯಾಭಿರುಚಿ ಬೆಳೆಸಿಕೊಂಡರೆ ಮುಂದಿನ ದಿನಗಳಲ್ಲಿ ನಾಡಿನ ಹೆಮ್ಮೆಯ ಸಾಹಿತಿಗಳಾಗುವುದರಲ್ಲಿ ಎರಡು ಮಾತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟರು.

ಪಕ್ಕದ ಮನೆಯ ಮಕ್ಕಳಿಗೆ ಹೋಲಿಸಿ ಅಂಕಗಳಿಕೆಗೆ ಸೀಮಿತಗೊಳಿಸದೆ, ಸಾಹಿತ್ಯ ಓದಲು ಪ್ರೇರೇಪಿಸಬೇಕು. ಮಕ್ಕಳಿಗೆ ಸಾಹಿತ್ಯದ ಅಭಿರುಚಿ ತೋರಿಸಲು ಆಯೋಜಿಸಿರುವ ಇಂಥ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣವಾಗಿದೆ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು ಎಂದು ಸಚಿವರು ಹೇಳಿದರು.

ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದು ಉತ್ತಮ ಅಚಾರ ವಿಚಾರಗಳನ್ನು ಬೆಳೆಸಿಕೊಂಡರೆ ಮಕ್ಕಳು ನಾಡಿನ ಉತ್ತಮ ಪ್ರಜೆಗಳಾಗುವುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯರು, ಕಾರಂಜಿಮಠದ ಪರಮಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು, ಚ.ನಂ.ಅಶೋಕ, ಎಂ.ವಾಯ್.ಮೆನಸಿನಕಾಯಿ, ಅಮೂಲ್ಯ ಪಾಟೀಲ, ಬಸವರಾಜ ಗಾರ್ಗಿ, ಲಕ್ಷ್ಮೀ ಪಾಟೀಲ, ಎಂ.ಎಂ.ಸಂಗಣ್ಣವರ, ಸಿದ್ರಾಮ ನಿಲಜಗಿ, ಪ್ರಕಾಶ ಹೊಸಮನಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಕಾರ್ಗಿಲ್ ವಿಜಯ ದಿವಸ ಆಚರಣೆ: ನಮ್ಮ ಸೈನಿಕರೇ ನಮ್ಮ ನಿಜವಾದ ದೇವರು: ಸಚಿವ ಎಂ.ಬಿ.ಪಾಟೀಲಕಾರ್ಗಿಲ್ ವಿಜಯದ 26ನೇ ವರ್ಷಾಚರಣೆಯ ಅಂಗವಾಗಿ ವಿಜಯಪುರ...
26/07/2025

ಕಾರ್ಗಿಲ್ ವಿಜಯ ದಿವಸ ಆಚರಣೆ: ನಮ್ಮ ಸೈನಿಕರೇ ನಮ್ಮ ನಿಜವಾದ ದೇವರು: ಸಚಿವ ಎಂ.ಬಿ.ಪಾಟೀಲ

ಕಾರ್ಗಿಲ್ ವಿಜಯದ 26ನೇ ವರ್ಷಾಚರಣೆಯ ಅಂಗವಾಗಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜೃಂಭಣೆಯಿಂದ ಕಾರ್ಗಿಲ್ ವಿಜಯದಿವಸ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪಾಲ್ಗೊಂಡು ಮಾತನಾಡಿದರು.

“ನಾವೆಲ್ಲರೂ ಪಟ್ಟಣಗಳಲ್ಲಿ ಶಾಂತಿ, ನೆಮ್ಮದಿಯಿಂದ ಬದುಕುತ್ತಿದ್ದರೆ ಗಡಿಗಳಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರೇ ಕಾರಣ. ನಮ್ಮ ದೇಶದ ಭದ್ರತೆಗೆ ಶ್ರಮಿಸುತ್ತಿರುವ ಅವರೇ ನಮ್ಮ ನಿಜವಾದ ದೇವರುಗಳು. ನಮ್ಮೆಲ್ಲ ಸೈನಿಕರ ಕರ್ತವ್ಯ ನಿಷ್ಠೆ, ದೇಶಭಕ್ತಿ, ಪ್ರಾಮಾಣಿಕತೆಗೆ ನಮನಗಳು ಎಂದರು. ಕಾರ್ಗಿಲ್ ವಿಜಯಕ್ಕೆ ಶ್ರಮಿಸಿದ ವೀರಯೋಧರು, ಹಾಗೂ ಇನ್ನಿತರೆ ಯುದ್ಧಗಳಲ್ಲಿ ದೇಶದ ರಕ್ಷಣೆಗಾಗಿ ಶ್ರಮಿಸಿದ ಸೈನಿಕರ, ತ್ಯಾಗ ಬಲಿದಾನ್ನು ಸ್ಮರಿಸಿದೆ. ಅಂತೆಯೇ ದೇಶದ ವಿಮಾನಯಾನ ಹಾಗೂ ರಕ್ಷಣಾ ವಲಯಕ್ಕೆ ಕರ್ನಾಟಕದ ಕೊಡುಗೆಗಳನ್ನು ಪ್ರಸ್ತಾಪಿಸಿದೆ. ನಿವೃತ್ತ ಸೈನಿಕರ ಬೇಡಿಕೆಗಳನ್ನು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅವುಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವ ಭರವಸೆ ನೀಡಿದೆರು.

ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ಕರ್ನಲ್ ಜಿ. ಬಿ. ಶಿಂಧೆ, ನಿವೃತ್ತ ಕರ್ನಲ್ ಫಿರೋಜ್ ಕಾರ್ಲೇಕರ, ಸೇರಿದಂತೆ ನಿವೃತ್ತ ಸೈನಿಕರು, ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ, ಜಿಲ್ಲಾ SP ಲಕ್ಷ್ಮಣ ನಿಂಬರಗಿ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಬಸವರಾಜ ಕೌಲಗಿ ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು. ವಿವಿಧ ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಕವಾಗಿತ್ತು.

26/07/2025

ಸುರ್ಜೆವಾಲಾ ಮೀಟಿಂಗ್ ಮಾಡ್ತಿರೋದು ಕಲೆಕ್ಷನ್ ಗಾಗಿ; ಸಿಎಂ ಮಗಾ ಯತೀಂದ್ರ ಹಾದಿ ಬಿಟ್ಟಿದ್ದಾನೆ: ಶಾಸಕ ಯತ್ನಾಳ

26/07/2025

ಕಾರ್ಗಿಲ್ ಯುದ್ದದಲ್ಲಿ ಸೈನಿಕರ ತ್ಯಾಗ, ಬಲಿದಾನ ಬಹಳಷ್ಟಿದೆ:ಶಾಸಕ ರಾಜು ಸೇಠ್

ಹುಕ್ಕೇರಿ : ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರುಕಾರ್ಗಿಲ್ ಯುದ್ಧ ಶತ್ರು ರಾಷ್ಟ್ರಗಳಿಗೆ ತಕ್ಕ ಉತ್...
26/07/2025

ಹುಕ್ಕೇರಿ : ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು

ಕಾರ್ಗಿಲ್ ಯುದ್ಧ ಶತ್ರು ರಾಷ್ಟ್ರಗಳಿಗೆ ತಕ್ಕ ಉತ್ತರ ನಿಡಿದ ಅವಿಸ್ಮರಣಿಯ ಘಳಿಗೆಯಾಗಿದೆ ಎಂದು ಹುಕ್ಕೇರಿ ಕ್ಯಾರಗುಡ್ಡದ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾರಾಜರು ಹೇಳಿದರು.

ಅವರು ಇಂದು ಹುಕ್ಕೇರಿ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಾಲಿ ಮತ್ತು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಮ್ಮಿಕೊಂಡ 26 ನೇ ವರ್ಷದ ಕಾಗಿಲ್ ವಿಜಯೋತ್ಸವ ಮತ್ತು ಆಪರೇಷನ್ ಸಿಂಧೂರ ಯಶಸ್ವಿ ಸಮಾರಂಭವನ್ನು ಭಾರತ ಮಾತೆಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ನಂತರ ಯೋಧರಿಗೆ, ಶಿಕ್ಷಕರಿಗೆ ಸಮಾಜದ ಮುಖಂಡರಿಗೆ ಸತ್ಕರಿಸಿ ಮಾದ್ಯಮಗಳೊಂದಿಗೆ ಮಾತನಾಡಿದ ಮಹಾರಾಜರು ಸೈನಿಕರ ತ್ಯಾಗ, ಹೋರಾಟದ ಪ್ರತಿ ಫಲವಾಗಿ ಕಾರ್ಗಿಲ್ ಯುದ್ಧ ಗೆದ್ದು ಭಾರತದ ಕಿರ್ತಿ ಪಟಾಕೆ ಹಾರಿಸಿ ಶತ್ರು ರಾಷ್ಟ್ರವನ್ನು ಸೋಲಿಸಿ ತಕ್ಕ ಉತ್ತರ ನೀಡಿದ ಈ ಪವಿತ್ರ ದಿನ ವಿಜಯೋತ್ಸವದ ದಿನ ವಾಗಿದೆ, ಇಂದು ಹುಕ್ಕೇರಿ ನಗರದಲ್ಲಿ ಹಾಲಿ ಮತ್ತು ಮಾಜಿ ಸೈನಿಕರ ಸಂಘ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ ಆಚರಿಸುವ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದ ಯೋಧರಿಗೆ ಗೌರವ ಸಲ್ಲಿಸಿದೆ ಎಂದರು

ನಂತರ ಎನ್ ಸಿ ಸಿ ,ಸ್ಕೌಟ ವಿದ್ಯಾರ್ಥಿಗಳು ದೇಶದ ಯೋಧರ ಪರವಾಗಿ ಘೋಷನೆ ಕೂಗಿ ಪುಷ್ಪಾರ್ಪಣೆ ಸಲ್ಲಿಸಿದರು. ಸಂಘದ ಅದ್ಯಕ್ಷ ರಾಯಪ್ಪಾ ಬನ್ನಕ್ಕಗೋಳ ಮಾತನಾಡಿ ಕಾರ್ಗಿಲ್ ಯದ್ದದಲ್ಲಿ ಭಾಗವಹಿಸಿ ತಮ್ಮ ಪ್ರಾಣವನ್ನು ಬಲಿ ನೀಡಿದ ಯೋಧರ ಸ್ಮರಣೆ ಮತ್ತು ಭಾಗವಹಿಸಿದ ಯೋಧರಿಗೆ ಅಭಿನಂದನೆ ಸಲ್ಲಿಸುವ ದರೊಂದಿಗೆ ಇಂದು ಕಾರ್ಗಿಲ್ ವಿಜಯೋತ್ಸವದ ಆಚರಿಸಲಾಗಿದೆ ಎಂದರು

ಈ ಸಂದರ್ಭದಲ್ಲಿ ಹಾಲಿ ಮತ್ತು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಅದ್ಯಕ್ಷ ಮಹಾದೇವ ಬನ್ನಕ್ಕಗೊಳ, ಕಾರ್ಯದರ್ಶಿ ರಮೇಶ ಕುಂದನ್ನವರ, ಬಸವ೪ಅಜ ಮಾನಗಾಂವಿ, ನಿರಂಜನ ಕುರಬೇಟ, ಶಶಿಕಾಂತ ಮಾನಸ, ಸುಧಾಕರ ಭೋಕರೆ, ಶ್ರೀಪಾಲ ಕಮತೆ, ಯಾಶೀನ ನದಾಫ, ಎ ಎಸ್ ಆಯ್ ಸಿ ಎಲ್ ಗಸ್ತಿ, ಮಂಜುನಾಥ ಕಬ್ಬೂರಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜು ಬಾಗಲಕೋಟಿ
ಇನ್ ನ್ಯೂಜ ಹುಕ್ಕೇರಿ.

ಮನೆ ಬಾಗಿಲಿಗೆ ಬರುವ ಚರಂಡಿ ನೀರು ಪೊರಕೆ ಹಿಡಿದು ಮಹಿಳೆಯ ಆಕ್ರೋಶ..ಗ್ರಾಮದಲ್ಲಿ ರಸ್ತೆ, ಚರಂಡಿ ಇಲ್ಲದ ಕಾರಣ ಮನೆ ಬಾಗಿಲಿಗೆ ಬರುವ ಚರಂಡಿ ನೀರಿ...
26/07/2025

ಮನೆ ಬಾಗಿಲಿಗೆ ಬರುವ ಚರಂಡಿ ನೀರು ಪೊರಕೆ ಹಿಡಿದು ಮಹಿಳೆಯ ಆಕ್ರೋಶ..

ಗ್ರಾಮದಲ್ಲಿ ರಸ್ತೆ, ಚರಂಡಿ ಇಲ್ಲದ ಕಾರಣ ಮನೆ ಬಾಗಿಲಿಗೆ ಬರುವ ಚರಂಡಿ ನೀರಿನಿಂದ ರೋಸಿ ಹೋದ ಮಹಿಳೆಯೊಬ್ಬಳು ಕೈಯಲ್ಲಿ ಪೊರಕೆ ಹಿಡಿದು ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಜರುಗಿದೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕಿತ್ತಲಿ ಗ್ರಾಮದಲ್ಲಿ ಸರಿಯಾದ ರಸ್ತೆ, ಚರಂಡಿ ಇಲ್ಲದ ಕಾರಣ ಮನೆ ಬಾಗಿಲಿಗೆ ಬರುವ ಚರಂಡಿ ನೀರಿನಿಂದ ರೋಸಿ ಹೋಗಿದ್ದಾರೆ ಗ್ರಾಮದಲ್ಲಿ ಮನೆ ಹೊರಗೆ ಕಾಲಿಟ್ಟರೆ ಕೊಳಚೆ ನೀರಲ್ಲೇ ನಡೆದುಕೊಂಡು ಓಡಾಡದ ಪರದಾಡುತ್ತ ನಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಷ್ಟೋ ಸಲ ಮಕ್ಕಳು ವೃದ್ಧರು ಕಾಲು ಜಾರಿ ಬಿದಿದ್ದಾರೆ ನಮಗೆ ದಿನಾ ನೀರು ಬಳದು ಬಳದು ಸಾಕಾಗಿದೆ,

ಇದರಲೇ ಕೊಳೆಯುತ್ತಿದ್ದೇವೆ ನಮ್ಮನ್ನು ಯಾರೂ ಕೇಳುವವರಿಲ್ಲ ಪಂಚಾಯತಿಯವರು ಬರಲ್ಲ 30 ವರ್ಷಗಳಿಂದ ಯಾರೂ ಸಮಸ್ಯೆ ಬಗೆಹರಿಸಿಲ್ಲ ಇದನ್ನು ಸಿದ್ದರಾಮಯ್ಯಗೆ ಹೋಗಿ ಹೇಳಬೇಕು ಎಂದು ಕೈಯಲ್ಲಿ ಪೊರಕರ ಹಿಡಿದು ಜನಪ್ರತಿನಿಧಿಗಳು, ಸರ್ಕಾರದ ವಿರುದ್ಧ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ

26/07/2025

ಬೆಳಗಾವಿಯಲ್ಲಿ ಮಾಜಿ ಸೈನಿಕರ ಸಂಘದಿಂದ ಕಾರ್ಗಿಲ್ ವಿಜಯ ದಿವಸ
Kargil vijayotsav

Address

Belgaum

Alerts

Be the first to know and let us send you an email when Innews posts news and promotions. Your email address will not be used for any other purpose, and you can unsubscribe at any time.

Contact The Business

Send a message to Innews:

Share