Nammabijapur28

Nammabijapur28 Contact information, map and directions, contact form, opening hours, services, ratings, photos, videos and announcements from Nammabijapur28, Digital creator, Bijapur.

ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ವೈದ್ಯಕೀಯ ಕಾರಣ ಉಲ್ಲೇಖಿಸಿ ರಾಷ್ಟ್ರ ಪತಿ ದ್ರೌಪದಿ ಮುರ್ಮುರವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರ...
21/07/2025

ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ವೈದ್ಯಕೀಯ ಕಾರಣ ಉಲ್ಲೇಖಿಸಿ ರಾಷ್ಟ್ರ ಪತಿ ದ್ರೌಪದಿ ಮುರ್ಮುರವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ...
20/07/2025

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ. ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ. - ಮುಖ್ಯಮಂತ್ರಿ


ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ನಡೆಸಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ ಕೊಠಡಿಗಳುಳ್ಳ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗ...
18/07/2025

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ನಡೆಸಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ ಕೊಠಡಿಗಳುಳ್ಳ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಸದ್ಯ 4 - 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಹಳೆಯ ಕೃಷಿ ವಸ್ತುಗಳು ಕೇವಲ ಉಪಕರಣಗಳಲ್ಲ ಇವು ನಮ್ಮ ಪರಂಪರೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ತಿಳಿಸಬೇಕಾದ ನಿಜವಾದ “ಆಸ್ತಿ” ಇಂದು ತಂತ್ರಜ್ಞಾನ...
17/07/2025

ಈ ಹಳೆಯ ಕೃಷಿ ವಸ್ತುಗಳು ಕೇವಲ ಉಪಕರಣಗಳಲ್ಲ ಇವು ನಮ್ಮ ಪರಂಪರೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ತಿಳಿಸಬೇಕಾದ ನಿಜವಾದ “ಆಸ್ತಿ” ಇಂದು ತಂತ್ರಜ್ಞಾನ, ಯಂತ್ರಗಳು ಎಲ್ಲೆಡೆ ಪ್ರವೇಶಿಸುತ್ತಿರುವಾಗ ಈ ಪುರಾತನ ಕೃಷಿ ಸಾಧನಗಳು ರೈತನ ಶ್ರಮದ ಕಥೆ ಹೇಳುತ್ತದೆ. ಅವುಗಳನ್ನು ಉಳಿಸೋಣ, ಗೌರವಿಸೋಣ! #ಕೃಷಿಪರಂಪರೆ #ನಮ್ಮಆಸ್ತಿ #ರೈತಸಂಸ್ಕೃತಿ


Pic

ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ವಿಭು ಬಖ್ರು ಅವರನ್ನು ನೇಮಕ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡ...
15/07/2025

ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ವಿಭು ಬಖ್ರು ಅವರನ್ನು ನೇಮಕ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ.ಅಂಜಾರಿಯಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿದ ಬಳಿಕ, ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿದ್ದ ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ಸುಪ್ರೀಂಕೋರ್ಟ್ ಶಿಫಾರಸು ಮಾಡಿತ್ತು. ಶಿಫಾರಸ್ಸಿನನ್ವಯ ಕೇಂದ್ರ ಸರ್ಕಾರ ನಿನ್ನೆ ಅಧಿಸೂಚನೆ ಹೊರಡಿಸಿದೆ.

ಅಭಿನಯ ಸರಸ್ವತಿ ಎಂದೇ ಖ್ಯಾತ ಗಳಿಸಿರುವ ನಟಿ ಸರೋಜಾದೇವಿ ಇನ್ನಿಲ್ಲ.
14/07/2025

ಅಭಿನಯ ಸರಸ್ವತಿ ಎಂದೇ ಖ್ಯಾತ ಗಳಿಸಿರುವ ನಟಿ ಸರೋಜಾದೇವಿ ಇನ್ನಿಲ್ಲ.

ವಿಜಯಪುರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಿಂಬೆ ಬೆಳೆಯುವ ಕಾರಣ ಅದನ್ನು ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸ ಬೇಕೆಂದು ಲಿಂಬ...
12/07/2025

ವಿಜಯಪುರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಿಂಬೆ ಬೆಳೆಯುವ ಕಾರಣ ಅದನ್ನು ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸ ಬೇಕೆಂದು ಲಿಂಬೆ ಬೆಳೆಗಾರರು ಸಿದ್ದರಾಮಯ್ಯರವರನ್ನ ಪತ್ರಿಕಾಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ 14ನೇ ತಾರೀಖಿನಂದು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಇಂಡಿ ನಗರಕ್ಕೆ ಆಗಮಿಸುವ ಹಿನ್ನೆಲೆ ರೈತರು ಬೆಂಬಲ ಬೆಲೆ ಘೋಷಿಸುವ ನಿರೀಕ್ಷೆಯಲ್ಲಿ ಇದ್ದಾರೆ.

ಇಂದು ದಿನಾಂಕ:11.07.2025 ರಂದು ಮನಗೂಳಿ ಕೆನರಾ ಬ್ಯಾಂಕ್ ಪ್ರಕರಣದಲ್ಲಿ 15 ಜನ ಆರೋಪಿತರನ್ನು ದಸ್ತಗೀರ್ ಮಾಡಿ ಸದರಿ ಆರೋಪಿತರಿಂದ 39 ಕೆಜಿ ಬಂಗ...
11/07/2025

ಇಂದು ದಿನಾಂಕ:11.07.2025 ರಂದು ಮನಗೂಳಿ ಕೆನರಾ ಬ್ಯಾಂಕ್ ಪ್ರಕರಣದಲ್ಲಿ 15 ಜನ ಆರೋಪಿತರನ್ನು ದಸ್ತಗೀರ್ ಮಾಡಿ ಸದರಿ ಆರೋಪಿತರಿಂದ 39 ಕೆಜಿ ಬಂಗಾರದ ಗಟ್ಟಿ ಹಾಗೂ ಆಭರಣ ಮತ್ತು 1.16 ಕೋಟಿ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳು ಸೇರಿದಂತೆ ಒಟ್ಟು 39.26 ಕೋಟಿಗಿಂತ ಅಧಿಕ ಮೌಲ್ಯದ ವಸ್ತುಗಳನ್ನು
ವಶಪಡಿಸಿಕೊಳ್ಳಲಾಯಿತು ಎಂದು SP ವಿಜಯಪುರ ತಿಳಿಸಿದರು. ಸದರಿ ಪ್ರಕರಣದಲ್ಲಿ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಐಜಿಪಿ ಸಾಹೇಬರು ಉತ್ತರ ವಲಯ ಬೆಳಗಾವಿ ರವರು ಶ್ಲಾಘಿಸಿ ಪ್ರಶಂಸ ಪತ್ರ ನೀಡಿ ಸೂಕ್ತ ಬಹುಮಾನ ಘೋಷಿಸಿದರು.

ವಿಜಯಪುರ ಜಿಲ್ಲೆಯನ್ನು 371 (ಜೆ) ಕಲಂ ಗೆ ಸೇರ್ಪಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ವಿಜಯಪುರದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವಿ...
11/07/2025

ವಿಜಯಪುರ ಜಿಲ್ಲೆಯನ್ನು 371 (ಜೆ) ಕಲಂ ಗೆ ಸೇರ್ಪಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ವಿಜಯಪುರದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವಿಜಯಪುರ ರವರು ಹಮ್ಮಿಕೊಂಡ ಬೆಳಗಾವಿ ವಿಭಾಗದ, ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ಪ್ರಾದೇಶಿಕ ಅಸಮಾನತ ಸಂಮೋದನ ಸಭೆಯಲ್ಲಿ y c ಮೈಯೂರ ಹಾಗೂ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಕರ್ನಾಟಕ ಸರ್ಕಾರದ ಯೋಜನಾ ಮತ್ತು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.

ವಿಜಯಪುರ ಜಿಲ್ಲೆಗೆ 3 ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು.ವಿಜಯಪುರ ನಗರ, ಕೋಲಾರ,ದೇವರ ಹಿಪ್ಪರಗಿಗೆ ಶಾಲೆಗಳು ಮಂಜೂರಾಗಿವೆ.                ...
10/07/2025

ವಿಜಯಪುರ ಜಿಲ್ಲೆಗೆ 3 ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು.ವಿಜಯಪುರ ನಗರ, ಕೋಲಾರ,ದೇವರ ಹಿಪ್ಪರಗಿಗೆ ಶಾಲೆಗಳು ಮಂಜೂರಾಗಿವೆ.

Address

Bijapur

Website

Alerts

Be the first to know and let us send you an email when Nammabijapur28 posts news and promotions. Your email address will not be used for any other purpose, and you can unsubscribe at any time.

Share