SK SUKIL

SK SUKIL TV NEWS KARNATAKA

22/08/2026

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಎಸ್ ಪಿ ಲಕ್ಷ್ಮಣ್ ನಿಂಬರಗಿ ಪ್ರಕ್ರಿಯೆ..! | TV NEWS KARNATAKA AUG 22 2026









22/08/2026

*ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತೆ: ಸಿಎಂ ಡಿ ಕೆ ಶಿವಕುಮಾರ್*

*ಎರಡು ರಾಜ್ಯಗಳು ನೀರು, ಹವಾಮಾನ, ಸಂಸ್ಕೃತಿ ಹಂಚಿಕೊಳ್ಳುತ್ತವೆ*
*ಮೈಸೂರು ದಸರಾದಂತೆ ನೆಹರೂ ಟ್ರೋಫಿ ಬೋಟ್ ರೇಸ್ ಆಚರಣೆ*
*ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಳ್ಳುತ್ತದೆ*
“ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತಿದೆ. ಎರಡೂ ರಾಜ್ಯಗಳು ಪರಸ್ಪರ ಸಹಕಾರದೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೇರಳಂನ ಅಲಪುಳ್ಳದಲ್ಲಿ ಶನಿವಾರ ನಡೆದ 72ನೇ ಆವೃತ್ತಿಯ ನೆಹರೂ ಟ್ರೋಫಿ ಬೋಟ್ ಸ್ಪರ್ಧೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಬಹಳ ಸಂತೋಷ ತಂದಿದೆ. ನಮ್ಮ ಶ್ರೇಷ್ಠ ನಾಯಕರಾದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಈ ಕ್ರೀಡೆಗೆ ಆದ್ಯತೆ ನೀಡಿ ದೊಡ್ಡ ಸಂದೇಶ ನೀಡಿದರು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ ಕಾಂಗ್ರೆ ಅಧಿಕಾರದಲ್ಲಿದ್ದಾಗಲೆಲ್ಲ ಸಮಾಜದ ಎಲ್ಲಾ ವರ್ಗದ ಜನ ಅಧಿಕಾರದಲ್ಲಿದ್ದಂತೆ. ಇಂದು ಈ ರಾಜ್ಯದ ಎಲ್ಲಾ ಯುವಕರು ಈ ಕ್ರೀಡಾಕೂಟವನ್ನು ಆನಂದಿಸುತ್ತಿದ್ದೀರಿ. ಕರ್ನಾಟಕದಲ್ಲಿ ಮೈಸೂರು ದಸರಾವನ್ನು ಸಂಭ್ರಮದಿಂದ ಆಚರಿಸುವಂತೆ ಕೇರಳಂನಲ್ಲಿ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ” ಎಂದರು.

“ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಕೂಡ ನಿಮ್ಮ ಜೊತೆ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾವು ನೀರು, ಹವಾಮಾನ, ಸಂಸ್ಕೃತಿ ಸೇರಿದಂತೆ ಎಲ್ಲವನ್ನು ಪರಸ್ಪರ ಹಂಚಿಕೊಳ್ಳುತ್ತೇವೆ. ಶ್ರೀಮತಿ ಇಂದಿರಾ ಗಾಂಧಿ ಹಾಗೂ ಶ್ರೀಮತಿ ಸೋನಿಯಾ ಗಾಂಧಿ ಅವರು ಸಂಸತ್ ಪ್ರವೇಶಿಸಲು ಕರ್ನಾಟಕ ವೇದಿಕೆಯಾಗಿತ್ತು. ರಾಹುಲ್ ಗಾಂಧಿ ಹಾಗೂ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ಸಂಸತ್ ಪ್ರವೇಶಿಸಲು ಕೇರಳಂ ರಾಜ್ಯ ವೇದಿಕೆಯಾಗಿದೆ” ಎಂದರು.

ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಳ್ಳುತ್ತದೆ

“ಸತೀಶನ್ ಅವರ ನೇತೃತ್ವದ ಸರ್ಕಾರ ರಾಜ್ಯದ ಕಲ್ಯಾಣಕ್ಕೆ ಶ್ರಮಿಸಲಿದ್ದು, ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಲಿದೆ. ಯುಡಿಎಫ್ ಮೈತ್ರಿಕೂಟ ಒಟ್ಟಾಗಿ ಕೆಲಸ ಮಾಡಲಿದ್ದು, ನಾವೆಲ್ಲರೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವ ದೊಡ್ಡ ಸಂದೇಶ ರವಾನಿಸಲಿದೆ” ಎಂದರು.

“ಇಲ್ಲಿರುವ ಎಲ್ಲಾ ಸ್ಪರ್ಧಿಗಳು ಹಾಗೂ ಆಡಳಿತ ಮಂಡಳಿಯವರಿಗೆ ಶುಭ ಕೋರುತ್ತೇನೆ. ಕರ್ನಾಟಕ ನಿಮ್ಮ ಜತೆಗೆ ನಿಲ್ಲಲಿದೆ, ನೀವು ಕರ್ನಾಟಕ ರಾಜ್ಯದ ಜತೆಯಾಗಿ ನಿಲ್ಲಬೇಕು. ಎರಡೂ ರಾಜ್ಯದವರು ಸಹೋದರರಂತೆ ಸಾಗಬೇಕು” ಎಂದು ಕರೆ ನೀಡಿದರು. | TV NEWS KARNATAKA AUG 22 2026









 #ಕುಡಿಯುವ_ನೀರಿನ_ಸಮರ್ಪಕ_ಪೂರೈಕೆಗೆ_ಅಗತ್ಯ  #ಮುನ್ನೆಚ್ಚರಿಕಾ_ಕ್ರಮಗಳ_ಕುರಿತು_ಅಧಿಕಾರಿಗಳ_ಸಭೆಇಂದು ಸಂಜೆ ವಿಜಯಪುರ ನಗರದ ಪ್ರವಾಸಿ ಮಂದಿರದಲ್...
22/08/2026

#ಕುಡಿಯುವ_ನೀರಿನ_ಸಮರ್ಪಕ_ಪೂರೈಕೆಗೆ_ಅಗತ್ಯ #ಮುನ್ನೆಚ್ಚರಿಕಾ_ಕ್ರಮಗಳ_ಕುರಿತು_ಅಧಿಕಾರಿಗಳ_ಸಭೆ

ಇಂದು ಸಂಜೆ ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜನರಿಗೆ ಸಮರ್ಪಕ ನೀರು ಪೂರೈಸುವ ಕುರಿತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

#ಅಲ್ಲದೇ_KBJNL_ಅಧಿಕಾರಿಗಳು ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಿ ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ತುಂಬಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಾನುವಾರುಗಳಿಗೆ_ಕುಡಿಯುವ_ನೀರಿನ_ಕೊರತೆಯಾಗದಂತೆ_ಎಲ್ಲ_ಅಗತ್ಯ_ಕ್ರಮಗಳನ್ನು_ಕೈಗೊಳ್ಳುವುದು_ನಮ್ಮ_ಆದ್ಯತೆ.

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಮೀಜಾ ನಧಾಫ್ ರಾಜೀನಾಮೆ ಸಲ್ಲಿಕೆವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರಿಗೆ ರಾಜೀನಾಮೆ ಸಲ್ಲಿಕೆ...
22/08/2026

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಮೀಜಾ ನಧಾಫ್ ರಾಜೀನಾಮೆ ಸಲ್ಲಿಕೆ
ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರಿಗೆ ರಾಜೀನಾಮೆ ಸಲ್ಲಿಕೆ

ಆಡಿಯೋದಲ್ಲಿ ಮಾಟ ಮಂತ್ರದ ಬಗ್ಗೆ ವಿವಾದ ಉಂಟಾಗಿತ್ತು
ಪಕ್ಷದಲ್ಲಿನ ಆಂತರಿಕ ಚಟುವಟಿಕೆಗಳಿಗೆ ಬೇಸತ್ತು ರಾಜೀನಾಮೆ ಸಲ್ಲಿದ ನಧಾಪ್
ಕಾಂಗ್ರೆಸ್ ಪಕ್ಷದಲ್ಲಿ ನನ್ನ ಬೆಳವಣಿಗೆ ಸಹಿದೇ ಕಾಣದ ಕೈಗಳ ಕೈವಾಡದಿಂದ ನೋವುಂಟ ಆಗಿದೆ
ಕೆಲವರು ದೊಡ್ಡವರಿಗೆ ಮಸಿ ಬಳಿಯುವ ಹುನ್ನಾರದಿಂದ ಮನಸ್ಸಿಗೆ ನೋವುಂಟಾಗಿದೆ
ಅದಕ್ಕಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ನಧಾಪ್ ಉಲ್ಲೇಖ | TV NEWS KARNATAKA AUG 22 2026









ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆಯಲ್ಲಿ ‘ರಾಧಾಸ್ವಾಮಿ ಸತ್ಸಂಗ್ ಬಿಯಾಸ್’ ಆಯೋಜಿಸಿದ್ದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಎಐಸಿಸಿ ಪ್...
22/08/2026

ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆಯಲ್ಲಿ ‘ರಾಧಾಸ್ವಾಮಿ ಸತ್ಸಂಗ್ ಬಿಯಾಸ್’ ಆಯೋಜಿಸಿದ್ದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಶ್ರೀ Randeep Singh Surjewala ಅವರೊಂದಿಗೆ ಭಾಗವಹಿಸಲಾಯಿತು.
ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಬರಮಾಡಿಕೊಂಡ ಆಯೋಜಕರಿಗೆ ಹಾಗೂ ಸದ್ಭಕ್ತರಿಗೆ ಹೃತ್ಪೂರ್ವಕ ಧನ್ಯವಾದಗಳು.

22/08/2026

ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಸೆ. 2ರಿಂದ ಅಹೋರಾತ್ರಿ ಪ್ರತಿಭಟನೆ

ವಿಜಯಪುರ: ಪರಿಷ್ಕೃತ ಕನಿಷ್ಠ ವೇತನ ಜಾರಿಯನ್ನು ತಡೆಹಿಡಿದಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಕೂಡಲೇ ಪರಿಷ್ಕೃತ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಸೆಪ್ಟೆಂಬರ್ 2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.

ಕಾರ್ಮಿಕರ ಸುದೀರ್ಘ ಹೋರಾಟದ ಫಲವಾಗಿ 2026ರ ಮೇ 22ರಂದು ರಾಜ್ಯ ಸರ್ಕಾರ 81 ನಿಗದಿತ ಉದ್ಯೋಗಗಳಿಗೆ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಆದರೆ ಉದ್ಯಮಪತಿಗಳ ಒತ್ತಡಕ್ಕೆ ಮಣಿದು ಸರ್ಕಾರ ವೇತನ ಜಾರಿ ತಡೆಹಿಡಿದು, ಮರುಪರಿಶೀಲನೆಗಾಗಿ ಸಂಪುಟ ಉಪಸಮಿತಿ ರಚಿಸಿರುವುದು ಕಾರ್ಮಿಕ ವಿರೋಧಿ ಧೋರಣೆ ಎಂದು ಎಐಯುಟಿಯುಸಿ ಆರೋಪಿಸಿದೆ.

ಕನಿಷ್ಠ ವೇತನ ಸಲಹಾ ಮಂಡಳಿಯಲ್ಲಿ ಕಾರ್ಮಿಕರು, ಉದ್ಯಮಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಲವು ಹಂತಗಳಲ್ಲಿ ಚರ್ಚೆ ನಡೆಸಿ ವೇತನ ಪರಿಷ್ಕರಣೆ ಮಾಡಲಾಗಿದೆ. ಹಲವು ಸರ್ಕಾರಿ ಇಲಾಖೆಗಳು, ನಿಗಮ-ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳು ಪರಿಷ್ಕೃತ ದರದಂತೆ ವೇತನ ಪಾವತಿಸಿರುವುದನ್ನೂ ಸಂಘಟನೆ ಉಲ್ಲೇಖಿಸಿದೆ.

ವೇತನ ಹೆಚ್ಚಳದಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬೀಳುತ್ತದೆ ಹಾಗೂ ಕೈಗಾರಿಕೆಗಳು ಹೊರರಾಜ್ಯಗಳಿಗೆ ವಲಸೆ ಹೋಗುತ್ತವೆ ಎಂಬ ವಾದ ತರ್ಕಬದ್ಧವಲ್ಲ. ಕೈಗಾರಿಕೆಗಳ ಬೆಳವಣಿಗೆಗೆ ಮೂಲಸೌಕರ್ಯ, ವಿದ್ಯುತ್, ಸಾರಿಗೆ, ಮಾರುಕಟ್ಟೆ ಹಾಗೂ ಕೌಶಲ್ಯಪೂರ್ಣ ಕಾರ್ಮಿಕರ ಲಭ್ಯತೆಯೂ ಪ್ರಮುಖವಾಗಿವೆ ಎಂದು ಎಐಯುಟಿಯುಸಿ ಹೇಳಿದೆ.

ಮೇ 22ರ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯನ್ನು ತಕ್ಷಣ ಜಾರಿಗೊಳಿಸಬೇಕು, ವೇತನ ಜಾರಿ ತಡೆಗಾಗಿ ರಚಿಸಿರುವ ಸಂಪುಟ ಸಮಿತಿಯನ್ನು ರದ್ದುಗೊಳಿಸಬೇಕು ಹಾಗೂ ಕಾರ್ಮಿಕರಿಗೆ ಬಾಕಿ ಇರುವ ವೇತನ ವ್ಯತ್ಯಾಸವನ್ನು ಕೂಡಲೇ ಪಾವತಿಸಬೇಕು ಎಂಬುದು ಸಂಘಟನೆಯ ಪ್ರಮುಖ ಆಗ್ರಹವಾಗಿದೆ.

ಸೆಪ್ಟೆಂಬರ್ 2ರಿಂದ ನಡೆಯಲಿರುವ ಅಹೋರಾತ್ರಿ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಕಾರ್ಮಿಕರು ಹಾಗೂ ನೌಕರರು ಭಾಗವಹಿಸಲಿದ್ದಾರೆ ಎಂದು ಎಐಯುಟಿಯುಸಿ ವಿಜಯಪುರ ಜಿಲ್ಲಾ ಸಮಿತಿ ತಿಳಿಸಿದೆ. | TV NEWS KARNATAKA AUG 22 2026









22/08/2026

ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸಂಚಾರಿ, ಅರೆ ಸಂಚಾರಿ ಹಾಗೂ ಕುರಿಗಾರರ ಸಮಸ್ಯೆಗಳ ಕುರಿತು ಐತಿಹಾಸಿಕ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಕಾರ್ಯಕ್ರಮಕ್ಕೆ ಆಗಮಿಸಿ, ಜಿಲ್ಲೆಯ ಕುರಿಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ನೇರವಾಗಿ ಆಲಿಸಲಿದ್ದಾರೆ.
ಆಗಸ್ಟ್ 24ರ ಸೋಮವಾರ ಸಂಜೆ 4 ಗಂಟೆಗೆ, ವಿಜಯಪುರ ತಾಲೂಕಿನ ಇಂಡಿ ರಸ್ತೆಯ ಬಳಿಯ ಪಾಂಗರುನದೊಡ್ಡಿ ಬಾಳುಮಾಮಾ ದೇವಸ್ಥಾನದ ಸಮೀಪ ಈ ಸಂವಾದ ಕಾರ್ಯಕ್ರಮ ನಡೆಯಲಿದೆ.
ಕುರಿಗಾರರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕುರಿ ಕಳ್ಳತನ, ಅಪಘಾತ ಪ್ರಕರಣಗಳು, ಕುರಿಗಾರರ ಮಕ್ಕಳ ಶಿಕ್ಷಣ ಹಾಗೂ ಹಾಸ್ಟೆಲ್ ಸೌಲಭ್ಯ, ಬರಗಾಲದ ಸಂದರ್ಭದಲ್ಲಿ ಕುರಿ-ಮೇಕೆಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕಾರ್ಯಕ್ರಮದಲ್ಲಿ ಆಗ್ರಹಿಸಲಾಗುವುದು.
ಇದರ ಜೊತೆಗೆ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ, ಕಾಲಕಾಲಕ್ಕೆ ಪಶುವೈದ್ಯಕೀಯ ಚಿಕಿತ್ಸೆ, ರಕ್ಷಣಾ ವ್ಯವಸ್ಥೆ ಹಾಗೂ ಅಗತ್ಯವಿರುವವರಿಗೆ ಬಂದೂಕು ಪರವಾನಗಿ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗುವುದು.
ಕುರಿಗಾರರು ಬೇರೆ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಲಸೆ ಹೋಗುವ ಸಂದರ್ಭದಲ್ಲಿ ಟೆಂಟ್, ಗ್ಯಾಸ್ ಒಲೆ ಮತ್ತು ವಾಹನ ಸೌಲಭ್ಯ ಕಲ್ಪಿಸಬೇಕು. ಗೋಮಾಳ ಹಾಗೂ ಹುಲ್ಲುಗಾವಲು ಪ್ರದೇಶಗಳ ಒತ್ತುವರಿಯನ್ನು ತೆರವುಗೊಳಿಸಿ, ಕುರಿ-ಮೇಕೆಗಳಿಗೆ ಮೇಯಲು ಸೂಕ್ತ ಜಾಗ ಒದಗಿಸಬೇಕು ಎಂಬ ಒತ್ತಾಯವೂ ಇರಲಿದೆ.
ಅಲ್ಲದೆ ಕುರಿಗಾರರಿಗೆ ವೈಜ್ಞಾನಿಕ ತರಬೇತಿ, ಸೂಕ್ತ ಮಾರುಕಟ್ಟೆ ವ್ಯವಸ್ಥೆ ಹಾಗೂ ಸರ್ಕಾರ ರೂಪಿಸಿರುವ ಕುರಿಗಾರರ ರಕ್ಷಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು.
ಕುರಿಗಾರರ ಹಟ್ಟಿಗಳಲ್ಲಿ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ, ರೋಗ, ಅಪಘಾತ ಮತ್ತು ಕಳ್ಳತನದಿಂದ ಕುರಿಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಉದ್ಯೋಗಾವಕಾಶ ಕಲ್ಪಿಸುವಂತೆಯೂ ಆಗ್ರಹಿಸಲಾಗುವುದು.
ಈ ಸಂವಾದ ಕಾರ್ಯಕ್ರಮದಲ್ಲಿ ಕುರಿಗಾರರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಹಾಗೂ ಡಾ. ನಾಗಲಕ್ಷ್ಮಿ ಚೌಧರಿ ಅವರ ಮುಂದೆ ನೇರವಾಗಿ ಮಂಡಿಸಲು ಅವಕಾಶವಿದೆ. ಸರ್ಕಾರದ ವಿವಿಧ ಸೌಲಭ್ಯಗಳ ಬಗ್ಗೆಯೂ ಸ್ಥಳದಲ್ಲೇ ಮಾಹಿತಿ ಪಡೆಯಬಹುದಾಗಿದೆ.
ಹೀಗಾಗಿ ವಿಜಯಪುರ ಜಿಲ್ಲೆಯ ಎಲ್ಲಾ ಸಂಚಾರಿ, ಅರೆ ಸಂಚಾರಿ ಹಾಗೂ ಕುರಿಗಾರ ಬಂಧುಗಳು, ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಕುರಿಗಾರರ ಸಂಘ ಮನವಿ ಮಾಡಿದೆ. | TV NEWS KARNATAKA AUG 22 2026









ಕೇರಳಂನ ಅಲಪುಳ್ಳ ರಿಕ್ರಿಯೇಷನ್ ಕ್ಲಬ್ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹಾಗೂ ಸ್ಥಳೀಯ ಮುಖಂಡರು ಬರಮ...
22/08/2026

ಕೇರಳಂನ ಅಲಪುಳ್ಳ ರಿಕ್ರಿಯೇಷನ್ ಕ್ಲಬ್ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹಾಗೂ ಸ್ಥಳೀಯ ಮುಖಂಡರು ಬರಮಾಡಿಕೊಂಡರು.

22/08/2026

ನಿನ್ನೆ ಬೆಳಗ್ಗೆ ವರಮಹಾಲಕ್ಷ್ಮಿ ಪೂಜೆ, ತಡರಾತ್ರಿ ಕಳ್ಳತನ
ವರಮಹಾಲಕ್ಷ್ಮೀ ದೇವಾಲಯದಲ್ಲಿ ಕಳ್ಳರ ಕೈ ಚಳಕ
ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿ ಬಳಿ ಲಕ್ಷ್ಮೀ ನಗರದಲ್ಲಿ ಘಟನೆ
ದೇವಿಯ ಮೈ ಮೇಲಿನ ಬಂಗಾರ, ಬೆಳ್ಳಿ ಆಭರಣ ಕದ್ದ ಕಳ್ಳರು
ನಿನ್ನೆಯಷ್ಟು ದೇವಿಯ ಜಾತ್ರೆ ವಿಜೃಂಬಣೆಯಿಂದ ಮಾಡಿದ್ದ ಬಡಾವಣೆ ನಿವಾಸಿಗಳು
ಜಾತ್ರೆಯ ಅಂಗವಾಗಿ ರಾತ್ರೀ ದೇವಾಲಯದ ಬಾಗಿಲು ಓಪನ್ ಇಟ್ಟದ ಬಡಾವಣೆ ನಿವಾಸಿಗಳು
ತಡರಾತ್ರಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಕಳ್ಳರು ಪರಾರಿ
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ | TV NEWS KARNATAKA AUG 22 2026









22/08/2026

ಕಾಲು ಜಾರಿ ತೆರದ ಬಾವಿಗೆ ಬಿದ್ದ ಮಕ್ಕಳು
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ಘಟನೆ
ಬಾಯಿಯಲ್ಲಿ ಕಾಲು ಜಾರಿ ಬಿದ್ದ ಇಬ್ಬರು ಹೆಣ್ಣು ಮಕ್ಕಳು
ಸಾಕ್ಷಿ ( 15 ), ರಕ್ಷಿತಾ ( 10 ) ಬಾವಿಗೆ ಬಿದ್ದ ಮಕ್ಕಳು
ಮಕ್ಕಳನ್ನು ಬದುಕಿಸಲು ಬಾವಿಗೆ ಜಿಗಿದಿರುವ ತಂದೆ ಸಾಬಣ್ಣ ( 40 )
ಈಜಲು ಬಾರದ ಸಾಬಣ್ಣ ಕೂಡು ನಾಪತ್ತೆ
ಮೂವರಿಗಾಗಿ ನಡೆದಿರುವ ಶೋಧ ಕಾರ್ಯ
ತೆಪ್ಪದ ಮೂಖಾಂತರ ಮುಂದುವರೆದಿರುವ ಶೋಧ ಕಾರ್ಯ
ನಿಡಗುಂದಿ ಪೊಲೀಸರು ಸ್ಥಳಕ್ಕೆ ದೌಡು
ಗ್ರಾಮಸ್ಥರಿಂದ ಮುಂದುವರೆದಿರುವ ಶೋಧ ಕಾರ್ಯ | TV NEWS KARNATAKA AUG 22 2026









Address

WARD NO 15 HOUSE NO 1169 HASIMPEER DARDA Road AMBEDAKAR NAHAR VIJAYAPUR
Bijapur
586104

Alerts

Be the first to know and let us send you an email when SK SUKIL posts news and promotions. Your email address will not be used for any other purpose, and you can unsubscribe at any time.

Contact The Business

Send a message to SK SUKIL:

Shortcuts

Share