CHN TV

CHN TV ಹೊಸ ಹೆಜ್ಜೆ- ಗಡಿನಾಡ ಸುದ್ಧಿ ಸಮಾಚಾರ

ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ ▪️ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯ...
24/02/2024

ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ

▪️ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ ಬಂದಿದೆ.

▪️ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.

▪️ಸ್ತಬ್ದ ಚಿತ್ರದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುಳಿತಿರುವ ಪ್ರತಿಮೆಯನ್ನು ಆಕರ್ಷಕವಾಗಿ ನಿರ್ಮಿಸಲಾಗಿದೆ. ಸಂವಿಧಾನ ಪೀಠಿಕೆಯನ್ನು ಪುಸ್ತಕದ ಮಾದರಿಯಲ್ಲಿ ಪ್ರದರ್ಶಿಸಲಾಗಿದೆ. ಬಸವತತ್ವ, ಸಾವಿತ್ರಿ ಜ್ಯೋತಿಬಾಪುಲೆ, ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ ಕೊಡುಗೆ ಸೇರಿದಂತೆ ಜಿಲ್ಲೆಯ ಪ್ರಮುಖ ಕೊಡುಗೆಗಳನ್ನು ಸ್ತಬ್ದ ಚಿತ್ರದಲ್ಲಿ ಸ್ಮರಿಸಲಾಗಿದೆ. ಸಂವಿಧಾನಿಕ ಹಕ್ಕುಗಳ ಸಂರಕ್ಷಣೆ ಸಂದೇಶ, ವನ್ಯಜೀವಿ ಪ್ರಕೃತಿ ಸಂರಕ್ಷಣೆ ಸಂದೇಶ, ಇನ್ನಿತರ ವೈಶಿಷ್ಟ್ಯಗಳನ್ನು ಸ್ತಬ್ದ ಚಿತ್ರ ಒಳಗೊಂಡಿದೆ. ಇದರೊಂದಿಗೆ ರಾಜ್ಯ ಸರ್ಕಾರ ಸಾಕಾರಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಸ್ತಬ್ದಚಿತ್ರದಲ್ಲಿ ಪ್ರದರ್ಶಿಸಲಾಗಿದೆ.

▪️ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎರಡು ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಗಳಿಗೆ ಚಾಲನೆ ದೊರೆತು ಜಿಲ್ಲೆಯ 130 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಸ್ತಬ್ದ ಚಿತ್ರ ಸಂಚರಿಸಿದೆ. ನಗರ ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತ ನೀಡಿ ಜನತೆ ಹಬ್ಬದಂತೆ ಸಂಭ್ರಮಿಸಿದ್ದಾರೆ. ಜನರಿಂದ ಸಂವಿಧಾನ ಜಾಗೃತಿಗೆ ಅಭೂತಪೂರ್ವ ಬೆಂಬಲ ಪ್ರತಿಕ್ರಿಯೆ ವ್ಯಕ್ತವಾಗಿದೆ.

▪️ಸಂವಿಧಾನ ಜಾಗೃತಿ ಸ್ತಬ್ದ ಚಿತ್ರ ಪ್ರಥಮ ಸ್ಥಾನಕ್ಕೆ ಪಾತ್ರವಾಗಿದ್ದು, ಇದಕ್ಕೆ ಶ್ರಮಿಸಿದ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಎಲ್ಲಾ ಅಧಿಕಾರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅಭಿನಂದನೆಗಳು.

#ಸಂವಿಧಾನಜಾಗೃತಿಜಾಥಾ

#ಸಂವಿಧಾನ_ಜಾಗೃತಿ_ಜಾಥಾ



Chief Minister of Karnataka DIPR Karnataka K Venkatesh DR HC Mahadevappa ಸಮಾಜ ಕಲ್ಯಾಣ ಇಲಾಖೆ ಚಾಮರಾಜನಗರ ಜಿಲ್ಲೆ SWD Chamarajanagar Constitution Awareness Jatha ಸಮಾಜ ಕಲ್ಯಾಣ ಇಲಾಖೆ Social Welfare Department Zilla Panchayath Chamarajanagar Chamarajanagar Vartha Bhavan

ನಾಳೆ ವಿವಿಧ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್: ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಮಾಹಿತಿ:ಚಾಮರಾಜನಗರ, ಡಿ.7-ಚಾಮರಾಜನಗರ ಸೇರಿದಂತೆ ...
08/12/2023

ನಾಳೆ ವಿವಿಧ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್:

ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಮಾಹಿತಿ:

ಚಾಮರಾಜನಗರ, ಡಿ.7-ಚಾಮರಾಜನಗರ ಸೇರಿದಂತೆ ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕು ನ್ಯಾಯಾಲಯ ಗಳಲ್ಲಿ ಡಿ.9ರಂದು ಮೆಗಾ ಲೋಕ್ ಆದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆದ್ಯಕ್ಷೆ ಬಿ.ಎಸ್. ಭಾರತಿ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದ ಎಡಿಆರ್ ಕಟ್ಟಡದ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾ ದ್ಯಂತ ಡಿ.9ರಂದು ಲೋಕ ಅದಾಲತ್ ನಡೆಸಲಾ ಗುತ್ತಿದೆ ಜಿಲ್ಲೆಯ 4 ತಾಲೂಕು ಕೇಂದ್ರಗಳ ಆಯಾ ನ್ಯಾಯಾಲಯಗಳಲ್ಲಿ ಬೈಟಕ್ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಲೋಕ್ ಆದಾಲತ್ ನ್ನು ಹಮ್ಮಿಕೊಳ್ಳಲಾಗಿದೆ. ಹಿಂದಿನ ಲೋಕ್ ಆದಾಲತ್ ಅನ್ನು ವಕೀಲರು, ಕಕ್ಷಿದಾರರು, ವಿಮಾ ಕಂಪನಿಗಳು, ವಿವಿಧ ಇಲಾಖೆಯ ಸಹಕಾರದೊಂದಿಗೆ ಯಶಸ್ವಿ ಯಾಗಿ ನಡೆಸಿ 16 ಸಾವಿರ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿತ್ತು ಈ ಬಾರಿಯ ಅದಾಲತ್ ನಲ್ಲಿ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಲು ಗುರಿ ಹೊಂದಲಾಗಿದೆ ಎಂದರು.

ಅದಾಲತ್ಗೆ ಸಂಬಂಧಪಟ್ಟ ವಕೀಲರು, ಕಕ್ಷಿ ದಾರರು ತಮ್ಮ ಸಹಕಾರ ನೀಡಿದ್ದಲ್ಲಿ ಸಂಧಾನಕಾ ರರು ನೀಡುವ ಸಲಹೆಗಳನ್ನು ಆಲಿಸಿ, ಪಾಲಿಸಿದಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿ ಪ್ರಕರಣವನ್ನು ಲೋಕ್ ಆದಾಲತ್ ನಲ್ಲಿ ಬಗೆಹರಿಸಿಕೊಳ್ಳಬಹುದು. ಆದಾಲತ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿಸಿ, ಇತರೆ ಯಾವುದೇ ಸಿವಿಲ್ ಪ್ರಕರಣಗಳು, ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ. ಜೀವನಾಂಶ, ಮಕ್ಕಳ ಸಂರಕ್ಷಣೆ, ವಾಹನ ಅಪ ಪಾತ, ಕೈಗಾರಿಕಾ ವಿವಾದ ಕಾಯ್ದೆ ಮತ್ತು ರಾಜಿ ಯೋಗ್ಯ ಕ್ರಿಮಿನಲ್, ವಿಶೇಷ ಕಾನೂನಿನಿಂದ ಶಿಕ್ಷಿಸಲ್ಪಡುವ ಅಪರಾಧಗಳಾದ ಚೆಕ್ಕು ಅಮಾನ್ಯ ಕಾರ್ಮಿಕ ಕಾಯ್ದೆ, ವಿದ್ಯುತ್ ಕಳವಿಗೆ ಸಂಬಂಧ ಅಕ್ರಮ ಕಲ್ಲು, ಮರಳು ಸಾಗಣಿಕೆ. ಇತರೆ ಯಾವುದೇ ಅಪರಾಧ ಸ್ವರೂಪದ ರಾಜಿ ಯೋಗ್ಯ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಲೋಕ ಆದಾಲತನಲ್ಲಿ ರಾಜಿ ಮಾಡಿಕೊಳ್ಳ ಬಹುದು ಎಂದು ಮಾಹಿತಿ ನೀಡಿದರು.

ಯಾವುದೇ ನ್ಯಾಯಾ ಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಹಾಗೂ ರಾಜಿ ಯೋಗ್ಯ ಪ್ರಕರಣಗಳಲ್ಲಿ ಪಕ್ಷ ಕಾರರು ಸಂಬಂಧಪಟ್ಟ ನ್ಯಾಯಾಲಯಕ್ಕೆ ಡಿ.9ರಂದು ನಡೆಯುವ ಲೋಕ್ ಆದಾಲತ್ಗೆ ಪ್ರಕರಣವನ್ನು ವರ್ಗಾಯಿಸಲು ಮನವಿ ಸಲ್ಲಿಸಿದ್ದಲ್ಲಿ ದಾಕಿ ಪ್ರಕರಣಗಳನ್ನು ಅವಾಲತ್ಗೆ ಕಳುಹಿಸಲಾ ಗುವುದು. ನಿಗದಿ ಪ್ರಕರಣಗಳನ್ನು ಮುಂಗಡ ಅರ್ಜಿಯನ್ನು ಸಲ್ಲಿಸುವ ಮೂಲಕ ಅದಾಲತ್ ನಲ್ಲಿ ತರಿಸಿಕೊಂಡು ವ್ಯಾಜ್ಯ ಇತ್ಯರ್ಥಕ್ಕೆ ಪ್ರಯತ್ನಿ ಸುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾ ಧೀಶ ಎಂ.ಶ್ರೀಧರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಚೂಪಾದ ಮರದ ತುಂಡು ತುಳಿದು 'ಅರ್ಜುನ'ನಿಗೆ ಗಾಯವಾಗಿತ್ತೆ ಹೊರತು ಗುಂಡೇಟಿನಿಂದಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ!ಹಾಸನ, ಡಿ.7- ವಿಶೇಷ ಕಾರ್ಯಾಚರಣೆ ...
08/12/2023

ಚೂಪಾದ ಮರದ ತುಂಡು ತುಳಿದು 'ಅರ್ಜುನ'ನಿಗೆ ಗಾಯವಾಗಿತ್ತೆ ಹೊರತು ಗುಂಡೇಟಿನಿಂದಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ!

ಹಾಸನ, ಡಿ.7- ವಿಶೇಷ ಕಾರ್ಯಾಚರಣೆ ವೇಳೆ ಭೀಕರ ಕಾಳಗದಲ್ಲಿ ದಸರಾ ಆನೆ ಅರ್ಜುನ ಆನೆ ಮೃತಪಟ್ಟಿದ್ದು, ಅದರ ಮಾವುತ ವಿನು ರೋದಿಸಿದ್ದು ಎಂಥವರ ಮನಕಲಕುವಂತಿತ್ತು.

ಅರ್ಜುನ ಆನೆ ಕಾಳಗದ ವೇಳೆ ಆರಣ್ಯಾಧಿ ಕಾರಿಗಳ ತಪ್ಪಾದ ಗುಂಡೇಟಿಗೆ ಬಲಿಯಾಗಿದೆ ಎಂಬ ಆರೋಪ ಎಲ್ಲೆಡೆ ಕೇಳಿಬಂದಿತ್ತು ಆದರೆ, ಅರಣ್ಯ ಇಲಾಖೆಯು ಈ ಆರೋಪವನ್ನು ಅಲ್ಲಗಳೆದಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ಒಂಟಿ ಕಾಡಾನೆ ಸೆರೆ ಕಾರ್ಯಾ ಚರಣೆಯ ಮೇಲುಸ್ತುವಾರಿ ವಹಿಸಿಕೊಂಡಿದ್ದ ನಾನು ಅದಕ್ಕೆ ರೇಡಿಯೊ ಕಾಲರ್‌ಗಳನ್ನು ಸರಿಪಡಿಸುತ್ತಿದ್ದ

ವೇಳೆ ಅರ್ಜುನನ ಬಲಭಾಗಕ್ಕೆ ದೊಡ್ಡ ಗಾಯವಾಗಿದ್ದು ತೀವ್ರ ನೋವಿನಿಂದ ಬಳಲುತ್ತಿದ್ದುದನ್ನು ಗಮನಿಸಿದ್ದೆ ಎಂದು ಹೇಳಿದ್ದಾರೆ.

ಕಾಡಾನೆಯೊಂದಿಗೆ ಕಾದಾಡುವಾಗ ಚೂಪಾದ ಮರದ ತುಂಡನ್ನು ತುಳಿದು ಆನೆ ಗಾಯಗೊಂಡಿದೆ. ನಿರಂತರವಾಗಿ ರಕ್ತಸ್ರಾವವಾಗುತ್ತಿದ್ದರೂ ಅದು ತೀವ್ರವಾಗಿ ಹೋರಾಡುತ್ತಿತ್ತು. ಕಾರ್ಯಾಚರಣೆಯ ಸಮಯದಲ್ಲಿ ತಪ್ಪಾಗಿ ಗುಂಡೇಟು ಬಿದ್ದು ಅರ್ಜುನ ಆನೆ ಗಾಯಗೊಂಡು ಮೃತಪಟ್ಟಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಯಾಚರಣೆ ವೇಳೆ ಅರಣ್ಯ ಅಧಿಕಾರಿ ಯೊಬ್ಬರು ದೂರದಲ್ಲಿ ನಿಂತು, ಕಾಡಾನೆಯನ್ನು ಭಯಪಡಿಸಲು ಗಾಳಿಯಲ್ಲಿ ಗುಂಡು ಹಾರಿಸಿದರು. ಆಗ ಅರ್ಜುನ ಆನೆ ತನ್ನ ಹೋರಾಟವನ್ನು ಮತ್ತಷ್ಟು

ತೀವ್ರಗೊಳಿಸಿತು ಎನ್ನುತ್ತಾರೆ. ಇಂತಹ ಕಾರ್ಯಾ ಚರಣೆಯ ವೇಳೆ ಅರಣ್ಯ ಸಿಬ್ಬಂದಿ ಆತ್ಮರಣೆಗಾಗಿ ಡಬಲ್ ಬ್ಯಾರಲ್ ಗನ್ ಅನ್ನು ಮಾತ್ರ ಕೊಂಡೊಯ್ಯುತ್ತಾರೆ ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಅರ್ಜುನನ ದೇಹದ ಯಾವುದೇ ಭಾಗದಲ್ಲಿ ಮದ್ದುಗುಂಡಿನ ಗಾಯಗಳು ವೈದ್ಯರಿಗೆ ಕಂಡುಬಂದಿಲ್ಲ ಎಂದು ಹೇಳಿದರು.

ಕ್ರಮಕ್ಕೆ ಆಗ್ರಹ: ಅರ್ಜುನನ ಮಾವುತ ವಿನು ನೀಡಿದ್ದ ಹೇಳಿಕೆಯ ನಂತರ ಕಾಡಾನೆಯೊಂದಿಗೆ ಕಾಳಗದ ವೇಳೆ ಅರಣ್ಯಾಧಿಕಾರಿಗಳ ಗುಂಡೇಟಿಗೆ ತೀವ್ರ ಗಾಯಗೊಂಡು ಮೃತಪಟ್ಟಿದೆ ಎಂದು ಪ್ರಾಣಿ ಪ್ರೇಮಿಗಳು ಆರೋಪಿಸಿದ್ದಾರೆ ಈ ಬಗ್ಗೆ ತನಿಖೆ ನಡೆಸಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

17/11/2023

ಕೋಟಿ ಕೋಟಿ ಆದಾಯವಿರೊ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಾದಿಗಳ ಸ್ಥಿತಿ ಇದು... ಆದರೆ ಭಕ್ತಾದಿಗಳಿಗೆ ಬೇಸರವಿಲ್ಲ ಮಾದಪ್ಪನ ಹೆಸರೇಳಿ ತಮ್ಮ ನೋವನ್ನ...
17/10/2023

ಕೋಟಿ ಕೋಟಿ ಆದಾಯವಿರೊ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಾದಿಗಳ ಸ್ಥಿತಿ ಇದು... ಆದರೆ ಭಕ್ತಾದಿಗಳಿಗೆ ಬೇಸರವಿಲ್ಲ ಮಾದಪ್ಪನ ಹೆಸರೇಳಿ ತಮ್ಮ ನೋವನ್ನೆಲ್ಲ ಮರೆಯೋ ಜನರು ನಮ್ಮವರು... ಆದರೆ ಸರ್ಕಾರಕ್ಕಾಗಲಿ ಅಲ್ಲಿನ ಆಡಳಿತ ಮಂಡಳಿಗಾಗಲಿ ಒಂಚೂರಾದರು ಕರುಣೆ ಇದಿಯ...!? ನೀವೆಲ್ಲ ಅಚ್ಚುಕಟ್ಟಾಗಿ ರಾಷ್ಟಪತಿ ಭವನದಲ್ಲೊ ಐಶಾರಾಮಿ ರೂಮಿನಲ್ಲೊ ಮಲಗ್ತೀರ ಆದರೆ ಗೋಲಕಕ್ಕೆ ಹಣ ಹಾಕೊ ಭಕ್ತಾದಿಗಳು ಮಾತ್ರ ಈ ರೀತಿ ಮಲಗಬೇಕು ಅಲ್ವ...!? ತಿಂಗಳಿಗೆ ಕೋಟಿ ಕೋಟಿ ಆದಾಯವನ್ನು ಎಲ್ಲಿಗೆ ಹಾಕುತ್ತಿದ್ದೀರ..!? ಮೊದಲು ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ.. ತಿರುಪತಿ ಧರ್ಮಸ್ಥಳದ ರೀತಿಯ ವಸತಿ ವ್ಯವಸ್ಥೆ ಮಾಡಿ... ಗೋಲಕಗಳನ್ನು ಹೆಚ್ಚು ಮಾಡುವುದು ಮುಖ್ಯವಲ್ಲ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಹೃದಯವಂತರಾಗಿ...

ಇದು ಭಕ್ತನೊಬ್ಬನ ಕಳಕಳಿ.

ಕೊಳ್ಳೇಗಾಲ 13ಕಾಂತರಾಜ್ ಆಯೋಗದ ಜಾತಿಗಣತಿ ವರದಿ ಅಂಗೀಕರಿಸಿ ಹಾಗೂ ಮುಸ್ಲಿಂ ಸಮುದಾಯಕ್ಕಿರುವ 2 ಬಿ ಮೀಸಲಾತಿಯನ್ನು ಶಶೇ.8 ರಷ್ಟು ಹೆಚ್ಚಿಸಬೇಕೆಂ...
13/10/2023

ಕೊಳ್ಳೇಗಾಲ 13
ಕಾಂತರಾಜ್ ಆಯೋಗದ ಜಾತಿಗಣತಿ ವರದಿ ಅಂಗೀಕರಿಸಿ ಹಾಗೂ ಮುಸ್ಲಿಂ ಸಮುದಾಯಕ್ಕಿರುವ 2 ಬಿ ಮೀಸಲಾತಿಯನ್ನು ಶಶೇ.8 ರಷ್ಟು ಹೆಚ್ಚಿಸಬೇಕೆಂದು ಒತ್ತಾಯಿಸಿ ಇಲ್ಲಿನ ಎಸ್.ಡಿ.ಪಿ.ಐ ಸಂಘಟನೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಮಸೀದಿ ವೃತ್ತದಿಂದ ಹೋರಾಟ ಪ್ರತಿಭಟನೆಯು ಡಾ.ಅಂಬೇಡ್ಕರ್ ರಸ್ತೆ, ಎಡಿಬಿ ವೃತ್ತದ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ

ಜಿಲ್ಲಾಧ್ಯಕ್ಷ ಅಬ್ರಾಹಂ ಅಹಮದ್, ಡಿಎಸ್ಎಸ್ ಮೈಸೂರು ವಿಭಾಗೀಯ ಸಂಚಾಲಕ ಸಿದ್ದರಾಜು,
ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಟೌನ್ ಅಧ್ಯಕ್ಷ ಜಾಕೀರ್ ಪಾಷ, ಕಾರ್ಯದರ್ಶಿ ಇಮ್ರಾನ್ ಟಿಪ್ಪು, ಮುಖಂಡ ಮಹಮ್ಮದ್ ಖಲೀಲ್, ಜೆಡಿಎಸ್ ಮುಖಂಡ ಇರ್ಫಾನ್, ಎಜಾಜ್, ರೆಹಮಾನ್ ಸಾಬ್, ಆರೀಫ್, ಮುತಾದಚರಿದ್ದರು.

13/10/2023

ಕೊಳ್ಳೇಗಾಲ ಅ 13
ಅಕ್ರಮವಾಗಿ ಜಿಂಕೆ ಕೊಂಬು ಸಂಗ್ರಹಿಸಿದ್ದ ಮನೆಯ ಮೇಲೆ ದಾಳಿ ನಡೆಸಿ ಓರ್ವ ಆರೋಪಿಯನ್ನು ಅರಣ್ಯಸಂಚಾರಿ ದಳದಪೊಲೀಸರು ಬಂಧಿಸಿ 9 ಜಿಂಕೆ ಕೊಂಬುಗಳನ್ನು ವಶಪಡಿಕೊಂಡಿದ್ದಾರೆ.

ಹನೂರು ತಾಲ್ಲೂಕಿನ ಚಿಕ್ಕಲಾತ್ತೂರು ಗ್ರಾಮದ ಗೋವಿಂದ ಬಂಧಿತ ಆರೋಪಿ. ಈತನು ಅರಣ್ಯದಲ್ಲಿ ಜಿಂಕೆಯನ್ನು ಭೇಟೆಯಾಡಿ ಅದರ ಕೊಂಬುಗಳನ್ನು ಸಂಗ್ರಹಿಸಿ ಮನೆಯಲ್ಲಿಟ್ಟಿದ್ದನ್ನು ಖಚಿತಪಡಿಸಿಕೊಂಡ ಎಫ್ಎಂಎಸ್ ಪೊಲೀಸರು ದಾಳಿ ನಡೆಸಿ ಜಿಂಕೆ ಕೊಂಬುಗಳ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಕೊಳ್ಳೇಗಾಲದ ಎಫ್ಎಂಎಸ್ ಕಚೇರಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗದ ಮುಂದೆ ಹಾಜರುಪಡಿಸಲಾಯಿತು.

ಮಹದೇಶ್ವರ ಬೆಟ್ಟದ ಮುಡಿ ಶೆಡ್‌ನಲ್ಲಿ ಹೆಚ್ಚು ಹಣ ವಸೂಲಿ: ಪ್ರಾಧಿಕಾರದ ಕಾರ್ಯದರ್ಶಿ ಎಚ್ಚರಿಕೆ ನೀಡಿದರೂ ಬದಲಾಗದ ಕಾರ್ಯವೈಖರಿ!ರಾಜ್ಯದ ಪ್ರಸಿದ್...
13/10/2023

ಮಹದೇಶ್ವರ ಬೆಟ್ಟದ ಮುಡಿ ಶೆಡ್‌ನಲ್ಲಿ ಹೆಚ್ಚು ಹಣ ವಸೂಲಿ: ಪ್ರಾಧಿಕಾರದ ಕಾರ್ಯದರ್ಶಿ ಎಚ್ಚರಿಕೆ ನೀಡಿದರೂ ಬದಲಾಗದ ಕಾರ್ಯವೈಖರಿ!

ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳಗಳಲ್ಲೊಂದಾಗಿರವ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಮುಡಿ ಶೆಡ್ ನಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿ ಹಣವನ್ನು ಭಕ್ತರಿಂದ ವಸೂಲಿ ಮಾಡಲಾಗುತ್ತದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಮುಡಿ ಮಾಡುವ ನೌಕರರು ಮತ್ತು ಉಸ್ತುವಾರಿಗಳನ್ನು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು. ಆದರೆ ಅವರು ಸ್ಥಳದಿಂದ ತೆರಳಿದ ಬಳಿಕ ಮತ್ತೆ ಭಕ್ತರಿಂದ ಹೆಚ್ಚುವರಿ ಹಣವನ್ನು ವಸೂಲಿ ಮಾಡಲಾಗಿದೆ.

ಹೈಲೈಟ್ಸ್‌:
> ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿಗೆ ಹೆಚ್ಚುವರಿ ಹಣ ವಸೂಲಿ ಆರೋಪ
> ಸ್ಥಳಕ್ಕೆ ಪ್ರಾಧಿಕಾರ ಕಾರ್ಯದರ್ಶಿ ಸರಸ್ವತಿ ದಿಢೀರ್‌ ಭೇಟಿ, ಪರಿಶೀಲನೆ
> ಮುಡಿ ಮಾಡುವ ನೌಕರರು ಮತ್ತು ಉಸ್ತುವಾರಿಗೆ ಖಡಕ್‌ ಎಚ್ಚರಿಕೆ
> ಕಾರ್ಯದರ್ಶಿ ತೆರಳಿದ ಬಳಿಕ ಮತ್ತೆ ಭಕ್ತರಿಂದ ಹೆಚ್ಚುವರಿ ಹಣ ವಸೂಲಿ

ಹನೂರು: ಮಹದೇಶ್ವರ ಬೆಟ್ಟದ ಪ್ರಾಧಿಕಾರಕ್ಕೆ ಸೇರಿದ ಮುಡಿ ಶೆಡ್‌ನಲ್ಲಿ ಭಕ್ತರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಮುಡಿ ಸೇವೆ ಮಾಡುವ ಭಕ್ತರಿಗೆ 50 ರೂಪಾಯಿ ಟಿಕೆಟ್‌ ನಿಗದಿ ಮಾಡಲಾಗಿದೆ. ಆದರೆ ಕ್ಷೇತ್ರಕ್ಕೆ ಬರುವ ಭಕ್ತರಿಂದ ಮುಡಿ ಮಾಡುವ ನೌಕರರು ಭಕ್ತರಿಂದ 50, 100 ರೂ. ಹೆಚ್ಚುವರಿಯಾಗಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣ ಹಾಗೂ ದೂರವಾಣಿ ಮುಖಾಂತರ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರಿಗೆ ದೂರು ನೀಡಿದ್ದರು.

ಮಂಗಳವಾರ ಬೆಳಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮುಡಿ ಕೌಂಟರ್‌ ಹಾಗೂ ಮುಡಿ ಸೇವೆಯ ಸ್ಥಳಕ್ಕೆ ದಿಢೀರ್‌ ಭೇಟಿ ನೀಡಿ ಭಕ್ತಾದಿಗಳಿಂದ ಗೌಪ್ಯ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಡಿ ಸೇವೆ ಮಾಡುತ್ತಿದ್ದ 25 ನೌಕರರಿಗೆ ಕಾರ್ಯದರ್ಶಿ ಖಡಕ್‌ ಎಚ್ಚರಿಕೆ ನೀಡಿ, ''ಭಕ್ತರಿಂದ ಹೆಚ್ಚುವರಿ ಹಣ ವಸೂಲಿ ಮಾಡಬಾರದು, ನಿಮಗೆ ಯಾವುದಾದರೂ ತೊಂದರೆಗಳಿದ್ದರೆ ನನ್ನ ಬಳಿ ಹೇಳಿ, ನಾನು ಸಮಸ್ಯೆ ಬಗೆಹರಿಸುತ್ತೇನೆ. ಅದನ್ನು ಹೊರತುಪಡಿಸಿ ಭಕ್ತಾದಿಗಳಿಂದ ಹಣ ವಸೂಲಿ ಮಾಡುವುದು ಸರಿಯಲ್ಲ,'' ಎಂದು ಹೇಳಿದರು.

ಟೆಂಡರ್ ದಾರರು 25 ರೂ ಮಾತ್ರ ನೀಡ್ತಾರೆ
ಈ ಸಂದರ್ಭದಲ್ಲಿ ಮುಡಿ ಸೇವೆ ಮಾಡುವ ಸಿಬ್ಬಂದಿ ಮಾತನಾಡಿ, ''ಟೆಂಡರ್‌ ಪಡೆದಿರುವವರು ಒಂದು ಮುಡಿಗೆ ನಮಗೆ 25 ರೂಪಾಯಿ ಮಾತ್ರ ನೀಡುತ್ತಿದ್ದಾರೆ. ಇದು ನಮಗೆ ಸಾಕಾಗುವುದಿಲ್ಲ. ಭಕ್ತರು ಇಷ್ಟಪಟ್ಟು ಕೊಟ್ಟರೆ ಹಣ ಪಡೆಯುತ್ತಿದ್ದೇವೆ,'' ಎಂದು ತಿಳಿಸಿದ್ದಾರೆ.

ಈ ವೇಳೆ ''ನಿಮಗೆ ತೊಂದರೆಯಾಗಿದ್ದಲ್ಲಿ ಮುಡಿ ಟಿಕೆಟ್‌ ಅನ್ನು 75 ರೂಪಾಯಿ ಮಾಡೋಣ, ನಿಮ್ಮ ಸಮಸ್ಯೆಯನ್ನು ಬಗೆಹರಿಸೋಣ,'' ಎಂದು ಪ್ರಾಧಿಕಾರದ ಕಾರ್ಯದರ್ಶಿ ಭರವಸೆ ನೀಡಿ ತೆರಳಿದ್ದರು.

ಕಾರ್ಯದರ್ಶಿ ತೆರಳಿದ ಬಳಿಕ ಮತ್ತೆ ಹಣ ವಸೂಲಿ
ಇದಾದ ಒಂದು ಗಂಟೆಯ ನಂತರ ತಮ್ಮ ಕಚೇರಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಪರಿಶೀಲನೆ ನಡೆಸಿದಾಗ ಮತ್ತೆ ಭಕ್ತರಿಂದ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಮತ್ತೆ ಭೇಟಿ ನೀಡಿದ ಕಾರ್ಯದರ್ಶಿ ಸರಸ್ವತಿ ಅವರು, ಮುಡಿ ಸೇವೆಯ ಉಸ್ತುವಾರಿ ಎಸ್‌ ನಾಗರಾಜು ಹಾಗೂ ಸಿಬ್ಬಂದಿಗೆ ''ನಿಮಗೆ ಇದು ಕಡೆಯ ಎಚ್ಚರಿಕೆ. ನೀವು ನಿಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳದಿದ್ದರೆ ನಿಮ್ಮನ್ನೇ ಬದಲಾಯಿಸುತ್ತೇನೆ,'' ಎಂದು ಸೂಚನೆ ನೀಡಿದ್ದಾರೆ.

ಈ ವರ್ಷ ಮೇ 31ರಂದು ಮಲೆ ಮಹದೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆ ಮಾಡಿದಾಗ 2.53 ಕೋಟಿ ರೂ ಸಂಗ್ರಹವಾಗಿತ್ತು. ಅದರಲ್ಲೂ 14 ಲಕ್ಷ ರೂ ಗೂ ಅಧಿಕ ಹಣ ನಾಣ್ಯಗಳ ರೂಪದಲ್ಲೇ ಸಂಗ್ರಹವಾಗಿದ್ದು ವಿಶೇಷವಾಗಿತ್ತು. ಜೊತೆ 65 ಗ್ರಾಂ ಚಿನ್ನದ ರೂಪದಲ್ಲಿ, 3ಕೆಜಿ 358 ಗ್ರಾಂ ಬೆಳ್ಳಿಯ ರೂಪದಲ್ಲಿ ದೇವಸ್ಥಾನಕ್ಕೆ ಬಂದಿದೆ.

ಇಂದು ಬೆಳಗ್ಗೆ ಪುಣಜನೂರು ಪೊಲೀಸ್ ಚೆಕ್ ಪೋಸ್ಟ್ ಹಾಗೂ RTO ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಯವರು  ಭೇಟಿ ನೀಡಿ ಪರಿಶೀಲನೆ ನಡೆಸಿದರು. RTO, ಪೊ...
10/10/2023

ಇಂದು ಬೆಳಗ್ಗೆ ಪುಣಜನೂರು ಪೊಲೀಸ್ ಚೆಕ್ ಪೋಸ್ಟ್ ಹಾಗೂ RTO ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. RTO, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕ & ತಮಿಳುನಾಡು ಗಡಿ ಭಾಗದಲ್ಲಿ ವಾಹನಗಳ ಸುರಕ್ಷಿತ ಸಂಚಾರದ ಬಗ್ಗೆ ಖಾತರಿಪಡಿಸುವಂತೆ ಹಾಗೂ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

ಬೇಗೂರು (ಗುಂಡ್ಲುಪೇಟೆ) ಕೇರಳ ಮೂಲದ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿದ ಗುಂಪೊಂದು 44 ಲಕ್ಷ ರೂ. ದರೋಡೆ ಮಾಡಿರುವ ಘಟನೆ ತಾಲೂಕಿನ ರಾಷ್ಟ್ರೀ...
29/09/2023

ಬೇಗೂರು (ಗುಂಡ್ಲುಪೇಟೆ) ಕೇರಳ ಮೂಲದ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿದ ಗುಂಪೊಂದು 44 ಲಕ್ಷ ರೂ. ದರೋಡೆ ಮಾಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಅಗತಗೌಡನಹಳ್ಳಿ ಸಮೀಪದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಕೇರಳ ಮೂಲದ ಚಿನ್ನದ ವ್ಯಾಪಾರಿ ರಹೀಂ ಮತ್ತು ಆತನ ಸ್ನೇಹಿತ ನೌಫಾಜ್ ಇಬ್ಬರು ಮೈಸೂರಿನಲ್ಲಿ ಚಿನ್ನ ಮಾರಾಟ ಮಾಡಿ ಹಣ ತೆಗೆದುಕೊಂಡು ಕೇರಳಕ್ಕೆ ತೆರಳುತ್ತಿದ್ದ ವೇಳೆ ಕೇರಳ ಮೂಲದ ದರೋಡೆಕೋರರ ಸುಮಾರು 10 ಮಂದಿಯ ಗುಂಪೊಂದು ಎರಡು ಕಾರು ಹಾಗು ಒಂದು ಲಾರಿಯಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ ಅಗತಗೌಡನಹಳ್ಳಿ ಸಮೀಪ ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ವ್ಯಾಪಾರಿಗೆ ಥಳಿಸಿ ಆತನ ಬಳಿಯಿದ್ದ ಹಣವನ್ನು ದೋಚಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ನೌಫಾಜ್ ಇಳಿದು ಓಡಿ ಹೋಗಿದ್ದಾರೆ. ನಂತರ ಚಿನ್ನದ ವ್ಯಾಪಾರಿ ಬೇಗೂರು ಪೊಲೀಸ್ ಠಾಣೆಗೆ ಆಗಮಿಸಿ, ದರೋಡೆ ಸಂಬಂಧ ದೂರು ನೀಡಿದ್ದಾರೆ.

16/09/2023

ಚಾಮರಾಜನಗರ: ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆ

ಚಾಮರಾಜನಗರ: ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಘಾ (24) ಮತ್ತು ಮಕ್ಕಳಾದ ಪುನ್ವಿತಾ (06) ಹಾಗೂ ಮನ್ವಿತಾ (03) ಮೃತರು.

ಪತಿ, ಅತ್ತೆ-ಮಾವ ವಿರುದ್ಧ ಕೊಲೆ ಆರೋಪ:
ಆಗಾಗ ಕೌಟುಂಬಿಕ ಕಲಹ ನಡೆಯುತ್ತಿತ್ತು. ನಿನ್ನೆ(ಗುರುವಾರ) ಬೆಳಿಗ್ಗೆಯಿಂದಲೂ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು. ಮೇಘಾ ಪತಿ ಅಭಿ ಅಲಿಯಾಸ್​ ಧನಂಜಯ, ಈತನ ತಾಯಿ ನಿರ್ಮಲಮ್ಮ ಹಗೂ ತಂದೆ ಮಲ್ಲಿಕಾರ್ಜುನ ಮತ್ತು ತಮ್ಮ ಪುಟ್ಟು ಜತೆ ಸೇರಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದಿದ್ದಾನೆ ಎಂದು ಮೃತ ಮೇಘಾಳ ತಂದೆ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪತಿ ಅಭಿ ಹಾಗೂ ಆತನ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

02/09/2023

Address

Chamarajanagar

Telephone

+917975542770

Website

Alerts

Be the first to know and let us send you an email when CHN TV posts news and promotions. Your email address will not be used for any other purpose, and you can unsubscribe at any time.

Share