
12/12/2023
ಮಾನವ ಹಕ್ಕುಗಳ ದಿನಾಚರಣೆಗೆ ಚಾಲನೆ ನೀಡಿದ ನ್ಯಾಯಮೂರ್ತಿ ಕೆ. ಗುರುಪ್ರಸಾದ
ಗದಗ (ಕರ್ನಾಟಕ ವಾರ್ತೆ) ಡಿಸೆಂಬರ ೧೧: ಸಮಾಜದಲ್ಲಿ ಮಾನವ ಹಕ್ಕು ಉಲ್ಲಂಘನೆಯAತಹ ಘಟನೆಗಳು ನಡೆದ ಒಂದು ವರ್ಷದೊಳಗೆ ಸಂಬAಧಿಸಿದ ದಾಖಲೆಗಳೊಂದಿಗೆ ರಾಜ್ಯ ಅಥವಾ ರಾಷ್ಟಿçÃಯ ಮಾನವ ಹಕ್ಕು ಆಯೋಗಕ್ಕೆ ದೂರು ದಾಖಲಿಸಿ ನ್ಯಾಯ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಅವರು ಹೇಳಿದರು.
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ರವಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಜರುಗಿದ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಮಾನವ ಹಕ್ಕು ಆಯೋಗವು ನಿರಂತರವಾಗಿ ಕಾರ್ಯನಿರ್ವಹಿಸುತ್ತದೆ. ರಾಷ್ಟಿçÃಯ ಮಾನವ ಹಕ್ಕು ಆಯೋಗದಲ್ಲಿ ಅಪಾರ ಜ್ಞಾನ ಹೊಂದಿದ ಐದು ಸದಸ್ಯರನ್ನು ನೇಮಕಗೊಳಿಸಲಾಗುತ್ತಿದೆ. ಇದರಲ್ಲಿ ಆಯೋಗದ ಅಧ್ಯಕ್ಷರನ್ನು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳನ್ನು ಸರ್ಕಾರ ನೇಮಕ ಮಾಡುತ್ತದೆ. ಅದರಂತೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಕಗೊಳಿಸಿ ಮಾನವ ಹಕ್ಕು ಉಲ್ಲಂಘನೆ ಪ್ರಕರಣ ಕುರಿತು ತನಿಖೆ ಹಾಗೂ ಸರ್ಕಾರಕ್ಕೆ ವರದಿ ಸಲ್ಲಿಸಲು ತಿಳಿಸಲಾಗಿದೆ ಎಂದರು.
ಮಾನವ ಹಕ್ಕು ಪ್ರಕರಣಗಳು ಹೆಚ್ಚಾಗಿ ಸರ್ಕಾರಿ ಸಂಸ್ಥೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಪೊಲೀಸ ಇಲಾಖೆ, ಅರಣ್ಯ ಇಲಾಖೆ, ಕಾರಾಗೃಹಗಳಲ್ಲಿ ಕಂಡುಬರುತ್ತವೆ. ಮಾನವನಿಗೆ ಸಮಾಜದಲ್ಲಿ ಘನತೆಯಿಂದ ಜೀವಿಸಲು ಅಗತ್ಯವಿರುವ ಎಲ್ಲ ಕಾನೂನಾತ್ಮಕ ಹಕ್ಕುಗಳೂ ಸಹ ಮಾನವ ಹಕ್ಕುಗಳಾಗಿವೆ. ಇವುಗಳಿಗೆ ಧಕ್ಕೆ ಬಂದಲ್ಲಿ ಆಯೋಗದಲ್ಲಿ ದೂರು ದಾಖಲಿಸಿ ನ್ಯಾಯ ಪಡೆಯಬೇಕು ಎಂದು ಹೇಳಿದರು.
೧೯೪೮ ಡಿಸೆಂಬರ್ ೧೦ ರಂದು ವಿಶ್ವ ಸಂಸ್ಥೆಯಲ್ಲಿ ಮಾನವ ಹಕ್ಕು ದಿನಾಚರಣೆ ಜಾರಿಗೊಳಿಸಲಾಯಿತು. ವಿಶ್ವಸಂಸ್ಥೆಯ ಪಟ್ಟಿಯಲ್ಲಿ ಅಂದು ೪೮ ಸದಸ್ಯ ರಾಷ್ಟçಗಳಿದ್ದವು. ಪ್ರತಿ ವರ್ಷ ಮಾನವ ಹಕ್ಕು ದಿನಾಚರಣೆಯನ್ನು ಡಿಸೆಂಬರ್ ೧೦ ರಂದು ಆಚರಣೆ ಮಾಡುತ್ತಾ ಮಾನವ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವ್ಯಕ್ತಿ ಹುಟ್ಟಿನಿಂದ ಜೀವಿಸುವ ಸ್ವಾತಂತ್ರö್ಯ ಘನತೆಯ ಹಕ್ಕುಗಳನ್ನು ಮಾನವ ಹಕ್ಕುಗಳೆಂದು ವ್ಯಾಖ್ಯಾನಿಸಬಹುದು. ಅವುಗಳ ಉಲ್ಲಂಘನೆಗೆ ಕಾನೂನಿನಲ್ಲಿ ಶಿಕ್ಷೆ ನಿಗದಿಪಡಿಸಲಾಗಿದೆ ಎಂದರು.
ಮಾನವ ಹಕ್ಕುಗಳ ಆಯೋಗವು ಉಲ್ಲಂಘನೆ ಪ್ರಕರಣಗಳ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮಾನವ ಹಕ್ಕುಗಳ ಉಲ್ಲಂಘನೆ ಖಚಿತವಾದಲ್ಲಿ ಅವುಗಳ ಬಗ್ಗೆ ಸಂಪೂರ್ಣವಾದ ಶಿಫಾರಸ್ಸು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅಲ್ಲಿಂದ ಶಿಫಾರಸ್ಸು ವರದಿಯನ್ನು ಅನುಷ್ಟಾನಗೊಳಿಸಲಾಗುವುದು ಎಂದು ಮಾನವ ಹಕ್ಕುಗಳ ಕುರಿತು ಸುದೀರ್ಫವಾಗಿ ವಿವರಣೆಯನ್ನು ಕೆ. ಗುರುಪ್ರಸಾದ ಅವರು ನೀಡಿದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಮಾತನಾಡಿ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ೬ ಇವೆ. ಮಾನವ ಹಕ್ಕುಗಳು ತುಂಬಾ ಇವೆ. ಅವೆಲ್ಲವೂ ಸಹ ಮಾನವರು ಘನತೆಯಿಂದ ಜೀವಿಸಲು ಸಹಕಾರಿಯಾಗಿವೆ. ಈ ವರ್ಷದ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಘೋಷವಾಕ್ಯವನ್ನು ನೀಡಲಾಗಿದ್ದು “ ಸಮಾನತೆ,ಸ್ವಾತಂತ್ರö್ಯ, ಎಲ್ಲರಿಗೂ ನ್ಯಾಯ ಒದಗಿಸೋಣ ” ಎಂಬುದಾಗಿದೆ ಎಂದರು.
ಸಮಾಜದ ಪ್ರತಿ ನಾಗರೀಕನು ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವೆಂದು ತಿಳಿಯಬೇಕು. ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಸಂಭವಿಸದAತೆ ಅಥವಾ ಮರುಕಳಿಸದಂತೆ ಪ್ರಜ್ಞಾವಂತ ನಾಗರಿಕರಾಗಿ ನಾವೆಲ್ಲರೂ ಜಾಗೃತಿ ವಹಿಸಬೇಕಾಗಿದೆ ಎಂದು ಹೇಳಿದರು.
ಜೀವನದ ಸ್ವಾತಂತ್ರö್ಯದ ಸಮಾನತೆಯ ಮತ್ತು ವ್ಯಕ್ತಿಯ ಘನತೆಯ ಹಕ್ಕುಗಳೇ ಮಾನವ ಹಕ್ಕುಗಳು. ಎಲ್ಲ ಮಾನವ ಜೀವಿಗಳು ಹುಟ್ಟಿನಿಂದ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರು ಮತ್ತು ಪ್ರತಿಯೊಬ್ಬರೂ ಯಾವುದೇ ತರಹದ ತಾರತಮ್ಯವಿಲ್ಲದ ಹಕ್ಕುಗಳನ್ನು ಮತ್ತು ಸ್ವಾತಂತ್ರವನ್ನು ಹೊಂದುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ ಎಂದರು.
ನಿವೃತ್ತ ನ್ಯಾಯಮೂರ್ತಿ ಎಸ್.ಜಿ. ಪಲ್ಲೇದ ಅವರು ಮಾತನಾಡಿ ಮಾನವ ಹಕ್ಕುಗಳ ರಕ್ಷಣೆ ಸಮಾಜದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ನಾಗರಿಕರ ಕರ್ತವ್ಯಗಳನ್ನು ಅರಿಯುವ ಜಾಗೃತಿ ಕಾರ್ಯಕ್ರಮ ಇದಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿ, ಗೌರವ , ಆದರ, ಘನತೆಯಿಂದ ಕಾಣುವುದು ಮಾನವ ಹಕ್ಕುಗಳ ರಕ್ಷಣೆಯಾಗುತ್ತದೆ. ದೌರ್ಜನ್ಯ ಎಸಗುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಈ ಮಾನವ ಹಕ್ಕುಗಳ ಉಲ್ಲಂಘನೆ ಮೊದಲು ಆರಂಭವಾಗುವುದೇ ಕುಟುಂಬ ಹಾಗೂ ನೆರೆಹೊರೆಯ ಸಮಾಜದಿಂದ. ನಾವೆಲ್ಲರೂ ಸಮಾಜದ ಸರ್ವರೊಂದಿಗೂ ಪ್ರೀತಿ, ವಿಶ್ವಾಸ, ಗೌರವದಿಂದ ನಡೆದುಕೊಳ್ಳುವ ಮೂಲಕ ಒಬ್ಬರಿಗೊಬ್ಬರು ಅನ್ಯೋನ್ಯದಿಂದ ಜೀವಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ನೆರೆದ ಸಾರ್ವಜನಿಕರಿಗೆ, ಮಕ್ಕಳಿಗೆ, ಇಲಾಖೆಯ ಅಧಿಕಾರಿ, ಸಿಬ್ಬಂದಿಗಲಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಬೋಧಿಸಿದರು. ಗದಗ ಬೆಟಗೇರಿ ನಗರಸಭೆಯ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ನಿರ್ವಹಣೆಯನ್ನು ಮಂಜರಿ ಹೊಂಬಾಳಿ ನಡೆಸಿಕೊಟ್ಟರು.