JanathaMadhyama

JanathaMadhyama Janatha Madhyama, a daily newspaper launched four decades ago & published from Hassan is a unique ne

19/08/2026
12/08/2026

ಯಾರಿಗೆ ಯಾವ ಖಾತೆ?

ಲಕ್ಷ್ಮಣ ಸವದಿ- ಸಹಕಾರ ಇಲಾಖೆ
ರಾಮಲಿಂಗರೆಡ್ಡಿ-ಅರಣ್ಯ (ಈ ಹಿಂದೆ ಜಲ ಸಂಪನ್ಮೂಲ)
ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ
ಸಂತೋಷ್ ಲಾಡ್- ಕಾರ್ಮಿಕ ಇಲಾಖೆ
ಯು.ಟಿ.ಖಾದರ್-ಆರೋಗ್ಯ ಮತ್ತು ಕಲ್ಯಾಣ ಇಲಾಖೆ, ವಕ್ಫ್
ಶಿವರಾಜ್ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ
ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ
ಎಚ್‌.ಸಿ.ಬಾಲಕೃಷ್ಣ-ಪೌರಾಡಳಿತ
ಕೆ.ಎಸ್‌.ಬಸವಂತಪ್ಪ-ಮುಜರಾಯಿ, ಮೀನುಗಾರಿಕೆ
ಎನ್‌.ಚಲುವರಾಯಸ್ವಾಮಿ- ಜಲಸಂಪನ್ಮೂಲ ಇಲಾಖೆ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಎಸ್‌.ಎಸ್‌.ಮಲ್ಲಿಕಾರ್ಜುನ್‌- ಗಣಿ ಮತ್ತು ಭೂವಿಜ್ಞಾನ ಇಲಾಖೆ
ಬಿ.ನಾಗೇಂದ್ರ-ಯೋಜನೆ & ಸಾಂಖ್ಯಿಕ ಇಲಾಖೆ
ಪಿ.ಎಂ.ನರೇಂದ್ರಸ್ವಾಮಿ-ಕೃಷಿ ಇಲಾಖೆ
ಸಿ.ಪುಟ್ಟರಂಗಶೆಟ್ಟಿ-ಪಶು ಸಂಗೋಪನಾ ಇಲಾಖೆ, ರೇಷ್ಮೆ
ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ
ರಿಜ್ವಾನ್‌ ಅರ್ಷದ್‌-ಆಹಾರ & ನಾಗರಿಕ ಪೂರೈಕೆ ಇಲಾಖೆ
ರುದ್ರಪ್ಪ ಲಮಾಣಿ- ಸಕ್ಕರೆ ಮತ್ತು ಜವಳಿ
ಶಿವಲಿಂಗೇಗೌಡ-ಅಬಕಾರಿ ಖಾತೆ
ವಿಜಯಾನಂದ ಕಾಶಪ್ಪನವರ್‌-ಸಣ್ಣ ಕೈಗಾರಿಕೆ
ಜಮೀರ್‌ ಅಹ್ಮದ್‌ ಖಾನ್-ವಸತಿ
ಅಜಯ್ ಸಿಂಗ್-ಸಣ್ಣ ನೀರಾವರಿ, ಐಟಿ ಬಿಟಿ.

*ಒಂದು ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ**ನೊಂದು ಬೆಂದಿರುವ ಸಮಾಜಕ್ಕೆ ಶಕ್ತಿ ತುಂಬುವುದು ನಮ್...
11/08/2026

*ಒಂದು ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ*

*ನೊಂದು ಬೆಂದಿರುವ ಸಮಾಜಕ್ಕೆ ಶಕ್ತಿ ತುಂಬುವುದು ನಮ್ಮ ಕರ್ತವ್ಯ*

*ಆದಿವಾಸಿಗಳಿಗೆ ಶಿಕ್ಷಣ, ವಸತಿ, ಭೂಮಿ, ಆಹಾರ, ಉದ್ಯೋಗ, ಗ್ಯಾರಂಟಿ ನೀಡಲು ಬದ್ಧ*

*ಬೆಂಗಳೂರು, ಆ. 11:*

"ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.

ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

"ನಾವು ಮೂಲ ಆದಿವಾಸಿಗಳೇ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾಗರಿಕತೆ ಬಂದು ಸೂಟು ಬೂಟು ಹಾಕಿದ್ದೇವೆ. ಹುಟ್ಟಿದಾಗ ಬಟ್ಟೆ, ಹೆಸರು, ಕುರ್ಚಿ, ಅಧಿಕಾರ ಏನೂ ಇರಲಿಲ್ಲ. ನಂತರ ಹೆಸರು ಹಾಗೂ ಎಲ್ಲವೂ ಬಂದಿದೆ. ನೀವು ಪ್ರಕೃತಿ ಜೊತೆಗೆ ಬದುಕುತ್ತಿದ್ದೀರಿ. ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಕೊನೆಗೆ ನಾವು ಬದುಕಲು ಬಯಸುವುದು ಪ್ರಕೃತಿ ಜೊತೆಗೆ" ಎಂದರು.

"ನೀವು ಪ್ರಕೃತಿ ಮಕ್ಕಳು, ಭಾಗ್ಯವಂತರು. ನೀವು ಸಾಕಷ್ಟು ಸಮಸ್ಯೆಯಲ್ಲಿ ಬದುಕುತ್ತಿದ್ದೀರಿ. ಸರ್ಕಾರ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಶಿಕ್ಷಣ ಸೇರಿ ಅನೇಕ ಕಾರ್ಯಕ್ರಮ ನೀಡಿದೆ. ಯುಪಿಎ ಸರ್ಕಾರದಲ್ಲಿ ಅರಣ್ಯ ಹಕ್ಕು ಕಾಯ್ದೆ ನೀಡಿದೆವು. ನನ್ನ ಕ್ಷೇತ್ರದಲ್ಲಿ ನಿಮ್ಮ ಸಮುದಾಯದ ಜನರ ಭಾವನೆ, ಬದುಕು ಶ್ರಮ ಏನು ಎಂದು ಅರಿತಿದ್ದೇನೆ" ಎಂದು ತಿಳಿಸಿದರು.

"ಬೆಂಗಳೂರು ಜಿಲ್ಲೆಯಲ್ಲೂ ನಿಮ್ಮ ಜನಾಂಗ ಪರಿಶ್ರಮದಲ್ಲಿ ಬದುಕುತ್ತಿದ್ದೀರಿ. ನೀವು ಶಿಕ್ಷಣಕ್ಕೆ ಆದ್ಯತೆ ನೀಡಿ, ವಿದ್ಯಾವಂತರು, ಪ್ರಜ್ಞಾವಂತರಾಗಿ. ಆದರೆ ನಿಮ್ಮ ಮೂಲ ಕಸುಬು ಬಿಡಬೇಡಿ. ಬೇರು ಗಟ್ಟಿಯಾಗಿದ್ದಾರೆ ಮಾತ್ರ ಹಣ್ಣು ಪಡೆಯಲು ಸಾಧ್ಯ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂದು ಅಂಬೇಡ್ಕರ್ ಹೇಳಿದ್ದಾರೆ. ನಿಮ್ಮ ಮೂಲ ತತ್ವ, ಬದುಕಿನ ಆದರ್ಶ ಮರೆಯಬೇಡಿ. ಸೂರ್ಯ ಚಂದ್ರರೆ ನಿಮಗೆ ಗಡಿಯಾರ" ಎಂದು ಕಿವಿಮಾತು ಹೇಳಿದರು.

ನಿಮಗೆ ನೀಡಬೇಕಾದದ್ದನ್ನು ಸರ್ಕಾರ ನೀಡಲಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಿ, ಬೆಳೆಸಿ. ನಿಮ್ಮ ಪರವಾಗಿ ದ್ವಾರಕನಾಥ್ ಅವರು ಮನವಿ ಮಾಡಿದ್ದಾರೆ. ನಾವು ಕಂದಾಯ ಗ್ರಾಮ ಘೋಷಿಸಿ ಹಕ್ಕುಪತ್ರ, ಮನೆ ನೀಡಿದ್ದೇವೆ. ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆಗೆ ಮನವಿ ಮಾಡಿದ್ದು, ಒಂದು ತಿಂಗಳಲ್ಲಿ ಅದಕ್ಕೆ ತೀರ್ಮಾನ ಮಾಡಲಾಗುವುದು. ಇದು ನಮ್ಮ ಸರ್ಕಾರದ ಪ್ರಣಾಳಿಕೆ ಭಾಗವಾಗಿದೆ" ಎಂದು ತಿಳಿಸಿದರು.

*ನೊಂದು ಬೆಂದಿರುವ ಸಮಾಜಕ್ಕೆ ಶಕ್ತಿ ತುಂಬುವುದು ನಮ್ಮ ಕರ್ತವ್ಯ*

"ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನನ್ನ ಗುರುಗಳು ಮಾರ್ಗದರ್ಶನ ನೀಡಿದ್ದಾರೆ. ನೊಂದು ಬೆಂದಿರುವ ಸಮಾಜಕ್ಕೆ ಶಕ್ತಿ ತುಂಬುವುದು ನಮ್ಮ ಕರ್ತವ್ಯ. ನಗರದ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾಲ ಹಳ್ಳಿಗಳಲ್ಲಿ ವಾಸ ಇದ್ದು, ಅಲ್ಲಿನ ಜನರ ಬದುಕಿನ ಬಗ್ಗೆ ಪರಿಚಯಿಸಲು ತೀರ್ಮಾನಿಸಿದ್ದೇವೆ. ನೀವು ನಿಮ್ಮ ಮೂಲ ಹಾಗೂ ಆಸ್ತಿಯನ್ನು ಬಿಟ್ಟುಕೊಡಬೇಡಿ" ಎಂದರು.

*ಶಿಕ್ಷಣ, ವಸತಿ, ಭೂಮಿ, ಆಹಾರ, ಉದ್ಯೋಗ, ಗ್ಯಾರಂಟಿ ನೀಡಲು ಬದ್ಧ:*

"ಈ ಹಿಂದೆ ನೆಹರೂ ಅವರು ಆದಿವಾಸಿಗಳಿಂದ ಅಣೆಕಟ್ಟು ಉದ್ಘಾಟನೆ ಮಾಡಿದಸಿದ್ದರು. ನಿಮ್ಮ ನಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ಸಂಬಂಧ. ನಿಮಗೆ ಶಿಕ್ಷಣ, ವಸತಿ, ಭೂಮಿ, ಆಹಾರ, ಉದ್ಯೋಗ, ಗ್ಯಾರಂಟಿ ನೀಡಲು ಬದ್ಧ. ನಾವು ನಿಮಗಾಗಿ ಐದು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಇಂತಹ ಒಂದು ಯೋಜನೆ ಬೇರೆ ಯಾವುದಾದರೂ ಸರ್ಕಾರ ನೀಡಿತ್ತಾ? ನಿಮಗೆ ನಾವು, ನಮಗೆ ನೀವು ಆಸರೆಯಾಗಿ ಇರಬೇಕು" ಎಂದು ಕರೆ ನೀಡಿದರು.

"ನಿಮ್ಮ ಶ್ರಮಕ್ಕೆ ಗೌರವ ನೀಡಲು ನಾವು ಬದ್ಧ. ನಿಮ್ಮಲ್ಲಿ ಕೀಳರಿಮೆ ಬೇಡ, ನಿಮ್ಮ ಮೂಲ ಬದುಕನ್ನು ಹೆಮ್ಮೆಯಿಂದ ಬದುಕಿ. ಎಸ್ಐಆರ್ ಪ್ರಕ್ರಿಯೆಯಲ್ಲಿ ನಿಮ್ಮ ಮತದಾನ ಹಕ್ಕು ಕಾಪಾಡಿಕೊಳ್ಳಿ. ನಿಮಗೆ ಜಾತಿ ಹಾಗೂ ವಾಸ ದೃಢೀಕರಣ ಪತ್ರ ನೀಡಲು ಮುಂದಾಗಿದ್ದೇವೆ" ಎಂದು ತಿಳಿಸಿದರು.

Address

Race Course Road
Hassan
573201

Opening Hours

Monday 9am - 12:30am
Tuesday 9am - 12:30am
Wednesday 9am - 12:30am
Thursday 9am - 12:30am
Friday 9am - 12:30am
Saturday 9am - 12:30am
Sunday 9am - 12:30am

Telephone

+919449852494

Alerts

Be the first to know and let us send you an email when JanathaMadhyama posts news and promotions. Your email address will not be used for any other purpose, and you can unsubscribe at any time.

Contact The Business

Send a message to JanathaMadhyama:

Shortcuts

Share