
13/08/2025
*ಅರಕಲಗೂಡು ತಾಲೂಕಿನ. ಮಲ್ಲಿಪಟ್ಟಣ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ* ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಸನ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗ ಹಾಗೂ ಗ್ರಾಮ ಪಂಚಾಯತ ಮಲ್ಲಿಪಟ್ಟಣ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಸನ ಇವರುಗಳ ಸಹಯೋಗದಲ್ಲಿ ಮಲ್ಲಿಪಟ್ಟಣದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕರಾದ ಪರಶುರಾಮ ಶಿರೂರ ಅವರು ಮಾತನಾಡಿ ಆರೋಗ್ಯ ಇಲಾಖೆಯ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಸನದ ಅಡಿಯಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಹಾಸನ ಜಿಲ್ಲೆಯಲ್ಲಿ ನೂರು ಹೈ ರಿಸ್ಕ್ ಇರುವಂತಹ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಆ ಗ್ರಾಮಗಳಲ್ಲಿ ವಲಸಿಗರು ಹಾಗೂ ಟ್ರಕ್ಕರ್ ಮತ್ತು ಡ್ರೈವರ್ ಮುಂತಾದ ರಿಸ್ಕ್ ವರ್ತನೆಯಲ್ಲಿರುವಂತ ಜನರನ್ನ ಗುರುತಿಸಿ ಅವರುಗಳಿಗೆ ಸೂಕ್ತವಾದ ಹೆಚ್ಐವಿ ತಪಾಸಣೆಗಳನ್ನು ಮಾಡುವುದರ ಮೂಲಕ ಪ್ರತಿಯೊಂದು ಗ್ರಾಮಗಳಲ್ಲಿಯೂ ಈ ರೀತಿಯಲ್ಲಿ ತಪಾಸಣಾ ಶಿಬಿರಗಳ ಮೂಲಕ ಹೆಚ್ಐವಿ ಕಾಯಿಲೆ ಹರಡುವ ವಿಧಾನ ಹಾಗೂ ಹೆಚ್ಐವಿ ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಕ್ರಮಗಳನ್ನ ಕುರಿತು ಜನರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದ್ದು ಇತ್ತೀಚಿನ ದಿನಗಳಲ್ಲಿ ಸಲಿಂಗ-ಕಾಮ ಲೈಂಗಿಕ ಕ್ರಿಯೆ ಹೆಚ್ಚು ಕಂಡು ಬರುತ್ತಿರುವುದರಿಂದ ಅವಿವಾಹಿತ ಯುವಕರಲ್ಲಿ ಎಚ್ಐವಿ ಖಚಿತ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿರುವುದು ನೋವಿನ ಸಂಗತಿ ಯಾಗಿದೆ. ಆದ್ದರಿಂದ ರಾಜ್ಯದಲ್ಲಿ ಹಾಸನ ಜಿಲ್ಲೆ ಹೆಚ್ ಐ ವಿ ಸೊಂಕೀತರಲ್ಲಿ 13 ನೇ ಸ್ಥಾನದಲ್ಲಿದೆ ಜಿಲ್ಲೆಯಲ್ಲಿ ಒಟ್ಟು 12 ಸಾವಿರಕ್ಕಿಂತ ಹೆಚ್ಚು ಜನರು ಹೆಚ್ ಐ ವಿ ಸೊಂಕಿತರಿದ್ದು ತಾಲೂಕಿನಲ್ಲಿ 350 ಹೆಚ್ಚು ಜನರು ಸೊಂಕಿತರಿದ್ದು ಹೆಚ್ ಐ ವಿ ಕಾಯಿಲೆಗೆ ಸಂಬಂಧ ಪಟ್ಟಂತೆ ಮಾತ್ರೆಗಳನ್ನು ಕುಡಿಯುತ್ತಿದ್ದಾರೆ. ಆದ್ದರಿಂದ ಈ ರೀತಿಯ ತಪಾಸನ ಶಿಬಿರಗಳ ಮೂಲಕ ಪ್ರತಿಯೊಂದು ಗ್ರಾಮಗಳಲ್ಲಿ ಎಚ್ಐವಿ ಕ್ಷಯ ರೋಗ ಸಿಪಿಲಿಸ್ ಹೆಪಟೈಟಿಸ್ ಡೆಂಗ್ಯೂ ಕಾಯಿಲೆಯ ಕುರಿತು ಜನರಲ್ಲಿ ಜಾಗೃತಿ ಹಾಗೂ ತಪಾಸಣೆ ಕೈಗೊಳ್ಳುವಂತದ್ದು ಈ ತರದ ಶಿಬಿರಗಳ ಮುಖ್ಯ ಉದ್ದೇಶವಾಗಿರುತ್ತದೆ. ಸಾರ್ವಜನಿಕರ ತಮ್ಮ ವೈಯಕ್ತಿಕ ವೈಯಕ್ತಿಕ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಏನಾದರೂ ಸಂಶಯಗಳಿದ್ದರೆ ಸರ್ಕಾರದ ಹೆಲ್ಪ್ ಲೈನ್ ಆಗಿರುವ 1097 ನಂಬರಿಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುಬೇಕೆಂದು ತಿಳಿಸಲಾಯಿತು ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನ ಕಾಪಾಡಿಕೊಳ್ಳಬೇಕು ಹಾಗೂ ಸೊಳ್ಳೆಯಿಂದ ರಕ್ಷಣೆ ಪಡೆಯುವಂತಹ ಮಾರ್ಗೋಪಾಯಗಳನ್ನ ಅನುಸರಿಸಿಕೊಂಡು ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಬೇಟಿಯಾಗಿ ರಕ್ತ ತಪಾಸನೆಗಳನ್ನ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. NCD ವಿಭಾಗದ ಆಪ್ತಸಮಾಲೋಚಕರಾದ ಉಮೇಶ ಅವರು ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದ ಒತ್ತಡ ಹಾಗೂ ಮಧುಮೇಹ ಕಾಯಿಲೆಗಳನ್ನು ಪತ್ತೆ ಮಾಡುವುದು ಕಾಯಿಲೆ ಬಂದರೆ ಜೀವನ ಶೈಲಿಯನ್ನು ಮತ್ತು ಊಟದ ವಿಧಾನಗಳನ್ನು ಬದಲಾಯಿಕೊಳ್ಳಬೇಕು ಅದರಿಂದ ಆಗುವಂತ ದುಷ್ಪರಿಣಾಮಗಳನ್ನು ಮುನ್ನೆಚರಿಕಾ ಕ್ರಮಗಳನ್ನು ಕುರಿತು ಮಾಹಿತಿ ನೀಡಿದರು ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ ಎಚ್ಐವಿ ಅಂತ ಮಾರಕ ಕಾಯಿಲೆಗಳನ್ನು ಪತ್ತೆ ಹಚ್ಚುವಂತಹ ಕಾರ್ಯಕ್ರಮ ಈ ರೀತಿಯ ಶಿಬಿರಗಳಲ್ಲಿ ಕಂಡುಬರುತ್ತದೆ ಆದ್ದರಿಂದ ಜನರು ಈ ರೀತಿಯ ಉಚಿತ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕೆಂದು ಮಾತನಾಡಿದರು ಸುಮಾರು 75 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು 75 ಜನರು ಮಧುಮೇಹ ಅಧಿಕ ರಕ್ತದ ಒತ್ತಡ ಹೆಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಿಕೊಂಡರು. ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮಲ್ಲಿಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಐಸಿಟಿಸಿ ಪ್ರಯೋಗಶಾಲಾ ತಂತ್ರಜ್ಞರಾದ ಗೌರಮ್ಮ ಹಾಗೂ ಎನ್ ಸಿ ಡಿ ವಿಭಾಗದ ವೈದ್ಯಾಧಿಕಾರಿಗಳಾದ ಡಾಕ್ಟರ್ ಪ್ರೀತಮ್ ಹಾಗೂ ಆಪ್ತಸಮಾಲೋಚಕರಾದ ಉಮೇಶ್ ಶುಶ್ರೂಷಕರಾದ ಲಲಿತಾ ಹಾಸನದ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ತಾಲೂಕಾ ಕ್ಷೇತ್ರಕಾರ್ಯಕರ್ತರಾದ ಚಂದ್ರಶೇಖರ್ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತೆಯರು ಇತರರು ಶಿಬಿರದಲ್ಲಿ ಭಾಗವಹಿಸಿದ್ದರು