26/05/2025
ರಾಷ್ಟೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿರುವ ಪ್ರದೇಶಗಳಿಗೆ ಇಂದು ಸಂಸದರಾದ ಶ್ರೇಯಸ್ ಪಟೇಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಎರಡು ಕಿ.ಮೀ ರಸ್ತೆ ಕಾಮಗಾರಿಗೆ ಭೂಕುಸಿತವೇ ದೊಡ್ಡ ಸವಾಲಾಗಿದೆ, ತಡೆಗೊಡೆ ಕಟ್ಟಿರುವ ಕೆಲವು ಕಡೆಗಳಲ್ಲಿ ಮಣ್ಣು ಕುಸಿದಿದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಜವಾಬ್ದಾರಿಯುತವಾಗಿ ಕೆಲಸ ನಿರ್ವಹಣೆ ಮಾಡುವಂತೆ ಎನ್.ಹೆಚ್.ಎ.ಐ ಅಧಿಕಾರಿಗಳಿಗೆ ಸೂಚಿಸಿದರು.
ಈ ಬಾರಿಯೂ ಕೂಡ ಭೂ ಕುಸಿತ ಉಂಟಾಗಿದೆ ಆದರೆ ಕಳೆದ ಬಾರಿ ಮುಂಜಾಗ್ರತ ಕ್ರಮವನ್ನು ಕೈಕೊಂಡಿದ್ದರಿAದ ಆನೆ ಮಹಲ್ ಹಾಗೂ ಮತ್ತಿತರ ಸ್ಥಳಗಳಲ್ಲಿ ಸ್ವಲ್ಪ ಭೂ ಕುಸಿತ ಉಂಟಾಗುತ್ತಿರುವುದರಿAದ ಉಪ ವಿಭಾಗಾಧಿಕಾರಿ ಹಾಗೂ ಎನ್.ಹೆಚ್.ಎ.ಐ ಪ್ರಾಧಿಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ನಾವು ಕಳೆದ ಬಾರಿ ಭೇಟಿ ನೀಡಿದಾಗ ಹಾಗೂ ಇಂದು ಭೇಟಿ ನೀಡಿ ನೋಡಿದಾಗ ಸಾಕಷ್ಟು ಕೆಲಸಗಳಾಗಿವೆ. ಆದರೂ ಯಾವ ರೀತಿಯಾಗಿ ವಿಫಲರಾಗಿದ್ದಾರೆ ಎಂದು ಪರಿಶೀಲಿಸಿದಾಗ ಮಣ್ಣು ಬಹಳ ತೇವಾಂಶಯುತವಾಗಿರುವುದರಿAದ ಕುಸಿತ ಉಂಟಾಗುತ್ತಿದೆ, ಹೆದ್ದಾರಿಯ ಬಲಭಾಗದಲ್ಲಿ ರಸ್ತೆ ಸಂಚಾರಕ್ಕೆ ದಾರಿ ಮಾಡಿಕೊಡುತ್ತೇವೆ ಒಟ್ಟಾರೆಯಾಗಿ ಸಾರ್ವಜನಿಕರಿಗೆ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದAತೆ ನೋಡಿಕೊಳ್ಳುತ್ತೇವೆ ಎಂದರು.
ಕೇಂದ್ರ ಸಾರಿಗೆ ಸಚಿವರನ್ನು ಈಗಾಗಲೇ ಭೇಟಿ ಮಾಡಿದ್ದು, 13 ಕೋಟಿಯ ವೈಜ್ಞಾನಿಕ ಯೋಜನೆಯನ್ನು ಸಿದ್ಧಪಡಿಸಿದ್ದಾರೆ. ಈಗಾಗಲೇ ಟೆಂಡರ್ ಕೂಡಾ ಕರೆಯಲಾಗಿದೆ. ವೆಸ್ಟ್ ಬೆಂಗಾಳ್ ಮಾದರಿಯಲ್ಲಿ ಟರ್ಫಿಂಗ್ ಕೆಲಸ ಮಾಡಲು ಏಜೆನ್ಸಿ ಕೂಡ ಫಿಕ್ಸ್ ಆಗಿದೆ ಎಂದ ಅವರು ಕೆಲಸ ಮುಂದಿನ ಮಾನ್ಸೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಮುಂದೆ ಯಾವುದೇ ರೀತಿಯ ಭೂ ಕುಸಿತ ಉಂಟಾಗುವುದಿಲ್ಲ ಎಂದು ತಿಳಿಸಿದರು.
ಯಾವುದೇ ರೀತಿಯ ಪ್ರಾಣಪಾಯವಾಗದ ರೀತಿಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲು ನಾವೆಲ್ಲರೂ ಸನ್ನಧ್ಧರಾಗಿದ್ದೇವೆ ಎಂದು ಹೇಳಿದರು.
ಕಾಮಗಾರಿ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ, ಕಳಪೆ ಕಾಮಗಾರಿ ಮಾಡಿದ್ದರೆ ಪರಿಶೀಲಿಸಿ ಅದರ ಸತ್ಯತೆಯನ್ನು ತಿಳಿದು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು ಮಳೆಯ ಕಾಲ ಮುಗಿಯುವವರೆಗೂ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದರು.
ಉಪ ವಿಭಾಗಾಧಿಕಾರಿ ಶೃತಿ, ಎನ್ ಹೆಚ್.ಎ.ಐ ಅಧಿಕಾರಿಗಳು ಹಾಜರಿದ್ದರು.