Pakka Local Digital

Pakka Local Digital News

13/07/2026

ಅಕ್ರಮ ವಲಸಿಗರಿಗೆ ಪ್ರಮಾಣಪತ್ರ ನೀಡುವ ಯತ್ನ ಅಪಾಯಕಾರಿ: ಶಾಸಕ ದಿನಕರ ಶೆಟ್ಟಿ

ಕಾರವಾರ:ಅಕ್ರಮ ವಲಸಿಗರಿಗೆ ಯಾವುದೇ ರೀತಿಯ ಪ್ರಮಾಣಪತ್ರ ನೀಡಬಾರದು ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾರವಾರ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ವಲಸಿಗರಿಗೆ ಪ್ರಮಾಣಪತ್ರ ನೀಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಅಥವಾ ಇತರ ಅಧಿಕಾರಿಗಳಿಗೆ ಸಂವಿಧಾನದಲ್ಲಿ ನೀಡಲಾಗಿಲ್ಲ ಎಂದು ಹೇಳಿದರು. ಇಂತಹವರಿಗೆ ಕಂದಾಯ ನಿರೀಕ್ಷಕರ ಮೂಲಕ ಪ್ರಮಾಣಪತ್ರ ನೀಡಲಾಗುತ್ತದೆ ಎಂಬ ರಾಜ್ಯ ಸರ್ಕಾರದ ಹೇಳಿಕೆ ಆಶ್ಚರ್ಯಕರ ಹಾಗೂ ನಗೆಪಾಟಲಿನ ಸಂಗತಿಯಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ಸರ್ಕಾರದ ಆಡಳಿತದ ಮೇಲಿನ ಜನರ ವಿಶ್ವಾಸ ಕುಸಿದಿರುವ ಕಾರಣ ಹೊಸ ಮತದಾರರನ್ನು ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದಿರುವವರನ್ನು ಮತದಾರರ ಪಟ್ಟಿಗೆ ಸೇರಿಸುವ ಮೂಲಕ ಚುನಾವಣಾ ಲಾಭ ಪಡೆಯುವ ಉದ್ದೇಶ ಸರ್ಕಾರಕ್ಕಿದೆ ಎಂದು ದಿನಕರ ಶೆಟ್ಟಿ ಆರೋಪಿಸಿದರು. ಇಂತಹ ಕ್ರಮಗಳು ದೇಶದ ಭದ್ರತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದ್ದು, ಸರ್ಕಾರ ಈ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು ರಾಜ್ಯ ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಖಂಡಿಸಿ, ಅಕ್ರಮ ವಲಸಿಗರ ಕುರಿತು ಕಾನೂನುಬದ್ಧ ಹಾಗೂ ಪಾರದರ್ಶಕ ಕ್ರಮಗಳನ್ನು ಮಾತ್ರ ಅನುಸರಿಸಬೇಕು ಎಂದು ಒತ್ತಾಯಿಸಿದರು.

12/07/2026

ಬೈತಖೋಲ್ ಬಂದರಿನಲ್ಲಿ ಡಾಂಬರ್ ಸೋರಿಕೆ; ಸಮುದ್ರ ಮಾಲಿನ್ಯದ ಆತಂಕ!

ಕಾರವಾರದ ಬೈತಖೋಲ್ ಬಂದರಿನಲ್ಲಿ ಬಿಟುಮೆನ್ (ಡಾಂಬರ್) ತುಂಬಿದ್ದ ಎಂ.ಟಿ. ಪದ್ಮನಾಭ್ ಹಡಗಿನಿಂದ ಡಾಂಬರ್ ಸೋರಿಕೆಯಾಗಿದ್ದು, ಅದರ ಒಂದು ಭಾಗ ಸಮುದ್ರಕ್ಕೂ ಸೇರಿರುವ ಆತಂಕ ವ್ಯಕ್ತವಾಗಿದೆ. ಇದರಿಂದ ಜಲಚರಗಳು ಹಾಗೂ ಸ್ಥಳೀಯ ಬೋಟ್ ಮಾಲೀಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸೋರಿಕೆಯಾದ ಡಾಂಬರ್ ತೆರವು ಕಾರ್ಯಾಚರಣೆ ಆರಂಭಗೊಂಡಿರುವ ಮಾಹಿತಿ ಲಭ್ಯವಾಗಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

11/07/2026

🏅 ಚೀನಾದಲ್ಲಿ ಹಳಿಯಾಳದ ಯುವಕನ ಐತಿಹಾಸಿಕ ಸಾಧನೆ!
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಮಾದಪ್ಪಗೌಡ ಅವರು ಚೀನಾದಲ್ಲಿ ನಡೆದ ಯು-23 ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್‌ನ 5,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. 🇮🇳🔥

09/07/2026

ಮಠದ ಅವ್ಯವಹಾರ ಪ್ರಶ್ನಿಸಿದ್ದಕ್ಕೆ ಹಲ್ಲೆ; ಜೀವ ಬೆದರಿಕೆ ಆರೋಪ

ಕಾರವಾರ: ವೈಶ್ಯ ಸಮಾಜದ ಕೃಷ್ಣಾಪುರ–ಹಳದಿಪುರ ಮಠದ ಸ್ವಾಮೀಜಿ ವಿರುದ್ಧ ಹಣಕಾಸಿನ ಅವ್ಯವಹಾರ, ಆಸ್ತಿ ವಂಚನೆ ಹಾಗೂ ಮಹಿಳೆಯರ ಮೇಲಿನ ಕಿರುಕುಳದ ಆರೋಪಗಳನ್ನು ಪ್ರಶ್ನಿಸಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಸದಾಶಿವಗಡದ ಅಜಿತ್ ಪೊಕಳೆ ಆರೋಪಿಸಿದ್ದಾರೆ.

ಜುಲೈ 5ರಂದು ಹೊನ್ನಾವರ ತಾಲೂಕಿನ ಹಳದಿಪುರ ಮಠದಲ್ಲಿ ನಡೆದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಸ್ವಾಮೀಜಿಯವರ ವಿರುದ್ಧ ಮಾತನಾಡಿದರೆ “ಜೀವ ಸಮೇತ ಮುಗಿಸುತ್ತೇವೆ” ಎಂದು ಬೆದರಿಕೆ ಹಾಕಲಾಗಿದೆ ಎಂದು ಅವರು ದೂರಿದ್ದಾರೆ. ಈ ಕುರಿತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

09/07/2026

ಯಲ್ಲಾಪುರದಲ್ಲಿ ಅಪಘಾತ!

ಅರಬೈಲ್ ಘಟ್ಟದ ಬಳಗಾರ್ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ಮೂಲದ ಪ್ರವಾಸಿಗರಿದ್ದ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

08/07/2026

#ಕಾರವಾರ‌ದ ಬಿಣಗಾ ಬಳಿಯ ರಾಷ್ಟ್ರೀರಿಯಲ್ಲಿ ಹೆದ್ದಾರಿ ಕಾರು ಪಲ್ಟಿ! 🚨

06/07/2026

ಎಸ್.ಐ.ಆರ್. ಬಗ್ಗೆ ಜನ ಜಾಗೃತಿ ಮೂಡಿಸಲು ಕಾರವಾರದಲ್ಲಿ ಬೃತ್ ಜಾಥಾ!

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಯುವಜನತೆ ಹಾಗೂ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ ವತಿಯಿಂದ, ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎ.ಎನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

05/07/2026

ಭಾರಿ ಮಳೆ ಅಬ್ಬರಕ್ಕೆ ಕಾರವಾರದಲ್ಲಿ ಮರ ಧರೆಗುರುಳಿ, ವಾಹನಗಳು ಜಖಂ

ಕಾರವಾರದಲ್ಲಿ ಬಿರುಗಾಳಿ–ಮಳೆಯ ಅಬ್ಬರಕ್ಕೆ ಬೃಹತ್ ಮರ ಧರೆಗುರುಳಿ, ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಡೆದಿದೆ. ಕೋಡಿಭಾಗದ ಅಲ್ವೇವಾಡ ಪೋರ್ಟ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಒಂದು ಆಟೋ ಹಾಗೂ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆ ವೇಳೆ ಮರದ ಕೆಳಗೆ ಯಾರೂ ಇಲ್ಲದ ಕಾರಣ ದೊಡ್ಡ ದುರಂತ ತಪ್ಪಿದೆ. ಮರ ರಸ್ತೆ ಮಧ್ಯೆ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಗರಸಭೆ ಸಿಬ್ಬಂದಿ, ಸ್ಥಳೀಯರು ಹಾಗೂ ಪೊಲೀಸರು ಸೇರಿ ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.

04/07/2026

ಹೊನ್ನಾವರದಲ್ಲಿ ಹೃದಯವಿದ್ರಾವಕ ದೃಶ್ಯ: ಶವವನ್ನು ಕುತ್ತಿಗೆಯಷ್ಟು ನೀರಿನಲ್ಲಿ ಹೊತ್ತು ಸಾಗಿದ ಗ್ರಾಮಸ್ಥರು!

ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾ.ಪಂ ವ್ಯಾಪ್ತಿಯ ದೊಡ್ಡಹಿತ್ತಲ್‌ನಲ್ಲಿ ಮನಕಲಕುವ ಘಟನೆ ನಡೆದಿದೆ. ಗ್ರಾಮದ ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕ, ಅಂತ್ಯಸಂಸ್ಕಾರಕ್ಕೆ ಕರೆದೊಯ್ಯಬೇಕಾದ ಮೃತದೇಹವನ್ನು ಗ್ರಾಮಸ್ಥರು ಕುತ್ತಿಗೆಯಷ್ಟು ನೀರಿನಲ್ಲಿ ಹೊತ್ತು ಸಾಗಬೇಕಾದ ದುಸ್ಥಿತಿ ಎದುರಾಯಿತು. ವಿಶ್ವದ ನಾನಾ ಭಾಗಗಳಿಗೆ ವೀಳ್ಯದೆಲೆ ರಫ್ತು ಮಾಡುವ ಈ ಊರಿಗೆ ಇಂದಿಗೂ ಸರಿಯಾದ ರಸ್ತೆ, ಸೇತುವೆ ಇಲ್ಲದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಬಂದಾಗ ಶಾಲಾ ಮಕ್ಕಳು, ಮಹಿಳೆಯರು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ನೀರಿನಲ್ಲಿ ನಡೆದು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗುತ್ತಿದೆ.ಸಾವಿನಲ್ಲೂ ಗೌರವ ಸಿಗದ ಪರಿಸ್ಥಿತಿ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ರಸ್ತೆ ಮತ್ತು ಕಿರುಸೇತುವೆ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.

04/07/2026

ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ‘ಬಾಸ್’! UT Khader on Cabinet Expansion

ರಾಜ್ಯ ರಾಜಕಾರಣದಲ್ಲಿ ಆಷಾಢದ ನಂತರ ಸಚಿವ ಸಂಪುಟ ವಿಸ್ತರಣೆ ಮತ್ತು ಶಾಸಕರ ಅಸಮಾಧಾನದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹಾಗೂ ಸಿಎಂ-ಡಿಸಿಎಂ ಅವರೇ ಅಂತಿಮ ‘ಬಾಸ್’ ಎಂದು ಚಾಣಾಕ್ಷ ಉತ್ತರ ನೀಡಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಶಾಸಕರಲ್ಲಿ ಅಸಮಾಧಾನವಿದೆ ಎಂಬುದು ಕೇವಲ ವದಂತಿ, ಎಲ್ಲರೂ ಒಗ್ಗಟ್ಟಾಗಿದ್ದಾರೆ ಮತ್ತು ಸಿದ್ದರಾಮಯ್ಯ-ಡಿಕೆಶಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಕೆಲಸಗಳನ್ನು ಮುಂದುವರಿಸಲಿದೆ ಎಂದು ಖಾದರ್ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ

Address

Karwar
Karwar
581301

Alerts

Be the first to know and let us send you an email when Pakka Local Digital posts news and promotions. Your email address will not be used for any other purpose, and you can unsubscribe at any time.

Share