11/07/2026
ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಂದರ್ಭ
“ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಎಸ್ಐಆರ್ (SIR) ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡು, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಅಕ್ರಮವಾಗಿ ನುಸುಳಿರುವವರಿಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಪ್ರಯತ್ನ ನಡೆಸುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಇಂತಹ ಯಾವುದೇ ಕಾನೂನುಬಾಹಿರ ಕ್ರಮವನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ.
ರಾಜ್ಯದ ಜನರ ಹಿತಾಸಕ್ತಿ, ರಾಷ್ಟ್ರೀಯ ಭದ್ರತೆ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಕಾನೂನಿನ ಪ್ರಕಾರ ಅರ್ಹರಿಗೆ ಮಾತ್ರ ದಾಖಲೆಗಳನ್ನು ನೀಡಬೇಕು; ಅಕ್ರಮವಾಗಿ ದೇಶಕ್ಕೆ ಬಂದವರಿಗೆ ಯಾವುದೇ ರೀತಿಯ ಮಾನ್ಯತೆ ನೀಡಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು.
ಈ ವಿಷಯದಲ್ಲಿ ರಾಜ್ಯ ಸರ್ಕಾರವು ಪಾರದರ್ಶಕತೆ ಕಾಪಾಡಬೇಕು ಹಾಗೂ ಜನರಲ್ಲಿರುವ ಅನುಮಾನಗಳಿಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ನಾವು ಆಗ್ರಹಿಸುತ್ತೇವೆ.”