Ell kaani

Ell kaani Unveiling the art, culture, customs, news, wonders of the coast

27/10/2025

ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಯು ಹಾಗೂ ಚಂಡಮಾರುತದ ಪರಿಣಾಮವಾಗಿ ಕಡಲ್ಕೊರೆತ ಉಂಟಾಗಿದೆ. ಸಮುದ್ರ ತೀರ ಭಾಗದಲ್ಲಿ ಮಣ್ಣು ಕುಸಿತದಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಸೋಮವಾರದಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಡಲ್ಕೊರೆತವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಈ ಸಂದರ್ಭದಲ್ಲಿ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ತುರ್ತು ಕ್ರಮವಾಗಿ ತಡೆಗೋಡೆ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ, ಶಾಶ್ವತ ಪರಿಹಾರಕ್ಕಾಗಿ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು....

26/10/2025

ರಾಷ್ಟ್ರೀಯ ಸ್ವಯಂಸೇವಕ ಸಂಘ ಸಾಲಿಗ್ರಾಮ ತಾಲ್ಲೂಕು ವತಿಯಿಂದ ಸಂಘ ಶತಾಬ್ದಿ ಪಥ ಸಂಚಲನ ನಡೆಯಿತು. ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಿಂದ ಚೇಂಪಿ ಶ್ರೀ ವೆಂಕಟರಮಣ ದೇವಸ್ಥಾನದವರೆಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿಸ್ತುಬದ್ಧವಾಗಿ ಗಣವೇಷದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಕಾರ್ಯಕರ್ತರು ಪಥಸಂಚಲನ ನಡೆಸಿದರು...

26/10/2025

ಪುತ್ತಿಗೆ ಪರ್ಯಾಯ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳಿಗೆ ಡ್ರಮ್ಸ್‌ ಕಲಿಸಿದ ಶಿವಮಣಿ...ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಗೀತಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಪುತ್ತಿಗೆ ನೃಸಿಂಹ ಸಭಾಭವನವನದ ಉದ್ಘಾಟನಾ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಖ್ಯಾತ ಡ್ರಮ್ಸ್ ಕಲಾವಿದರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಿವಮಣಿ ಮತ್ತು ಐರಾ ಆಚಾರ್ಯ ಇವರಿಂದ ನಾದವೈಭವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಮಣಿ ಅವರು ಸ್ವಾಮೀಜಿಯವರಿಗೆ ಡ್ರಮ್ಸ್‌ ಬಾರಿಸುವುದನ್ನು ಕಲಿಸಿದ್ದಾರೆ...

26/10/2025

ಉಡುಪಿ ಜಿಲ್ಲೆಯ ಕೋಟ ಸಮೀಪದ ಶಿರಿಯಾರು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮನೆಯ ಸಿಟೌಟ್‌ನಲ್ಲಿ ಇಟ್ಟಿದ್ದ ಹಣದ ಬ್ಯಾಗ್ ಕಳ್ಳತನಗೊಂಡ ಘಟನೆ ನಡೆದಿದೆ. ಶಿರಿಯಾರು ಗ್ರಾಮದ ನಿವಾಸಿ ಬಿ. ರವಿಶಂಕರ್ ಭಟ್ (64), ಸ್ಥಳೀಯವಾಗಿ ವಿನಾಯಕ ಸ್ಟೋರ್ ಎಂಬ ದಿನಸಿ ಅಂಗಡಿ ನಡೆಸುತ್ತಿದ್ದರು. ಅಕ್ಟೋಬರ್ 23ರಂದು ರಾತ್ರಿ 8.30ರ ಸುಮಾರಿಗೆ ಅಂಗಡಿ ಮುಚ್ಚಿ, ದಿನದ ವ್ಯವಹಾರದ ನಗದು ಸುಮಾರು 1,25,000 ರೂಪಾಯಿ ಹಣವನ್ನು ನೀಲಿ ಬಣ್ಣದ ಬ್ಯಾಗ್‌ನಲ್ಲಿ ತುಂಬಿಸಿಕೊಂಡು ಮನೆಗೆ ಬಂದಿದ್ದರು. ಮನೆಯ ಸಿಟೌಟ್‌ನಲ್ಲಿ ಬ್ಯಾಗ್ ಇಟ್ಟು ಕಾಲು ತೊಳೆಯಲು ಹೋದ ಭಟ್ ಮರಳಿ ಬಂದಾಗ ಬ್ಯಾಗ್ ಕಾಣೆಯಾಗಿತ್ತು. ಸದ್ಯ ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ...

25/10/2025

ತನುಶ್ರೀ ಹತ್ತನೇ ವಿಶ್ವದಾಖಲೆ ಯೋಗಬಾಲೆ ತನುಶ್ರೀ ಪಿತ್ರೋಡಿ ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡಿದ್ದಾಳೆ. ಬೆಹರಿನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದಳು. ಈ ಹಿಂದೆ ಅದಮಾರು ಪರ್ಯಾಯ ಸಂದರ್ಭ 45 ನಿಮಿಷದಲ್ಲಿ 245 ಆಸನಗಳನ್ನು ಮಾಡುವ ಮೂಲಕ ದಾಖಲೆ ಮಾಡಿದ್ದಳು. ಇದೀಗ ತನ್ನ ದಾಖಲೆಯನ್ನು ತಾನೇ ಮುರಿಯುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡಿದ್ದಾಳೆ....

24/10/2025

ಮಲ್ಪೆ–ಮೊಳಕಾಲ್ಮೂರು ಮೀನುಗಾರಿಕಾ ರಸ್ತೆಯ ಅವ್ಯವಸ್ಥೆ ಮತ್ತೆ ಒಂದು ಬಾರಿ ಪ್ರಾಣಾಪಾಯದ ಅನಾಹುತಕ್ಕೆ ಕಾರಣವಾಗಿದೆ. ನಿನ್ನೆ ರಾತ್ರಿ ಮಳೆ ಹಾಗೂ ಕತ್ತಲೆಯ ನಡುವಲ್ಲಿ ರಸ್ತೆ ಮಧ್ಯದಲ್ಲಿದ್ದ ಆಳವಾದ ಹೊಂಡ ಗಮನಿಸದ ರಿಕ್ಷಾ ಚಾಲಕನ ರಿಕ್ಷಾ ಹೊಂಡಕ್ಕೆ ಇಳಿದ ಪರಿಣಾಮ ಪಲ್ಟಿ ಹೊಡೆದ ಘಟನೆ ನಡೆದಿದೆ. ವಯೋವೃದ್ಧ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಚಾಲಕ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದು, ಕ್ಷಣಾರ್ಧದಲ್ಲಿ ರಿಕ್ಷಾ ಪಲ್ಟಿಯಾಗಿ ಇಬ್ಬರೂ ಆತಂಕಕ್ಕೆ ಒಳಗಾದರು. ಅದೃಷ್ಟವಶಾತ್, ಸ್ಥಳೀಯರು ಹಾಗೂ ಇತರ ವಾಹನ ಚಾಲಕರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಸಣ್ಣಪುಟ್ಟ ಗಾಯಗಳಿಂದ ಇಬ್ಬರೂ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ...

22/10/2025

ಕರಾವಳಿಯ ಗಂಡು ಕಲೆ ಯಕ್ಷಗಾನ ಎಂದರೆ ಕರಾವಳಿಗಂತೂ ಅಚ್ಚುಮೆಚ್ಚು, ಆದರೆ ಇತ್ತೀಚಿನ ದಿನಗಳಲ್ಲಿ ಯಕ್ಷಗಾನ ವಿಶ್ವಗಾನವಾಗಿದೆ ಎನ್ನುವುದು ಕರಾವಳಿಗರಿಗೆ ಹೆಮ್ಮೆಯ ವಿಷಯ. ಇದೇ ಯಕ್ಷಗಾನ ರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಿದೆ. ಇತ್ತೀಚೆಗೆ ಪ್ರಸಂಗಕರ್ತ ಪ್ರೊ. ಪವನ್ ಕಿರಣಕೆರೆ ವಿರಚಿತ ಪ್ರಸಂಗ ಗೋಕುಲಾಷ್ಟಮಿ ಸದ್ದು ಮಾಡುತ್ತಿದೆ. ಈ ಪ್ರಸಂಗದಲ್ಲಿನ ಗೋಪೂಜೆ ದೃಶ್ಯವಂತು ಯಕ್ಷ ಪ್ರಿಯರ ಮನ ಗೆದ್ದಿದೆ...
😍

22/10/2025

ಪೂಜ್ಯ ಪುತ್ತಿಗೆ ಶ್ರೀಪಾದರು ವಿದೇಶಗಳಲ್ಲಿ ಸ್ಥಾಪಿಸಿದ ವಿವಿಧ ಮಂದಿರಗಳಲ್ಲಿ ಈ ಬಾರಿ ದೀಪಾವಳಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಹಾಗೂ ವೈಭವದಿಂದ ಆಚರಿಸಲಾಯಿತು. ಅಮೆರಿಕಾದ ಫೀನಿಕ್ಸ್‌ನ ಶ್ರೀ ಪುತ್ತಿಗೆ ಮಠದ ಶ್ರೀ ವೆಂಕಟಕೃಷ್ಣ ದೇಗುಲದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ಸಂಭ್ರಮಿಸಿದರು. ಬೆಳಿಗ್ಗೆ ಶ್ರೀನಿವಾಸ ದೇವರಿಗೆ ಮಹಾಭಿಷೇಕ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಿತು....

22/10/2025

ಉಡುಪಿ ನಗರದಲ್ಲಿ ಭಕ್ತಿಯ ಚಿಹ್ನೆಯಾದ ಹೂವುಗಳೇ ಈಗ ವಿವಾದದ ಕೇಂದ್ರಬಿಂದುವಾಗಿವೆ. ನಗರದ ಮಾರುತಿ ವೀಥಿಕಾದಲ್ಲಿ ಅಸುಚಿತ್ವದ ಸ್ಥಳದಲ್ಲಿ ಎಸೆದ ಹೂವುಗಳನ್ನು ಸಂಗ್ರಹಿಸಿ ಮರುಮಾರಾಟ ಮಾಡುತ್ತಿರುವ ಹೂವು ವ್ಯಾಪಾರಿಗಳ ತಂಡವೊಂದು ಪತ್ತೆಯಾಗಿದೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ, ಅಶುದ್ಧ ಹೂವುಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ವ್ಯಾಪಾರ ನಿಲ್ಲಿಸಲು ಸೂಚಿಸಿದ್ದಾರೆ...

22/10/2025

ಪೊಡವಿಗೊಡೆಯ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಇಂದು ಕೃಷ್ಣನ ಸಾನಿಧ್ಯದಲ್ಲಿ ಗೋಪೂಜೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ನೂರಾರು ಭಕ್ತರ ಸಮ್ಮುಖದಲ್ಲಿ ನಡೆದ ಈ ಪೂಜಾ ಮಹೋತ್ಸವದಲ್ಲಿ ಪರ್ಯಾಯ ಪುತ್ತಿಗೆ ಮಠದ ಹಿರಿಯ ಸ್ವಾಮೀಜಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಸ್ವಾಮೀಜಿಗಳು ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಗೋಸೇವೆಯ ಮಹತ್ವವನ್ನು ಸಾರಿದರು. ಕನಕಗೋಪುರದ ಎದುರು ಗೋವುಗಳಿಗೆ ವಿಶೇಷ ಗೋಗ್ರಾಸವನ್ನು ನೀಡಿದರು. ನಂತರ ರಥಬೀದಿಯ ಸುತ್ತಲೂ ಗೋವುಗಳ ವೈಭವದ ಮೆರವಣಿಗೆ ನಡೆಯಿತು.
ಅನಂತರ ಶ್ರೀ ಕೃಷ್ಣ ಮಠದ ಆವರಣದಲ್ಲಿ ಸಂಕಲ್ಪ ಪೂರ್ವಕ ಸಾಮೂಹಿಕ ಗೋಪೂಜೆ ನಡೆಯಿತು...

21/10/2025

ಬೈಂದೂರು ತಾಲೂಕಿ ನ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ...ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ನಿನ್ನೆ ಸಂಜೆ ಸುಮಾರು 5 ಗಂಟೆಗೆ ನಿವೃತ್ತ ಅಂಗನವಾಡಿ ಶಿಕ್ಷಕರಾದ ಶ್ರೀಮತಿ ಸರೋಜ ಅವರ ತಾಯಿ ಅನಾರೋಗ್ಯಕ್ಕೀಡಾಗಿದ್ದಾರೆ. ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಲು ಸೂಕ್ತ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ಸಂಗಮ ಯುವಕ ಮಂಡಲದ ಉಪಾಧ್ಯಕ್ಷರು ಕಿಶನ್ ಪೂಜಾರಿ ಹಾಗೂ ಸದಸ್ಯರಾದ ರಾಘವೇಂದ್ರ ದೇವಾಡಿಗರವರು ವಯೋವೃದ್ಧರನ್ನು ಹೊತ್ತುಕೊಂಡು ಗದ್ದೆಯ ಬದುಗಳ ಮೂಲಕ ಸಾಗಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಸದ್ಯ ಯುವಕರ ಈ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ....

21/10/2025

ಉಡುಪಿ ನರ್ಮ್ ಬಸ್ ನಿಲ್ದಾಣದಲ್ಲಿ ಅಂದರ್‌ ಬಾಹರ್‌ ಇಸ್ಲೀಟ್‌ ಜುಗಾರಿ ಆಡುತ್ತಿದ್ದವರಿಗೆ ಪೊಲೀಸ್‌ ರು ಲಾಠಿಯೇಟು ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಸ್‌ ನಿಲ್ದಾಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು, ಇದರ ಹಿನ್ನಲೆಯಲ್ಲಿ ಸಾರ್ವಜನಿಕರು ದೂರು ನೀಡಿದ ಮೇರೆಗೆ ಕಾರ್ಯಾಚರಣೆ ಇಳಿದ ಉಡುಪಿ ಪೊಲೀಸ್‌ ರು ಹಬ್ಬದ ದಿನದಂದೆ ಲಾಠಿ ಬೀಸಿ ಆಯುಧ ಪೂಜೆ ಮಾಡಿದ್ದಾರೆ...

Address

Kundapura
Kundapur
576201

Alerts

Be the first to know and let us send you an email when Ell kaani posts news and promotions. Your email address will not be used for any other purpose, and you can unsubscribe at any time.

Contact The Business

Send a message to Ell kaani:

Share