Kodagu Channel

Kodagu Channel Every thing about kodagu

*ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ  ಕೊಡಗಿನ ಆರೋಪಿ ಕೇರಳದಲ್ಲಿ ಎನ್ ಐ ಎ ಅಧಿಕಾರಿಗಳಿಂದ ಬಂಧನ*ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆ...
05/07/2025

*ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಕೊಡಗಿನ ಆರೋಪಿ ಕೇರಳದಲ್ಲಿ ಎನ್ ಐ ಎ ಅಧಿಕಾರಿಗಳಿಂದ ಬಂಧನ*

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್ ಐ ಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ. ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗು ತಲೆ ಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.

ಅಬ್ದುಲ್ ರೆಹಮಾನ್ ನಿಷೇಧಿತ ಪಿಎಫೈ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರೆಹಮಾನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಎನ್ ಐ ಎ ನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಕೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

02/07/2025

30/06/2025
29/06/2025
ಸೈಬರ್ ಪೊಲೀಸರ ಹೆಸರಿನಲ್ಲಿ ಬ್ಲ್ಯಾಕ್ ಮೇಲ್: 7 ಲಕ್ಷ ರೂ. ಸುಲಿಗೆ ಮಾಡಿದ ಐವರು ಆರೋಪಿಗಳು ಅರೆಸ್ಟ್  ಸೈಬರ್ ಪೊಲೀಸರ ಹೆಸರಿನಲ್ಲಿ ಬ್ಲ್ಯಾಕ್ ಮ...
26/06/2025

ಸೈಬರ್ ಪೊಲೀಸರ ಹೆಸರಿನಲ್ಲಿ ಬ್ಲ್ಯಾಕ್ ಮೇಲ್: 7 ಲಕ್ಷ ರೂ. ಸುಲಿಗೆ ಮಾಡಿದ ಐವರು ಆರೋಪಿಗಳು ಅರೆಸ್ಟ್


ಸೈಬರ್ ಪೊಲೀಸರ ಹೆಸರಿನಲ್ಲಿ ಬ್ಲ್ಯಾಕ್ ಮೇಲ್: 7 ಲಕ್ಷ ರೂ. ಸುಲಿಗೆ ಮಾಡಿದ ಐವರು ಆರೋಪಿಗಳು ಅರೆಸ್ಟ್
ಕುಶಾಲನಗರ:ಸೈಬರ್ ಪೊಲೀಸರೆಂದು ಹೇಳಿಕೊಂಡು ಕುಶಾಲನಗರ ಮಾರ್ಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬ ವ್ಯಕ್ತಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು ಏಳು ಲಕ್ಷ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಬೆಂಗಳೂರು ಬನಶಂಕರಿಯ ಸಂಗೀತ ಗಂಡ :ಇಬ್ರಾಹಿಂ ಬಾದುಷಾ (30), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರಾಗಿದ್ದಾರೆ.

ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಯಾರೋ ಒಬ್ಬರಿಗೆ ಮೆಸೇಜ್ /ಕಮೆಂಟ್ ಮಾಡಿದ್ದಾರೆ. ಇದಾದ ನಂತರ ಅಪರಿಚಿತ ವ್ಯಕ್ತಿ ದಿನಾಂಕ 02-11-2024 ರಂದು ಪರಶಿವಮೂರ್ತಿರವರ ಮೊಬೈಲ್ ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು "ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿರುತ್ತದೆ. ನೀವು ಹಣವನ್ನು ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕಪಕ್ಕದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ" ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ. ಹೀಗೆ ಪರಶಿವಮೂರ್ತಿರವರ ಮೊಬೈಲ್ ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಸುಮಾರು ಏಳು ಲಕ್ಷ ರೂ. ಹಣವನ್ನು ಪಡೆದಿದ್ದ. ಇದರಿಂದ ರೋಸಿಹೋದ ಪರಶಿವಮೂರ್ತಿರವರು,

ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ 11-01-2025 ರಂದು ದೂರು ನೀಡಿದ ಮೇರೆಗೆ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್ ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ. ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ 24-06-2025 ರಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆ  ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆಮಡಿಕೇರಿ:ಕಳೆದ ಮೂರು ದಿನಗಳಿಂದ ನ...
26/06/2025

ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆ


ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆ

ಮಡಿಕೇರಿ:ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಚೆಟ್ಟಳ್ಳಿ ಸಮೀಪದ ಕಂಡಕರೆ ನಿವಾಸಿ ಮಾಜಿ ಸೈನಿಕ ಗಿರೀಶ್ (46) ಮೃತದೇಹ ಪತ್ತೆಯಾಗಿದೆ.3ನೇ ದಿನದ ಕಾರ್ಯಾಚರಣೆ ನಡೆಸಿ ದೇಹ ಪತ್ತೆ ಮಾಡಲಾಗಿದೆ.ನಿಸರ್ಗಧಾಮ ಬಳಿಯ ಕಾವೇರಿ ನದಿಯಲ್ಲಿ ತೇಲಿ ಬಂದಿದ್ದ ಮೃತದೇಹ,ತಕ್ಷಣಮಾಹಿತಿ ಅರಿತು ಕೊಪ್ಪ ಸೇತುವೆ ಕಾವೇರಿ ನದಿಯಲ್ಲಿ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡವು,ಮೃತದೇಹವನ್ನು ಪತ್ತೆ ಹಚ್ಚಲಾಗಿದೆ.ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ದುಬಾರೆ ಸಿಬ್ಬಂದಿಗಳು ಕಳೆದ ಮೂರು ದಿನಗಳಿಂದ ಕಾರ್ಯಚರಣೆ ನಡೆಸುತ್ತಿದ್ದರು.

ನಾಪೋಕ್ಲುವಿನ ವಿದ್ಯುತ್ ಉಪ ಕೇಂದ್ರಕ್ಕೆ ಅಗತ್ಯ ಸಿಬ್ಬಂದಿಗಳನ್ನು ತುರ್ತಾಗಿ ನೇಮಿಸಿ: ಅಸ್ಕರ್ ಸೇಟ್ ಒತ್ತಾಯ   ನಾಪೋಕ್ಲುವಿನ ವಿದ್ಯುತ್ ಉಪ ಕೇ...
26/06/2025

ನಾಪೋಕ್ಲುವಿನ ವಿದ್ಯುತ್ ಉಪ ಕೇಂದ್ರಕ್ಕೆ ಅಗತ್ಯ ಸಿಬ್ಬಂದಿಗಳನ್ನು ತುರ್ತಾಗಿ ನೇಮಿಸಿ: ಅಸ್ಕರ್ ಸೇಟ್ ಒತ್ತಾಯ



ನಾಪೋಕ್ಲುವಿನ ವಿದ್ಯುತ್ ಉಪ ಕೇಂದ್ರಕ್ಕೆ ಅಗತ್ಯ ಸಿಬ್ಬಂದಿಗಳನ್ನು ತುರ್ತಾಗಿ ನೇಮಿಸಿ: ಅಸ್ಕರ್ ಸೇಟ್ ಒತ್ತಾಯ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು: ಗುಡ್ಡಗಾಡು ಪ್ರದೇಶ ಮತ್ತು ಅತೀ ಹೆಚ್ಚು ಮಳೆಯಾಗುವ ವ್ಯಾಪ್ತಿಯಾಗಿರುವ ನಾಪೋಕ್ಲುವಿನಲ್ಲಿರುವ, ವಿದ್ಯುತ್ ಉಪ ಕೇಂದ್ರದಲ್ಲಿ ಹಲವು ವರ್ಷಗಳಿಂದ ಸಿಬ್ಬಂದಿಗಳ ಕೊರತೆ ಇದ್ದು ಇದರಿಂದ ನಾಪೋಕ್ಲುವಿಭಾಗದ ಗ್ರಾಮಗಳ ನಿವಾಸಿಗಳು ನಿರಂತರ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದು ಕೂಡಲೆ ಸಂಬಂಧಪಟ್ಟ ಇಲಾಖೆಯವರು ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸ ಬೇಕೆಂದು ನಾಪೋಕ್ಲುವಿನ ಕಟ್ಟಡ ನಿರ್ಮಾಣ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಸ್ಕರ್ ಸೇಟ್ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅಸ್ಕರ್ ಮಳೆಗಾಲ ಬಂತೆಂದರೆ ನಾಪೋಕ್ಲು ವಿಭಾಗದ ಗ್ರಾಮಸ್ಥರು ಬೆಚ್ಚಿ ಬೀಳುವ ಪರಿಸ್ಥಿತಿ ಇದೆ. ಕಾರಣ ಅತಿ ಹೆಚ್ಚು ಮಳೆಯಿಂದ ಮರಗಳ ಕೊಂಬೆ ಮುರಿದು ಬಿದ್ದು ಹಾಗೂ ಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ಪದೇ ಪದೇ ಧರೆಗುರುಳಿ ಬಿದ್ದು ಈ ವ್ಯಾಪ್ತಿಯ ನಿವಾಸಿಗಳು ಕತ್ತಲೆಯಲ್ಲಿ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಅಲ್ಲದೆ ಪಟ್ಟಣ ಸೇರಿದಂತೆ ವಿಭಾಗದಲ್ಲಿ ಅಂಗಡಿ ಮುಂಗಟ್ಟುಗಳನ್ನು ಇಟ್ಟ ವ್ಯಾಪಾರಿಗಳು ಕೂಡ ವಿದ್ಯುತ್ ಸಮಸ್ಯೆಯಿಂದ ನಷ್ಟವನ್ನು ಅನುಭವಿಸುವಂತಾಗಿದೆ.

ಇದಕ್ಕೆಲ್ಲ ಕಾರಣ ಸೆಸ್ಕ್ ಇಲಾಖೆಯ ನಾಪೋಕ್ಲು ಉಪ ಕೇಂದ್ರದಲ್ಲಿನ ಸಿಬ್ಬಂದಿಗಳ ಕೊರತೆಯಾಗಿದೆ.35 ಸಿಬ್ಬಂದಿಗಳು ಇರಬೇಕಾದಂತಹ ಈ ಉಪ ಕೇಂದ್ರದಲ್ಲಿ ಕೇವಲ 5 ಜನ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಕೆಲವು ದಿನಗಳು ಮಾತ್ರ ಬೆರಣಿಕೆಯಷ್ಟು ಸಿಬ್ಬಂದಿಯನ್ನು ಇಲಾಖೆ ನೇಮಿಸುತ್ತಿದ್ದಾರೆ. ಮಳೆಗಾಲ ಸಂದರ್ಭದಲ್ಲಿ ಇಲ್ಲಿರುವ ಐದು ಜನ ಸಿಬ್ಬಂದಿಗಳೇ ನಾಪೋಕ್ಲು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಉಂಟಾದರೆ ತೆರಳ ಬೇಕಾಗಿದೆ.ತುರ್ತು ಸಂದರ್ಭದಲ್ಲಿ ತಾತ್ಕಾಲಿಕ ಬೆರಳಣಿಕೆ ಯಷ್ಟು ಸಿಬ್ಬಂದಿಗಳನ್ನು ನೇಮಿಸಿ ಇಲಾಖೆಯು ಜನರ ಕಣ್ಣೊರೆಸುವ ತಂತ್ರಮಾಡುತ್ತಿದ್ದಾರೆ ಎಂದು ಅಸ್ಕರ್ ಆರೋಪಿಸಿದ್ದಾರೆ. ಈ

ಹಿಂದೆ ಕೂಡ ಹಲವು ಬಾರಿ ಮನವಿ ಹಾಗೂ ಮಾಧ್ಯಮಗಳ ಮೂಲಕ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ.ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇನ್ನಾದರು ಎಚ್ಚೆತ್ತುಕೊಂಡು ತುರ್ತಾಗಿ ನಾಪೋಕ್ಲು ವಿದ್ಯುತ್ ಉಪ ಕೇಂದ್ರಕ್ಕೆ ಶಾಶ್ವತ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಅಸ್ಕರ್ ಸೇಟ್ ಒತ್ತಾಯಿಸಿದ್ದಾರೆ.

ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡಿ: ಉಸ್ತುವಾರಿ ಸಚಿವ ಎನ್.ಎಸ...
26/06/2025

ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡಿ: ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು


ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡಿ: ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು
ಮಡಿಕೇರಿ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮಳೆ ಹಾನಿ ಬಗ್ಗೆ ಗುರುವಾರ ಮಾಹಿತಿ ಪಡೆದು ಸಚಿವರು ಮಾತನಾಡಿದರು.ಜಿಲ್ಲೆಯಲ್ಲಿ ಇನ್ನೂ 40 ದಿನಗಳ ಕಾಲ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಸ್ಥಳಕ್ಕೆ ಹಾಗಾಗ ಭೇಟಿ ನೀಡಬೇಕು. ಇದರಿಂದ ಸಮಸ್ಯೆ ಇದ್ದಲ್ಲಿ ಪರಿಹರಿಸಲು ಸಾಧ್ಯ ಎಂದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಬೇಕು. ದೂರು ಬಾರದಂತೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಎನ್.ಎಸ್.ಭೋಸರಾಜು ಹೇಳಿದರು. ಪ್ರಾಕೃತಿಕ‌ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 37 ಕೋಟಿ ಹಣವಿದೆ. ಹಾಗೆಯೇ ತಹಶಿಲ್ದಾರರ ಬಳಿ 2 ಕೋಟಿ ಹಣ ಇದೆ. ಮನೆ ಮತ್ತಿತರ ಹಾನಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಳೆದ ಬಾರಿ ಗ್ರಾ.ಪಂ.ಗಳಿಗೂ ಹಣ ನೀಡಲಾಗಿತ್ತು, ಈ ಬಾರಿಯೂ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಕಳೆದ ಮೇ ಕೊನೆ ವಾರದಿಂದ ಸುರಿದ ವ್ಯಾಪಕ ಮಳೆಗೆ ವಿದ್ಯುತ್, ರಸ್ತೆ, ಸೇತುವೆ, ಮನೆ ಸೇರಿದಂತೆ ವಿವಿಧ ರೀತಿಯ ಹಾನಿಯಾಗಿದ್ದು, ವಿದ್ಯುತ್ ವ್ಯತ್ಯಯವನ್ನು ಆಯಾಯ ಸಂದರ್ಭದಲ್ಲಿಯೇ ಸರಿಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಸಚಿವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆಗಾಲದಲ್ಲಿ ಕರ್ತವ್ಯ ನಿರ್ವಹಿಸುವ ಲೈನ್ ಮ್ಯಾನ್ ಹಾಗೂ ಗ್ಯಾಂಗ್ ಮನ್ ಗಳಿಗೆ ರೈನ್ ಕೋಟ್ ಸೇರಿದಂತೆ ಅಗತ್ಯ ಉಪಕರಣ ನೀಡಬೇಕು. ಜೊತೆಗೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಕೀತು ಮಾಡಿದರು.

ರಾತ್ರಿ ವೇಳೆ ಮಡಿಕೇರಿ ನಗರದಲ್ಲಿ 8 ಗಂಟೆಯಾದರೂ ವಿದ್ಯುತ್ ಪೂರೈಕೆ ಇಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸುವಂತೆ ಶಾಸಕರು ಸೂಚಿಸಿದರು.ಲೋಕೋಪಯೋಗಿ, ಗ್ರಾಮೀಣ ರಸ್ತೆ ಸರಿಪಡಿಸುವಂತಾಗಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಶಾಸಕರು ನಿರ್ದೇಶನ ನೀಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಸ್ಥಳೀಯ ಸಂಸ್ಥೆಗಳು ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಸೂಚಿಸಿದರು.

ತಾಲ್ಲೂಕು ಮಟ್ಟದಲ್ಲಿ ತಹಶಿಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಇಒಗಳು ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು. ಆ ದಿಸೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆಗಾಲದಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಹೆಚ್ವಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಆದ್ದರಿಂದ ಪ್ರವಾಸಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ಜತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ವುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವಿವಿಧ ಇಲಾಖೆ ಅಧಿಕಾರಿಗಳು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ಮಳೆಯ ಆರ್ಭಟಕ್ಕೆ ಕಿರುಂದಾಡು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಹಾನಿ ಮಳೆಯ ಆರ್ಭಟಕ್ಕೆ ಕಿರುಂದಾಡು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಹಾನಿವರದಿ:ಝಕ...
26/06/2025

ಮಳೆಯ ಆರ್ಭಟಕ್ಕೆ ಕಿರುಂದಾಡು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಹಾನಿ

ಮಳೆಯ ಆರ್ಭಟಕ್ಕೆ ಕಿರುಂದಾಡು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಹಾನಿ
ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಬಳಿಯ ಪಾರಾಣೆ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮದ ನಿವಾಸಿ ದೇವಜನ ಪುಷ್ಪವೇಣಿ ಎಂಬುವವರ ವಾಸದ ಮನೆಯ ಒಂದು ಭಾಗದ ಗೋಡೆ ಪೂರ್ಣವಾಗಿ ಕುಸಿದು ಬಿದ್ದು ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

A successful Event !! Rally
19/06/2025

A successful Event !! Rally

19/06/2025

*ಉಚಿತ ಕಣ್ಣಿನ ತಪಾಸಣ ಶಿಬಿರ ಮಾಹಿತಿ*
*********************
ವಿರಾಜಪೇಟೆ ಕೊಡವ ಸಮಾಜ ಹಾಗೂ ಲೋಪಾಮುದ್ರಾ ದೃಷ್ಟಿ ಕಣ್ಣಿನ ಆಸ್ಪತ್ರೆ ಗೋಣಿಕೊಪ್ಪ ಇವರ ಸಂಯುಕ್ತ ಅಶ್ರಯದಲ್ಲಿ ಇದೇ ತಿಂಗಳ 23 ರ ಸೋಮವಾರ ಬೆಳ್ಳಿಗೆ 9.30ಗಂಟೆಯಿಂದ ಸಂಜೆ 4.30ಗಂಟೆ ತನಕ ಉಚಿತ ಕಣ್ಣಿನ ತಪಾಸಣ ಶಿಬಿರವನ್ನು ಏರ್ಪಡಿಸಲಾಗಿದೆ. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ.
ಹೆಚ್ಚಿನ ವಿವರಕ್ಕೆ ಸಂಪರ್ಕಿಸಿ : ತಾತಂಡ ದಿಲೀಪ್ ವ್ಯವಸ್ಥಾಪಕರು ವಿರಾಜಪೇಟೆ ಕೊಡವ ಸಮಾಜ ಫೋನ್ -9740620915 , ಹರ್ಷಿತ್ ಕರುಂಬಯ್ಯ ಆಡಳಿತಾಧಿಕಾರಿ
ಲೋಪಾಮುದ್ರಾ ದೃಷ್ಟಿ ಕಣ್ಣಿನ ಆಸ್ಪತ್ರೆ ಗೋಣಿಕೊಪ್ಪ ಫೋನ್ -9481920056

Address

Race Course Road, Near Press Club
Madikeri
571201

Alerts

Be the first to know and let us send you an email when Kodagu Channel posts news and promotions. Your email address will not be used for any other purpose, and you can unsubscribe at any time.

Contact The Business

Send a message to Kodagu Channel:

Share