TV1kannada

TV1kannada ಇದು ಕನ್ನಡಿಗರ ಧ್ವನಿ
(1)

11/06/2026

ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇಗುಲದಲ್ಲಿ ಹುಂಡಿಗೆ ಕನ್ನ ಆರೋಪ...5 ಮಂದಿ ವಿರುದ್ದ FIR...

ಮಂಡ್ಯ,

ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇಗುಲದಲ್ಲಿ ಕಳುವಾದ ಹುಂಡಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ವಿರುದ್ದ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಲುವನಾರಾಯಣಸ್ವಾಮಿ ಬಳಿಕ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಕೃತ್ಯ ನಡೆದಿದೆ.ವಜ್ರಾಂಗಿ ಆಭರಣ ದೋಚಿದ ಬೆನ್ನಲ್ಲೇ ಹುಂಡಿಗೂ ಕನ್ನ ಹಾಕಲಾಗಿದೆ.
ದೇಗುಲದ ಅರ್ಚಕರು, ನೌಕರರು, ಸಿಬ್ಬಂದಿ ಮೇಲೆಯೇ ಶಂಕೆ ವ್ಯಕ್ತವಾಗಿದೆ.ದೇಗುಲದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಸೇರಿದಂತೆ ನಗದು ಕಳ್ಳತನ ಆರೋಪ ಕುರಿತು ದೇವಸ್ಥಾನದ ಇಓ ಶೀಲಾ ರವರು ಪೊಲೀಸರಿಗೆ ದೂರು ನೀಡಿದ್ದರು.ದೇವಸ್ಥಾನದ
ಪಾರುಪತ್ತೆಗಾರ ಶ್ರೀಧರ್, ಅರ್ಚಕ ನಾರಾಯಣ ಭಟ್ಟ, ಪರಿಚಾರಕ ತಿರುವೆಂಗಡಚಾರ್ ಹಾಗೂ ಕಾವಲುಗಾರರಾದ ಗಂಗಾಧರ್, ಬಸವರಾಜ್ ವಿರುದ್ಧ ದೂರು ದಾಖಲಾಗಿತ್ತು.
ವಜ್ರಾಂಗಿ ಆಭರಣ ಕಳ್ಳತನದ ಬಳಿಕ ದೊಡ್ಡ ಪ್ರಮಾಣದ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿತ್ತು.
ಸಿಸಿ ಕ್ಯಾಮೆರಾ ಮರೆಮಾಚಿ, ರಾಂಗ್ ಕನೆಕ್ಷನ್ ನೀಡಿ ಡಿವಿಆರ್ ಸುಟ್ಟುಹಾಕಿದ್ದರು.ದೇವಸ್ಥಾನದಲ್ಲಿ ಅಳವಡಿಸಿದ್ದ ಗುಪ್ತ ಸಿಸಿ ಕ್ಯಾಮೆರಾವನ್ನೂ ಕೂಡ ದೋಚಿದ್ದರು.
2026ರ ಜನವರಿ 11ರಂದು ಕಳ್ಳತನ ನಡೆದಿತ್ತು.ಘಟನೆ ಬಳಿಕ ಆರೋಪಿತರಿಗೆ ಇಓ ನೋಟಿಸ್ ನೀಡಿದ್ದರು.
ನೋಟಿಸ್ ಗೆ ಸರಿಯಾದ ಉತ್ತರ ನೀಡದ ಹಿನ್ನೆಲೆ ಪೊಲೀಸರಿಗೆ ತಡವಾಗಿ ದೂರು ನೀಡಿದ್ದರು.ಇದೀಗ
ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ...

11/06/2026

ಮಳವಳ್ಳಿ ಗ್ರಾಮಾಂತರ ಠಾಣೆ ASI ಲೋಕಾಯುಕ್ತ ಬಲೆಗೆ...10 ಸಾವಿರ ಲಂಚ ಪಡೆಯುವ ವೇಳೆ ಲಾಕ್...

ಮಂಡ್ಯ,

ಮಳವಳ್ಳಿ ಗ್ರಾಮಾಂತರ ಠಾಣೆ ಎಎಸ್ ಐ ಶಿವಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಆರೋಪಿಯೊಬ್ಬನಿಗೆ ಸ್ಟೇಷನ್ ಬೇಲ್ ನೀಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಗಲಾಟೆ ಸಂಬಂಧ ರಾಜೇಗೌಡ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಠಾಣೆಯಲ್ಲೇ ಜಾಮೀನು ನೀಡಿ, ಪ್ರಕರಣ ಇತ್ಯರ್ಥಗೊಳಿಸುವ ಆಮಿಷ ನೀಡಿದ್ದರು.
ಕರೆ ರೆಕಾರ್ಡ್ ಮಾಡಿ ಲೋಕಾಯುಕ್ತರಿಗೆ ನೀಡಿದ್ದ ದೂರುದಾರ.
ಬುಧವಾರ ರಾತ್ರಿ ಠಾಣೆಯಲ್ಲೇ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಇನ್ಸ್ ಪೆಕ್ಟರ್ ಲೇಪಾಕ್ಷಮೂರ್ತಿ, ಬ್ಯಾಟರಾಯಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ...

11/06/2026

ಬೀದರ್ ಕರ್ನಾಟಕ*

ಶಾಲಾ ಕಟ್ಟಡದಿಂದ ಬಿದ್ದು ಬಾಲಕನ ಸಾವು ಪ್ರಕರಣ ದಾಖಲಾಗಿದೆ

ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಬಾಲಕನ ತಾಯಿ ಶಾಹಿನ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಬಿಎನ್‌ಎಸ್ 2023 (ಸೆಕ್ಷನ್ 108, 3(5) ಜೊತೆ ಓದಲಾಗಿದೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ ಸಿಬ್ಬಂದಿ ಸದಸ್ಯರಾದ ಭಾಗ್ಯ (ಎ1) ಮತ್ತು ರಾಹುಲ್ (ಎ2) ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಶಾಲಾ ಅಧಿಕಾರಿಗಳ ಕಿರುಕುಳದಿಂದಾಗಿ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

ಮೃತ ಬಾಲಕನಿಗೆ ನ್ಯಾಯ ಒದಗಿಸುವಂತೆಯೂ ದೂರಿನಲ್ಲಿ ಕೋರಲಾಗಿದೆ.

11/06/2026

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ನಾಗಾಲ್ಯಾಂಡ್ ಮೂಲದ ಇಬ್ಬರು ಯುವಕರ ದುರ್ಮರಣ

ಕೊಡಗು ಜಿಲ್ಲೆಯ ಕುಶಾಲನಗರದ ರಸೂಲ್ ಲೇಔಟ್ ಸಮೀಪ ಕಾವೇರಿ ನದಿಯಲ್ಲಿ ಮುಳುಗಿ ನಾಗಾಲ್ಯಾಂಡ್ ಮೂಲದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ನಾಗಾಲ್ಯಾಂಡ್ ಮೂಲದ ಬಸೋಸೋ ಕುಂಚಾಂಗ್ (23) ಹಾಗೂ ಯಾಂಕಾಂಗ್ (27) ಎಂದು ಗುರುತಿಸಲಾಗಿದೆ. ಇವರು ಕುಶಾಲನಗರದ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಇಂದು ಕೆಲಸಕ್ಕೆ ರಜೆ ಪಡೆದುಕೊಂಡಿದ್ದ ಇಬ್ಬರು ಯುವಕರು ಸಂಜೆ ವೇಳೆ ಕಾವೇರಿ ನದಿ ತೀರದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ನದಿಗೆ ಇಳಿದ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಆದರೆ ಕತ್ತಲೆ ಆವರಿಸಿದ್ದರಿಂದ ಮೃತದೇಹಗಳ ಪತ್ತೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನಾಳೆ ಬೆಳಿಗ್ಗೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ದುಬಾರೆ ರಾಫ್ಟಿಂಗ್ ತಂಡದ ಸಹಕಾರದೊಂದಿಗೆ ಶೋಧ ಕಾರ್ಯವನ್ನು ಮುಂದುವರಿಸಲಿದ್ದಾರೆ.

ಈ ಸಂಬಂಧ ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

11/06/2026

ರಾಜಕೀಯ ದುರುದ್ದೇಶದಿಂದ ಒಂದೇ ಪಂಚಾಯಿತಿ ವ್ಯಾಪ್ತಿಯ ಜನರನ್ನು ಒಡೆದು ಆಳುವ ನೀತಿ ಖಂಡನೀಯ
ನ್ಯಾಯಕ್ಕಾಗಿ ಮತ್ತು ಬದುಕಿಗೆ ತುಂಡು ಭೂಮಿಗಾಗಿ ಸಂವಿಧಾನಿಕ ಚೌಕಟ್ಟಿನಲ್ಲಿ ನಿರಂತರ ಹೋರಾಟ ನಡೆಸುತ್ತೇವೆ

ಸಾಗರ(ಶಿವಮೊಗ್ಗ)ಜೂನ್,೧೦:ರಾಜಕೀಯ ದುರುದ್ದೇಶದಿಂದ ಒಂದೇ ಪಂಚಾಯಿತಿ ವ್ಯಾಪ್ತಿಯ ಜನರನ್ನು ಒಡೆದು ಆಳುವ ನೀತಿ ಖಂಡನೀಯ ಎಂದು ಗುಡ್ಡೇಮನೆ ರವಿಚಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಅವರು ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಾಳಗುಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿ ಸ.ನಂ.೧೩೭ ರಲ್ಲಿ ಕಳೆದ ೧೦ ವರ್ಷಗಳಿಂದ೧೦ ಗುಂಟೆ ಸರ್ಕಾರಿ ಜಾಗದಲ್ಲಿ ಕೃಷಿ ಚಟುವಟಿಕೆ ನಡೆಸಿಕೊಂಡು ವಾಸದ ಮನೆ ನಿರ್ಮಿಸಿಕೊಂಡು ಜೀವನ ಕಟ್ಟಿಕೊಂಡಿರುವ ನಮ್ಮ ಮನೆಗಳನ್ನು ಕೆಲವು ರಾಜಕೀಯ ಪಿತೂರಿಯಿಂದ ಅಧಿಕಾರಿಗಳ ಮೂಲಕ ಮನೆಗಳ ತೆರವುಗೊಳಿಸುವ ಮೂಲಕ ಬಡಜನರ ಹೊಟ್ಟೇಮೇಲೆ ಬರೆ ಎಳೆದಿದ್ದಾರೆ ಎಂದು ದೂರಿದರು.
ತಾಳಗುಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿ ಎಲ್ಲಾ ಸಮುದಾಯದವರು ಅತ್ಯಂತ ಶಾಂತಿ ಸೌಹಾರ್ದತೆಯಿಂದ ರಾಜಕೀಯ,ಸಾಮಾಜಿಕ,ಧಾರ್ಮಿಕ,ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗಳಿಂದ ಜೀವನ ನಡೆಸುತ್ತಿರುವ ತಾಳಗುಪ್ಪ ಪಂಚಾಯಿತಿ ವ್ಯಾಪ್ತಿ ಮುಂದಿನ ಸ್ಥಳಿಯ ಚುನಾವಣೆಯ ದೂರದೃಷ್ಠಿಯಿಂದ ವಿವಿಧ ಸಮುದಾಯಗಳ ನಡುವೆ ಹುಳಿ ಹಿಂಡುವ ಕೃತ್ಯವನ್ನು ಕೆಲವು ರಾಜಕೀಯ ಮುಖಂಡರುಗಳು ವ್ಯವಸ್ಥಿತವಾಗಿ ನಡೆಸುತ್ತಿದ್ದಾರೆ ಎಂದು ದೂರಿದರು.
ಮಡಿವಾಳ ಸಮುದಾಯ ಮತ್ತು ಶೆಟ್ಟು ಎಂಬ ಎರಡು ಸಮುದಾಯಗಳ ಕೆಲವರು ತಾಳಗುಪ್ಪ ಸುತ್ತಮುತ್ತಲ ಗ್ರಾಮಗಳು ಬೇರೆ ಬೇರೆ ಎಂದು ಒಡೆದು ಆಳುವ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದ ಅವರು ಈ ಹಿಂದೆ ಕೂಡಲಿಮಠದವರು ಮಡಿವಾಳ ಸಮುದಾಯದವರನ್ನು ವಕ್ಕಲೆಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಜಾತಿ ಮತ-ಪಂಥ ಲೆಕ್ಕಿಸದೇ ಈಡಿಗ ಸಮುದಾಯ ಮಡಿವಾಳ ಸಮುದಾಯದವರ ಬೆನ್ನಿಗೆ ನಿಂತಿರುವುದು ಐತಿಹಾಸಿಕವಾಗಿದೆ ಎಂದರು.
ತಾಳಗುಪ್ಪದ ವಿವಿಧ ಸಮುದಾಯಗಳ ಸ್ಮಶಾನಕ್ಕೆ ಗುಡ್ಡೇಮನೆ-ಚೂರಿಕಟ್ಟೆ ವ್ಯಾಪ್ತಿಯ ಜಾಗವನ್ನೇ ಗುರುತಿಸಿ ಅವಕಾಶ ಕಲ್ಪಿಸಿದಾಗ ಗುಡ್ಡೇಮನೆಯವರು ಯಾವುದೇ ತಕರಾರು ಮಾಡಿರಲಿಲ್ಲ. ಎಲ್ಲಾ ಒಂದೇ ಪಂಚಾಯಿತಿ ಎಂಬ ವಿಶಾಲ ಭಾವನೆಯಿಂದ ಸಹಕಾರ ನೀಡಿದ್ದೇವೆ.ಇಂತಹ ಸೌಹಾರ್ದಯುತ ಆಡಳಿತ ವ್ಯವಸ್ಥೆ ಮತ್ತು ಪಂಚಾಯಿತಿ ವ್ಯಾಪ್ತಿಯ ಜನರ ವಿಶಾಲ ಮನೋಭಾವನೆಯನ್ನು ಉತ್ತೇಜಿಸುವ ಬದಲಿಗೆ ಜಾತಿ ಹೆಸರಿನಲ್ಲಿ ಮಜಿರೆ ಗ್ರಾಮಗಳ ಹೆಸರಿನಲ್ಲಿ ಒಡೆದು ಆಳುವ ಕೆಟ್ಟ ಸಂಪ್ರದಾಯದ ವಿರುದ್ಧ ಹೋರಾಟ ನಡೆಸಬೇಕಿದೆ ಎಂದರು.
ತಾಳಗುಪ್ಪದ ಗಣ್ಯರೆನಿಸಿಕೊಂಡವರು ಮೋಹನ್ ಶಟ್ಟರುಮಧುಸೂದನ್,ಹೊಸಳ್ಳಿಗಣಪತಿ,ಕೆರಿಯಪ್ಪ ಸೇರಿದಂತೆ ಪಂಚಾಯಿತಿ ವ್ಯಾಪ್ತಿ ಸೌಹಾರ್ದ ವಾತವರಣ ಸೃಷ್ಟಿಸುವ ಬದಲಿಗೆ ಬಗರ್‌ಹುಕುಂ ಮಾಡಿದ ಬಡ ಜನರನ್ನು ರೌಡಿಗಳಿಗೆ ಹೋಲಿಸಿ ನಿಂದಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಸುಳ್ಳು ಆರೋಪಗಳ ಹೊರಿಸಿರುವ ಕ್ರಮ ಖಂಡನೀಯ ಎಂದರು.
ಕಳೆದ ಹಲವು ದಶಕಗಳಿಂದ ತಾಳಗುಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೂ ಒಂದೇ ಒಂದು ಕ್ರಿಮಿನಲ್ ಪ್ರಕರಣಗಳಿಲ್ಲದೇ ಅತ್ಯಂತ ಗೌರವದಿಂದ ವ್ಯಾಪಾರವಹಿವಾಟು,ಕೃಷಿ ಜೀವನವನ್ನು ನಡೆಸುತ್ತಿರುವ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವವರೇ ಹಲವು ಪ್ರಕರಣಗಳಿಂದ ಸಮಾಜದಲ್ಲಿ ಹೆಸರುಕೆಡಿಸಿಕೊಂಡಿದ್ದಾರೆ ಎಂದು ದೂರಿದರು.
ನ್ಯಾಯಕ್ಕಾಗಿ ಮತ್ತು ಬದುಕಿಗೆ ತುಂಡು ಭೂಮಿಗಾಗಿ ಸಂವಿಧಾನಿಕ ಚೌಕಟ್ಟಿನಲ್ಲಿ ನಿರಂತರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಅರುಣ್ ಮಾರುತಿನಗರ ಉಪಸ್ಥಿತರಿದ್ದರು

10/06/2026

ಮಂಗಳೂರು ದಕ್ಷಿಣ ಕನ್ನಡ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಪಲ್ಟಿಯಾದ ಪರಿಣಾಮ ಕಾರು ಚಾಲಕ ಮೃತಪಟ್ಟು ಅದರಲ್ಲಿದ್ದ ಸಹಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಜೂ.10ರಂದು ಮಧ್ಯಾಹ್ನ ನಡೆದಿದೆ.
ಹಾಸನ‌ ಮೂಲದ ಲಕ್ಷ್ಮೀಕಾಂತ್ ಮೃತ ದುರ್ದೈವಿ ಚಾಲಕ ಎನ್ನಲಾಗಿದೆ. ರಂಜಿತ್, ದರ್ಶನ್, ಶೋಭಾ ಎಂಬುವವರು ಗಾಯಗೊಂಡಿದ್ದು ಇವರಿಗೆ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ

10/06/2026

ನನ್ನ ಮತ್ತು ಮೋದಿಯವರ ನಡುವಿನ ಬಾಂಧವ್ಯ ಒಂದು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದ ಹೆಚ್.ಡಿ.ದೇವೇಗೌಡರು

ರಾಜ್ಯಸಭೆ ಸ್ಥಾನದ ಬಗ್ಗೆ ನನಗೆ ವ್ಯಾಮೋಹವಿಲ್ಲ, ಅದರ ಬಗ್ಗೆ ನಾನು ಬೇಡಿಕೆ ಇಟ್ಟಿರಲಿಲ್ಲ ಎಂದ ಹೆಚ್.ಡಿ.ದೇವೇಗೌಡರು

ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅನಗತ್ಯ ಚರ್ಚೆಗೆ ತೆರೆಯದ ಮಾಜಿ ಪ್ರಧಾನಿಗಳು

ಸುಮ್ಮನೆ ಕೂರುವುದಿಲ್ಲ, ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದ ಗೌಡರು

ಬೆಂಗಳೂರು 10 ಜೂನ್ 2026

ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಬಾಂಧವ್ಯವು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನೇರ ಮಾತುಗಳಲ್ಲಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕಿಕ್ಕಿರಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಿಗಳು.

ಎಪ್ಪತ್ತು ವರ್ಷಗಳ ಸುದೀರ್ಘ ರಾಜಕೀಯ ಜೀವನ ಸವೆಸಿರುವ ನನಗೆ ರಾಜ್ಯಸಭೆ ಸದಸ್ಯನಾಗಬೇಕು ಎಂಬ ವ್ಯಾಮೋಹವಿಲ್ಲ. ಸುದೀರ್ಘ ರಾಜಕೀಯ ಜೀವನದಲ್ಲಿ ಅಧಿಕಾರಕ್ಕಿಂತ ಜನಸೇವೆಯೇ ಮುಖ್ಯವಾಗಿತ್ತು ಎಂಬುದನ್ನು ಅತ್ಯಂತ ವಿನಯಪೂರ್ವಕವಾಗಿ ಹೇಳಲು ಬಯಸುತ್ತೇನೆ ಎಂದರು ಅವರು.

ಕಳೆದೆರಡು ದಿನಗಳಿಂದ ರಾಜ್ಯಸಭೆ ಸ್ಥಾನದ ವಿಚಾರದಲ್ಲಿ ತಮ್ಮ ಬಗ್ಗೆ ನಡೆಯುತ್ತಿರುವ ಚರ್ಚೆಗೆ ತೆರೆ ಎಳೆದ ಮಾಜಿ ಪ್ರಧಾನಿಗಳು; ಈ ಚರ್ಚೆ ಅನಗತ್ಯ. ಕೆಲವರು ಸುಖಾಸುಮ್ಮನೆ ಮಾತಾಡುತ್ತಿದ್ದಾರೆ. ಈ ವಿಚಾರದಲ್ಲಿ ನನಗೆ ಅಪಮಾನವಾಗಿದೆ ಎಂಬ ಹೇಳಿಕೆಗಳಿಗೆ ಯಾವುದೇ ಮಹತ್ವವನ್ನು ನಾನು ನೀಡುವುದಿಲ್ಲ. ಅದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಹೇಳಿದರು.

ನನ್ನ ಮತ್ತು ಪ್ರಧಾನಿ ಮೋದಿ ಅವರ ನಡುವೆ ಉತ್ತಮ ಬಾಂಧವ್ಯ ಇದೆ. ಒಂದು ರಾಜ್ಯಸಭೆ ಸ್ಥಾನ ಇಂತಹ ಉತ್ತಮ ಬಾಂಧವ್ಯವನ್ನು ಹಾಳು ಮಾಡುತ್ತದೆ ಎಂದು ಯಾರಾದರೂ ಭಾವಿಸಿದ್ದರೆ ಅದು ಅವರ ಮೂರ್ಖತನ. ಒಂದು ಕಾಲದಲ್ಲಿ ನಾನು ಮೋದಿಯವರನ್ನು ಕಟುವಾಗಿ ಟೀಕಿಸಿದ್ದೆ ಎಂಬುದು ನಿಜ. ಆದರೆ ಕಳೆದ ಹಲವು ವರ್ಷಗಳಿಂದ ನಾನು ಅವರನ್ನು ಬಹಳಷ್ಟು ಅರ್ಥ ಮಾಡಿಕೊಂಡಿದ್ದೇನೆ. ಅವರಲ್ಲಿ ವಿಶ್ವಾಸ ಇರಿಸಿದ್ದೇನೆ. ಅವರ ಒಳ್ಳೆಯ ಕೆಲಸಗಳನ್ನು ಹೃದಯಪೂರ್ವಕವಾಗಿ ಶ್ಲಾಘಿಸಿದ್ದೇನೆ ಎಂದು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳಿಗೆ ಅತೀವ ಬೇಸರ ವ್ಯಕ್ತಪಡಿಸಿದ ದೇವೇಗೌಡರು; ನಾನು ಸುಮ್ಮನೆ ಕೂರುವುದಿಲ್ಲ. ಪಕ್ಷದ ಬಲವರ್ಧನೆಗೆ ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರಗಳನ್ನು ಸಂಸತ್ತಿನ ಒಳಗೆ ಮತ್ತು ಹೊರಗೆಯು ನೇರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು.

ನರೇಂದ್ರ ಮೋದಿ ಅವರ ಬಗ್ಗೆ ಭಾರತ ಅಷ್ಟೇ ಅಲ್ಲ ಜಗತ್ತಿನ ಎಲ್ಲಾ ಭಾಗಗಳಲ್ಲಿಯೂ ಗೌರವಭಾವ ಇದೆ. ಅದರಿಂದ ರಾಷ್ಟ್ರಕೂ ಒಳ್ಳೆಯದಾಗುತ್ತಿದೆ. ಅವರ ಮಟ್ಟಕ್ಕೆ ಯಾವ ನಾಯಕನು ಬೆಳೆಯಲು ಸಾಧ್ಯವಿಲ್ಲ. ಅವರೊಂದಿಗೆ ನಾನು ಹೊಂದಿರುವ ಬಾಂಧವ್ಯ ವೈಯಕ್ತಿಕ ಮಟ್ಟದ್ದು. ಅದನ್ನು ರಾಜಕೀಯ ಕಾರಣಕ್ಕಾಗಿ ಕಳೆದುಕೊಳ್ಳಲು ಬಯಸುವುದಿಲ್ಲ. ನಾನು ಸಂಸತ್ತಿನಲ್ಲಿ ಇರಲಿ ಇಲ್ಲರಲಿ ಮೋದಿ ಅವರ ನಡುವಿನ ಸಂಬಂಧಕ್ಕೆ ದಕ್ಕೆ ಬರುವುದಿಲ್ಲ. ಕೊನೆಯವರೆಗೂ ನಮ್ಮ ಸಂಬಂಧ ಹೀಗೆ ಇರುತ್ತದೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.

ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ಸ್ಮರಿಸಿದ ದೇವೇಗೌಡರು, 'ನಾನು ರಾಜಕಾರಣಕ್ಕೆ ಬಂದು ಎಷ್ಟು ವರ್ಷವಾಯಿತು ಎಂದು ಒಮ್ಮೆ ಯೋಚಿಸಿ. 1954-55 ರಿಂದಲೇ ನಾನು ಸಕ್ರಿಯ ರಾಜಕಾರಣದಲ್ಲಿದ್ದೇನೆ. ಅಂದು ಕೇವಲ ಗುತ್ತಿಗೆ ಕೆಲಸ ಮಾಡುತ್ತಿದ್ದ ನಾನು, ಅದರ ಜೊತೆಜೊತೆಗೆ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ರಾಜಕೀಯಕ್ಕೆ ಬಂದವನು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಜನರ ಮಧ್ಯೆಯೇ ಇದ್ದೇನೆ. ಹಾಗಾಗಿ, ಇಂದು ಒಂದು ಸ್ಥಾನಕ್ಕಾಗಿ ನಾನು ಹಾತೊರೆಯುವ ಅಗತ್ಯವಿಲ್ಲ ಎಂದರು.

ರಾಜ್ಯಸಭೆ ಸ್ಥಾನ ತಪ್ಪಿಸಿ ಬಿಜೆಪಿ ದೇವೇಗೌಡರಿಗೆ ಅಪಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಪದೇಪದೇ ದೂರುತ್ತಿದ್ದಾರಲ್ಲ ಎನ್ನುವ ಪ್ರಶ್ನೆಗೆ ಖಡಕ್ಕಾಗಿ ಉತ್ತರಿಸಿದ ದೇವೇಗೌಡರು; ಮೋದಿ ಅವರ ವಿಶ್ವಾಸದ ಮುಂದೆ ಇವರೆಲ್ಲರ ಹೇಳಿಕೆಗಳು ಟೀಕೆ ಟಿಪ್ಪಣಿಗಳು ಬಹಳ ಸಣ್ಣವು ಎಂದರು.

ಕೆಲವರು ನನ್ನ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದಾರೆ. ಬಹಳ ಅಪಮಾನವಾಯಿತು ಎಂದು ನೋವು ವ್ಯಕ್ತಪಡಿಸುತ್ತಿದ್ದಾರೆ. ಆದರೆ, ನನ್ನ ಹೆಸರು ಪರಿಗಣನೆಗೆ ಬರುತ್ತದೆ ಎಂದು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು ಬಿಟ್ಟರೆ, ನಾನು ಆ ಬಗ್ಗೆ ಎಲ್ಲಿಯೂ ನನಗೆ ರಾಜ್ಯಸಭೆ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿರಲಿಲ್ಲ. ಈ ಬಗ್ಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಕುಮಾರಸ್ವಾಮಿಯವರು ಸ್ಪಷ್ಟವಾಗಿಯೇ ಹೇಳಿದ್ದಾರೆ. ಇದರಲ್ಲಿ ಮತ್ತೊಮ್ಮೆ ನಾನು ಹೇಳುವಂಥದ್ದು ಏನು ಇಲ್ಲ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.

ಆದರೆ ಕಾಂಗ್ರೆಸ್ ಪಕ್ಷದ ಸ್ನೇಹಿತರು ಮಾತ್ರ ಇದನ್ನೇ ದೊಡ್ಡದಾಗಿ ಬಿಂಬಿಸಿ, ಅದಕ್ಕೆ ರಾಜಕೀಯ ಬಣ್ಣ ಲೇಪಿಸಲು ಪ್ರಯತ್ನ ಮಾಡುತ್ತಿದ್ದಾರೆ. ಒಂದು ವೇಳೆ ರಾಜ್ಯಸಭೆಗೆ ಸ್ಪರ್ಧಿಸುವ ಆಸಕ್ತಿ ನನಗೆ ಇದ್ದಿದ್ದೇ ಆದಲ್ಲಿ ಕಳೆದ ಮೇ 26ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಹೋಗಿದ್ದಾಗ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದೆ. ನಾನು ಯಾರೊಂದಿಗೂ ಈ ಬಗ್ಗೆ ಮಾತುಕತೆ ನಡೆಸಲಿಲ್ಲ. ಅಂದಿನ ಕಾರ್ಯಕ್ರಮ ಮುಗಿದ ಕೂಡಲೇ ನಾನು ಬೆಂಗಳೂರಿಗೆ ವಾಪಸ್ ಬಂದೆ ಎಂದು ಮಾಧ್ಯಮಗಳಿಗೆ ಮಾಜಿ ಪ್ರಧಾನಿಗಳು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷ ನೀಡುತ್ತಿರುವ ಹೇಳಿಕೆಗಳು ಮತ್ತು ಮಾಡುತ್ತಿರುವ ಟೀಕೆಗಳ ಬಗ್ಗೆ ಉತ್ತರಿಸಲು ನನಗೆ ಆಸಕ್ತಿ ಇಲ್ಲ ಎಂದ ದೇವೇಗೌಡರು; ಪಕ್ಷಕ್ಕಾಗಿ ಮತ್ತು ಕಾರ್ಯಕರ್ತರ ಸಲುವಾಗಿ ನಾನು ಕೆಲಸ ಮಾಡಲು ಸದಾ ಮುಂದೆ ಇರುತ್ತೇನೆ. ಈಗಲೂ ನಿಮ್ಮೆಲ್ಲರನ್ನು (ಮಾಧ್ಯಮ ಮಿತ್ರರು) ಭೇಟಿಯಾಗಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದರು.

ಇವತ್ತು ಒಂದು ವಿಷಯ ಇಟ್ಟುಕೊಂಡು ನನ್ನ ಬಗ್ಗೆ ಇಷ್ಟೆಲ್ಲಾ ಅನುಕಂಪದ ನಾಟಕ ಆಡುತ್ತಿರುವ ಕಾಂಗ್ರೆಸ್ ನಾಯಕರು ಹಿಂದೆಲ್ಲಾ ನನ್ನ ವಿಚಾರದಲ್ಲಿ ಹೇಗೆಲ್ಲಾ ನಡೆದುಕೊಂಡರು ಎಂಬುದು ಗೊತ್ತಿದೆ. ಇದರ ಬಗ್ಗೆ ಹೇಳುತ್ತಾ ಹೋದರೆ ಬಹಳಷ್ಟು ಹೇಳಬಹುದು. ನನಗೆ ಅದರ ಬಗ್ಗೆ ಆಸಕ್ತಿ ಇಲ್ಲ ಎಂದು ಅವರು ತಿಳಿಸಿದರು.

ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕರಾದ ಕೆ.ಎ.ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ದೊಡ್ಡನಗೌಡ ಪಾಟೀಲ್, ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಹಾಜರಿದ್ದರು.

Address

#122 Dewans Road Ramaswamy Circle Mysuru. 2nd Branch Office #03 1st Floor 7th Road Near More Super Market Krishnarajanagara. Mysuru
Mysore
571602

Alerts

Be the first to know and let us send you an email when TV1kannada posts news and promotions. Your email address will not be used for any other purpose, and you can unsubscribe at any time.

Share