29/05/2026
ಕಳ್ಳಂಬೆಳ್ಳ ಹೋಬಳಿಯ ಯಲದಬಾಗಿ ಅಂಡೇ ಚಿಕ್ಕನಹಳ್ಳಿ ಗ್ರಾಮದ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಲತಾ ದಂಪತಿಯವರ ಮೂರು ವರ್ಷದ ಮಗ ಬಸವರಾಜು ಮನೆಯ ಸಮೀಪ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಜಾಗರೂಕತೆಯಿಂದ ಮನೆಯ ಬಳಿ ಇದ್ದ ನೀರಿನ ಸಂಪಿನಲ್ಲಿ ಬಿದ್ದು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಗುವಿನ ಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಪೋಷಕರು ಹಾಗೂ ಸ್ಥಳೀಯರು ತಕ್ಷಣವೇ ಬಸವರಾಜುವನ್ನು ಕಳ್ಳಂಬೆಳ್ಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರಾದ ಡಾ. ರಮೇಶ್ ಅವರು ತುರ್ತು ಚಿಕಿತ್ಸೆ ನೀಡಿ ಮಗುವಿನ ಪ್ರಾಣವನ್ನು ಉಳಿಸಲು ಶ್ರಮಿಸಿದ್ದಾರೆ. ತಕ್ಷಣದ ಚಿಕಿತ್ಸೆಯಿಂದ ಮಗುವು ಪ್ರಾಣಾಪಾಯದಿಂದ ಪಾರಾಗಿದ್ದು, ಇದೀಗ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಡಾ. ರಮೇಶ್ ಅವರ ಸಮಯಪ್ರಜ್ಞೆ ಹಾಗೂ ಮಾನವೀಯ ಸೇವೆಯನ್ನು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೋಷಕರು ವೈದ್ಯರಿಗೆ ಹಾಗೂ ಆಸ್ಪತ್ರೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಘಟನೆ ಮಕ್ಕಳ ಮೇಲೆ ಪೋಷಕರು ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂಬುದನ್ನು ಮತ್ತೊಮ್ಮೆ ನೆನಪಿಸಿದೆ. # Z9 Kannada # MR Mallesh # Mob :- 099802 31542 # # #