05/09/2026
ಶಿರಾ ಪೌರಕಾರ್ಮಿಕರನ್ನು ರಕ್ಷಿಸಿಕೊಂಡರೆ ಇಡೀ ಊರನ್ನೇ ರಕ್ಷಿಸಿದಂತೆ: ಕೃಷ್ಣಪ್ಪ ಎಂ.ಸ್ಥಾಯಿ ಸಮಿತಿ ಅಧ್ಯಕ್ಷರು.
ಶಿರಾ: ಎಸ್.ಕೆ. ಸಿದ್ದಣ್ಣ ಹಾಗೂ ಸತ್ಯನಾರಾಯಣ್ ಅವರ ಕಾಲದಲ್ಲಿ ಪೌರಕಾರ್ಮಿಕರಿಗೆ ಹಕ್ಕುಪತ್ರಗಳ ಸುರಿಮಳೆಯೇ ಆಗಿತ್ತು. ಆದರೆ ಇಂದು ಪೌರಕಾರ್ಮಿಕರಿಗೆ ಹಕ್ಕುಪತ್ರ ನೀಡುವ ವಿಚಾರದಲ್ಲಿ ವಿಳಂಬವಾಗುತ್ತಿರುವುದು ಬೇಸರದ ಸಂಗತಿ ಎಂದು ಶಿರಾ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಹೇಳಿದರು.
ಪೌರಕಾರ್ಮಿಕರು ನಗರದ ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡಿಕೊಂಡರೆ ಇಡೀ ಊರನ್ನೇ ರಕ್ಷಣೆ ಮಾಡಿಕೊಂಡಂತೆ. ಆದ್ದರಿಂದ ಪೌರಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಆಡಳಿತದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಪೌರಕಾರ್ಮಿಕರಿಗೆ ಹಕ್ಕುಪತ್ರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅವರ ಹಿತಾಸಕ್ತಿಯನ್ನು ಕಾಪಾಡಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕೃಷ್ಣಪ್ಪ ಆಗ್ರಹಿಸಿದರು.