UDUPI LIVE

UDUPI LIVE Don't miss out on the latest happenings - and be a part of the cultural renaissance.

03/06/2026

ಡಿ‌ಕೆ‌ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ .ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಿಂದ ಪಟಾಕಿ ಸಿಡಿಸಿ,ಸಿಹಿ ತಿಂಡಿ ಹಂಚಿ ಸಂಭ್ರಮಾಚರಣೆ.

01/06/2026

ಆರ್ ಸಿಬಿ ಗೆ ಭರ್ಜರಿ ಗೆಲುವು: ಮಣಿಪಾಲದ ಕಾಯಿನ್ ಸರ್ಕಲ್ ನಲ್ಲಿ ಮುಗಿಲು ಮುಟ್ಟಿದ ಸಂಭ್ರಮ

31/05/2026

ರಾಮಕ್ಷತ್ರಿಯ ಯುವ ಸಂಘ ಉಡುಪಿ, ನೀಲಾವರ I ರಾಮಕ್ಷತ್ರಿಯ ಸಮಾಗಮ

ಕೊಡವೂರಿನಲ್ಲಿ ಇಂದಿನ ಕಾರ್ಯಕ್ರಮ
17/05/2026

ಕೊಡವೂರಿನಲ್ಲಿ ಇಂದಿನ ಕಾರ್ಯಕ್ರಮ

15/05/2026

ಶ್ರೀ ಶಂಕರನಾರಯಣ ದೇವಸ್ಥಾನ ಕೊಡವೂರು | ಮಹಾರುದ್ರಯಾಗ

15/05/2026

ಶ್ರೀ ಶಂಕರನಾರಯಣ ದೇವಸ್ಥಾನ ಕೊಡವೂರು | ಮಹಾರುದ್ರಯಾಗ |ಧಾರ್ಮಿಕ ಕಾರ್ಯಕ್ರಮ

14/05/2026

ಶ್ರೀ ಶಂಕರನಾರಯಣ ದೇವಸ್ಥಾನ ಕೊಡವೂರು | ಮಹಾರುದ್ರಯಾಗ | ಹಸಿರು ಹೊರಕಾಣಿಕೆ ಮತ್ತು ಭವ್ಯ ಶೋಭಾಯಾತ್ರೆ

14/05/2026

ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಸನ್ನಿಧಿಯಲ್ಲಿ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ ಕಾರ್ಯಕ್ರಮದ ಪೂರ್ವಭಾವಿಯಾಗಿ ನಡೆಯಲಿರುವ ಹಸಿರು‌ಹೊರೆ ಕಾಣಿಕೆ ಮೆರವಣಿಗೆಗೆ ಝೀ‌ಕನ್ನಡ ಖ್ಯಾತಿಯ ಶ್ರೀ ಶ್ರೀ ಮಹರ್ಷಿ ಅನಂದ ಗೂರೂಜಿ ಯವರು ಪಾಲ್ಗೊಳಲಿದ್ದಾರೆ.

29/04/2026

ಇತ್ತೀಚಿಗೆ ಬ್ರಹ್ಮಾವರದಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಮಟ್ಟದ ಕ್ರಕೆಟ್ ಟೂರ್ನಮೆಂಟ್ ಎಚ್ಎಂಸಿ ಯುನೈಟೆಡ್ ಟ್ರೋಫಿ 2026 , ಕೆಲವು ಕಿಡಿಗೇಡಿಗಳ ಒಳಸಂಚಿನಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡು ವಿವಾದಕ್ಕೀಡಾಗಿತ್ತು. ಕಡೆಗೆ ಆಯೋಜಕರು ಟ್ರೋಫಿ ಹಾಗೂ ಬಹುಮಾನ ಮೊತ್ತದ ಇಪ್ಪತ್ತು ಲಕ್ಷ ರೂಪಾಯಿ ಹಣ ಸೆಮಿ ಫೈನಲ್ ಗೆ ತೇರ್ಗಡೆಗೊಂಡಿದ್ದ ನಾಲ್ಕು ತಂಡಗಳಿಗೆ ಸಮವಾಗಿ ಹಂಚಿ ನಾಣ್ಯ ಚಿಮ್ಮುವಿಕೆ ಮೂಲಕ ಚಾಂಪಿಯನ್ ತಂಡವನ್ನು ಆಯ್ಕೆ ಮಾಡಿ ವಿವಾದವನ್ನು ಸುಖ್ಯಾಂತಗೊಳಿಸಿದ್ದರು.
ತದನಂತರ ಆಯೋಜಕರು ಕಾನೂನಿನ ಮೊರೆ ಹೋಗಿ ಆರೋಪಿಗಳ ವಿರುದ್ಧ ಸಮರ ಸಾರಿದ್ದು , ಇದೀಗ ಉಡುಪಿ ಜಿಲ್ಲಾ ನ್ಯಾಯಾಲಯ ಪೊಲೀಸ್ ಇಲಾಖೆಗೆ ತನಿಖೆಗೆ ಆದೇಶ ನೀಡಿ ತೀರ್ಪು ನೀಡಿದೆ. ಇದು ಸತ್ಯಕ್ಕೆ ಸಂದ ಮೊದಲ ಜಯವಾಗಿದ್ದು ; ಆಯೋಜಕರು ಈ ಪ್ರಕರಣವನ್ನು ಕಾನೂನಿನ ಮುಖಾಂತರ ಎದುರಿಸುವ ನಿಟ್ಟಿನಲ್ಲಿ ಕಾರ್ಯಪ್ರರ್ವತ್ತರಾಗಿದ್ದಾರೆ.
ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿಗಳಷ್ಟು ವೆಚ್ಚವನ್ನು ಭರಿಸಿ ಟೂರ್ನಮೆಂಟ್ ಆಯೋಜಿಸಿ ಬ್ರಹ್ಮಾವರಕ್ಕೆ ಹೆಸರು ತಂದಿದ್ದ ಎಚ್ಎಂಸಿ ಯುನೈಟೆಡ್ ಟ್ರೋಫಿ ಪಂದ್ಯಾವಳಿಯಲ್ಲಿ ಸೆಮಿ ಫೈನಲ್
ಪಂದ್ಯಾಟದ ಕೊನೆಯ ದಿನವಾದ Jan 25 ರಂದು ಜಾನ್ಸನ್ ಕುಂದಾಪುರ ಹಾಗೂ ಪಂಚಜನ್ಯ ತಂಡಗಳ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯದ ಅಂತಿಮ ಕ್ಷಣದಲ್ಲಿ ವಿವಾದ ಉಂಟಾಗಿ ಗೊಂದಲ ಸೃಷ್ಟಿಯಾಯಿತು. ಕಾನೂನು ಸುವ್ಯವಸ್ಥೆ ಕಾಪಾಡುವುದು ಕಷ್ಟವಾಗಿದ್ದ ಕಾರಣ ಸಂಘಟಕರು ಪಂದ್ಯಾಟವನ್ನು ರದ್ದುಗೊಳಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪರ-ವಿರೋಧ ಚರ್ಚೆಗಳು ನಡೆದಿದ್ದವು.

ನಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಇತ್ಯರ್ಥಗೊಳಿಸಿ, ವಿವಾದಕ್ಕೆ ಕಾರಣವಾಗಿದ್ದ ಜಾನ್ಸನ್ ಕುಂದಾಪುರ ತಂಡವನ್ನು ಕೈಬಿಟ್ಟು, ಖುಷಿ ಅಮರ್ ಪಂಚಜನ್ಯ ತಂಡವನ್ನು ಸೆಮಿಫೈನಲ್ ಪ್ರವೇಶಿಸಿದ ತಂಡವೆಂದು ಘೋಷಿಸಿ, ಸೆಮಿಫೈನಲ್‌ಗೆ ಅರ್ಹತೆ ಪಡೆದ ಜಯಕರ್ನಾಟಕ ಬೆಂಗಳೂರು, ಫ್ರೆಂಡ್ಸ್ ಬೆಂಗಳೂರು, ಇಝಾನ್ ಚೈತನ್ಯ ಎಚ್.ಎಂ ಎಕ್ತಾ ಮತ್ತು ಖುಷಿ ಅಮ‌ರ್ ಪಂಚಜನ್ಯ ತಂಡಗಳ ನಡುವೆ ಅದೃಷ್ಟದ ಆಯ್ಕೆ ನಡೆಸಲಾಗಿತ್ತು.
ಇದೀಗ ಸಂಘಟಕರು ಟೂರ್ನಮೆಂಟ್ ಗೆ ಅಡಚಣೆ ಉಂಡು ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು ಸ್ವಾಗತಾರ್ಹ ಕ್ರಮ ಎಂದು ಸಾರ್ವಜನಿಕವಾಗಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Address

Udupi
576101

Alerts

Be the first to know and let us send you an email when UDUPI LIVE posts news and promotions. Your email address will not be used for any other purpose, and you can unsubscribe at any time.

Contact The Business

Send a message to UDUPI LIVE:

Share

Category