ವಿಜಯಪಥ

  • Home
  • ವಿಜಯಪಥ

ವಿಜಯಪಥ vijayapatha.in is a Kannada news platform, which serves news content in Kannada. Founded in 2021, it's mission is to connect in their own local language.

Breaking News, views and Features on various National issues and politician developments.

ಪ್ರಸ್ತುತ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರವೃತ್ತಿ ಬಹಳ ವೇಗವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಹಣವನ್ನು ಕಳ...
08/07/2025

ಪ್ರಸ್ತುತ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರವೃತ್ತಿ ಬಹಳ ವೇಗವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಹಣವನ್ನು ಕಳುಹಿಸುವುದು ಮತ್ತು ಸ್ವೀಕರಿಸುವುದನ್ನು ಬಹಳ ಸುಲಭಗೊಳಿಸಿದೆ. ಪ್ರತಿಯೊಬ್ಬರೂ ಕೆಲವೇ ಸೆಕೆಂಡುಗಳಲ್ಲಿ ಮೊಬೈಲ್ ಮೂಲಕ ಲಕ್ಷಾಂತರ ರೂ.ಗಳನ್ನು ವರ್ಗಾಯಿಸುತ್ತಾರೆ. ಆದರೆ ನೀವು ದೊಡ್ಡ ಮೊತ್ತಡ ಹಣವನ್ನು ವರ್ಗಾಯಿಸಿದರೆ ಆದಾಯ ತೆರಿಗೆ ಇಲಾಖೆ ನಿಮ್ಮ ಮೇಲೆ ಕಣ್ಣಿಡಬಹುದು ಎಂಬ ಅರಿವು ನಿಮಗಿರಬೇಕು. UPI ಮೂಲಕ ಹಣ ಕಳುಹಿಸುವುದು ಅಥವಾ ಸ್ವೀಕರಿಸುವುದಕ್ಕೆ ಯಾವುದೇ ತೆರಿಗೆ ಇಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಸತ್ಯವೆಂದರೆ ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನೋಟಿಸ್ ನೀಡಬಹುದು....

ಸ್ತುತ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರವೃತ್ತಿ ಬಹಳ ವೇಗವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಹಣವನ್.....

ಕಡಲೂರು: ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಲೂರ...
08/07/2025

ಕಡಲೂರು: ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ರೈಲು ಬರುವ ವೇಳೆ ಗೇಟ್‌ ದಾಟುವಾಗ ರೈಲ್ವೆ ಗೇಟ್ ಮುಚ್ಚಿರಲಿಲ್ಲ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಬಸ್‌ ಚಾಲಕ ರೈಲು ಬರುವುದನ್ನು ಗಮನಿಸದೇ ಹಳಿ ದಾಟಲು ಯತ್ನಿಸಿದ ಪರಿಣಾಮ ಈ ದುರಂತ ನಡೆದಿದೆ....

ಕಡಲೂರು: ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘ....

ಬೆಂಗಳೂರು ಗ್ರಾಮಾಂತರ: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್...
07/07/2025

ಬೆಂಗಳೂರು ಗ್ರಾಮಾಂತರ: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು....

ಬೆಂಗಳೂರು ಗ್ರಾಮಾಂತರ: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳ...

ಬೆಂಗಳೂರು: ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹಾ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು ಅತ್ಯಂತ ಶೋಚನೀಯ...
07/07/2025

ಬೆಂಗಳೂರು: ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹಾ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು ಅತ್ಯಂತ ಶೋಚನೀಯ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಲ್‌ಬಾಗ್‌ ಆರವರಣದಲ್ಲಿ ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ನಿವೃತ್ತ ನೌಕರರ ಸಂಘ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟ್ ವತಿಯಿಂದ ಭಾನುವಾರ ಜರುಗಿದ ಇಪಿಎಸ್ ಪಿಂಚಣಿದಾರರ 90ನೇ ಮಾಸಿಕ ಸಭೆಯಲ್ಲಿ ಮಾತನಾಡಿದರು. ಜುಲೈ 11ರಂದು ಸಿಬಿಟಿ ಸಭೆ ಇದ್ದು, ಜುಲೈ 21 ರಿಂದ ಪಾರ್ಲಿಮೆಂಟ್‌ನ ಮುಂಗಾರು ಅಧಿವೇಶನ ಪ್ರಾರಂಭವಾಗುತ್ತಿದೆ....

ಬೆಂಗಳೂರು: ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹಾ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು ಅತ....

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಅಡ್ಡಗಟ್ಟಿದ ಮಹಿಳೆ ಮೇಲೆ ಬಸ್‌ ನುಗ್ಗಿಸಲು ಯತ್ನಿಸಿದ ಆರೋಪದಡಿ ವಿಭಾಗೀಯ ನಿಯಂತ್ರಣಾಧಿಕಾರ...
07/07/2025

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಅಡ್ಡಗಟ್ಟಿದ ಮಹಿಳೆ ಮೇಲೆ ಬಸ್‌ ನುಗ್ಗಿಸಲು ಯತ್ನಿಸಿದ ಆರೋಪದಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲಕನನ್ನು ಅಮಾನತು ಮಾಡಿದ ಆದೇಶಕ್ಕೆ ಹೈ ಕೋರ್ಟ್‌ ಇಂದು ತಡೆನೀಡಿದೆ. ಬಿಎಂಟಿಸಿ 17ನೇ ಘಟಕದ ಚಾಲಕ ಪ್ರಶಾಂತ್‌ ಎಂಬುವರನ್ನು ಸಂಸ್ಥೆ ಜೂನ್‌ 1ರಂದು ಅಮಾನತು ಮಾಡಿತ್ತು. ಈ ಅಮಾನತು ಮಾಡಿರುವುದನ್ನು ಪ್ರಶ್ನಿಸಿ ಚಾಲಕ ಪ್ರಶಾಂತ್‌ ಹೈ ಕೋರ್ಟ್‌ ಮೆಟ್ಟಿಲೇರಿದ್ದರು, ಈ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಅವರು ವಕ್ಕಾಲತ್ತು ವಹಿಸಿದ್ದರು. ಇಂದು (ಜು.7) ಪ್ರಕರಣ ಹೈಕೋರ್ಟ್ ನ್ಯಾಯಮೂರ್ತಿ ಅನಂತ್‌ ರಾಮನಾಥ್‌ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬಂದಿದೆ....

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಅಡ್ಡಗಟ್ಟಿದ ಮಹಿಳೆ ಮೇಲೆ ಬಸ್‌ ನುಗ್ಗಿಸಲು ಯತ್ನಿಸಿದ ಆರೋಪದಡಿ ವಿಭಾಗೀಯ ನಿಯಂ...

ವಿರಾಜಪೇಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಇಂದು ಬೆಳಗ್ಗೆ ವಿರಾ...
07/07/2025

ವಿರಾಜಪೇಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಇಂದು ಬೆಳಗ್ಗೆ ವಿರಾಜಪೇಟೆಯ ಕಾವೇರಿ ಕಾಲೇಜು ಬಳಿಯ ಇಳಿಜಾರಿನ ನಡೆದಿದೆ. ಕೋಲಾರ ವಿಭಾಗದ ಬಸ್‌ ಅವಘಡಕ್ಕೆ ಹೀಡಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್‌ ಮಡಿಕೇರಿಯಿಂದ ವಿರಾಜಪೇಟೆ ಮಾರ್ಗವಾಗಿ ಬೆಂಗಳೂರು-ಕೋಲಾರ ಕಡೆಗೆ ಇಂದು ಬೆಳಗ್ಗೆ ತೆರಳುತ್ತಿದ್ದಾಗ ಕಾವೇರಿ ಕಾಲೇಜು ಬಳಿ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದೆ. ಘಟಕಗಳಲ್ಲಿ ಬಸ್‌ಗಳನ್ನು ಸರಿಯಾಗಿ ರಿಪೇರಿ ಮಾಡುವುದಕ್ಕೆ ತಾಂತ್ರಿಕ ಸಿಬ್ಬಂದಿಗಳಿಗೆ ಬಿಡಿ ಭಾಗಗಳನ್ನು ಕೊಡದಿರುವುದಕ್ಕೆ ಈ ರೀತಿಯ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.

ವಿರಾಜಪೇಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಇಂದು ಬೆ.....

ಡಿಎಂ ಶಾಜೀಯಾ ಭಾನು ಹಾಗೂ ಡಿಸಿ ಅಮಾನತಿಗೆ ಶಾಸಕ ಸುರೇಶ್‌ ಒತ್ತಾಯ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಪೊಲೀಸ್‌ ಅಧಿಕಾರಿಗಳು ಬೇಲೂರು: ಕರ್ನಾ...
07/07/2025

ಡಿಎಂ ಶಾಜೀಯಾ ಭಾನು ಹಾಗೂ ಡಿಸಿ ಅಮಾನತಿಗೆ ಶಾಸಕ ಸುರೇಶ್‌ ಒತ್ತಾಯ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಪೊಲೀಸ್‌ ಅಧಿಕಾರಿಗಳು ಬೇಲೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕಿ ಕಿರುಕುಳಕ್ಕೆ ನೊಂದ ಚಾಲಕ ಕಂ ನಿರ್ವಾಹಕರೊಬ್ಬರು ಡಿಪೋನಲ್ಲೇ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಬೇಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೋಟಿಗನಹಳ್ಳಿಯ ನಿವಾಸಿ ಚಾಲಕ ಕಂ ನಿರ್ವಾಹಕ ಹರೀಶ್‌ ಎಂಬುವರೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದವರು. ಸದ್ಯ ಅವರನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ....

ಡಿಎಂ ಶಾಜೀಯಾ ಭಾನು ಹಾಗೂ ಡಿಸಿ ಅಮಾನತಿಗೆ ಶಾಸಕ ಸುರೇಶ್‌ ಒತ್ತಾಯ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಪೊಲೀಸ್‌ ಅಧಿಕಾರಿಗಳು ಬೇಲ.....

ಮದ್ದೂರು: ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್‌ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್‌ ಹಿಂಬದಿ ಕುಳಿತಿದ್ದ ವೃದ್ಧ ಸೇರಿ ಇಬ್ಬರು ಮೃತಪಟ್ಟಿರುವ ಘಟ...
06/07/2025

ಮದ್ದೂರು: ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್‌ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್‌ ಹಿಂಬದಿ ಕುಳಿತಿದ್ದ ವೃದ್ಧ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಗಾವಿ ಬಳಿ ನಡೆದಿದೆ. ಮದ್ದೂರಿನ ರಾಮಣ್ಣ (70) ಹಾಗೂ ಭರತ್ (19) ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಬಳಿ ವಿಸಿ ನಾಲೆಯ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೈಕ್, ನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಅನುನೀಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಮದ್ದೂರು ಪೊಲೀಸ್ ಠಾಣೆ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.

ಮದ್ದೂರು: ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್‌ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್‌ ಹಿಂಬದಿ ಕುಳಿತಿದ್ದ ವೃದ್ಧ ಸೇರಿ ಇಬ್ಬರು ಮೃತಪ.....

ಮಂಡ್ಯ: ಚಾಲಕ‌ನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ತಾಲೂಕಿನ ಶಿವಳ್ಳಿ-ಹಾಡ್ಯ ನಡುವೆ ಭತ್ತದ ಗದ್ದೆಗೆ ಪಲ್ಟಿ ಹೊಡ...
06/07/2025

ಮಂಡ್ಯ: ಚಾಲಕ‌ನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ತಾಲೂಕಿನ ಶಿವಳ್ಳಿ-ಹಾಡ್ಯ ನಡುವೆ ಭತ್ತದ ಗದ್ದೆಗೆ ಪಲ್ಟಿ ಹೊಡೆದ ಪರಿಣಾಮ 45ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಬಸ್‌ ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದಾಗ ಮತ್ತೊಂದು ವಾಹನಕ್ಕೆ ಜಾಗ ಬಿಡುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ಕಳೇದುಕೊಂಡ ಬಸ್‌ ಭತ್ತದ ಗದ್ದೆಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಗಾಯಗೊಂಡ ಎಲ್ಲರನ್ನು ಸ್ಥಳೀಯರ ಸಹಕಾರದಿಂದ ಆಂಬುಲೆನ್ಸ್‌ ಮತ್ತು ಖಾಸಗಿ ವಾಹನಗಳ ಮೂಲಕ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿದೆ. ಈ ವೇಳೇ ಸಣ್ಣಪುಟ್ಟ ಗಾಯಗೊಂಡಿದ್ದವರನ್ನು ಹೊರರೋಗಿಗಳಾಗಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಬಂಧ ಶಿವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಮಂಡ್ಯ: ಚಾಲಕ‌ನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ತಾಲೂಕಿನ ಶಿವಳ್ಳಿ-ಹಾಡ್ಯ ನಡುವೆ ಭತ್ತದ ಗದ್ದೆಗೆ ....

ಬೆಳಗಾವಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ...
06/07/2025

ಬೆಳಗಾವಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಅಪ್ಜಲಪುರ ಮೂಲದವರಾದ ಗೀರಿಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಅಪಘಾತದಲ್ಲಿ ಅಸುನೀಗದವರು. ಇನ್ನು ರಾಧಿಕಾ ಮ್ಯಾಲೇಶಿ ಎಂಬುವರು ಗಂಭೀರ ಗಾಯಗೊಂಡಿದ್ದರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದವರೆಲ್ಲ ಕೊಲ್ಲಾಪುರ ಮಹಾಲಕ್ಷ್ಮಿ ದೇವಿ ದರ್ಶನ ಮಾಡಿ ವಾಪಸ್‌ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ ಬಳಿಕ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಬೆಳಗಾವಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್...

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿರುವ ಸಂಘಟನೆಗಳು ಈ ಹಿಂದಿನಿಂದಲೂ ತಮ್ಮ ಹಳೆಯ ಸಂಪ್ರದಾಯದಂತೆ ವೇತನ ಪರಿಷ್ಕರಣೆ...
06/07/2025

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿರುವ ಸಂಘಟನೆಗಳು ಈ ಹಿಂದಿನಿಂದಲೂ ತಮ್ಮ ಹಳೆಯ ಸಂಪ್ರದಾಯದಂತೆ ವೇತನ ಪರಿಷ್ಕರಣೆ ಆಗುತ್ತಿರುವುದರಿಂದ ಇವತ್ತಿನ ದಿನಗಳಲ್ಲಿ ಸಾರಿಗೆ ನೌಕರರ ವೇತನ ಸರ್ಕಾರಿ ನೌಕರಿಗಿಂತ ಸುಮಾರು ಶೇ.50 ಕಡಿಮೆ ಇದೆ. ಇದು ತಮಗೆ ಗೊತ್ತಿದ್ದರೂ ಸಹ ಇವತ್ತಿನ ದಿನಗಳಲ್ಲಿ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ತಾವು ಶೇ.25ರಷ್ಟು ವೇತನಕ್ಕಾಗಿ ಸರ್ಕಾರದ ಮುಂದೆ ಬೇಡಿಕೆ ಇಡುತ್ತಿದ್ದೀರಿ. ಇದಕ್ಕೆ ಕಾರಣ ಏನು...? ಸಾರಿಗೆ ನೌಕರರ ಇಂಕ್ರಿಮೆಂಟ್‌ಗಳು ಸಹ ಸರ್ಕಾರಿ ನೌಕರರಿಗಿರುವಂತೆ ಈ ವರೆಗೂ ಸಹ ಸರಿ ಸಮಾನ ಇಲ್ಲ. ಹಾಗೆಯೇ ಗ್ರಾಜುಟಿಯೂ ಸಹ ಸರ್ಕಾರಿ ನೌಕರರಂತೆ ಸಾರಿಗೆ ನೌಕರರಿಗೂ ಸಹ ಶೇ.50ಕ್ಕೆ ( ಇದು 2002ರ ಹಿಂದೆ ನೇಮಕಗೊಂಡಿರುವವರಿಗೆ ಶೇ.100ರಷ್ಟಿದೆ) ಕಡಿಮೆ ಮಾಡಲಾಗಿದೆ....

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿರುವ ಸಂಘಟನೆಗಳು ಈ ಹಿಂದಿನಿಂದಲೂ ತಮ್ಮ ಹಳೆಯ ಸಂಪ್ರದಾಯದಂತೆ ವೇತ....

ಬೆಂಗಳೂರು: ಇಪಿಎಸ್‌ ಪಿಂಚಣಿದಾರರ 90ನೇ ಮಾಸಿಕ ಸಭೆಯನ್ನು ನಾಳೆ ಅಂದರೆ ಜು.6ರ ಭಾನುವಾರ ಲಾಲ್‌ಬಾಗ್ ಆಭರಣದಲ್ಲಿ ಆಯೋಜಿಸಲಾಗಿದೆ ಎಂದು ಬಿಎಂಟಿಸಿ...
05/07/2025

ಬೆಂಗಳೂರು: ಇಪಿಎಸ್‌ ಪಿಂಚಣಿದಾರರ 90ನೇ ಮಾಸಿಕ ಸಭೆಯನ್ನು ನಾಳೆ ಅಂದರೆ ಜು.6ರ ಭಾನುವಾರ ಲಾಲ್‌ಬಾಗ್ ಆಭರಣದಲ್ಲಿ ಆಯೋಜಿಸಲಾಗಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್‌ಬಾಗ್‌ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ ಕ್ಷಣ ಕಾಲ ಕಳೆದಲ್ಲಿ, ಬದುಕಿನ ಜಂಜಾಟವನ್ನು ಮರೆತಂತಾಗಿ, ಹಿರಿಯ ಜೀವಗಳಿಗೆ ನವ ಚೇತನದ ಸ್ಫೂರ್ತಿ ಬಂದದಂತಾಗುತ್ತದೆ....

ಬೆಂಗಳೂರು: ಇಪಿಎಸ್‌ ಪಿಂಚಣಿದಾರರ 90ನೇ ಮಾಸಿಕ ಸಭೆಯನ್ನು ನಾಳೆ ಅಂದರೆ ಜು.6ರ ಭಾನುವಾರ ಲಾಲ್‌ಬಾಗ್ ಆಭರಣದಲ್ಲಿ ಆಯೋಜಿಸಲಾಗಿದೆ ಎಂದು .....

Address


Alerts

Be the first to know and let us send you an email when ವಿಜಯಪಥ posts news and promotions. Your email address will not be used for any other purpose, and you can unsubscribe at any time.

Contact The Business

Send a message to ವಿಜಯಪಥ:

Shortcuts

  • Address
  • Telephone
  • Alerts
  • Contact The Business
  • Claim ownership or report listing
  • Want your business to be the top-listed Media Company?

Share