Namma Superstars

  • Home
  • Namma Superstars

Namma Superstars Star Kannada Media Network
Proudly Presents
"Namma Superstars"
The First Kannada Magazine Launched Across the World

# Proudly Presents
SUPERSTARS #
THE FIRST KANNADA MAGAZINE RELEASED WORLDWIDE.

*ವಿಷ್ಣುದಾದಾರ ಅಮೃತ ಮಹೋತ್ಸವದಂದು ಸ್ಮಾರಕಕ್ಕೆ  ಅಡಿಗಲ್ಲು..ಕಿಚ್ಚನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ**ವಿಷ್ಣು ಅಭಿಮಾನಿಗಳಿಗೆ ಗುಡ್ ನ್ಯೂಸ...
18/08/2025

*ವಿಷ್ಣುದಾದಾರ ಅಮೃತ ಮಹೋತ್ಸವದಂದು ಸ್ಮಾರಕಕ್ಕೆ ಅಡಿಗಲ್ಲು..ಕಿಚ್ಚನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ*

*ವಿಷ್ಣು ಅಭಿಮಾನಿಗಳಿಗೆ ಗುಡ್ ನ್ಯೂಸ್.. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು*

ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಅತಿ ದೊಡ್ಡ ಪ್ಲಾನ್ ಮಾಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿದ್ದ ದಾದಾ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದೀಗ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ. ಸೆಪ್ಟೆಂಬರ್ 18ರಂದು ಅಮೃತಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ದಾದಾರ ಫ್ಯಾನ್ಸ್ ಮುಂದಾಗುತ್ತಿದ್ದಾರೆ. ಈ ಕುರಿತು ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿಂದು ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸುದ್ದಿ ಗೋಷ್ಟಿ ನಡೆಸಲಾಯಿತು.

*ದಾದಾ ಸ್ಮಾರಕದ ಬ್ಲ್ಯೂ ಪ್ರಿಂಟ್ ಕಿಚ್ಚನಿಂದ ಅನಾವರಣ*

ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಹೇಳಿಕೇಳಿ ಕಿಚ್ಚ ವಿಷ್ಣುದಾದಾರ ಅಪ್ಪಟ ಅಭಿಮಾನಿ. ಸುದೀಪ್ ಅವರ ಹುಟ್ಟುಹಬ್ಬದಂದೇ ಯಜಮಾನರ ಸ್ಮಾರಕದ ಬ್ಲ್ಯೂಪ್ರಿಂಟ್ ನ್ನು ಸ್ವತಃ ಕಿಚ್ಚ ಅನಾವರಣ ಮಾಡಲಿದ್ದಾರೆ. ಸೆಪ್ಟೆಂಬರ್ 18ರಂದು ದಾದಾ ಬರ್ತಡೇ ದಿನವೇ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು. ಕೆಂಗೇರಿ ಬಳಿ ನಿರ್ಮಾಣ ಆಗುವ ಸ್ಮಾರಕ, ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ ಅನ್ನುವುದನ್ನು ವೀರಕಪುತ್ರ ಅವರು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಅಮೃತವರ್ಷ ಆಚರಿಸಲು ಮೂರು ವರ್ಷದಿಂದ ಪ್ಲಾನ್ ಮಾಡಿಕೊಳ್ಳುತ್ತಿದ್ದೇವೆ. ಅದೇ ದಿನದಂದು ಸ್ಮಾರಕ ಕೆಲಸ ನಿರ್ಮಾಣ ಕೆಲಸ ಆರಂಭಿಸುತ್ತಿದ್ದೇವೆ. ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಸರ್ ಬರ್ತಡೇ ದಿನದಂದು ಸ್ಮಾರಕ ಹೇಗಿರಲಿದೆ ಎಂಬ ಮಾಡೆಲ್ ಪರಿಚಯಿಸುತ್ತೇವೆ. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು ಹಾಕುತ್ತೇವೆ. ಇದು ಪುಣ್ಯಭೂಮಿಗೆ ಸಮ ಎಂದು ವಾದ ಮಾಡಲು ಹೋಗುವುದಿಲ್ಲ. ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪ್ಯಾರೆಲ್ ಎಂದು ಹೇಳುವುದಿಲ್ಲ. ಇದು ಅಸಂಖ್ಯಾತ ಭಾವನೆ ಬೆಸೆದ ಜಾಗ ಇದು. ಪುಣ್ಯಭೂಮಿ ಉಳಿಸಿಕೊಳ್ಳುತ್ತೇವೆ. ಅದಕ್ಕಾಗಿ ಹೋರಾಟ ಮಾಡುತ್ತೇವೆ. ಕುಟುಂಬದವರು ನಿನ್ನೆ ಹೇಳಿದ್ದಾರೆ. ನೀವೆಲ್ಲರೂ ನಿರ್ಧಾರ ಮಾಡಿಕೊಂಡು ಬನ್ನಿ ಎಂದಿದ್ದಾರೆ. ಅದಕ್ಕಾಗಿ ರೂಪುರೇಷೆ ಸಿದ್ದ ಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ದಾದಾ ಅವರ ದರ್ಶನ ಕೇಂದ್ರ ಮಾಡುತ್ತೇವೆ. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ ಎಂಬುದನ್ನು ಸೆಪ್ಟೆಂಬರ್ 2ಕ್ಕೆ ಮಾಹಿತಿ ನೀಡುತ್ತೇನೆ ಎಂದರು.

*ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಯಜಮಾನರ ಮಹೋತ್ಸವ*

ಸಾಹಸ ಸಿಂಹ ವಿಷ್ಣುವರ್ಧನ್ ಅವರ ಯಜಮಾನರ ಅಮೃತ ಮಹೋತ್ಸವನ್ನ ಒಂದು ದಿನ ಮಾಡೋಕೆ ಪ್ಲಾನ್ ಮಾಡಲಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಈ ಸಂಭ್ರಮ ಮಾಡಲಾಗುತ್ತಿದೆ. ಈ ಒಂದು ಅಮೃತ ಮಹೋತ್ಸವದಲ್ಲಿ ಇಡೀ ಇಂಡಸ್ಟ್ರಿ ಭಾಗಿ ಆಗಲಿದೆ ಅಂತಲೂ ಹೇಳಬಹುದು.

ಇದ್ರೆ ನೆಮ್ದಿಯಾಗಿರ್ಬೇಕ್.. ಸ್ವಾತಂತ್ರ್ಯೋತ್ಸವಕ್ಕೆ ಡೆವಿಲ್ ಫಸ್ಟ್ ಸಿಂಗಲ್!
10/08/2025

ಇದ್ರೆ ನೆಮ್ದಿಯಾಗಿರ್ಬೇಕ್.. ಸ್ವಾತಂತ್ರ್ಯೋತ್ಸವಕ್ಕೆ ಡೆವಿಲ್ ಫಸ್ಟ್ ಸಿಂಗಲ್!

10/08/2025

ರಾತ್ರೋರಾತ್ರಿ ವಿಷ್ಣುವರ್ಧನ್ ಸಮಾಧಿ ತೆರವು ಹೇಡಿತನದ ಕೆಲಸ - ನಟ ಸುದೀಪ್

*ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾದ ಕಾಪಾಡೋ ದ್ಯಾವ್ರೇ ಸಾಂಗ್ ರಿಲೀಸ್*ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ...
10/08/2025

*ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾದ ಕಾಪಾಡೋ ದ್ಯಾವ್ರೇ ಸಾಂಗ್ ರಿಲೀಸ್*

ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರದಿಂದ ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ.

ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಏಳುಮಲೆ ಚಿತ್ರದ ಕಾಪಾಡೋ ದ್ಯಾವ್ರೇ ಎಂಬ ಗೀತೆ ಅನಾವರಣ ಮಾಡಲಾಯಿತು. ಚಿತ್ರರಂಗದ ಹಿರಿಯ ನಟಿಯರಾದ ಶೃತಿ, ಸುಧಾರಾಣಿ, ಹಾಗೂ ತಾರಾ ಅನುರಾಧ ಹಾಡನ್ನು ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕ ತರುಣ್ ಸುಧೀರ್, ನಿರ್ದೇಶಕ ಪುನೀತ್ ರಂಗಸ್ವಾಮಿ, ನಾಯಕ ರಾಣಾ, ನಾಯಕಿ ಪ್ರಿಯಾಂಕಾ, ಸಂಗೀತ ನಿರ್ದೇಶಕ ಡಿ‌ ಇಮ್ಮಾನ್, ಗಾಯಕಿ‌ ಮಂಗ್ಲಿ, ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿರುವ ರಾಜುಗೌಡ್ರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾರಮ್ಮ ಮಾತನಾಡಿ, ಹಾಡು ನೋಡಿ ತುಂಬಾ ಖುಷಿಯಾಯ್ತು. ಸಣ್ಣದಾಗಿ ದುಃಖ ಆಯ್ತು. ಎಲ್ಲಿ ಪ್ರೇಮಿಗಳನ್ನು ಬಹಳ ಕಷ್ಟಪಡುವುದು ತೋರಿಸುತ್ತಾರೆ ಎಂದು. ಇದು ಸತ್ಯಕಥೆ ಅಂದಾಗ ಅದು ಹಾಗೇಯೇ ತೋರಿಸಬೇಕು. ರಾಣಾ, ಪ್ರಿಯಾಂಕಾ ತುಂಬಾ ಚೆನ್ನಾಗಿ ಕಾಣಿಸುತ್ತಾರೆ. ಡೈರೆಕ್ಟರ್ ತಮ್ಮ ಕೆಲಸ ಮಾಡಿದ್ದಾರೆ. ತರುಣ್ ಸುಧೀರ್ ಏನ್ ಮಾಡಿದ್ರೂ ಫಸ್ಟ್ ಕ್ಲಾಸ್ ಆಗಿದೆ ಅನ್ನೋದು ಫ್ರೋವ್ ಆಗಿದೆ. ಸಾಂಗ್ ಚೆನ್ನಾಗಿದೆ. ಸಿನಿಮಾ ಹಿಟ್ ಆಗಲಿ ಎಂದು ಹಾರೈಸಿದರು.

ಶೃತಿ ಮಾತನಾಡಿ, ಏಳುಮಲೆ ಸಿನಿಮಾ ನೋಡಿ ಪ್ರೇಕ್ಷಕರು ಹೊರಗೆ ಬಂದಾಗ ರಾಣಾ ಸಖತ್ ಆಗಿ ಆಕ್ಟ್ ಮಾಡಿದ್ದಾರೆ ಎಂದು ಹೇಳ್ತಾರೆ. ಒಬ್ಬ ಕಲಾವಿದನಾಗಿ ಹೆಸರು ಮಾಡುವ ಅವಕಾಶ ಈ ಚಿತ್ರದಲ್ಲಿ ರಾಣಾಗೆ ಸಿಕ್ಕಿದೆ. ಪ್ರಿಯಾಂಕಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಇದು ನನ್ನ ಕುಟುಂಬದ ಸಿನಿಮಾ. ನಾವು ಬೆಂಗಳೂರಿಗೆ ಬರಲು ಕಾರಣ ಸುಧೀರ್ ಸರ್. ಹೊಸಬರಿಗೆ ಯಾರು ಅವಕಾಶ ಕೊಡ್ತಾರೆ ಎಂಬ ಭಯ ಹೋಗಲಾಡಿಸಲು ಚಿತ್ರರಂಗದಲ್ಲಿ ತರುಣ್ ತರಹದ ಡೈರೆಕ್ಟರ್ ಇದ್ದಾರೆ. ಹೊಸಬರಿಗೆ ಅವಕಾಶ ಕೊಡುವುದು ಚಿಕ್ಕ ವಿಷಯವಲ್ಲ. ಅದನ್ನು ತರುಣ್ ಮಾಡುತ್ತಿದ್ದಾನೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ನಟಿ ಸುಧಾರಾಣಿ ಮಾತನಾಡಿ, ಕನ್ನಡ ಚಿತ್ರರಂಗಕ್ಕೆ ಮತ್ತೆ ಅದೇ ಹೊಳಪು, ಮೆರಗು ಏಳುಮಲೆ ಸಿನಿಮಾದ ಟೀಸರ್ ಹಾಡು ನೋಡಿದಾಗ ಸಿಗುತ್ತಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿ. ಇಡೀ ತಂಡದ ಡೆಡಿಕೇಷನ್ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಕಲಾ ಸರಸ್ವತಿ ಎಲ್ಲರನ್ನೂ ಕೈಬೀಸಿ ಕರೆಯಲ್ಲ. ಕರೆದಾಗ ಅದನ್ನು ಭಕ್ತಿ, ‌ನಿಷ್ಠೆಯಿಂದ ಮುಂದುವರೆಸಬೇಕು. ಆ ಅವಕಾಶ ರಾಣಾ, ಪ್ರಿಯಾಂಕಾಗೆ ಸಿಕ್ಕಿದೆ. ಇದನ್ನು ನೀವು ಸದುಪಯೋಗಪಡಿಸಿಕೊಂಡಿದ್ದಾರೆ. ತರುಣ್ ಅವರು ತಂದೆ ಹೆಸರನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ನಟನೆ, ನಿರ್ದೇಶನ ಎರಡರಲ್ಲಿಯೂ ಹೆಸರು ಮಾಡಿದ್ದಾರೆ. ಈಗ ನಿರ್ಮಾಪಕರಾಗಿ ಒಳ್ಳೊಳ್ಳೆ ಸಿನಿಮಾ ಮಾಡುತ್ತಿದ್ದಾರೆ ಎಂದು ಹೇಳಿದರು.

ಡಿ‌ ಇಮ್ಮಾನ್ ಮಾತನಾಡಿ, ಈ‌ ಮೊದಲು ಸುದೀಪ್ ಸರ್ ಹಾಗೂ ಪುನೀತ್ ಸರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ಈಗ ತರುಣ್ ಸುಧೀರ್ ಅವರ ಸಿನಿಮಾದ ಭಾಗವಾಗಿದ್ದೇನೆ. ತರುಣ್ ಅದ್ಭುತ ವ್ಯಕ್ತಿ. ನಾನು ಅವರ ಮೂಲಕ ನಿರ್ದೇಶಕ ಪುನೀತ್ ಸರ್ ಭೇಟಿಯಾದೆ. ಏಳುಮಲೆ ಒಂದು ಸುಂದರ ಪ್ರೇಮಕಥೆ. ಈ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಚೆನ್ನಾಗಿ ನಟಿಸಿದ್ದಾರೆ. ನಾನು ಚಿತ್ರಕ್ಕಾಗಿ ಸಂಗೀತ ನಿರ್ದೇಶನ ಮಾಡಿದ್ದೇನೆ. ಈ ಜರ್ನಿಯನ್ನು ತುಂಬಾ ಎಂಜಾಯ್ ಮಾಡಿದೆ.‌ ನಾನು ಸಿನಿಮಾ ನೋಡಿದ ಬಳಿಕ ಯಾರು ಕ್ಯಾಮೆರಾಮೆನ್ ಎಂದು ಕೇಳಿದೆ. ಅದ್ವೈತ್ ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು.

ಕಾಪಾಡೋ ದ್ಯಾವ್ರೇ ಹಾಡು ಮೂರು ಭಾಷೆಯಲ್ಲಿ ಬಿಡುಗಡೆಯಾಗಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದ ಮೆಲೋಡಿ ಗೀತೆಗೆ ಮಂಗ್ಲಿ ಧ್ವನಿಯಾಗಿದ್ದು, ಡಿ ಇಮ್ಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ರೀತಿಗಾಗಿ ಪರಿತಪ್ಪಿಸುವ ಪ್ರೇಮಿಗಳ‌ ನಡುವಿನ ಮಧುರ ಗೀತೆ ಇದಾಗಿದ್ದು, ರಾಣಾ ಹಾಗೂ ಪ್ರಿಯಾಂಕಾ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ.

ಸಹ ನಿರ್ದೇಶಕರಾಗಿ, ಗೀತ ಸಾಹಿತಿಯಾಗಿ `ಕಾಟೇರ’, `ಗುರುಶಿಷ್ಯರು’ ಸೇರಿದಂತೆ ಅನೇಕ ಸಿನಿಮಾಗಳನ್ನು ಮಾಡಿರುವ ಪುನೀತ್ ರಂಗಸ್ವಾಮಿ ಈಗ `ಏಳುಮಲೆ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ.

ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅದ್ವಿತ್ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ, ಡಿ.ಇಮ್ಮನ್ ಸಂಗೀತ ಚಿತ್ರಕ್ಕಿದೆ. ಈ ಸಿನಿಮಾ ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗುತ್ತಿದೆ.
Tharun Kishore Sudhir

09/08/2025
03/08/2025
ಭಾವಪೂರ್ಣ ಶ್ರದ್ಧಾಂಜಲಿ ಭಾರತೀಯ ಚಿತ್ರರಂಗದಲ್ಲಿ "ಅಭಿನಯ ಸರಸ್ವತಿ" ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ ವಯೋಸಹಜ ಅನಾರ...
14/07/2025

ಭಾವಪೂರ್ಣ ಶ್ರದ್ಧಾಂಜಲಿ

ಭಾರತೀಯ ಚಿತ್ರರಂಗದಲ್ಲಿ "ಅಭಿನಯ ಸರಸ್ವತಿ" ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Legendary Actress B. Sarojadevi, known as "Abhinaya Saraswati" in Indian cinema, has passed away due to age-related illness.


Address


Opening Hours

Monday 10:00 - 21:00
Tuesday 10:00 - 21:00
Wednesday 10:00 - 21:00
Thursday 10:00 - 21:00
Friday 10:00 - 21:00
Saturday 10:00 - 21:00

Telephone

+919901297397

Alerts

Be the first to know and let us send you an email when Namma Superstars posts news and promotions. Your email address will not be used for any other purpose, and you can unsubscribe at any time.

Contact The Business

Send a message to Namma Superstars:

  • Want your business to be the top-listed Media Company?

Share