city_times_express

  • Home
  • city_times_express

city_times_express Contact information, map and directions, contact form, opening hours, services, ratings, photos, videos and announcements from city_times_express, Media/News Company, .

*ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್... ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್**ಅಭಿಮಾನಿಯಿಂದ ರಾಕಿ ಕಟ್ಟಿಸಿಕೊಂಡ ಚಿರಂಜೀವಿ...ಮಕ್ಕಳ ಶಿಕ...
29/08/2025

*ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್... ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್*

*ಅಭಿಮಾನಿಯಿಂದ ರಾಕಿ ಕಟ್ಟಿಸಿಕೊಂಡ ಚಿರಂಜೀವಿ...ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತು ನಟ*

ತೆರೆಮೇಲೆ ಮಾತ್ರವಲ್ಲದೆ ತೆರೆಹಿಂದೆಯೂ ಮೆಗಾ ಸ್ಟಾರ್ ಚಿರಂಜೀವಿ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ರಾಜೇಶ್ವರಿ ಎಂಬುವವರು ಚಿರು ಅವರ ಡೈಹಾರ್ಡ್ ಫ್ಯಾನ್. ಮೆಗಾ ಸ್ಟಾರ್ ಮೇಲಿನ ಅಭಿಮಾನದಿಂದಾಗಿ ಸುಮಾರು 300 ಕಿಲೋಮೀಟರ್ ಸೈಕಲ್ ತುಳಿದು‌ ತನ್ನಷ್ಟಿದ ತಾರೆಯನ್ನು ಭೇಟಿಯಾಗಿ ಖುಷಿಪಟ್ಟಿದ್ದಾರೆ.

ರಾಜೇಶ್ವರಿಯವರು ಅದೋನಿಯವರು. ಅದೋನಿಯಿಂದ ಹೈದ್ರಾಬಾದ್ ಗೆ ಸೈಕಲ್ ನಲ್ಲಿ ಆಗಮಿಸಿದ್ದಾರೆ. ಬರೋಬ್ಬರಿ 300‌ಕಿಲೋಮೀಟರ್ ಸೈಕಲ್ ಸವಾರಿಯಲ್ಲಿ ಬಂದ ರಾಜೇಶ್ವರಿಯವರನ್ನು ಅಷ್ಟೇ ಪ್ರೀತಿಯಿಂದ ಚಿರಂಜೀವಿ ತಮ್ಮ ಮನೆಗೆ ಸ್ವಾಗತಿಸಿದ್ದಾರೆ.

ಅಭಿಮಾನಿ ರಾಜೇಶ್ವರಿ ಅವರ ಅಭಿಮಾನ ಕಂಡು ಚಿರಂಜೀವಿಯೇ ಪುಳಕಿತರಾಗಿದ್ದಾರೆ. ತನ್ನ‌ ಇಷ್ಟದ ಅಭಿಮಾನಿಯಿಂದ ರಾಕಿ ಕಟ್ಟಿಸಿಕೊಂಡ ಮೆಗಾ ಸ್ಟಾರ್ ಅಣ್ಣನ ಸ್ಥಾನ ನೀಡಿದ್ದಾರೆ.


ರಾಜೇಶ್ವರಿಯಂತಹ ಅಪರೂಪದ ಅಭಿಮಾನಕ್ಕೆ ಚಿರಂಜೀವಿ ಚಿಕ್ಕ ಕಾಣಿಕೆ ಕೂಡ ನೀಡಿದ್ದಾರೆ. ರಾಜೇಶ್ವರಿಗೆ ಸೀರೆ ಕೊಟ್ಟ ಸತ್ಕರಿಸಿದ್ದಾರೆ. ಇನ್ನೊಂದು ಹೆಜ್ಜೆ ಮುಂದೆ ಇಟ್ಟ ಚಿರಂಜೀವಿ ರಾಜೇಶ್ವರಿ ಅವರ ಇಬ್ಬರ ಮಕ್ಕಳ ಶಿಕ್ಷಣದ ಜವಾಬ್ದಾರಿ ಕೂಡ ಹೊತ್ತು ಕೊಂಡಿದ್ದಾರೆ. ಇದಪ್ಪ ಅಭಿಮಾನದ ಪರಾಕಾಷ್ಠೆ. ಒಬ್ಬ ಅಭಿಮಾನಿಗೆ ಸಿಗಬೇಕಾದ ಪ್ರೀತಿ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ.

*ಬೆಂಗಳೂರಿನಲ್ಲಿ ನಟಿ ರಮ್ಯಾ ಮೂಲಕ QPL 2.0 ಲೋಗೋ ಬಿಡುಗಡೆ ಸಮಾರಂಭ*ಕ್ವೀನ್ಸ್ ಪ್ರೀಮಿಯರ್ ಲೀಗ್ (QPL) ಇದರ ಬಹುನಿರೀಕ್ಷಿತ ದ್ವಿತೀಯ ಆವೃತ್ತಿ...
07/07/2025

*ಬೆಂಗಳೂರಿನಲ್ಲಿ ನಟಿ ರಮ್ಯಾ ಮೂಲಕ QPL 2.0 ಲೋಗೋ ಬಿಡುಗಡೆ ಸಮಾರಂಭ*

ಕ್ವೀನ್ಸ್ ಪ್ರೀಮಿಯರ್ ಲೀಗ್ (QPL) ಇದರ ಬಹುನಿರೀಕ್ಷಿತ ದ್ವಿತೀಯ ಆವೃತ್ತಿಯ ‘ಕ್ರೀಡೋತ್ಸವ’ ಲೋಗೋವನ್ನು ಇಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿಲಾಯಿತು. ಕಳೆದ ವರ್ಷ ಯಶಸ್ವಿಯಾಗಿ ನಡೆದ ಮೊದಲ ಆವೃತ್ತಿಗೆ ಸಿಕ್ಕ ಭರ್ಜರಿ ಪ್ರತಿಕ್ರಿಯೆ ನಂತರ, ಈ ಸಲದ ಆವೃತ್ತಿಯಲ್ಲಿ 12 ಹೊಸ ಕ್ರೀಡೆಗಳನ್ನು ಸೇರಿಸಿಕೊಳ್ಳಲಾಗಿದ್ದು, ಇದು ಕೇವಲ ಕ್ರೀಡೆ ಮಾತ್ರವಲ್ಲ, ಒಂದು ಮನರಂಜನೆಯ ಹಬ್ಬವಾಗುತ್ತಿದೆ.

25 ಮಿಲಿಯನ್ ಡಿಜಿಟಲ್ ವೀಕ್ಷಣೆಗಳು ಮತ್ತು 5000+ ಪ್ರೇಕ್ಷಕರು ಎಂಬ ಮೊದಲ ಆವೃತ್ತಿಯ ಭರ್ಜರಿ ಯಶಸ್ಸಿನ ಬಳಿಕ, QPL 2.0 ಭಾರತವ್ಯಾಪಿ ಚಳುವಳಿಯಾಗಿ ರೂಪುಗೊಳ್ಳಲು ಸಜ್ಜಾಗಿದೆ.

ಕಾರ್ಯಕ್ರಮದಲ್ಲಿ QPL ಸ್ಥಾಪಕ ಶ್ರೀ ಮಹೇಶ್ ಗೌಡ, ಜನಪ್ರಿಯ ನಟಿ ಹಾಗೂ ಸ್ಯಾಂಡಲ್ವುಡ್ ಕ್ವೀನ್ ಶ್ರೀಮತಿ ರಮ್ಯಾ, ಹಾಗೂ ಪ್ರಸಿದ್ಧ ನಟ ಮತ್ತು QPL ಸಮಿತಿಯ ಸದಸ್ಯ ಶ್ರೀ ಪ್ರಮೋದ್ ಶೆಟ್ಟಿ ಉಪಸ್ಥಿತರಿದ್ದರು. ಜೊತೆಗೆ ಬಾಲಿವುಡ್ ನಟಿ ಶ್ರೀಮತಿ ಎಲಿ ಎವ್ರಾಮ್ ಕೂಡ ತಮ್ಮ ಬೆಂಬಲವನ್ನು ಸೂಚಿಸಲು ಆಗಮಿಸಿದ್ದರು. ಬೆಂಗಳೂರಿನ ಕ್ರೀಡೆ, ಫ್ಯಾಷನ್ ಮತ್ತು ಚಲನಚಿತ್ರ ಲೋಕದ ಗಣ್ಯರು ಈ ವೇಳೆ ಹಾಜರಿದ್ದರು.

“QPL 2.0 ಮೂಲಕ ನಾವು ಕೇವಲ ಮುಂದಿನ ಹಂತಕ್ಕೆ ಹೋಗುತ್ತಿಲ್ಲ — ನಾವು ಮಹಿಳೆಯರಿಗಾಗಿ ಕ್ರೀಡೆ ಮತ್ತು ಮನರಂಜನೆ ಕ್ಷೇತ್ರವನ್ನು ಪೂರ್ತಿಯಾಗಿ ಬದಲಾಯಿಸುತ್ತಿದ್ದೇವೆ,” ಎಂದು ಶ್ರೀ ಮಹೇಶ್ ಗೌಡ ಹೇಳಿದರು. “ಈ ಸೀಸನ್ನಲ್ಲಿ ನಾವು 50 ಮಿಲಿಯನ್ ಡಿಜಿಟಲ್ ವೀಕ್ಷಣೆಗಳ ಗುರಿ ಹೊಂದಿದ್ದೇವೆ, ಭಾರತದೆಲ್ಲೆಡೆ ವಿಸ್ತರಿಸಲು ತಯಾರಾಗಿದ್ದೇವೆ. ಇಂದು ಯುವಕರು ಮೊಬೈಲ್ ಗೇಮಿಂಗ್ ಹಾಗೂ ತಂತ್ರಜ್ಞಾನದಲ್ಲಿ ಹೆಚ್ಚು ನಿಲುಕುತ್ತಿರುವುದನ್ನು ನೋಡಿ ಚಿಂತೆಗೊಳಗಾಗಬೇಕಾಗಿದೆ. ಸಿನಿ ತಾರೆಗಳು ತಾವು ಫಿಟ್ ಆಗಿ ಉಳಿಯಲು ಸಮಯ ಒದಗಿಸುತ್ತಿರುವುದೇ ಯುವ ಜನತೆಗೆ ಪ್ರೇರಣೆಯಾಗಿದೆ. ನಿಜವಾದ ಸಬಲೀಕರಣ ನಿಜವಾದ ಭಾಗವಹಿಸುವಿಕೆಯಿಂದ ಶುರುವಾಗುತ್ತದೆ.”

ಮಾಧ್ಯಮದೊಂದಿಗೆ ಮಾತನಾಡಿದಾಗ ನಟಿ ರಮ್ಯಾ ಅವರು ಹೇಳಿದರು:
“ಕ್ಯೂಪಿಎಲ್ ಮಹಿಳಾ ಕಲಾವಿದರ ಬೆಂಬಲಿಸಿ, ಅವರನ್ನು ಉತ್ತೇಜಿಸುತ್ತಿರುವ ರೀತಿ ನನಗೆ ತುಂಬಾ ಇಷ್ಟವಾಗಿದೆ. ಈ ವೇದಿಕೆಯ ಮೂಲಕ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ. ಜೊತೆಗೆ ಮಹಿಳೆಯರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿತರಾಗಬೇಕು. ಇದು ನಮಗೆ ದೈಹಿಕವಾಗಿ ಆರೋಗ್ಯಕರವಾಗಿರುವುದಕ್ಕೆ ಸಹಾಯ ಮಾಡುತ್ತದೆ ಮತ್ತು ಆನ್‌ಲೈನ್ ಗೇಮಿಂಗ್ ಹಾಗೂ ಸೋಷಲ್ ಮೀಡಿಯಾದಿಂದ ದೂರವಿರಲು ನೆರವಾಗುತ್ತದೆ. ಕ್ಯೂಪಿಎಲ್‌ನೊಂದಿಗೆ ನನ್ನ ಸಹಯೋಗ ಇರುವುದಕ್ಕೆ ನನಗೆ ಸಂತೋಷವಾಗಿದೆ.”

QPL 2.0 ಕಾರ್ಯಕ್ರಮವು ಯುವಜನತೆಗೆ ಡಿಜಿಟಲ್ ಮಾಧ್ಯಮದ ಹದ ಮೀರುವ ಬಳಕೆಯ ಬದಲು ಶಾರೀರಿಕ ಚಟುವಟಿಕೆಯನ್ನು ಪ್ರೋತ್ಸಾಹಿಸುವ ಸಂದೇಶ ನೀಡುತ್ತದೆ.

“QPL ಎಂದರೆ ಕ್ರೀಡೆೊಂದೇ ಇಲ್ಲ, ಇದು ಗುರಿಯನ್ನು ಹೊಂದಿರೋ ಮನರಂಜನೆ,” ಎಂದರು ಪ್ರಮೋದ್ ಶೆಟ್ಟಿ. “ಇದು ಚಲನಚಿತ್ರ ಕ್ಷೇತ್ರ ಮತ್ತು ಕಾರ್ಪೊರೇಟ್ ಜಗತ್ತನ್ನು ಒಂದು ವೇದಿಕೆಯಲ್ಲಿ ತಂದುಕೊಂಡು, ಫಿಟ್ನೆಸ್, ಮಹಿಳಾ ಸಬಲೀಕರ ಮತ್ತು ಚೈತನ್ಯಮಯ ಒಗ್ಗಟ್ಟು ಒದಗಿಸುತ್ತದೆ.

*’ಪೆದ್ದಿ’ ಅವತಾರ ತಾಳಿದ ರಾಮ್ ಚರಣ್...**ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್...ಮಾಸ್ ಲುಕ್ ನಲ್ಲಿ ಚೆರ್ರಿ...
28/03/2025

*’ಪೆದ್ದಿ’ ಅವತಾರ ತಾಳಿದ ರಾಮ್ ಚರಣ್...*

*ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್...ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ*

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ RC16 ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಾಮ್‌ಚರಣ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಮ್‌ ಚರಣ್‌ ಹೊಸ ಚಿತ್ರಕ್ಕೆ ಪೆದ್ದಿ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಪೆದ್ದಿ ಚಿತ್ರದ ಎರಡು ಪೋಸ್ಟರ್‌ಗಳು ಬಿಡುಗಡೆ ಆಗಿವೆ. ಒಂದರಲ್ಲಿ ಬೀಡಿ ಸೇದುತ್ತಿದ್ದರೆ, ಇನ್ನೊಂದರಲ್ಲಿ ಕೈಲ್ಲಿ ಬ್ಯಾಟ್‌ ಹಿಡಿದು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಪೆದ್ದಿಯಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಚಿತ್ರ ತಯಾರಾಗುತ್ತಿದ್ದು, ಎಆರ್ ರೆಹಮಾನ್ ಸಂಗೀತ, ನವೀನ್ ನೂಲಿ‌ ಸಂಕಲನ, ಆರ್ ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.


50th happy birthday to our one & only power star   sir 💐 productions thank you so much for the Appu movie rerelease on o...
16/03/2025

50th happy birthday to our one & only power star sir 💐

productions thank you so much for the Appu movie rerelease on occasion of our loved Puneet sir 50th birthday 🎁

*ರಾಕ್ ಸ್ಟಾರ್ DSP ರಾಕಿಂಗ್ ಪರ್ಫಾಮೆನ್ಸ್ ಗೆ ಸಿಲಿಕಾನ್ ಸಿಟಿ‌ಮಂದಿ ಫುಲ್ ಖುಷ್...ದೇವಿಶ್ರೀ ಪ್ರಸಾದ್ ಲೈಫ್ ಕಾನ್ಸರ್ಟ್ ಗೆ ಸ್ಯಾಂಡಲ್ ವುಡ್ ...
16/03/2025

*ರಾಕ್ ಸ್ಟಾರ್ DSP ರಾಕಿಂಗ್ ಪರ್ಫಾಮೆನ್ಸ್ ಗೆ ಸಿಲಿಕಾನ್ ಸಿಟಿ‌ಮಂದಿ ಫುಲ್ ಖುಷ್...ದೇವಿಶ್ರೀ ಪ್ರಸಾದ್ ಲೈಫ್ ಕಾನ್ಸರ್ಟ್ ಗೆ ಸ್ಯಾಂಡಲ್ ವುಡ್ ಸಾಥ್*

*ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಜರುಗಿದ ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ಹಬ್ಬ...ಶಿವಣ್ಣ, ಕಿಚ್ಚ ಸೇರಿ ಹಲವರು ಭಾಗಿ*

ರಾಕ್ ಸ್ಟಾರ್ ದೇವಿ ಶ್ರೀ ಪ್ರಸಾದ್..ತೆಲುಗು ಚಿತ್ರರಂಗದ ಟ್ರೆಂಡಿಂಗ್ ಮ್ಯೂಸಿಕ್‌ ಡೈರೆಕ್ಟರ್. ಆರ್ಯ’, ‘ಬನ್ನಿ, ‘ಆರ್ಯ 2’, ‘ಜುಲಾಯಿ’, ‘ಇದ್ದಿರಮ್ಮಾಯಿಲತೋ’, ‘ಸನ್‌ ಆಫ್ ಸತ್ಯಮೂರ್ತಿ’, ರಂಗಸ್ಥಳಂ, ಇತ್ತೀಚಿಗೆ ಬಂದ ಪುಷ್ಪ ಸರಣಿ ಚಿತ್ರಗಳಿಗೆ ಸಂಗೀತ ಒದಗಿಸಿರುವ DSP, ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೈವ್ ಕಾನ್ಸರ್ಟ್ ನಡೆಸಿದರು. ನಗರದ ಮಾದವರ ಬಳಿಕ ನೈಸ್ ಗ್ರೌಂಡ್ ನಲ್ಲಿ ನಡೆದ ಅದ್ಧೂರಿ ಸಂಗೀತ ಸಂಜೆಯಲ್ಲಿ ಸಿಲಿಕಾನ್ ಮಂದಿ ಭಾಗಿಯಾಗಿ, ಡಿಎಸ್ ಪಿ ರಾಕಿಂಗ್ ಮ್ಯೂಸಿಕ್ ಗೆ ತಲೆದೂಗಿದ್ದಾರೆ. ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ, ಖ್ಯಾತ ಡ್ಯಾನ್ಸ್ ಕೊರಿಯೋಗ್ರಫ್ ಗಣೇಶ್ ಆಚಾರ್ಯ ಚಿಂದಿ ಡ್ಯಾನ್ಸಿಂಗ್ ಸ್ಟೆಪ್ಸ್ ಗೆ ಜನ ಹುಚ್ಚೆದ್ದು ಕುಣಿದ್ದರು.

ಬಹಳ ಅಚ್ಚುಕಟ್ಟಾಗಿ ನಡೆದ ಲೈವ್ ಕಾನ್ಸರ್ಟ್ ನಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದು, ವಿಶೇಷವಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್, ಪ್ರಜ್ವಲ್ ದೇವರಾಜ್ ದಂಪತಿ, ರೋರಿಂಗ್ ಸ್ಟಾರ್ ಶ್ರೀಮುರಳಿ, ಅಶ್ವಿನಿ ಪುನೀತ್ ರಾಜ್ ಕುಮಾರ್, ನಿರ್ದೇಶಕರಾದ ತರುಣ್ ಸುಧೀರ್, ಪವನ್ ಒಡೆಯರ್, ಸಂಗೀತ ನಿರ್ದೇಶಕರಾದ ಹರಿಕೃಷ್ಣ, ಗುರುಕಿರಣ್, ಜೂಡಾ ಸ್ಯಾಂಡಿ, ಪೂರ್ಣ ಚಂದ್ರ ತೇಜಸ್ವಿ, ನಟಿ ಮಾನ್ವಿತಾ ಕಾಮತ್, ಆಲ್ ಒಕೆ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ವೆಂಕಟ್ ಕೊನಂಕಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸೇರಿದಂತೆ ಹಲವರು ಭಾಗಿಯಾಗಿ, ದೇವಿ ಶ್ರೀ ಪ್ರಸಾದ್ ಸಂಗೀತಕ್ಕೆ ಚಪ್ಪಾಳೆ ತಟ್ಟಿದರು.


Address


Website

Alerts

Be the first to know and let us send you an email when city_times_express posts news and promotions. Your email address will not be used for any other purpose, and you can unsubscribe at any time.

Contact The Business

Send a message to city_times_express:

  • Want your business to be the top-listed Media Company?

Share