19/07/2025
ಕುಸುಮಾ ಆಯರಹಳ್ಳಿ ಬರೆದ ಈ ಭಾನುವಾರದ ಕತೆ
ಮಹೇಶ ಅಷ್ಟು ಸಲ ವಿಧಾನಸೌಧಕ್ಕೆ ಹೋಗಿಬಂದು ಕೆಲಸ ಆಗಲಿಲ್ಲ ಅಂತ ಬೇಸರ ಮಾಡಿಕೊಂಡು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವಾಗೆಲ್ಲ ನನಗೆ ಕೋಪ ಬರ್ತಿತ್ತು ಮೇಷ್ಟ್ರೇ. ಪ್ರಜೆಗಳನ್ನ ಬಾಗ್ಲಲ್ಲಿ ನಿಲ್ಸಿ ಜಾತಿ ಯಾವುದಯ್ಯಾ ಒಳಗೋಗಕೆ? ಅಂತ ಕೇಳಕಾ ಆ ಪುಣ್ಯಾತ್ಮರು ದೇಶಾ ಕಟ್ಟಿದ್ದು? ಅಂತ ಕೋಪ ಉಕ್ಕುಕ್ಕಿ ಬರದು. ರಾತ್ರಿ ನಿದ್ದೆ ಬರ್ತಿರಲಿಲ್ಲ. ಆಚೆ ಭಾಷಣದಲ್ಲಿ ಹೇಳೋದು ಒಂದು. ಒಳಗ್ ಮಾಡದೊಂದು. ಇದಕ್ಕೇ ಏನಯ್ಯಾ ನಿಮಗೆ ಸಂವಿಧಾನ ಬರ್ಕೊಟ್ಟಿದ್ದು? ನೊಂದವರೇ ನೋಯಿಸಿದರೆ ಅದಕ್ಕಿಂತಾ ಕೇಡುಂಟಾ ಲೋಕದಲ್ಲಿ?
ಕುಸುಮಾ ಆಯರಹಳ್ಳಿ ಬರೆದ “ಕಪಿಲೆ ಕಂಡ ಕತೆಗಳು” ಕಥಾಸಂಕಲನ ಇಂದು ಬಿಡುಗಡೆಯಾಗಲಿದ್ದು ಈ ಕೃತಿಯ “ದೈತ್ಯ” ಕತೆ ನಿಮ್ಮ ಓದಿಗೆ
https://tinyurl.com/3yv9fs7h