Kendasampige

Kendasampige ಕೆಂಡಸಂಪಿಗೆ ಎಂಬುದು ಕನ್ನಡ ಅಂತರ್ಜಾಲ ಲೋಕ

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ.

ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ

್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ.

ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ.

ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.

19/07/2025

ಕುಸುಮಾ ಆಯರಹಳ್ಳಿ ಬರೆದ ಈ ಭಾನುವಾರದ ಕತೆ

ಮಹೇಶ ಅಷ್ಟು ಸಲ ವಿಧಾನಸೌಧಕ್ಕೆ ಹೋಗಿಬಂದು ಕೆಲಸ ಆಗಲಿಲ್ಲ ಅಂತ ಬೇಸರ ಮಾಡಿಕೊಂಡು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವಾಗೆಲ್ಲ ನನಗೆ ಕೋಪ ಬರ್ತಿತ್ತು ಮೇಷ್ಟ್ರೇ. ಪ್ರಜೆಗಳನ್ನ ಬಾಗ್ಲಲ್ಲಿ ನಿಲ್ಸಿ ಜಾತಿ ಯಾವುದಯ್ಯಾ ಒಳಗೋಗಕೆ? ಅಂತ ಕೇಳಕಾ ಆ ಪುಣ್ಯಾತ್ಮರು ದೇಶಾ ಕಟ್ಟಿದ್ದು? ಅಂತ ಕೋಪ ಉಕ್ಕುಕ್ಕಿ ಬರದು. ರಾತ್ರಿ ನಿದ್ದೆ ಬರ್ತಿರಲಿಲ್ಲ. ಆಚೆ ಭಾಷಣದಲ್ಲಿ ಹೇಳೋದು ಒಂದು. ಒಳಗ್ ಮಾಡದೊಂದು. ಇದಕ್ಕೇ ಏನಯ್ಯಾ ನಿಮಗೆ ಸಂವಿಧಾನ ಬರ್ಕೊಟ್ಟಿದ್ದು? ನೊಂದವರೇ ನೋಯಿಸಿದರೆ ಅದಕ್ಕಿಂತಾ ಕೇಡುಂಟಾ ಲೋಕದಲ್ಲಿ?
ಕುಸುಮಾ ಆಯರಹಳ್ಳಿ ಬರೆದ “ಕಪಿಲೆ ಕಂಡ ಕತೆಗಳು” ಕಥಾಸಂಕಲನ ಇಂದು ಬಿಡುಗಡೆಯಾಗಲಿದ್ದು ಈ ಕೃತಿಯ “ದೈತ್ಯ” ಕತೆ ನಿಮ್ಮ ಓದಿಗೆ
https://tinyurl.com/3yv9fs7h

ಅಚ್ಚರಿಯ “ಅಭಯಾ” ತೊಟ್ಟ ಮನಸ್ಸು: ದರ್ಶನ್‌ ಜಯಣ್ಣ ಸರಣಿಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟ...
19/07/2025

ಅಚ್ಚರಿಯ “ಅಭಯಾ” ತೊಟ್ಟ ಮನಸ್ಸು: ದರ್ಶನ್‌ ಜಯಣ್ಣ ಸರಣಿ

ಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟಿಟಿ ಶೇರ್ ಮಾಡುತ್ತಿಲ್ಲ, ಕೇವಲ ನನ್ನ ವಿವರ ಪಡೆದು, ಇಲ್ಲಿಗೆ ಕರೆಸಿಕೊಂಡಿದ್ದಾರೆ, ಈಗಲೂ ಕಾಯಿಸುತ್ತಿದ್ದಾರೆ ಎಂದುಕೊಳ್ಳುವಷ್ಟರಲ್ಲಿ ಯಾರೋ ಪುಸ್ತಕಗಳನ್ನು ಹೊತ್ತು ಬರುತ್ತಿರುವುದು ಕಾಣಿಸಿತು. “ಓಹ್, ಇವರೋ ಅಭಯಾ ತೊಟ್ಟ ಮಹಿಳೆ!” ತಮ್ಮ ಮುಖವೊಂದನ್ನ ಕಾಣುವಹಾಗೆ ಬಿಟ್ಟು ಇಡೀ ದೇಹಕ್ಕೆ ಅಭಯಾ ತೊಟ್ಟಿದ್ದಾರೆ. ಕಾರಿನಿಂದ ಹೊರಗಡೆ ಇಳಿದೆ. “ಬುಕ್ಸ್?” ಎಂದು ಕೇಳಿದರು. “ಎಸ್” ಎಂದೆ. ನಲವತ್ತು ರಿಯಾಲ್ ಕೊಡಲು ಹೇಳಿದರು, ಕೊಟ್ಟೆ. ಹಣಪಡೆದು ಪುಸ್ತಕಗಳನ್ನು ಕೊಟ್ಟು ಹೊರಟುಬಿಟ್ಟರು!
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಕಂತು

ಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟಿಟಿ ಶೇರ್ ಮಾಡುತ್ತಿಲ್ಲ, ಕೇವಲ ನನ್ನ ವಿವರ ಪಡ...

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬ...
18/07/2025

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ...

ನಿಮ್ಮದೇ ಕತೆಗಳನ್ನು ಹೇಳಿಕೊಳ್ಳಲೊಂದು ಹೊಸ ಸರಣಿ....
17/07/2025

ನಿಮ್ಮದೇ ಕತೆಗಳನ್ನು ಹೇಳಿಕೊಳ್ಳಲೊಂದು ಹೊಸ ಸರಣಿ....

ಕಲಾತ್ಮಕ ಕಟ್ಟಣೆಯ ‘ಅಸೀಮರೂಪಿ’ ಕತೆಗಳು: ರೇವಣಸಿದ್ಧಪ್ಪ ಜಿ.ಆರ್. ಬರಹಯುವತಿಯೊಬ್ಬಳ ಮೆದುಳು ಅಪಘಾತದಿಂದಾಗಿ ಜರ್ಝರಿತವಾಗಿ ಬ್ರೈನ್ ಡೆಡ್ ಆಗಿ ಅ...
17/07/2025

ಕಲಾತ್ಮಕ ಕಟ್ಟಣೆಯ ‘ಅಸೀಮರೂಪಿ’ ಕತೆಗಳು: ರೇವಣಸಿದ್ಧಪ್ಪ ಜಿ.ಆರ್. ಬರಹ

ಯುವತಿಯೊಬ್ಬಳ ಮೆದುಳು ಅಪಘಾತದಿಂದಾಗಿ ಜರ್ಝರಿತವಾಗಿ ಬ್ರೈನ್ ಡೆಡ್ ಆಗಿ ಅವಳ ಉಸಿರು ನಿಲ್ಲುವುದು ಖಾತ್ರಿಯಾದಾಗ, ಮುದಿಯಾಗಿದ್ದ ತನ್ನ ದೇಹದಿಂದ ಆಕೆಯ ದೇಹಕ್ಕೆ ಬ್ರೈನ್ ಟ್ರಾನ್ಸ್ ಪ್ಲಾಂಟೇಷನ್ ಮಾಡುವ ಪ್ರಯೋಗಕ್ಕೆ ಒಳಗಾಗುತ್ತಾನೆ. ಮಾನಸಿಕವಾಗಿ ಗಂಡಾಗಿ, ದೈಹಿಕವಾಗಿ ಹೆಣ್ಣಾಗಿರುವ ಈತ ಒಂದು ವಿಷಮ ಗಳಿಗೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯೂ ಆಗಿಬಿಡುತ್ತಾನೆ. ಕೊನೆಗೆ ತನ್ನ ಮನೆಯವರಿಂದಲೇ ಅವಜ್ಞೆಗೆ ಈಡಾಗುತ್ತಾನೆ. ವೈದ್ಯಕೀಯ ಲೋಕದ ಪ್ರಯೋಗ ಸಾಧ್ಯತೆಗಳ ಜೊತೆಜೊತೆಗೆ ಸಾಮಾಜಿಕವಾಗಿ ಹೆಣ್ಣು ಅನುಭವಿಸುವ ನೋವು, ಯಾತನೆ, ಅವಮಾನ ಇತ್ಯಾದಿ ಆಯಾಮಗಳಲ್ಲೂ ಭಿನ್ನವಾಗಿ ಗ್ರಹಿಸಬಹುದಾದ ಈ ಕಥೆ ಕುತೂಹಲದಿಂದ ಓದಿಸಿಕೊಳ್ಳುತ್ತದೆ.
ಕಂನಾಡಿಗಾ ನಾರಾಯಣ ಬರೆದ “ಅಸೀಮರೂಪಿ” ಕಥಾ ಸಂಕಲನದ ಕುರಿತು ರೇವಣಸಿದ್ಧಪ್ಪ ಜಿ.ಆರ್. ಬರಹ

ಯುವತಿಯೊಬ್ಬಳ ಮೆದುಳು ಅಪಘಾತದಿಂದಾಗಿ ಜರ್ಝರಿತವಾಗಿ ಬ್ರೈನ್ ಡೆಡ್ ಆಗಿ ಅವಳ ಉಸಿರು ನಿಲ್ಲುವುದು ಖಾತ್ರಿಯಾದಾಗ, ಮುದಿಯಾಗಿದ್ದ ತನ.....

ಶರೀಫ್ ಕಾಡುಮಠ ಬರೆದ ಮೂರು ಕವಿತೆಗಳು
17/07/2025

ಶರೀಫ್ ಕಾಡುಮಠ ಬರೆದ ಮೂರು ಕವಿತೆಗಳು

"ಗಾಝಾದ ಗಾಯಗೊಂಡ ಮಗುವೊಂದು ಕಿಟಕಿ ಗಾಜಿನ ಮುಂದೆ ನಿಂತು ನೋಡುತ್ತಲೇ ಇತ್ತು ದುಃಖದಿಂದ ಯೋಚಿಸುತ್ತ 'ಬೆಂಕಿ ಆರಿಸಲಾದರೂ ನಮ್ಮ ಬಳಿ ನೀ....

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲ...
16/07/2025

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಮೂರನೆಯ ಕಂತು

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವ...

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ...
15/07/2025

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ! ಅದಕ್ಕೆ ನಾನು ನನ್ನ ಹೊಲದಲ್ಲಿ ಬಿತ್ತುವ ಬೀಜಗಳನ್ನೇ ಅವರಿಗೂ ಕೊಡುತ್ತೇನೆ ಎಂದನಂತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ...

ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್...
14/07/2025

ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿ

ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾರದೆ “ಇದು ಏನು ಚಟ್ನಿ” ಎಂದೆ. ಹೊಟೆಲ್ ಮಾಣಿಗೆ ಕನ್ನಡ ಅರ್ಥವಾಯಿತು ಆದರೆ ಉತ್ತರವನ್ನು ತೆಲುಗಿನಲ್ಲಿಯೇ “ಇದಿ ಪಲ್ಲಿ ಚಟ್ನಿ” ಎಂದ. ಕಸಿವಿಸಿ ಆಯಿತು “ಹೇಗ್ ಮಾಡ್ತೀರಿ?” ಅಂದೆ ಅದಕ್ಕವನು “ಪಲ್ಲಿಲನು ಧಂಚಿ, ವೆಯಿಂಚಿ, ಪುಡಿಛೇಸಿ…” ಎನ್ನುತ್ತಿದ್ದಂತೆ ವಾಕರಿಕೆ ಬರಲು ಶುರುವಾಯಿತು. ಕನ್ನಡದಲ್ಲಿ ‘ಪಲ್ಲಿ’ ಅಂದರೆ ‘ಹಲ್ಲಿ’ ಅಲ್ಲವೆ. ಆದರೂ ಬಿಡಲಿಲ್ಲ; ಗೂಗಲಮ್ಮನ ಸಹಾಯ ಪಡೆದು ನೋಡಿದರೆ ತೆಲುಗಿನಲ್ಲಿ ‘ಪಲ್ಲಿ’ ಅಂದರೆ ಕನ್ನಡದಲ್ಲಿ ‘ನೆಲಗಡಲೆ’ ಅಂತಿತ್ತು. ಸಧ್ಯ! ಬದುಕಿತು ಬಡ ಜೀವ ಅನ್ನುವ ಹಾಗಾಯಿತು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೆರಡನೆಯ ಬರಹ ನಿಮ್ಮ ಓದಿಗೆ

ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾ...

ದಾಕ್ಷಾಯಣಿ ಮಸೂತಿ ಬರೆದ ಈ ದಿನದ ಕವಿತೆ
14/07/2025

ದಾಕ್ಷಾಯಣಿ ಮಸೂತಿ ಬರೆದ ಈ ದಿನದ ಕವಿತೆ

"ನದಿ, ನೀರು, ಗಾಳಿ ಸೂರ್ಯ, ಚಂದ್ರ ಮಣ್ಣು ಮರಗಳಲ್ಲಿ ದೇವರನ್ನು ಕಾಣುವ ನಾವು ನಮ್ಮಂತೆ‌ ಇರುವ ಮನುಷ್ಯರನ್ನು ಮನುಷ್ಯರಂತೆ ಕಾಣಲು ಸೋತಿ.....

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ  ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆ...
13/07/2025

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು. ಇವಳ ಪ್ರವೇಶಕ್ಕೆ ಕಾದಿದ್ದ ನಿರ್ದೇಶಕರು ಇವಳು ಪ್ರವೇಶಿಸದೇ ಇದ್ದದ್ದನ್ನು ನೋಡಿ “ಕಟ್ ಕಟ್” ಎಂದು ಕೂಗಿಕೊಂಡರು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

ಲೈಟ್ಸ್...ಕ್ಯಾಮರಾ...ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕ....

ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ...
12/07/2025

ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣ

ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀರಾ ಎಂದು ಕೇಳಿತ್ತು. ಜ್ಯೂರಿಗಳಾಗುವುದಕ್ಕೆ ಒಪ್ಪಿಕೊಂಡರೆ ಅವರು ಸುಮಾರು ನಾಲ್ಕು ತಿಂಗಳ ಕಾಲ ಕೌಂಟಿ ಮತ್ತು ರಾಜ್ಯದ ಸುಪ್ರೀಂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಮಯವನ್ನು ಕೊಡಬೇಕಿತ್ತು. ಅದಲ್ಲದೆ, ಕೇಸ್ ನಡೆಯುವುದನ್ನು ನಿಯಮಿತವಾಗಿ ಗಮನವಿಟ್ಟು ನೋಡಿ, ತಮ್ಮ ತಂಡದಲ್ಲಿ ಚರ್ಚಿಸಿ ವಾರದಿಂದ ವಾರಕ್ಕೆ ಮುನ್ನಡೆಯುವುದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀ....

Address


Alerts

Be the first to know and let us send you an email when Kendasampige posts news and promotions. Your email address will not be used for any other purpose, and you can unsubscribe at any time.

Contact The Business

Send a message to Kendasampige:

Shortcuts

  • Address
  • Alerts
  • Contact The Business
  • Claim ownership or report listing
  • Want your business to be the top-listed Media Company?

Share

Our Story

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ. ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ. ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ. ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.